Homeಕರ್ನಾಟಕರೈತ ಮುಖಂಡ ಮಾರುತಿ ಮಾನ್ಪಡೆ ನಿಧನಕ್ಕೆ ಸಿದ್ದರಾಮಯ್ಯ ಸೇರಿದಂತೆ ಹಲವರ ಸಂತಾಪ

ರೈತ ಮುಖಂಡ ಮಾರುತಿ ಮಾನ್ಪಡೆ ನಿಧನಕ್ಕೆ ಸಿದ್ದರಾಮಯ್ಯ ಸೇರಿದಂತೆ ಹಲವರ ಸಂತಾಪ

- Advertisement -
- Advertisement -

ಹಿರಿಯ ರೈತ ಹೋರಾಟಗಾರ, ಕರ್ನಾಟಕ ಪ್ರಾಂತ ರೈತ ಸಂಘದ ಉಪಾಧ್ಯಕ್ಷರಾದ ಮಾರುತಿ ಮಾನ್ಪಡೆಯವರು (65) ಇಂದು ನಿಧನರಾಗಿದ್ದು, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವಾರು ಜನರು ಸಂತಾಪ ಸೂಚಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, “ರೈತ ಹಾಗೂ ಕಾರ್ಮಿಕ ಚಳವಳಿಗಳ ನಾಯಕ ಮತ್ತು ಪ್ರಜಾಪ್ರಭುತ್ವವಾದಿ ಹೋರಾಟ ಪರಂಪರೆಯ ಹಿರಿಯ ವ್ಯಕ್ತಿತ್ವವಾದ ಮಾರುತಿ ಮಾನ್ಪಡೆಯವರು ನಮ್ಮನ್ನು ಅಗಲಿರುವುದು ಅತೀವ ದುಃಖದ ಸಂಗತಿ” ಎಂದು ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕದ ದಿಟ್ಟ ರೈತ ಹೋರಾಟಗಾರ ಮಾರುತಿ ಮಾನ್ಪಡೆ ನಿಧನ

“ಮಾರುತಿ ಅವರು ಜನಪರ ಹೋರಾಟಗಳನ್ನೇ ಉಸಿರಾಗಿಸಿಕೊಂಡಿದ್ದವರು. ದೇಶದ ಪ್ರಜಾಪ್ರಭುತ್ವ ಪರಂಪರೆಯನ್ನೇ ಪತನಗೊಳಿಸುವ ಆಕ್ರಮಣಕಾರಿ ಆಡಳಿತ ವ್ಯವಸ್ಥೆ ದೇಶದಲ್ಲಿ ಜಾರಿಗೊಳ್ಳುತ್ತಿರುವ ಹೊತ್ತಿನಲ್ಲೇ ಮಾನ್ಪಡೆಯವರು ನಮ್ಮನ್ನೆಲ್ಲಾ ತೊರೆದಿರುವುದು ಚಳವಳಿಗಳ ಪರಂಪರೆಗೆ ತುಂಬಲಾರದ ನಷ್ಟವಾಗಿದೆ” ಎಂದು ಅವರು ಹೇಳಿದ್ದಾರೆ.

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್‌.ಡಿ. ಕುಮಾರಸ್ವಾಮಿ, “ಹಿರಿಯ ಜನಪರ ಹೋರಾಟಗಾರರೂ, ಕಮ್ಯೂನಿಸ್ಟ್ ನಾಯಕರೂ ಆದ ಮಾರುತಿ ಮಾನ್ಪಡೆ ಅವರ ನಿಧನ ಅತೀವ ದುಃಖ ತಂದಿದೆ. ಕರ್ನಾಟಕ ರಾಜಕಾರಣ ಮತ್ತು ಜನಪರ ಚಳವಳಿ ಬದ್ಧತೆಯ ನಾಯಕನೋರ್ವನನ್ನು ಕಳೆದುಕೊಂಡಂತಾಗಿದೆ. ಅವರ ಆತ್ಮಕ್ಕೆ ಪ್ರಕೃತಿ ಚಿರಶಾಂತಿಯನ್ನು ಕರುಣಿಸಲಿ” ಎಂದು ಹೇಳಿದ್ದಾರೆ.

ತಮ್ಮ ಪಕ್ಷದ ನಾಯಕನ ಅಗಲಿಕೆಗೆ ಸಿಪಿಎಂ ಕರ್ನಾಟಕ ಸಂತಾಪ ಸೂಚಿಸಿದೆ.

ಸಿಪಿಐ(ಎಂ) ನಾಯಕರು ರೈತ ಮುಖಂಡರುಕಾಂ.ಮಾರುತಿ ಮಾನ್ಪಡೆಯವರಿಗೆ ಸಿಪಿಐ(ಎಂ) ಶ್ರದ್ಧಾಂಜಲಿಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್ವಾದಿ) ಯ ರಾಜ್ಯ…

Posted by CPIM Karnataka on Tuesday, October 20, 2020

ಕಾಂಗ್ರೆಸ್‌ ನಾಯಕ ಪ್ರಿಯಾಂಕ್ ಖರ್ಗೆ, “4 ದಶಕಗಳಿಂದ ರೈತ ಹಾಗೂ ಕಾರ್ಮಿಕ ಪರ ಹೋರಾಟಗಳಲ್ಲಿ ತೊಡಗಿಕೊಂಡಿದ್ದ, ಪ್ರಾಂತ ರೈತ ಸಂಘದ ರಾಜ್ಯ ಘಟಕದ ಉಪಾಧ್ಯಕ್ಷರು ಹಾಗೂ ಹಿರಿಯ ಹೋರಾಟಗಾರರಾದ ಮಾರುತಿ ಮಾನ್ಪಡೆ ಅವರ ನಿಧನದಿಂದ ರೈತ ಪರ ಧ್ವನಿಯೊಂದನ್ನು ಕಳೆದುಕೊಂಡಿದ್ದೇವೆ. ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು, ಭಗವಂತನು ಅವರ ಕುಟುಂಬಕ್ಕೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ”

ಮಾಜಿ ಸಚಿವ ಶರಣ್ ಪ್ರಕಾಶ್ ಪಾಟಿಲ್, “ರೈತಾಪಿ ವರ್ಗ, ಕೃಷಿ ಮತ್ತು ಕೂಲಿ ಕಾರ್ಮಿಕರ ಸಮಸ್ಯೆಗಳ ಹೋರಾಟದಲ್ಲಿ ಮುಂಚೂಣಿಯಲ್ಲಿರುತಿದ್ದ ಹಿರಿಯ ಮುಖಂಡ ಮಾರುತಿ ಮಾನ್ಪಡೆ ಅವರ ನಿಧನದ ಸುದ್ದಿ ತಿಳಿದು ಅತೀವ ದುಃಖವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ, ಕುಟುಂಬಸ್ಥರಿಗೆ ದುಃಖ ಸಹಿಸುವ ಶಕ್ತಿ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ” ಎಂದು ಎಂದು ಹೇಳಿದ್ದಾರೆ.

ಕಾಂಗ್ರೆಸ್ ನಾಯಕ ದಿನೇಶ್ ಗುಂಡುರಾವ್ ಹೋರಾಟಗಾರನ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಕಾರ್ಮಿಕ,ರೈತ ಹಾಗೂ ಶೋಷಿತ ವರ್ಗಗಳ ಪರವಾಗಿ ಸದಾ ಧ್ವನಿಯೆತ್ತುತ್ತಾ.., ಪ್ರಜಾಪ್ರಭುತ್ವದ ಉಳಿವಿಗಾಗಿ ಅವಿರತ ಹೋರಾಟ ನಡೆಸುತ್ತಿದ್ದ ಕಾರ್ಮಿಕ…

Posted by Dinesh Gundu Rao on Tuesday, October 20, 2020

ಮಾರುತಿ ಮಾನ್ಪಡೆ ಅವರ ನಿಧನ ಕರ್ನಾಟಕದ ರಾಜಕಾರಣ ಮತ್ತು ಜನಪರ ಚಳವಳಿ ಬದ್ಧತೆಯ ನಾಯಕನೋರ್ವನನ್ನು ಕಳೆದುಕೊಂಡಂತಾಗಿದೆ ಎಂದು ಮಧು ಬಂಗಾರಪ್ಪ ಹೇಳಿದ್ದಾರೆ.

ಕಲಬುರ್ಗಿಯ ಬಿಜೆಪಿ ಸಂಸದ ಉಮೇಶ್ ಜಾದವ್ ಅಗಲಿದ ನಾಯಕನಿಗೆ ಸಂತಾಪ ಸೂಚಿಸಿದ್ದಾರೆ.

ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ, “ರಾಜ್ಯದ ರೈತ ಹೋರಾಟಗಾರರು ಹಾಗೂ ಪ್ರಾಂತ ರೈತ ಸಂಘದ ರಾಜ್ಯ ಉಪಾಧ್ಯಕ್ಷರಾಗಿದ್ದ ಶ್ರೀ ಮಾರುತಿ ಮಾನ್ಪಡೆ ಅವರು ಕೋವಿಡ್‌ನಿಂದಾಗಿ ನಿಧನರಾದ ಸುದ್ಧಿ ತಿಳಿದು ಆಘಾತವಾಯಿತು.ರೈತಪರ ಧ್ವನಿಯಾಗಿದ್ದ ಅವರ ಅಗಲಿಕೆಯಿಂದ ನಾಡಿಗೆ ಅಪಾರ ನಷ್ಟವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬಕ್ಕೆ ದುಖಃ ಸಹಿಸುವ ಶಕ್ತಿಯನ್ನು ದೇವರು ಕರುಣಿಸಲಿ” ಎಂದು ಹೇಳಿದ್ದಾರೆ.

ಅಷ್ಟೇ ಅಲ್ಲದೆ ಕರ್ನಾಟಕ ನವನಿರ್ಮಾಣ ಸೇನೆ ಅಗಲಿದ ನಾಯಕನಿಗೆ ಶ್ರದ್ದಾಂಜಲಿ ಅರ್ಪಿಸಿದೆ.

ಇಷ್ಟೇ ಅಲ್ಲದೆ ರಾಜ್ಯದಾದ್ಯಂತ ಹಲವಾರು ಸಂಘಟನೆಗಳು ಹಿರಿಯ ರೈತ ಹೋರಾಟಗಾರನ ನಿಧನಕ್ಕೆ ಸಂತಾಪ ಸೂಚಿಸಿ ಶ್ರದ್ದಾಂಜಲಿ ಸಭೆ ನಡೆಸಿದೆ. ಮಾನ್ಪಡೆಯವರ ಅಂತ್ಯಕ್ರಿಯೆ ಅವರ ಸ್ವಗ್ರಾಮ ಕಲಬುರ್ಗಿಯಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ರೈತ ಮಹಿಳಾ ದಿನ: ‘ರೈತ ಮಹಿಳೆ’ಯ ಅಸ್ತಿತ್ವ, ಅಸ್ಮಿತೆಗಾಗಿ ಹೋರಾಟ ನಡೆಸುತ್ತಿರುವ ‘ಮಕಾಮ್’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...