Homeಕರ್ನಾಟಕಕೇಂದ್ರದ ಬಿಜೆಪಿಗಿಂತ ಕಾಂಗ್ರೆಸ್‌ ಸರ್ಕಾರ 3 ಪಟ್ಟು ಹೆಚ್ಚು ರೈತರ ಭೂಮಿ ಕಿತ್ತುಕೊಳ್ಳುತ್ತಿದೆ, ಇದಕ್ಕೆ ಕಾರಣ...

ಕೇಂದ್ರದ ಬಿಜೆಪಿಗಿಂತ ಕಾಂಗ್ರೆಸ್‌ ಸರ್ಕಾರ 3 ಪಟ್ಟು ಹೆಚ್ಚು ರೈತರ ಭೂಮಿ ಕಿತ್ತುಕೊಳ್ಳುತ್ತಿದೆ, ಇದಕ್ಕೆ ಕಾರಣ ಡಿ.ಕೆ. ಶಿವಕುಮಾರ್: ರೈತ ಮುಖಂಡ ವೆಂಕಟಾಚಲಯ್ಯ

- Advertisement -
- Advertisement -

ರಾಜ್ಯ ಕಾಂಗ್ರೆಸ್‌ ಸರ್ಕಾರದ ಕೇಂದ್ರದ ಬಿಜೆಪಿಗಿಂತ 3 ಪಟ್ಟು ಹೆಚ್ಚು ಭೂಮಿಯನ್ನು ಕಿತ್ತುಕೊಳ್ಳುತ್ತಿದ್ದು, ಇದಕ್ಕೆ ನೇರ ಕಾರಣ ಡಿಕೆ ಶಿವಕುಮಾರ್, ಉಳಿದವರು ಇದ್ದರೂ ಡಿಕೆ ಶಿವಕುಮಾರ್ ಪಾಲು ಹೆಚ್ಚಿದೆ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಮುಖಂಡ ವೆಂಕಟಾಚಲಯ್ಯ ಮಂಗಳವಾರ ಹೇಳಿದ್ದಾರೆ. ಬೆಂಗಳೂರಿನ ಗಾಂಧಿ ಭವನದಲ್ಲಿ ‘ಸಂಯುಕ್ತ ಹೋರಾಟ-ಕರ್ನಾಟಕ’ ಆಯೋಜಿಸಿದ್ದ ಜನಾಗ್ರಹ ಸಮಾವೇಶದಲ್ಲಿ ಅವರು ಮಾತನಾಡುತ್ತಿದ್ದರು.

ಸಮಾವೇಶದಲ್ಲಿ ಮಾತನಾಡಿದ ವೆಂಕಟಾಚಲಯ್ಯ ಅವರು, “ಕೋಮುವಾದಿಗಳು ಮನೆಗೆ ಹೋಗಬೇಕು ಎಂದು ಜನರು ನಿರ್ಧಾರ ತೆಗೆದುಕೊಂಡಿದ್ದರು. ಆದರೆ ರಾಜ್ಯದ ಈಗಿನ ಸ್ಥಿತಿ ನೋಡಿದರೆ ಈಗ ಬಿಜೆಪಿಗೂ ಕಾಂಗ್ರೆಸ್‌ಗೂ ವ್ಯತ್ಯಾಸ ಕಾಣುತ್ತಿಲ್ಲ. ರೈತ ಹೋರಾಟಕ್ಕೆ ನಾವು ಬೆಂಬಲ ನೀಡುತ್ತೇವೆ ಎಂದು ಕಾಂಗ್ರೆಸ್ ಹೇಳಿತ್ತು. ಆದರೆ ರಾಜ್ಯ ಕಾಂಗ್ರೆಸ್ ಕೇಂದ್ರದ ಬಿಜೆಪಿಗಿಂತ 3 ಪಟ್ಟು ಹೆಚ್ಚು ಭೂಮಿಯನ್ನು ಕಿತ್ತುಕೊಳ್ಳುತ್ತಿವೆ” ಎಂದು ಅವರು ಹೇಳಿದ್ದಾರೆ.

ರೈತರ ಭೂಮಿ ಕಿತ್ತಿಕೊಳ್ಳಲು ನೇರ ಕಾರಣ ಡಿಕೆ ಶಿವಕುಮಾರ್ ಆಗಿದ್ದು, ಉಳಿದವರು ಇದ್ದರೂ ಡಿಕೆ ಶಿವಕುಮಾರ್ ಪಾಲು ಹೆಚ್ಚಿದೆ ಎಂದು ಅವರು ಆರೋಪಿಸಿದ್ದಾರೆ.

“ಒಂದು ಕುಟುಂಬಕ್ಕೆ 58 ಎಕರೆ ಭೂಮಿ ಇರಬೇಕು ಎಂಬ ಕಾನೂನಿತ್ತು. ಆದರೆ ಅದಕ್ಕೆ ತಿದ್ದುಪಡಿ ತಂದಿದ್ದು ದೇವೇಗೌಡರರು. ನೈಸ್ ಕಂಪನಿ ಬಳಿ ಅಧೀಕೃತ ಮತ್ತು ಅನಧೀಕೃತವಾಗಿ ಲಕ್ಷ ಎಕರೆಗಿಂತಲೂ ಹೆಚ್ಚಿನ ಭೂಮಿಯಿದೆ. ರೈತರ ಭೂಮಿಯನ್ನು ಕಿತ್ತು ಎಲ್ಲಾ ರಿಯಲ್ ಎಸ್ಟೇಟ್‌ ಏಜೆಂಟ್‌ಗಳಿಗೆ, ಮಠಾಧೀಶರಿಗೆ, ವಿದೇಶಿ ಕಂಪನಿಗಳಿಗೆ ನೀಡಲಾಗುತ್ತಿದೆ. ನಾವು ಯಾರು ಅಭಿವೃದ್ಧಿಯ ವಿರೋಧಿಗಳು ಅಲ್ಲ. ಆದರೆ ಈ ಅಭಿವೃದ್ಧಿ ಯಾರಿಗಾಗಿ ಮಾಡುತ್ತಿದ್ದಾರೆ ಎಂದು ಗಮನಿಸಬೇಕಾಗುತ್ತದೆ‌. ಬೆಂಗಳೂರು ಸುತ್ತಮುತ್ತಲಿನ ರೈತರು ಭೂಮಿಯನ್ನು ಕಳೆದುಕೊಳ್ಳುತ್ತಿದ್ದಾರೆ.” ಎಂದು ಅವರು ಹೇಳಿದ್ದಾರೆ.

ಜನವಾದಿ ಮಹಿಳಾ ಸಂಘಟನೆ ರಾಜ್ಯ ಪ್ರಧಾನ ಕಾರ್ಯದರ್ಶಿ ದೇವಿ ಮಾತನಾಡಿ, ಬಿಡದಿಯಲ್ಲಿ ನಡೆದ ಅಲೆಮಾರಿ ಸಮುದಾಯದ ಬಾಲಕಿಯ ಅತ್ಯಾಚಾರವನ್ನು ಖಂಡಿಸಿದರು. “ಒಂದು ಕಡೆಗೆ ಘಟನಾ ಸ್ಥಳಕ್ಕೆ ತೆರಳಿದ ಜನಪರ ಸಂಘಟನೆಗಳೊಂದಿಗೆ ಪೊಲೀಸರು ದರ್ಪದಿಂದ ವರ್ತಿಸುತ್ತಿದ್ದಾರೆ. ಮತ್ತೊಂದೆಡೆ ಆರೆಸ್ಸೆಸ್ ಮತ್ತು ಬಿಜೆಪಿ ಅವರು ಈ ಘಟನೆಯನ್ನು ಇಟ್ಟು ಕೋಮುಗಲಭೆ ಎಬ್ಬಿಸಲು ಪ್ರಯತ್ನ ಮಾಡುತ್ತಿದ್ದಾರೆ.” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೇಂದ್ರದ ಬಿಜೆಪಿಗಿಂತ ಕಾಂಗ್ರೆಸ್‌ ಸರ್ಕಾರ 3 ಪಟ್ಟು ಹೆಚ್ಚು ರೈತರ ಭೂಮಿ ಕಿತ್ತುಕೊಳ್ಳುತ್ತಿದೆ, ಇದಕ್ಕೆ ಕಾರಣ ಡಿ.ಕೆ. ಶಿವಕುಮಾರ್: ರೈತ ಮುಖಂಡ ವೆಂಕಟಾಚಲಯ್ಯ, ಕೇಂದ್ರ, ಬಿಜೆಪಿ,ಕಾಂಗ್ರೆಸ್‌ ಸರ್ಕಾರ, ರೈತರ ಭೂಮಿ, ಡಿ.ಕೆ. ಶಿವಕುಮಾರ್, ರೈತ ಮುಖಂಡ ವೆಂಕಟಾಚಲಯ್ಯ, Center, BJP, Congress government, farmers' land, D.K. Shivakumar, farmer leader Venkatachaliah,
ಚಿತ್ರ ಕೃಪೆ: ಹೆಚ್‌.ಆರ್. ನವೀನ್ ಕುಮಾರ್

 

ಬೆಂಗಳೂರಿನಂತಹ ಮಹಾನಗರದಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ನಡೆಯುವುದು ಸಾಮಾನ್ಯ ಎಂದು ರಾಜ್ಯದ ಗೃಹ ಮಂತ್ರಿಯೆ ಹೇಳಿದ್ದರು. ಜನರ ಆಕ್ರೋಶದ ನಂತರ ಅದನ್ನು ವಾಪಾಸು ಪಡೆದರು, ಈ ಸರ್ಕಾರರಲ್ಲಿ ಎಲ್ಲವೂ ಸರಿಯಿಲ್ಲ ಎಂದು ದೇವಿ ಅವರು ಹೇಳಿದ್ದಾರೆ.

“ಗ್ಯಾರೆಂಟಿ ಹೆಸರಿನಲ್ಲಿ ಮಹಿಳೆಗೆ ಏನೂ ಬೇಕಾಗಿಲ್ಲ ಎಂಬಂತೆ ಸರ್ಕಾರ ಬಿಂಬಿಸುತ್ತಿದೆ. ಬೆಂಗಳೂರಿಗೆ ವಲಸೆ ಬಂದ ರೈತ ಮಹಿಳೆಯರು ಕಾರ್ಪೋರೇಟ್‌ ಕಂಪೆನಿಗಳ ಬಾಗಿಲು ಕಾಯುತ್ತಾ, ಅವರ ಮನೆ ಕ್ಲೀನ್ ಮಾಡುವ ಕೆಲಸ ಮಾಡುತ್ತಿದ್ದಾರೆ. ಕಾರ್ಪೋರೇಟ್‌ಗಳಿಗೆ ರತ್ನಗಂಬಳಿ ಹಾಸಿ ಭೂಮಿ ಕೊಡುವ ಸರ್ಕಾರ, ಬಡವರಿಗೆ ಮತ್ತು ನಿವೇಶನ ಇಲ್ಲದವರಿಗೆ ಸರ್ಕಾರ ನಿವೇಶನ ನೀಡದೆ ಕಾಡಿಸುತ್ತಿದೆ. ವಿಧವೆಯರಿಗೆ ಮೂರಂಕಿಯ ಸಹಾಯಧನವನ್ನು ನೀಡುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಐಸಿಸಿಟಿಯು ರಾಜ್ಯಾಧ್ಯಕ್ಷ ಪಿಪಿ ಅಪ್ಪಣ್ಣ ಮಾತನಾಡಿ, “ಕಾರ್ಮಿಕರು, ರೈತರು ಅನುಭವಿಸುತ್ತಿರುವ ಸಂಕಷ್ಟಗಳನ್ನು ನೋಡುತ್ತಿದ್ದರೆ ಯಾರಿಗೂ ಇಲ್ಲಿ ರಕ್ಷಣೆಯಿಲ್ಲ ಎಂಬಂತಾಗಿದೆ. ಪಾಕಿಸ್ತಾನ ಮತ್ತು ಭಾರತದ ಸಂಘರ್ಷವನ್ನು ಮೋದಿ ನಿಲ್ಲಿಸಿದರೆ ಅಥವಾ ಟ್ರಂಪ್ ನಿಲ್ಲಿಸಿದರೆ ಎಂಬ ಚರ್ಚೆ ನಡೆಯುತ್ತಿದೆ. ಆದರೆ ಯುದ್ದ ನಿಲ್ಲಿಸಿದ್ದು, ಅಮೆರಿಕದ ಬ್ಯಾಂಕ್‌ಗಳು ಆಗಿವೆ. ಅದಕ್ಕಾಗಿ ಹಣ ಸುರಿದಿದ್ದು ಕೂಡಾ ಅವರೇ ಆಗಿದ್ದಾರೆ.” ಎಂದು ಹೇಳಿದ್ದಾರೆ.

ಕರ್ನಾಟಕ ರೈತ ಸಂಘ (ಎಐಯುಕೆಎಸ್) ರಾಜ್ಯಾಧ್ಯಕ್ಷ ಡಿ.ಎಚ್. ಪೂಜಾರ್ ಮಾತನಾಡಿ, “ಕಾಂಗ್ರೆಸ್‌ಗೆ ಈ ಹಿಂದೆ ಬೆಂಬಲ ನೀಡಿದ್ದು, ದೊಡ್ಡ ಶತ್ರುವನ್ನು ಮಣಿಸಲು ಸಣ್ಣ ಶತ್ರುವನ್ನು ಮುಂದೆ ತಳ್ಳಿದಂತೆ ಅಷ್ಟೆ. ಕಾಂಗ್ರೆಸ್‌ನ ಜನವಿರೋಧಿ ಮತ್ತು ಕಾರ್ಪೊರೇಟ್ ಪರ ನೀತಿಗಳ ಕಾರಣಕ್ಕೆ ದೇಶದಲ್ಲಿ ಇಂದು ಬಿಜೆಪಿ ಅಧಿಕಾರಕ್ಕೆ ಬಂದಿವೆ. ಇಂಡಿಯಾ ಮೈತ್ರಿ ಅಧಿಕಾರಕ್ಕೆ ಬಂದರೆ ಸ್ವಾಮಿನಾಥನ್ ವರದಿ ಜಾರಿಗೆ ಮಾಡುತ್ತೇವೆ ಎಂದು ಕಾಂಗ್ರೆಸ್ ಹೇಳಿತ್ತು. ಹಾಗಾದರೆ ಜಾರ್ಖಂಡ್ ಮತ್ತು ಕರ್ನಾಟಕದಲ್ಲಿ ಅದನ್ನು ಜಾರಿ ಮಾಡಬಹುದು ಅಲ್ಲವೇ?” ಎಂದು ಹೇಳಿದ್ದರೆ.

ಕೇಂದ್ರ ಜಾರಿ ಮಾಡಿದ್ದ ರೈತ ವಿರೋಧಿ ಕಾಯ್ದೆ ರಚನೆ ಮಾಡಿದ್ದ ತಂಡದಲ್ಲಿ ಇದ್ದವರೇ ರಾಜ್ಯ ಬೆಲೆ ಆಯೋಗದ ಅಧ್ಯಕ್ಷ ಆಗಿದ್ದಾರೆ. ಅವರನ್ನು ಕಿತ್ತೊಗೆಯಲು ನಾವು ಹೋರಾಟ ಮಾಡಬೇಕಿದೆ ಎಂದು ಬೇಸರ ತೋಡಿಕೊಂಡಿದ್ದಾರೆ.

ಕರ್ನಾಟಕ ಜನಶಕ್ತಿ ರಾಜ್ಯ ಕಾರ್ಯದರ್ಶಿ ಕುಮಾರ್ ಸಮತಳ ಮಾತನಾಡಿ, ನಾವು ಹಿಂದೆ ಕೂಡಾ ವಿರೋಧ ಪಕ್ಷವಾಗಿ ಕೆಲಸ ಮಾಡಿದ್ದೆವು.‌ ಈಗಲೂ ಅದನ್ನೇ ಮಾಡುತ್ತಿದ್ದೇವೆ. ಕಾಂಗ್ರೆಸ್ ಸರ್ಕಾರ ಅಲ್ಪ ಸಾಧನೆಯನ್ನು ದೊಡ್ಡ ಸಾಧನೆ ಎಂಬಂತೆ ಬಿಂಬಿಸಲಾಗುತ್ತಿದೆ. ಬಗರ್ ಹುಂಕುಂ ಸಾಗುವಳಿದಾರರಿಗೆ ಭೂಮಿ ಒಡೆತನ ಸಿಕ್ಕಿಲ್ಲ, ನಿವೇಶನ ರಹಿತರಿಗೆ ನಿವೇಶನ, ಮನೆ ಇಲ್ಲದವರಿಗೆ ಮನೆ ನೀಡಿ ದೊಡ್ಡ ಸಾಧನೆ ಮಾಡಿದ್ದೇವೆ ಎಂದು ಪ್ರಚಾರ ಮಾಡಲಿ. ನಾವು ಕರ್ನಾಟಕ ಸರ್ಕಾರದ ಬಾಲ ಅಲ್ಲ ಎಂದು ಹೇಳಿದ್ದಾರೆ.

ಸಿಐಟಿಯು ರಾಜ್ಯಾಧ್ಯಕ್ಷೆ ಎಸ್. ವರಲಕ್ಷ್ಮಿ ಮಾತನಾಡಿ, ಕಾಂಗ್ರೆಸ್ ಮತ್ತು ಬಿಜೆಪಿಯ ಮೂಲ ಸಿದ್ಧಾಂತವೆ ಶ್ರೀಮಂತರ ಓಲೈಕೆ ಆಗಿದೆ. ಅದು ಗೊತ್ತಿದ್ದೂ ಕಾಂಗ್ರೆಸ್ ಬೆಂಬಲಿಸಿದ್ದು ಬಿಜೆಪಿಯ ಕೋಮು ಕಾರಣಕ್ಕಾಗಿ ಮಾತ್ರ ಎಂದು ಹೇಳಿದ್ದಾರೆ. ಅದಾಗ್ಯೂ, ಕಾಂಗ್ರೆಸ್ ಮೇಲೆ ನಮಗೆ ಅಂದೂ ಕೂಡಾ ಅಥವಾ ಇಂದೂ ಕೂಡ ಅಂತಹ ಭರವಸೆ ಇಲ್ಲ ಎಂದು ಹೇಳಿದರು.

ಕೇಂದ್ರದ ಬಿಜೆಪಿಗಿಂತ ಕಾಂಗ್ರೆಸ್‌ ಸರ್ಕಾರ 3 ಪಟ್ಟು ಹೆಚ್ಚು ರೈತರ ಭೂಮಿ ಕಿತ್ತುಕೊಳ್ಳುತ್ತಿದೆ, ಇದಕ್ಕೆ ಕಾರಣ ಡಿ.ಕೆ. ಶಿವಕುಮಾರ್: ರೈತ ಮುಖಂಡ ವೆಂಕಟಾಚಲಯ್ಯ, ಕೇಂದ್ರ, ಬಿಜೆಪಿ,ಕಾಂಗ್ರೆಸ್‌ ಸರ್ಕಾರ, ರೈತರ ಭೂಮಿ, ಡಿ.ಕೆ. ಶಿವಕುಮಾರ್, ರೈತ ಮುಖಂಡ ವೆಂಕಟಾಚಲಯ್ಯ, Center, BJP, Congress government, farmers' land, D.K. Shivakumar, farmer leader Venkatachaliah,
ಚಿತ್ರ ಕೃಪೆ: ಹೆಚ್‌.ಆರ್. ನವೀನ್ ಕುಮಾರ್

“ರಾಜ್ಯದಲ್ಲಿ 116 ಕೊಮುಗಲಭೆಳು ನಡೆದಿವೆ. ಅದರ ಬಗ್ಗೆ ರಾಜ್ಯ ಸರ್ಕಾರಕ್ಕೆ ಸರಿಯಾದ ನಿಲುವು ಇಲ್ಲ. ಕೋಮು ಸೌಹಾರ್ದತೆ ಹಾಳು ಮಾಡುವ ಮಠಾಧೀಶರ ಕಾಲಿಗೆ ಸರ್ಕಾರ ಬೀಳುತ್ತಿದೆ. ಈ ಸರ್ಕಾರದಿಂದ ಸಕಾರಾತ್ಮಕ ವಿಚಾರಕ್ಕಿಂತ ನಕಾರಾತ್ಮಕ ವಿಚಾರಗಳೆ ನಮಗೆ ಹೆಚ್ಚಾಗಿ ಕಾಣುತ್ತಿವೆ. ರಾಜ್ಯ ಸರ್ಕಾರ ಈ ಎರಡು ವರ್ಷಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ಗೆ ಯಾವುದೇ ವ್ಯತ್ಯಾಸ ಇಲ್ಲ. ಹೋರಾಟದಿಂದಲೆ ಬಂದ ಸಿದ್ದರಾಮಯ್ಯ ಅವರು ಹೋರಾಟಗಾರರನ್ನು ಅವಮಾನಿಸುತ್ತಿದ್ದಾರೆ.‌ ಇನ್ನೂ ಮೂರು ವರ್ಷ ಅಧಿಕಾರ ಇದೆ, ಬದಲಾಗದಿದ್ದರೆ ನಮ್ಮ ಹೋರಾಟಗಳ ಮೂಲಕ ಬದಲಾಯಿಸಬೇಕು” ಎಂದು ವರಲಕ್ಷ್ಮಿ ಹೇಳಿದ್ದಾರೆ.

ಕರ್ನಾಟಕ ಜನಶಕ್ತಿ ರಾಜ್ಯಾಧ್ಯಕ್ಷ ನೂರ್ ಶ್ರೀಧರ್ ಮಾತನಾಡಿ, “ಈ ಸಮಾವೇಶ ಕಾಂಗ್ರೆಸ್ ಸರ್ಕಾರದ ಜೊತೆಗಿನ ಗುದ್ದಾಟದ ಆರಂಭ ಬಿಂದು. ಸರ್ಕಾರ ಬೆಳಗಾವಿಯಲ್ಲಿ ಖಾಸಗಿ ಎಪಿಎಂಸಿಗೆ ಅವಕಾಶ ಮಾಡಿಕೊಟ್ಟಿದ್ದು, 200 ಕೊಟಿ ಖರ್ಚು ಮಾಡಿ ಕಟ್ಟಿದ ಸರ್ಕಾರಿ ಎಪಿಎಂಸಿ ಮುಚ್ಚಲಾಗಿದೆ. ಮಹಿಳೆಯರ ಅಪೌಷ್ಟಿಕತೆ ಹೆಚ್ಚಾಗುತ್ತಿವೆ. ಬಗರ್‌ಹುಕುಂ ಅರ್ಜಿಗಳನ್ನು ಹರಿದು ಬಿಸಾಕಲಾಗುತ್ತಿವೆ. ಇದನ್ನು ಪ್ರತಿಭಟಿಸಿ ದೆಹಲಿ ಮಾದರಿಯಂತೆ ಬೆಂಗಳೂರಿಗೆ ಮುತ್ತಿಗೆ ಹಾಕಬೇಕಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ 2 ವರ್ಷಗಳಾದ ಹಿನ್ನಲೆ ಪಕ್ಷವು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಬೃಹತ್ ಸಾಧನಾ ಸಮಾವೇಶವನ್ನು ಮಂಗಳವಾರ ಆಯೋಜಿಸಿದೆ. ಈ ಸಮಾವೇಶದ ನೈತಿಕತೆಯನ್ನು ಪ್ರಶ್ನಿಸಿ ಸಂಯುಕ್ತ ಹೋರಾಟ – ಕರ್ನಾಟಕ ಜನ ಚಳವಳಿಗಳಿಂದ ಜನಾಗ್ರಹ ಸಮಾವೇಶವನ್ನು ನಡೆಸಿದೆ. ‘ಸಂಯುಕ್ತ ಹೋರಾಟ-ಕರ್ನಾಟಕ’ ರಾಜ್ಯದ ರೈತ, ದಲಿತ, ಕಾರ್ಮಿಕ, ವಿದ್ಯಾರ್ಥಿ, ಯುವಜನ, ಮಹಿಳಾ ಸಂಘಟನೆಗಳ ಸಮನ್ವಯ ಸಮಿತಿಯಾಗಿದೆ. ಕೇಂದ್ರದ ಬಿಜೆಪಿಗಿಂತ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಸುಳ್ಳು ಮಾಹಿತಿ ನೀಡಿದ ಆರೋಪ: ಅರ್ನಬ್ ಗೋಸ್ವಾಮಿ, ಅಮಿತ್ ಮಾಳವೀಯ ವಿರುದ್ಧ ದೂರು ನೀಡಿದ ಕಾಂಗ್ರೆಸ್, ಎಫ್‌ಐಆರ್ ದಾಖಲು

ಸುಳ್ಳು ಮಾಹಿತಿ ನೀಡಿದ ಆರೋಪ: ಅರ್ನಬ್ ಗೋಸ್ವಾಮಿ, ಅಮಿತ್ ಮಾಳವೀಯ ವಿರುದ್ಧ ದೂರು ನೀಡಿದ ಕಾಂಗ್ರೆಸ್, ಎಫ್‌ಐಆರ್ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...