Homeಕರ್ನಾಟಕಕೇಂದ್ರದ ಬಿಜೆಪಿಗಿಂತ ಕಾಂಗ್ರೆಸ್‌ ಸರ್ಕಾರ 3 ಪಟ್ಟು ಹೆಚ್ಚು ರೈತರ ಭೂಮಿ ಕಿತ್ತುಕೊಳ್ಳುತ್ತಿದೆ, ಇದಕ್ಕೆ ಕಾರಣ...

ಕೇಂದ್ರದ ಬಿಜೆಪಿಗಿಂತ ಕಾಂಗ್ರೆಸ್‌ ಸರ್ಕಾರ 3 ಪಟ್ಟು ಹೆಚ್ಚು ರೈತರ ಭೂಮಿ ಕಿತ್ತುಕೊಳ್ಳುತ್ತಿದೆ, ಇದಕ್ಕೆ ಕಾರಣ ಡಿ.ಕೆ. ಶಿವಕುಮಾರ್: ರೈತ ಮುಖಂಡ ವೆಂಕಟಾಚಲಯ್ಯ

- Advertisement -
- Advertisement -

ರಾಜ್ಯ ಕಾಂಗ್ರೆಸ್‌ ಸರ್ಕಾರದ ಕೇಂದ್ರದ ಬಿಜೆಪಿಗಿಂತ 3 ಪಟ್ಟು ಹೆಚ್ಚು ಭೂಮಿಯನ್ನು ಕಿತ್ತುಕೊಳ್ಳುತ್ತಿದ್ದು, ಇದಕ್ಕೆ ನೇರ ಕಾರಣ ಡಿಕೆ ಶಿವಕುಮಾರ್, ಉಳಿದವರು ಇದ್ದರೂ ಡಿಕೆ ಶಿವಕುಮಾರ್ ಪಾಲು ಹೆಚ್ಚಿದೆ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಮುಖಂಡ ವೆಂಕಟಾಚಲಯ್ಯ ಮಂಗಳವಾರ ಹೇಳಿದ್ದಾರೆ. ಬೆಂಗಳೂರಿನ ಗಾಂಧಿ ಭವನದಲ್ಲಿ ‘ಸಂಯುಕ್ತ ಹೋರಾಟ-ಕರ್ನಾಟಕ’ ಆಯೋಜಿಸಿದ್ದ ಜನಾಗ್ರಹ ಸಮಾವೇಶದಲ್ಲಿ ಅವರು ಮಾತನಾಡುತ್ತಿದ್ದರು.

ಸಮಾವೇಶದಲ್ಲಿ ಮಾತನಾಡಿದ ವೆಂಕಟಾಚಲಯ್ಯ ಅವರು, “ಕೋಮುವಾದಿಗಳು ಮನೆಗೆ ಹೋಗಬೇಕು ಎಂದು ಜನರು ನಿರ್ಧಾರ ತೆಗೆದುಕೊಂಡಿದ್ದರು. ಆದರೆ ರಾಜ್ಯದ ಈಗಿನ ಸ್ಥಿತಿ ನೋಡಿದರೆ ಈಗ ಬಿಜೆಪಿಗೂ ಕಾಂಗ್ರೆಸ್‌ಗೂ ವ್ಯತ್ಯಾಸ ಕಾಣುತ್ತಿಲ್ಲ. ರೈತ ಹೋರಾಟಕ್ಕೆ ನಾವು ಬೆಂಬಲ ನೀಡುತ್ತೇವೆ ಎಂದು ಕಾಂಗ್ರೆಸ್ ಹೇಳಿತ್ತು. ಆದರೆ ರಾಜ್ಯ ಕಾಂಗ್ರೆಸ್ ಕೇಂದ್ರದ ಬಿಜೆಪಿಗಿಂತ 3 ಪಟ್ಟು ಹೆಚ್ಚು ಭೂಮಿಯನ್ನು ಕಿತ್ತುಕೊಳ್ಳುತ್ತಿವೆ” ಎಂದು ಅವರು ಹೇಳಿದ್ದಾರೆ.

ರೈತರ ಭೂಮಿ ಕಿತ್ತಿಕೊಳ್ಳಲು ನೇರ ಕಾರಣ ಡಿಕೆ ಶಿವಕುಮಾರ್ ಆಗಿದ್ದು, ಉಳಿದವರು ಇದ್ದರೂ ಡಿಕೆ ಶಿವಕುಮಾರ್ ಪಾಲು ಹೆಚ್ಚಿದೆ ಎಂದು ಅವರು ಆರೋಪಿಸಿದ್ದಾರೆ.

“ಒಂದು ಕುಟುಂಬಕ್ಕೆ 58 ಎಕರೆ ಭೂಮಿ ಇರಬೇಕು ಎಂಬ ಕಾನೂನಿತ್ತು. ಆದರೆ ಅದಕ್ಕೆ ತಿದ್ದುಪಡಿ ತಂದಿದ್ದು ದೇವೇಗೌಡರರು. ನೈಸ್ ಕಂಪನಿ ಬಳಿ ಅಧೀಕೃತ ಮತ್ತು ಅನಧೀಕೃತವಾಗಿ ಲಕ್ಷ ಎಕರೆಗಿಂತಲೂ ಹೆಚ್ಚಿನ ಭೂಮಿಯಿದೆ. ರೈತರ ಭೂಮಿಯನ್ನು ಕಿತ್ತು ಎಲ್ಲಾ ರಿಯಲ್ ಎಸ್ಟೇಟ್‌ ಏಜೆಂಟ್‌ಗಳಿಗೆ, ಮಠಾಧೀಶರಿಗೆ, ವಿದೇಶಿ ಕಂಪನಿಗಳಿಗೆ ನೀಡಲಾಗುತ್ತಿದೆ. ನಾವು ಯಾರು ಅಭಿವೃದ್ಧಿಯ ವಿರೋಧಿಗಳು ಅಲ್ಲ. ಆದರೆ ಈ ಅಭಿವೃದ್ಧಿ ಯಾರಿಗಾಗಿ ಮಾಡುತ್ತಿದ್ದಾರೆ ಎಂದು ಗಮನಿಸಬೇಕಾಗುತ್ತದೆ‌. ಬೆಂಗಳೂರು ಸುತ್ತಮುತ್ತಲಿನ ರೈತರು ಭೂಮಿಯನ್ನು ಕಳೆದುಕೊಳ್ಳುತ್ತಿದ್ದಾರೆ.” ಎಂದು ಅವರು ಹೇಳಿದ್ದಾರೆ.

ಜನವಾದಿ ಮಹಿಳಾ ಸಂಘಟನೆ ರಾಜ್ಯ ಪ್ರಧಾನ ಕಾರ್ಯದರ್ಶಿ ದೇವಿ ಮಾತನಾಡಿ, ಬಿಡದಿಯಲ್ಲಿ ನಡೆದ ಅಲೆಮಾರಿ ಸಮುದಾಯದ ಬಾಲಕಿಯ ಅತ್ಯಾಚಾರವನ್ನು ಖಂಡಿಸಿದರು. “ಒಂದು ಕಡೆಗೆ ಘಟನಾ ಸ್ಥಳಕ್ಕೆ ತೆರಳಿದ ಜನಪರ ಸಂಘಟನೆಗಳೊಂದಿಗೆ ಪೊಲೀಸರು ದರ್ಪದಿಂದ ವರ್ತಿಸುತ್ತಿದ್ದಾರೆ. ಮತ್ತೊಂದೆಡೆ ಆರೆಸ್ಸೆಸ್ ಮತ್ತು ಬಿಜೆಪಿ ಅವರು ಈ ಘಟನೆಯನ್ನು ಇಟ್ಟು ಕೋಮುಗಲಭೆ ಎಬ್ಬಿಸಲು ಪ್ರಯತ್ನ ಮಾಡುತ್ತಿದ್ದಾರೆ.” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೇಂದ್ರದ ಬಿಜೆಪಿಗಿಂತ ಕಾಂಗ್ರೆಸ್‌ ಸರ್ಕಾರ 3 ಪಟ್ಟು ಹೆಚ್ಚು ರೈತರ ಭೂಮಿ ಕಿತ್ತುಕೊಳ್ಳುತ್ತಿದೆ, ಇದಕ್ಕೆ ಕಾರಣ ಡಿ.ಕೆ. ಶಿವಕುಮಾರ್: ರೈತ ಮುಖಂಡ ವೆಂಕಟಾಚಲಯ್ಯ, ಕೇಂದ್ರ, ಬಿಜೆಪಿ,ಕಾಂಗ್ರೆಸ್‌ ಸರ್ಕಾರ, ರೈತರ ಭೂಮಿ, ಡಿ.ಕೆ. ಶಿವಕುಮಾರ್, ರೈತ ಮುಖಂಡ ವೆಂಕಟಾಚಲಯ್ಯ, Center, BJP, Congress government, farmers' land, D.K. Shivakumar, farmer leader Venkatachaliah,
ಚಿತ್ರ ಕೃಪೆ: ಹೆಚ್‌.ಆರ್. ನವೀನ್ ಕುಮಾರ್

 

ಬೆಂಗಳೂರಿನಂತಹ ಮಹಾನಗರದಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ನಡೆಯುವುದು ಸಾಮಾನ್ಯ ಎಂದು ರಾಜ್ಯದ ಗೃಹ ಮಂತ್ರಿಯೆ ಹೇಳಿದ್ದರು. ಜನರ ಆಕ್ರೋಶದ ನಂತರ ಅದನ್ನು ವಾಪಾಸು ಪಡೆದರು, ಈ ಸರ್ಕಾರರಲ್ಲಿ ಎಲ್ಲವೂ ಸರಿಯಿಲ್ಲ ಎಂದು ದೇವಿ ಅವರು ಹೇಳಿದ್ದಾರೆ.

“ಗ್ಯಾರೆಂಟಿ ಹೆಸರಿನಲ್ಲಿ ಮಹಿಳೆಗೆ ಏನೂ ಬೇಕಾಗಿಲ್ಲ ಎಂಬಂತೆ ಸರ್ಕಾರ ಬಿಂಬಿಸುತ್ತಿದೆ. ಬೆಂಗಳೂರಿಗೆ ವಲಸೆ ಬಂದ ರೈತ ಮಹಿಳೆಯರು ಕಾರ್ಪೋರೇಟ್‌ ಕಂಪೆನಿಗಳ ಬಾಗಿಲು ಕಾಯುತ್ತಾ, ಅವರ ಮನೆ ಕ್ಲೀನ್ ಮಾಡುವ ಕೆಲಸ ಮಾಡುತ್ತಿದ್ದಾರೆ. ಕಾರ್ಪೋರೇಟ್‌ಗಳಿಗೆ ರತ್ನಗಂಬಳಿ ಹಾಸಿ ಭೂಮಿ ಕೊಡುವ ಸರ್ಕಾರ, ಬಡವರಿಗೆ ಮತ್ತು ನಿವೇಶನ ಇಲ್ಲದವರಿಗೆ ಸರ್ಕಾರ ನಿವೇಶನ ನೀಡದೆ ಕಾಡಿಸುತ್ತಿದೆ. ವಿಧವೆಯರಿಗೆ ಮೂರಂಕಿಯ ಸಹಾಯಧನವನ್ನು ನೀಡುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಐಸಿಸಿಟಿಯು ರಾಜ್ಯಾಧ್ಯಕ್ಷ ಪಿಪಿ ಅಪ್ಪಣ್ಣ ಮಾತನಾಡಿ, “ಕಾರ್ಮಿಕರು, ರೈತರು ಅನುಭವಿಸುತ್ತಿರುವ ಸಂಕಷ್ಟಗಳನ್ನು ನೋಡುತ್ತಿದ್ದರೆ ಯಾರಿಗೂ ಇಲ್ಲಿ ರಕ್ಷಣೆಯಿಲ್ಲ ಎಂಬಂತಾಗಿದೆ. ಪಾಕಿಸ್ತಾನ ಮತ್ತು ಭಾರತದ ಸಂಘರ್ಷವನ್ನು ಮೋದಿ ನಿಲ್ಲಿಸಿದರೆ ಅಥವಾ ಟ್ರಂಪ್ ನಿಲ್ಲಿಸಿದರೆ ಎಂಬ ಚರ್ಚೆ ನಡೆಯುತ್ತಿದೆ. ಆದರೆ ಯುದ್ದ ನಿಲ್ಲಿಸಿದ್ದು, ಅಮೆರಿಕದ ಬ್ಯಾಂಕ್‌ಗಳು ಆಗಿವೆ. ಅದಕ್ಕಾಗಿ ಹಣ ಸುರಿದಿದ್ದು ಕೂಡಾ ಅವರೇ ಆಗಿದ್ದಾರೆ.” ಎಂದು ಹೇಳಿದ್ದಾರೆ.

ಕರ್ನಾಟಕ ರೈತ ಸಂಘ (ಎಐಯುಕೆಎಸ್) ರಾಜ್ಯಾಧ್ಯಕ್ಷ ಡಿ.ಎಚ್. ಪೂಜಾರ್ ಮಾತನಾಡಿ, “ಕಾಂಗ್ರೆಸ್‌ಗೆ ಈ ಹಿಂದೆ ಬೆಂಬಲ ನೀಡಿದ್ದು, ದೊಡ್ಡ ಶತ್ರುವನ್ನು ಮಣಿಸಲು ಸಣ್ಣ ಶತ್ರುವನ್ನು ಮುಂದೆ ತಳ್ಳಿದಂತೆ ಅಷ್ಟೆ. ಕಾಂಗ್ರೆಸ್‌ನ ಜನವಿರೋಧಿ ಮತ್ತು ಕಾರ್ಪೊರೇಟ್ ಪರ ನೀತಿಗಳ ಕಾರಣಕ್ಕೆ ದೇಶದಲ್ಲಿ ಇಂದು ಬಿಜೆಪಿ ಅಧಿಕಾರಕ್ಕೆ ಬಂದಿವೆ. ಇಂಡಿಯಾ ಮೈತ್ರಿ ಅಧಿಕಾರಕ್ಕೆ ಬಂದರೆ ಸ್ವಾಮಿನಾಥನ್ ವರದಿ ಜಾರಿಗೆ ಮಾಡುತ್ತೇವೆ ಎಂದು ಕಾಂಗ್ರೆಸ್ ಹೇಳಿತ್ತು. ಹಾಗಾದರೆ ಜಾರ್ಖಂಡ್ ಮತ್ತು ಕರ್ನಾಟಕದಲ್ಲಿ ಅದನ್ನು ಜಾರಿ ಮಾಡಬಹುದು ಅಲ್ಲವೇ?” ಎಂದು ಹೇಳಿದ್ದರೆ.

ಕೇಂದ್ರ ಜಾರಿ ಮಾಡಿದ್ದ ರೈತ ವಿರೋಧಿ ಕಾಯ್ದೆ ರಚನೆ ಮಾಡಿದ್ದ ತಂಡದಲ್ಲಿ ಇದ್ದವರೇ ರಾಜ್ಯ ಬೆಲೆ ಆಯೋಗದ ಅಧ್ಯಕ್ಷ ಆಗಿದ್ದಾರೆ. ಅವರನ್ನು ಕಿತ್ತೊಗೆಯಲು ನಾವು ಹೋರಾಟ ಮಾಡಬೇಕಿದೆ ಎಂದು ಬೇಸರ ತೋಡಿಕೊಂಡಿದ್ದಾರೆ.

ಕರ್ನಾಟಕ ಜನಶಕ್ತಿ ರಾಜ್ಯ ಕಾರ್ಯದರ್ಶಿ ಕುಮಾರ್ ಸಮತಳ ಮಾತನಾಡಿ, ನಾವು ಹಿಂದೆ ಕೂಡಾ ವಿರೋಧ ಪಕ್ಷವಾಗಿ ಕೆಲಸ ಮಾಡಿದ್ದೆವು.‌ ಈಗಲೂ ಅದನ್ನೇ ಮಾಡುತ್ತಿದ್ದೇವೆ. ಕಾಂಗ್ರೆಸ್ ಸರ್ಕಾರ ಅಲ್ಪ ಸಾಧನೆಯನ್ನು ದೊಡ್ಡ ಸಾಧನೆ ಎಂಬಂತೆ ಬಿಂಬಿಸಲಾಗುತ್ತಿದೆ. ಬಗರ್ ಹುಂಕುಂ ಸಾಗುವಳಿದಾರರಿಗೆ ಭೂಮಿ ಒಡೆತನ ಸಿಕ್ಕಿಲ್ಲ, ನಿವೇಶನ ರಹಿತರಿಗೆ ನಿವೇಶನ, ಮನೆ ಇಲ್ಲದವರಿಗೆ ಮನೆ ನೀಡಿ ದೊಡ್ಡ ಸಾಧನೆ ಮಾಡಿದ್ದೇವೆ ಎಂದು ಪ್ರಚಾರ ಮಾಡಲಿ. ನಾವು ಕರ್ನಾಟಕ ಸರ್ಕಾರದ ಬಾಲ ಅಲ್ಲ ಎಂದು ಹೇಳಿದ್ದಾರೆ.

ಸಿಐಟಿಯು ರಾಜ್ಯಾಧ್ಯಕ್ಷೆ ಎಸ್. ವರಲಕ್ಷ್ಮಿ ಮಾತನಾಡಿ, ಕಾಂಗ್ರೆಸ್ ಮತ್ತು ಬಿಜೆಪಿಯ ಮೂಲ ಸಿದ್ಧಾಂತವೆ ಶ್ರೀಮಂತರ ಓಲೈಕೆ ಆಗಿದೆ. ಅದು ಗೊತ್ತಿದ್ದೂ ಕಾಂಗ್ರೆಸ್ ಬೆಂಬಲಿಸಿದ್ದು ಬಿಜೆಪಿಯ ಕೋಮು ಕಾರಣಕ್ಕಾಗಿ ಮಾತ್ರ ಎಂದು ಹೇಳಿದ್ದಾರೆ. ಅದಾಗ್ಯೂ, ಕಾಂಗ್ರೆಸ್ ಮೇಲೆ ನಮಗೆ ಅಂದೂ ಕೂಡಾ ಅಥವಾ ಇಂದೂ ಕೂಡ ಅಂತಹ ಭರವಸೆ ಇಲ್ಲ ಎಂದು ಹೇಳಿದರು.

ಕೇಂದ್ರದ ಬಿಜೆಪಿಗಿಂತ ಕಾಂಗ್ರೆಸ್‌ ಸರ್ಕಾರ 3 ಪಟ್ಟು ಹೆಚ್ಚು ರೈತರ ಭೂಮಿ ಕಿತ್ತುಕೊಳ್ಳುತ್ತಿದೆ, ಇದಕ್ಕೆ ಕಾರಣ ಡಿ.ಕೆ. ಶಿವಕುಮಾರ್: ರೈತ ಮುಖಂಡ ವೆಂಕಟಾಚಲಯ್ಯ, ಕೇಂದ್ರ, ಬಿಜೆಪಿ,ಕಾಂಗ್ರೆಸ್‌ ಸರ್ಕಾರ, ರೈತರ ಭೂಮಿ, ಡಿ.ಕೆ. ಶಿವಕುಮಾರ್, ರೈತ ಮುಖಂಡ ವೆಂಕಟಾಚಲಯ್ಯ, Center, BJP, Congress government, farmers' land, D.K. Shivakumar, farmer leader Venkatachaliah,
ಚಿತ್ರ ಕೃಪೆ: ಹೆಚ್‌.ಆರ್. ನವೀನ್ ಕುಮಾರ್

“ರಾಜ್ಯದಲ್ಲಿ 116 ಕೊಮುಗಲಭೆಳು ನಡೆದಿವೆ. ಅದರ ಬಗ್ಗೆ ರಾಜ್ಯ ಸರ್ಕಾರಕ್ಕೆ ಸರಿಯಾದ ನಿಲುವು ಇಲ್ಲ. ಕೋಮು ಸೌಹಾರ್ದತೆ ಹಾಳು ಮಾಡುವ ಮಠಾಧೀಶರ ಕಾಲಿಗೆ ಸರ್ಕಾರ ಬೀಳುತ್ತಿದೆ. ಈ ಸರ್ಕಾರದಿಂದ ಸಕಾರಾತ್ಮಕ ವಿಚಾರಕ್ಕಿಂತ ನಕಾರಾತ್ಮಕ ವಿಚಾರಗಳೆ ನಮಗೆ ಹೆಚ್ಚಾಗಿ ಕಾಣುತ್ತಿವೆ. ರಾಜ್ಯ ಸರ್ಕಾರ ಈ ಎರಡು ವರ್ಷಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ಗೆ ಯಾವುದೇ ವ್ಯತ್ಯಾಸ ಇಲ್ಲ. ಹೋರಾಟದಿಂದಲೆ ಬಂದ ಸಿದ್ದರಾಮಯ್ಯ ಅವರು ಹೋರಾಟಗಾರರನ್ನು ಅವಮಾನಿಸುತ್ತಿದ್ದಾರೆ.‌ ಇನ್ನೂ ಮೂರು ವರ್ಷ ಅಧಿಕಾರ ಇದೆ, ಬದಲಾಗದಿದ್ದರೆ ನಮ್ಮ ಹೋರಾಟಗಳ ಮೂಲಕ ಬದಲಾಯಿಸಬೇಕು” ಎಂದು ವರಲಕ್ಷ್ಮಿ ಹೇಳಿದ್ದಾರೆ.

ಕರ್ನಾಟಕ ಜನಶಕ್ತಿ ರಾಜ್ಯಾಧ್ಯಕ್ಷ ನೂರ್ ಶ್ರೀಧರ್ ಮಾತನಾಡಿ, “ಈ ಸಮಾವೇಶ ಕಾಂಗ್ರೆಸ್ ಸರ್ಕಾರದ ಜೊತೆಗಿನ ಗುದ್ದಾಟದ ಆರಂಭ ಬಿಂದು. ಸರ್ಕಾರ ಬೆಳಗಾವಿಯಲ್ಲಿ ಖಾಸಗಿ ಎಪಿಎಂಸಿಗೆ ಅವಕಾಶ ಮಾಡಿಕೊಟ್ಟಿದ್ದು, 200 ಕೊಟಿ ಖರ್ಚು ಮಾಡಿ ಕಟ್ಟಿದ ಸರ್ಕಾರಿ ಎಪಿಎಂಸಿ ಮುಚ್ಚಲಾಗಿದೆ. ಮಹಿಳೆಯರ ಅಪೌಷ್ಟಿಕತೆ ಹೆಚ್ಚಾಗುತ್ತಿವೆ. ಬಗರ್‌ಹುಕುಂ ಅರ್ಜಿಗಳನ್ನು ಹರಿದು ಬಿಸಾಕಲಾಗುತ್ತಿವೆ. ಇದನ್ನು ಪ್ರತಿಭಟಿಸಿ ದೆಹಲಿ ಮಾದರಿಯಂತೆ ಬೆಂಗಳೂರಿಗೆ ಮುತ್ತಿಗೆ ಹಾಕಬೇಕಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ 2 ವರ್ಷಗಳಾದ ಹಿನ್ನಲೆ ಪಕ್ಷವು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಬೃಹತ್ ಸಾಧನಾ ಸಮಾವೇಶವನ್ನು ಮಂಗಳವಾರ ಆಯೋಜಿಸಿದೆ. ಈ ಸಮಾವೇಶದ ನೈತಿಕತೆಯನ್ನು ಪ್ರಶ್ನಿಸಿ ಸಂಯುಕ್ತ ಹೋರಾಟ – ಕರ್ನಾಟಕ ಜನ ಚಳವಳಿಗಳಿಂದ ಜನಾಗ್ರಹ ಸಮಾವೇಶವನ್ನು ನಡೆಸಿದೆ. ‘ಸಂಯುಕ್ತ ಹೋರಾಟ-ಕರ್ನಾಟಕ’ ರಾಜ್ಯದ ರೈತ, ದಲಿತ, ಕಾರ್ಮಿಕ, ವಿದ್ಯಾರ್ಥಿ, ಯುವಜನ, ಮಹಿಳಾ ಸಂಘಟನೆಗಳ ಸಮನ್ವಯ ಸಮಿತಿಯಾಗಿದೆ. ಕೇಂದ್ರದ ಬಿಜೆಪಿಗಿಂತ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಸುಳ್ಳು ಮಾಹಿತಿ ನೀಡಿದ ಆರೋಪ: ಅರ್ನಬ್ ಗೋಸ್ವಾಮಿ, ಅಮಿತ್ ಮಾಳವೀಯ ವಿರುದ್ಧ ದೂರು ನೀಡಿದ ಕಾಂಗ್ರೆಸ್, ಎಫ್‌ಐಆರ್ ದಾಖಲು

ಸುಳ್ಳು ಮಾಹಿತಿ ನೀಡಿದ ಆರೋಪ: ಅರ್ನಬ್ ಗೋಸ್ವಾಮಿ, ಅಮಿತ್ ಮಾಳವೀಯ ವಿರುದ್ಧ ದೂರು ನೀಡಿದ ಕಾಂಗ್ರೆಸ್, ಎಫ್‌ಐಆರ್ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನೀವು ಅಮೆರಿಕನ್ನರನ್ನು ಕೊಂದರೆ ನಾವು, ನಿಮ್ಮನ್ನು ಬೇಟೆಯಾಡುತ್ತೇವೆ’: ಅಮೆರಿಕ ಬೆದರಿಕೆ 

ವಾಷಿಂಗ್ಟನ್: "ನೀವು ಅಮೆರಿಕನ್ನರನ್ನು ಕೊಂದರೆ, ನಾವು ನಿಮ್ಮನ್ನು ಬೇಟೆಯಾಡುತ್ತೇವೆ" ಎಂದು ಯುದ್ಧ ಕಾರ್ಯದರ್ಶಿ ಪೀಟ್ ಹೆಗ್ಸೆತ್ ರೀಡ್ ಸಾಮಾಜಿಕ ಮಾಧ್ಯಮದಲ್ಲಿ ಬೆದರಿಕೆ ಪೋಸ್ಟ್ ಹಾಕಿದ್ದಾರೆ.  ಅಮೆರಿಕ ನಾಗರಿಕರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವ ಯಾವುದೇ ದೇಶ...

ಬಳ್ಳಾರಿ | ವಸತಿ ಶಾಲೆಯಲ್ಲಿ ವಿದ್ಯಾರ್ಥಿಯಿಂದ ಸಹಪಾಠಿಗಳ ಮೇಲೆ ದಾಳಿ : ಓರ್ವ ಸಾವು, 8 ಜನರಿಗೆ ಗಾಯ

ಬಳ್ಳಾರಿ ನಗರದ 'ಗುರುಕುಲ ವಸತಿ ಶಾಲೆ'ಯಲ್ಲಿ ಶನಿವಾರ (ಮಾ.7) ರಾತ್ರಿ ವಿದ್ಯಾರ್ಥಿಯೋರ್ವ ತನ್ನ ಸಹಪಾಠಿಗಳ ಮೇಲೆ ರಾಡ್, ಸ್ಕ್ರೂ ಡ್ರೈವರ್‌ನಿಂದ ದಾಳಿ ನಡೆಸಿದ್ದು, ಪರಿಣಾಮ ಓರ್ವ ವಿದ್ಯಾರ್ಥಿ ಮೃತಪಟ್ಟಿದ್ದಾನೆ. ಎಂಟು ಜನರು ಗಾಯಗೊಂಡಿದ್ದಾರೆ...

ಗೋವುಗಳ ಕಳ್ಳಸಾಗಣೆ ಆರೋಪ: ಹಣ್ಣು-ತರಕಾರಿ ಸಾಗಿಸುತ್ತಿದ್ದ 28 ವರ್ಷದ ಮುಸ್ಲಿಂ ಚಾಲಕನಿಗೆ ಗುಂಡಿಕ್ಕಿ ಹತ್ಯೆ ಮಾಡಿದ ಹಿಂದುತ್ವ ಗುಂಪು

ಭಿವಾಡಿ: ರಾಜಸ್ಥಾನದ ಭಿವಾಡಿ ಪ್ರದೇಶದಲ್ಲಿ ಮಾರ್ಚ್ 2 ರ ಮುಂಜಾನೆ 28 ವರ್ಷದ ಆಮಿರ್ ಎಂಬ ವ್ಯಕ್ತಿಯನ್ನು ಗೋರಕ್ಷಕರು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಅಕ್ರಮವಾಗಿ ಗೋವುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದಾರೆಂದು ಶಂಕಿಸಿ ಬಜರಂಗದಳದ ಸದಸ್ಯರು...

ನೇಪಾಳ ಚುನಾವಣೆ : ಪ್ರಚಂಡ ಗೆಲುವಿನತ್ತ ಆರ್‌ಎಸ್‌ಪಿ; ಬೆಂಗಳೂರಿನಲ್ಲಿ ಪದವಿ ಪಡೆದಿದ್ದ ಬಲೇಂದ್ರ ಶಾಗೆ ಪ್ರಧಾನಿ ಪಟ್ಟ?

'ಜೆನ್‌ ಝೀ ದಂಗೆ'ಯ ಬಳಿಕ ನಡೆದ ನೇಪಾಳದ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಯುವ ನಾಯಕ ಬಲೇಂದ್ರ ಶಾ ನೇತೃತ್ವದ ರಾಷ್ಟ್ರೀಯ ಸ್ವತಂತ್ರ ಪಕ್ಷ (ಆರ್‌ಎಸ್‌ಪಿ) ಅಭೂತಪೂರ್ವ ಗೆಲುವಿನತ್ತ ಮುನ್ನುಗ್ಗುತ್ತಿದೆ.  ಕಠ್ಮಂಡುವಿನ ಮಾಜಿ ಮೇಯರ್ ಮತ್ತು ಮಾಜಿ...

‘ರಾಷ್ಟ್ರಪತಿ ಮುಂದಿಟ್ಟುಕೊಂಡು ಬಿಜೆಪಿಯಿಂದ ರಾಜಕೀಯ’ : ದ್ರೌಪದಿ ಮುರ್ಮು ಆರೋಪಗಳಿಗೆ ಮಮತಾ ಬ್ಯಾನರ್ಜಿ ತಿರುಗೇಟು

'ಅಂತಾರಾಷ್ಟ್ರೀಯ ಸಂತಾಲ್' ಸಮ್ಮೇಳನದ ಸ್ಥಳ ಬದಲಾವಣೆ, ಶಿಷ್ಟಾಚಾರ ಉಲ್ಲಂಘನೆ ಸೇರಿದಂತೆ ಪಶ್ಚಿಮ ಬಂಗಾಳ ಸರ್ಕಾರದ ವಿರುದ್ದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಾಡಿರುವ ಆರೋಪಗಳಿಗೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿರುಗೇಟು ಕೊಟ್ಟಿದ್ದಾರೆ. ಪಶ್ಚಿಮ...

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಟಿಎಂಸಿ ಬೆಂಬಲ

ಮಾರ್ಚ್ 9 ರ ಸೋಮವಾರ ಸಂಸತ್ತಿನ ಬಜೆಟ್ ಅಧಿವೇಶನ ಪುನರಾರಂಭವಾದಾಗ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಮಂಡಿಸಲಾಗುವ ಅವಿಶ್ವಾಸ ನಿರ್ಣಯಕ್ಕೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಬೆಂಬಲ ನೀಡಲಿದೆ ಎಂದು ಪಕ್ಷದ ನಾಯಕರು...

ಹೊಸ ರಾಜ್ಯಪಾಲ ರವಿ ಬಿಜೆಪಿ ಕೇಡರ್, ಆದರೆ ಬಂಗಾಳ ಟಫ್ ಟರ್ಫ್ : ಮಮತಾ ಬ್ಯಾನರ್ಜಿ

ನೂತನ ರಾಜ್ಯಪಾಲ ಆರ್.ಎನ್ ರವಿ ಅವರನ್ನು 'ಬಿಜೆಪಿ ಕೇಡರ್' ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಲೇವಡಿ ಮಾಡಿದ್ದು, ಮುಂಬರುವ ದಿನಗಳಲ್ಲಿ ರಾಜ್ಯ ಸಚಿವಾಲಯ 'ನಬನ್ನಾ' ಮತ್ತು ರಾಜ್ಯಪಾಲರ ನಿವಾಸ...

ಕರ್ನಾಟಕ ಬಜೆಟ್ 2026| ಶಿಕ್ಷಣ ಕ್ಷೇತ್ರಕ್ಕೆ ಅನುದಾನ ಹಂಚಿಕೆ ನಿರಾಶದಾಯಕ

ಶಿಕ್ಷಣಕ್ಕೆ 47,224 ಕೋಟಿ (ಶೇ.10) ಹಂಚಿಕೆ ಮಾಡಿದ್ದಾರೆ. ಇದು ತುಂಬಾ ಕಡಿಮೆ ಅನುದಾನವಾಗಿದೆ. ವಾಸ್ತವದಲ್ಲಿ ಬಜೆಟ್ ವೆಚ್ಚದ ಶೇ.20-24ರಷ್ಟು ಹಣವನ್ನು ಶಿಕ್ಷಣಕ್ಕೆ ಮೀಸಲಿಡಬೇಕು. ಆದರೆ ಇದು ಸಾಧ್ಯವಾಗುತ್ತಿಲ್ಲ. ಶಿಕ್ಷಣವನ್ನು ಅನುತ್ಪಾದಕ ವಲಯ ಎಂದು...

ಕೇರಳ : ಪ್ರಧಾನಿ ಮೋದಿ ‘ದೇಶದ್ರೋಹಿ’ ಎಂದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು

ಪ್ರಧಾನಿ ನರೇಂದ್ರ ಮೋದಿ 'ದೇಶದ್ರೋಹಿ' ಎಂದು ಸಾಮಾಜಿಕ ಮಾಧ್ಯಮದಲ್ಲಿ ಕಾಮೆಂಟ್ ಹಾಕಿದ ಆರೋಪದ ಮೇಲೆ ಕೇರಳದ ಕಣ್ಣೂರಿನ ಶ್ರೀಕಂಡಪುರಂ ಪೊಲೀಸರು ವ್ಯಕ್ತಿಯೊಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಹಿಂದೂ ಶನಿವಾರ (ಮಾ.7) ವರದಿ...

ಕೋಲ್ಕತ್ತಾ| ಮತದಾರರ ಪಟ್ಟಿಯಿಂದ ಹೆಸರು ಅಳಿಸುವಿಕೆ ವಿರೋಧಿಸಿ ಅಹೋರಾತ್ರಿ ಧರಣಿ ಮುಂದುವರೆಸಿದ ಮಮತಾ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಸತತ ಎರಡನೇ ದಿನವಾದ ಶನಿವಾರವೂ ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ, ಅವರು ಅಹೋರಾತ್ರಿ ಧರಣಿ ಸ್ಥಳದಲ್ಲಿ ರಾತ್ರಿ ಕಳೆದರು. ಮುಂಬರುವ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ "ಬಂಗಾಳದ ಮತದಾರರ...