Homeಮುಖಪುಟಕೇಂದ್ರ ಬಜೆಟ್‌ನ್ನು "ದೊಡ್ಡ ಫ್ಲಾಪ್" ಮತ್ತು "ಮಾತುಗಳ ಕಣ್ಕಟ್ಟು" ಎಂದ ನ್ಯಾಷನಲ್ ಕಾನ್ಫರೆನ್ಸ್

ಕೇಂದ್ರ ಬಜೆಟ್‌ನ್ನು “ದೊಡ್ಡ ಫ್ಲಾಪ್” ಮತ್ತು “ಮಾತುಗಳ ಕಣ್ಕಟ್ಟು” ಎಂದ ನ್ಯಾಷನಲ್ ಕಾನ್ಫರೆನ್ಸ್

- Advertisement -
- Advertisement -

ಕೇಂದ್ರ ಬಜೆಟ್‌ನ್ನು “ದೊಡ್ಡ ಫ್ಲಾಪ್” ಮತ್ತು “ಮಾತುಗಳ ಕಣ್ಕಟ್ಟು” ಎಂದು ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಬುಧವಾರ ಬಣ್ಣಿಸಿದೆ. ಮಹಿಳಾ ಅಧ್ಯಕ್ಷರ ಅಡಿಯಲ್ಲಿ ಮಹಿಳಾ ವಿತ್ತ ಸಚಿವೆಯೊಬ್ಬರು ಇದನ್ನು ಪ್ರಸ್ತುತಪಡಿಸಿದ್ದಾರೆ ಎಂಬುದು ಮಾತ್ರ ಅದರಿಂದ ತೆಗೆದುಕೊಳ್ಳಬೇಕಾದ ಅಂಶವಾಗಿದೆ ಎಂದು ಹೇಳಿದೆ.

ಈ ಬಗ್ಗೆ ನ್ಯಾಷನಲ್ ಕಾನ್ಫರೆನ್ಸ್‌ನ ಮುಖ್ಯ ವಕ್ತಾರ ತನ್ವಿರ್ ಸಾದಿಕ್ ಮಾತನಾಡಿದ್ದು, ”ಇದು ಪದಗಳ ಕಣ್ಕಟ್ಟು ಮತ್ತು ಬಜೆಟ್‌ನಲ್ಲಿ ಬೇರೇನೂ ಇರಲಿಲ್ಲ. ಮಾತುಗಳು ಮತ್ತು ಅಂಕಿಅಂಶಗಳೊಂದಿಗೆ ಆಟವಾಡುವುದನ್ನು ಹೊರತುಪಡಿಸಿ, ಬಜೆಟ್ ದೊಡ್ಡ ಫ್ಲಾಪ್ ಎಂದು ನಾನು ಭಾವಿಸುತ್ತೇನೆ” ಎಂದು ಹೇಳಿದ್ದಾರೆ.

ಇತ್ತಿಚೀನ ಆಕ್ಸ್‌ಫ್ಯಾಮ್ ವರದಿಯನ್ನು ಉಲ್ಲೇಖಿಸಿ, ”ದೇಶದಲ್ಲಿ ಶೇಕಡಾ 84 ರಷ್ಟು ಕುಟುಂಬಗಳ ಆದಾಯ ಕುಸಿದಿದೆ ಮತ್ತು 2020 ರಲ್ಲಿ 102 ರಿಂದ 2022 ರಲ್ಲಿ 142 ಕ್ಕೆ ಶತಕೋಟ್ಯಾಧಿಪತಿಗಳ ಸಂಖ್ಯೆ ಹೆಚ್ಚಾಗಿದೆ” ಎಂದರು. ಭಾರತದಲ್ಲಿ ಬಡವರು ಬಡವರು ಮತ್ತು ಶ್ರೀಮಂತರು ಶ್ರೀಮಂತರಾಗಿದ್ದಾರೆ ಎಂದು ಅವರು ಹೇಳಿದರು.

ಇದನ್ನೂಓದಿ: ಕೇಂದ್ರದ ಬಜೆಟ್‌ ‘ಬೀಜವಿಲ್ಲದ ಕಡಲೆಕಾಯಿ’ ಇದ್ದಂತಿದೆ: ಕೆಪಿಸಿಸಿ ಲೇವಡಿ

ದೇಶದ ಮಧ್ಯಮ ವರ್ಗ ಮತ್ತು ಬಡವರು, ”80ಸಿ (ಐಟಿ ಕಾಯ್ದೆಯ ಸೆಕ್ಷನ್) ಮಿತಿಯನ್ನು ಹೆಚ್ಚಿಸಲಾಗುವುದು, ತೆರಿಗೆ ಸ್ಲ್ಯಾಬ್‌ನ್ನು 10 ಲಕ್ಷಕ್ಕೆ ಹೆಚ್ಚಿಸಲಾಗುವುದು ಎಂದು ನಿರೀಕ್ಷಿಸಿದ್ದರು. ತೋಟಗಾರಿಕೆ, ಕೃಷಿ, ಪ್ರವಾಸೋದ್ಯಮ, ಸಾರಿಗೆ, ಕುಶಲಕರ್ಮಿಗಳು, ಕನಿಷ್ಠ ಜಮ್ಮು ಮತ್ತು ಕಾಶ್ಮೀರಕ್ಕೆ, ಜಮ್ಮು ಮತ್ತು ಕಾಶ್ಮೀರದ ಜನರು ಈ ಬಜೆಟ್‌ನಿಂದ ಬಹಳಷ್ಟು ನಿರೀಕ್ಷಿಸಿದ್ದರು, ಆದರೆ ಅದರಲ್ಲಿ ಏನೂ ಇಲ್ಲ, ನಿರುದ್ಯೋಗ ಅಥವಾ ಉದ್ಯೋಗ (ಪೀಳಿಗೆ) ಬಗ್ಗೆ ಏನೂ ಇಲ್ಲ” ಎಂದು ಎನ್‌ಸಿ ನಾಯಕ ತನ್ವಿರ್ ಸಾದಿಕ್ ಹೇಳಿದರು.

ಈ ಬಜೆಟ್‌ನಲ್ಲಿ ಬಡವರು ಮತ್ತು ಮಧ್ಯಮ ವರ್ಗದವರಿಗೆ ಏನೂ ಇಲ್ಲ ಎಂದು ಕಿಡಿಕಾರಿದರು. ಜಮ್ಮು ಮತ್ತು ಕಾಶ್ಮೀರದ ಮಧ್ಯಸ್ಥಗಾರರೊಂದಿಗೆ ಯಾವುದೇ ಪೂರ್ವ-ಬಜೆಟ್ ಸಮಾಲೋಚನೆ ಇಲ್ಲ ಎಂದು ಹೇಳಿದರು.

“ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾಯಿತ ಸರ್ಕಾರ ಎಷ್ಟು ಮುಖ್ಯ ಎಂಬ ಪ್ರಶ್ನೆಯನ್ನು ಇದು ನನಗೆ ತರುತ್ತದೆ” ಎಂದು ಅವರು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...