Homeಕರ್ನಾಟಕರೈತ ಮುಖಂಡ ಮಾರುತಿ ಮಾನ್ಪಡೆ ನಿಧನಕ್ಕೆ ಸಿದ್ದರಾಮಯ್ಯ ಸೇರಿದಂತೆ ಹಲವರ ಸಂತಾಪ

ರೈತ ಮುಖಂಡ ಮಾರುತಿ ಮಾನ್ಪಡೆ ನಿಧನಕ್ಕೆ ಸಿದ್ದರಾಮಯ್ಯ ಸೇರಿದಂತೆ ಹಲವರ ಸಂತಾಪ

- Advertisement -
- Advertisement -

ಹಿರಿಯ ರೈತ ಹೋರಾಟಗಾರ, ಕರ್ನಾಟಕ ಪ್ರಾಂತ ರೈತ ಸಂಘದ ಉಪಾಧ್ಯಕ್ಷರಾದ ಮಾರುತಿ ಮಾನ್ಪಡೆಯವರು (65) ಇಂದು ನಿಧನರಾಗಿದ್ದು, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವಾರು ಜನರು ಸಂತಾಪ ಸೂಚಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, “ರೈತ ಹಾಗೂ ಕಾರ್ಮಿಕ ಚಳವಳಿಗಳ ನಾಯಕ ಮತ್ತು ಪ್ರಜಾಪ್ರಭುತ್ವವಾದಿ ಹೋರಾಟ ಪರಂಪರೆಯ ಹಿರಿಯ ವ್ಯಕ್ತಿತ್ವವಾದ ಮಾರುತಿ ಮಾನ್ಪಡೆಯವರು ನಮ್ಮನ್ನು ಅಗಲಿರುವುದು ಅತೀವ ದುಃಖದ ಸಂಗತಿ” ಎಂದು ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕದ ದಿಟ್ಟ ರೈತ ಹೋರಾಟಗಾರ ಮಾರುತಿ ಮಾನ್ಪಡೆ ನಿಧನ

“ಮಾರುತಿ ಅವರು ಜನಪರ ಹೋರಾಟಗಳನ್ನೇ ಉಸಿರಾಗಿಸಿಕೊಂಡಿದ್ದವರು. ದೇಶದ ಪ್ರಜಾಪ್ರಭುತ್ವ ಪರಂಪರೆಯನ್ನೇ ಪತನಗೊಳಿಸುವ ಆಕ್ರಮಣಕಾರಿ ಆಡಳಿತ ವ್ಯವಸ್ಥೆ ದೇಶದಲ್ಲಿ ಜಾರಿಗೊಳ್ಳುತ್ತಿರುವ ಹೊತ್ತಿನಲ್ಲೇ ಮಾನ್ಪಡೆಯವರು ನಮ್ಮನ್ನೆಲ್ಲಾ ತೊರೆದಿರುವುದು ಚಳವಳಿಗಳ ಪರಂಪರೆಗೆ ತುಂಬಲಾರದ ನಷ್ಟವಾಗಿದೆ” ಎಂದು ಅವರು ಹೇಳಿದ್ದಾರೆ.

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್‌.ಡಿ. ಕುಮಾರಸ್ವಾಮಿ, “ಹಿರಿಯ ಜನಪರ ಹೋರಾಟಗಾರರೂ, ಕಮ್ಯೂನಿಸ್ಟ್ ನಾಯಕರೂ ಆದ ಮಾರುತಿ ಮಾನ್ಪಡೆ ಅವರ ನಿಧನ ಅತೀವ ದುಃಖ ತಂದಿದೆ. ಕರ್ನಾಟಕ ರಾಜಕಾರಣ ಮತ್ತು ಜನಪರ ಚಳವಳಿ ಬದ್ಧತೆಯ ನಾಯಕನೋರ್ವನನ್ನು ಕಳೆದುಕೊಂಡಂತಾಗಿದೆ. ಅವರ ಆತ್ಮಕ್ಕೆ ಪ್ರಕೃತಿ ಚಿರಶಾಂತಿಯನ್ನು ಕರುಣಿಸಲಿ” ಎಂದು ಹೇಳಿದ್ದಾರೆ.

ತಮ್ಮ ಪಕ್ಷದ ನಾಯಕನ ಅಗಲಿಕೆಗೆ ಸಿಪಿಎಂ ಕರ್ನಾಟಕ ಸಂತಾಪ ಸೂಚಿಸಿದೆ.

ಸಿಪಿಐ(ಎಂ) ನಾಯಕರು ರೈತ ಮುಖಂಡರುಕಾಂ.ಮಾರುತಿ ಮಾನ್ಪಡೆಯವರಿಗೆ ಸಿಪಿಐ(ಎಂ) ಶ್ರದ್ಧಾಂಜಲಿಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್ವಾದಿ) ಯ ರಾಜ್ಯ…

Posted by CPIM Karnataka on Tuesday, October 20, 2020

ಕಾಂಗ್ರೆಸ್‌ ನಾಯಕ ಪ್ರಿಯಾಂಕ್ ಖರ್ಗೆ, “4 ದಶಕಗಳಿಂದ ರೈತ ಹಾಗೂ ಕಾರ್ಮಿಕ ಪರ ಹೋರಾಟಗಳಲ್ಲಿ ತೊಡಗಿಕೊಂಡಿದ್ದ, ಪ್ರಾಂತ ರೈತ ಸಂಘದ ರಾಜ್ಯ ಘಟಕದ ಉಪಾಧ್ಯಕ್ಷರು ಹಾಗೂ ಹಿರಿಯ ಹೋರಾಟಗಾರರಾದ ಮಾರುತಿ ಮಾನ್ಪಡೆ ಅವರ ನಿಧನದಿಂದ ರೈತ ಪರ ಧ್ವನಿಯೊಂದನ್ನು ಕಳೆದುಕೊಂಡಿದ್ದೇವೆ. ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು, ಭಗವಂತನು ಅವರ ಕುಟುಂಬಕ್ಕೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ”

ಮಾಜಿ ಸಚಿವ ಶರಣ್ ಪ್ರಕಾಶ್ ಪಾಟಿಲ್, “ರೈತಾಪಿ ವರ್ಗ, ಕೃಷಿ ಮತ್ತು ಕೂಲಿ ಕಾರ್ಮಿಕರ ಸಮಸ್ಯೆಗಳ ಹೋರಾಟದಲ್ಲಿ ಮುಂಚೂಣಿಯಲ್ಲಿರುತಿದ್ದ ಹಿರಿಯ ಮುಖಂಡ ಮಾರುತಿ ಮಾನ್ಪಡೆ ಅವರ ನಿಧನದ ಸುದ್ದಿ ತಿಳಿದು ಅತೀವ ದುಃಖವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ, ಕುಟುಂಬಸ್ಥರಿಗೆ ದುಃಖ ಸಹಿಸುವ ಶಕ್ತಿ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ” ಎಂದು ಎಂದು ಹೇಳಿದ್ದಾರೆ.

ಕಾಂಗ್ರೆಸ್ ನಾಯಕ ದಿನೇಶ್ ಗುಂಡುರಾವ್ ಹೋರಾಟಗಾರನ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಕಾರ್ಮಿಕ,ರೈತ ಹಾಗೂ ಶೋಷಿತ ವರ್ಗಗಳ ಪರವಾಗಿ ಸದಾ ಧ್ವನಿಯೆತ್ತುತ್ತಾ.., ಪ್ರಜಾಪ್ರಭುತ್ವದ ಉಳಿವಿಗಾಗಿ ಅವಿರತ ಹೋರಾಟ ನಡೆಸುತ್ತಿದ್ದ ಕಾರ್ಮಿಕ…

Posted by Dinesh Gundu Rao on Tuesday, October 20, 2020

ಮಾರುತಿ ಮಾನ್ಪಡೆ ಅವರ ನಿಧನ ಕರ್ನಾಟಕದ ರಾಜಕಾರಣ ಮತ್ತು ಜನಪರ ಚಳವಳಿ ಬದ್ಧತೆಯ ನಾಯಕನೋರ್ವನನ್ನು ಕಳೆದುಕೊಂಡಂತಾಗಿದೆ ಎಂದು ಮಧು ಬಂಗಾರಪ್ಪ ಹೇಳಿದ್ದಾರೆ.

ಕಲಬುರ್ಗಿಯ ಬಿಜೆಪಿ ಸಂಸದ ಉಮೇಶ್ ಜಾದವ್ ಅಗಲಿದ ನಾಯಕನಿಗೆ ಸಂತಾಪ ಸೂಚಿಸಿದ್ದಾರೆ.

ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ, “ರಾಜ್ಯದ ರೈತ ಹೋರಾಟಗಾರರು ಹಾಗೂ ಪ್ರಾಂತ ರೈತ ಸಂಘದ ರಾಜ್ಯ ಉಪಾಧ್ಯಕ್ಷರಾಗಿದ್ದ ಶ್ರೀ ಮಾರುತಿ ಮಾನ್ಪಡೆ ಅವರು ಕೋವಿಡ್‌ನಿಂದಾಗಿ ನಿಧನರಾದ ಸುದ್ಧಿ ತಿಳಿದು ಆಘಾತವಾಯಿತು.ರೈತಪರ ಧ್ವನಿಯಾಗಿದ್ದ ಅವರ ಅಗಲಿಕೆಯಿಂದ ನಾಡಿಗೆ ಅಪಾರ ನಷ್ಟವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬಕ್ಕೆ ದುಖಃ ಸಹಿಸುವ ಶಕ್ತಿಯನ್ನು ದೇವರು ಕರುಣಿಸಲಿ” ಎಂದು ಹೇಳಿದ್ದಾರೆ.

ಅಷ್ಟೇ ಅಲ್ಲದೆ ಕರ್ನಾಟಕ ನವನಿರ್ಮಾಣ ಸೇನೆ ಅಗಲಿದ ನಾಯಕನಿಗೆ ಶ್ರದ್ದಾಂಜಲಿ ಅರ್ಪಿಸಿದೆ.

ಇಷ್ಟೇ ಅಲ್ಲದೆ ರಾಜ್ಯದಾದ್ಯಂತ ಹಲವಾರು ಸಂಘಟನೆಗಳು ಹಿರಿಯ ರೈತ ಹೋರಾಟಗಾರನ ನಿಧನಕ್ಕೆ ಸಂತಾಪ ಸೂಚಿಸಿ ಶ್ರದ್ದಾಂಜಲಿ ಸಭೆ ನಡೆಸಿದೆ. ಮಾನ್ಪಡೆಯವರ ಅಂತ್ಯಕ್ರಿಯೆ ಅವರ ಸ್ವಗ್ರಾಮ ಕಲಬುರ್ಗಿಯಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ರೈತ ಮಹಿಳಾ ದಿನ: ‘ರೈತ ಮಹಿಳೆ’ಯ ಅಸ್ತಿತ್ವ, ಅಸ್ಮಿತೆಗಾಗಿ ಹೋರಾಟ ನಡೆಸುತ್ತಿರುವ ‘ಮಕಾಮ್’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...