Homeಕರ್ನಾಟಕರೈತ ಮುಖಂಡ ಮಾರುತಿ ಮಾನ್ಪಡೆ ನಿಧನಕ್ಕೆ ಸಿದ್ದರಾಮಯ್ಯ ಸೇರಿದಂತೆ ಹಲವರ ಸಂತಾಪ

ರೈತ ಮುಖಂಡ ಮಾರುತಿ ಮಾನ್ಪಡೆ ನಿಧನಕ್ಕೆ ಸಿದ್ದರಾಮಯ್ಯ ಸೇರಿದಂತೆ ಹಲವರ ಸಂತಾಪ

- Advertisement -
- Advertisement -

ಹಿರಿಯ ರೈತ ಹೋರಾಟಗಾರ, ಕರ್ನಾಟಕ ಪ್ರಾಂತ ರೈತ ಸಂಘದ ಉಪಾಧ್ಯಕ್ಷರಾದ ಮಾರುತಿ ಮಾನ್ಪಡೆಯವರು (65) ಇಂದು ನಿಧನರಾಗಿದ್ದು, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವಾರು ಜನರು ಸಂತಾಪ ಸೂಚಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, “ರೈತ ಹಾಗೂ ಕಾರ್ಮಿಕ ಚಳವಳಿಗಳ ನಾಯಕ ಮತ್ತು ಪ್ರಜಾಪ್ರಭುತ್ವವಾದಿ ಹೋರಾಟ ಪರಂಪರೆಯ ಹಿರಿಯ ವ್ಯಕ್ತಿತ್ವವಾದ ಮಾರುತಿ ಮಾನ್ಪಡೆಯವರು ನಮ್ಮನ್ನು ಅಗಲಿರುವುದು ಅತೀವ ದುಃಖದ ಸಂಗತಿ” ಎಂದು ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕದ ದಿಟ್ಟ ರೈತ ಹೋರಾಟಗಾರ ಮಾರುತಿ ಮಾನ್ಪಡೆ ನಿಧನ

“ಮಾರುತಿ ಅವರು ಜನಪರ ಹೋರಾಟಗಳನ್ನೇ ಉಸಿರಾಗಿಸಿಕೊಂಡಿದ್ದವರು. ದೇಶದ ಪ್ರಜಾಪ್ರಭುತ್ವ ಪರಂಪರೆಯನ್ನೇ ಪತನಗೊಳಿಸುವ ಆಕ್ರಮಣಕಾರಿ ಆಡಳಿತ ವ್ಯವಸ್ಥೆ ದೇಶದಲ್ಲಿ ಜಾರಿಗೊಳ್ಳುತ್ತಿರುವ ಹೊತ್ತಿನಲ್ಲೇ ಮಾನ್ಪಡೆಯವರು ನಮ್ಮನ್ನೆಲ್ಲಾ ತೊರೆದಿರುವುದು ಚಳವಳಿಗಳ ಪರಂಪರೆಗೆ ತುಂಬಲಾರದ ನಷ್ಟವಾಗಿದೆ” ಎಂದು ಅವರು ಹೇಳಿದ್ದಾರೆ.

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್‌.ಡಿ. ಕುಮಾರಸ್ವಾಮಿ, “ಹಿರಿಯ ಜನಪರ ಹೋರಾಟಗಾರರೂ, ಕಮ್ಯೂನಿಸ್ಟ್ ನಾಯಕರೂ ಆದ ಮಾರುತಿ ಮಾನ್ಪಡೆ ಅವರ ನಿಧನ ಅತೀವ ದುಃಖ ತಂದಿದೆ. ಕರ್ನಾಟಕ ರಾಜಕಾರಣ ಮತ್ತು ಜನಪರ ಚಳವಳಿ ಬದ್ಧತೆಯ ನಾಯಕನೋರ್ವನನ್ನು ಕಳೆದುಕೊಂಡಂತಾಗಿದೆ. ಅವರ ಆತ್ಮಕ್ಕೆ ಪ್ರಕೃತಿ ಚಿರಶಾಂತಿಯನ್ನು ಕರುಣಿಸಲಿ” ಎಂದು ಹೇಳಿದ್ದಾರೆ.

ತಮ್ಮ ಪಕ್ಷದ ನಾಯಕನ ಅಗಲಿಕೆಗೆ ಸಿಪಿಎಂ ಕರ್ನಾಟಕ ಸಂತಾಪ ಸೂಚಿಸಿದೆ.

ಸಿಪಿಐ(ಎಂ) ನಾಯಕರು ರೈತ ಮುಖಂಡರುಕಾಂ.ಮಾರುತಿ ಮಾನ್ಪಡೆಯವರಿಗೆ ಸಿಪಿಐ(ಎಂ) ಶ್ರದ್ಧಾಂಜಲಿಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್ವಾದಿ) ಯ ರಾಜ್ಯ…

Posted by CPIM Karnataka on Tuesday, October 20, 2020

ಕಾಂಗ್ರೆಸ್‌ ನಾಯಕ ಪ್ರಿಯಾಂಕ್ ಖರ್ಗೆ, “4 ದಶಕಗಳಿಂದ ರೈತ ಹಾಗೂ ಕಾರ್ಮಿಕ ಪರ ಹೋರಾಟಗಳಲ್ಲಿ ತೊಡಗಿಕೊಂಡಿದ್ದ, ಪ್ರಾಂತ ರೈತ ಸಂಘದ ರಾಜ್ಯ ಘಟಕದ ಉಪಾಧ್ಯಕ್ಷರು ಹಾಗೂ ಹಿರಿಯ ಹೋರಾಟಗಾರರಾದ ಮಾರುತಿ ಮಾನ್ಪಡೆ ಅವರ ನಿಧನದಿಂದ ರೈತ ಪರ ಧ್ವನಿಯೊಂದನ್ನು ಕಳೆದುಕೊಂಡಿದ್ದೇವೆ. ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು, ಭಗವಂತನು ಅವರ ಕುಟುಂಬಕ್ಕೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ”

ಮಾಜಿ ಸಚಿವ ಶರಣ್ ಪ್ರಕಾಶ್ ಪಾಟಿಲ್, “ರೈತಾಪಿ ವರ್ಗ, ಕೃಷಿ ಮತ್ತು ಕೂಲಿ ಕಾರ್ಮಿಕರ ಸಮಸ್ಯೆಗಳ ಹೋರಾಟದಲ್ಲಿ ಮುಂಚೂಣಿಯಲ್ಲಿರುತಿದ್ದ ಹಿರಿಯ ಮುಖಂಡ ಮಾರುತಿ ಮಾನ್ಪಡೆ ಅವರ ನಿಧನದ ಸುದ್ದಿ ತಿಳಿದು ಅತೀವ ದುಃಖವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ, ಕುಟುಂಬಸ್ಥರಿಗೆ ದುಃಖ ಸಹಿಸುವ ಶಕ್ತಿ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ” ಎಂದು ಎಂದು ಹೇಳಿದ್ದಾರೆ.

ಕಾಂಗ್ರೆಸ್ ನಾಯಕ ದಿನೇಶ್ ಗುಂಡುರಾವ್ ಹೋರಾಟಗಾರನ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಕಾರ್ಮಿಕ,ರೈತ ಹಾಗೂ ಶೋಷಿತ ವರ್ಗಗಳ ಪರವಾಗಿ ಸದಾ ಧ್ವನಿಯೆತ್ತುತ್ತಾ.., ಪ್ರಜಾಪ್ರಭುತ್ವದ ಉಳಿವಿಗಾಗಿ ಅವಿರತ ಹೋರಾಟ ನಡೆಸುತ್ತಿದ್ದ ಕಾರ್ಮಿಕ…

Posted by Dinesh Gundu Rao on Tuesday, October 20, 2020

ಮಾರುತಿ ಮಾನ್ಪಡೆ ಅವರ ನಿಧನ ಕರ್ನಾಟಕದ ರಾಜಕಾರಣ ಮತ್ತು ಜನಪರ ಚಳವಳಿ ಬದ್ಧತೆಯ ನಾಯಕನೋರ್ವನನ್ನು ಕಳೆದುಕೊಂಡಂತಾಗಿದೆ ಎಂದು ಮಧು ಬಂಗಾರಪ್ಪ ಹೇಳಿದ್ದಾರೆ.

ಕಲಬುರ್ಗಿಯ ಬಿಜೆಪಿ ಸಂಸದ ಉಮೇಶ್ ಜಾದವ್ ಅಗಲಿದ ನಾಯಕನಿಗೆ ಸಂತಾಪ ಸೂಚಿಸಿದ್ದಾರೆ.

ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ, “ರಾಜ್ಯದ ರೈತ ಹೋರಾಟಗಾರರು ಹಾಗೂ ಪ್ರಾಂತ ರೈತ ಸಂಘದ ರಾಜ್ಯ ಉಪಾಧ್ಯಕ್ಷರಾಗಿದ್ದ ಶ್ರೀ ಮಾರುತಿ ಮಾನ್ಪಡೆ ಅವರು ಕೋವಿಡ್‌ನಿಂದಾಗಿ ನಿಧನರಾದ ಸುದ್ಧಿ ತಿಳಿದು ಆಘಾತವಾಯಿತು.ರೈತಪರ ಧ್ವನಿಯಾಗಿದ್ದ ಅವರ ಅಗಲಿಕೆಯಿಂದ ನಾಡಿಗೆ ಅಪಾರ ನಷ್ಟವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬಕ್ಕೆ ದುಖಃ ಸಹಿಸುವ ಶಕ್ತಿಯನ್ನು ದೇವರು ಕರುಣಿಸಲಿ” ಎಂದು ಹೇಳಿದ್ದಾರೆ.

ಅಷ್ಟೇ ಅಲ್ಲದೆ ಕರ್ನಾಟಕ ನವನಿರ್ಮಾಣ ಸೇನೆ ಅಗಲಿದ ನಾಯಕನಿಗೆ ಶ್ರದ್ದಾಂಜಲಿ ಅರ್ಪಿಸಿದೆ.

ಇಷ್ಟೇ ಅಲ್ಲದೆ ರಾಜ್ಯದಾದ್ಯಂತ ಹಲವಾರು ಸಂಘಟನೆಗಳು ಹಿರಿಯ ರೈತ ಹೋರಾಟಗಾರನ ನಿಧನಕ್ಕೆ ಸಂತಾಪ ಸೂಚಿಸಿ ಶ್ರದ್ದಾಂಜಲಿ ಸಭೆ ನಡೆಸಿದೆ. ಮಾನ್ಪಡೆಯವರ ಅಂತ್ಯಕ್ರಿಯೆ ಅವರ ಸ್ವಗ್ರಾಮ ಕಲಬುರ್ಗಿಯಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ರೈತ ಮಹಿಳಾ ದಿನ: ‘ರೈತ ಮಹಿಳೆ’ಯ ಅಸ್ತಿತ್ವ, ಅಸ್ಮಿತೆಗಾಗಿ ಹೋರಾಟ ನಡೆಸುತ್ತಿರುವ ‘ಮಕಾಮ್’

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...