Homeಕರ್ನಾಟಕಕೇಂದ್ರದ ಬಿಜೆಪಿಗಿಂತ ಕಾಂಗ್ರೆಸ್‌ ಸರ್ಕಾರ 3 ಪಟ್ಟು ಹೆಚ್ಚು ರೈತರ ಭೂಮಿ ಕಿತ್ತುಕೊಳ್ಳುತ್ತಿದೆ, ಇದಕ್ಕೆ ಕಾರಣ...

ಕೇಂದ್ರದ ಬಿಜೆಪಿಗಿಂತ ಕಾಂಗ್ರೆಸ್‌ ಸರ್ಕಾರ 3 ಪಟ್ಟು ಹೆಚ್ಚು ರೈತರ ಭೂಮಿ ಕಿತ್ತುಕೊಳ್ಳುತ್ತಿದೆ, ಇದಕ್ಕೆ ಕಾರಣ ಡಿ.ಕೆ. ಶಿವಕುಮಾರ್: ರೈತ ಮುಖಂಡ ವೆಂಕಟಾಚಲಯ್ಯ

- Advertisement -
- Advertisement -

ರಾಜ್ಯ ಕಾಂಗ್ರೆಸ್‌ ಸರ್ಕಾರದ ಕೇಂದ್ರದ ಬಿಜೆಪಿಗಿಂತ 3 ಪಟ್ಟು ಹೆಚ್ಚು ಭೂಮಿಯನ್ನು ಕಿತ್ತುಕೊಳ್ಳುತ್ತಿದ್ದು, ಇದಕ್ಕೆ ನೇರ ಕಾರಣ ಡಿಕೆ ಶಿವಕುಮಾರ್, ಉಳಿದವರು ಇದ್ದರೂ ಡಿಕೆ ಶಿವಕುಮಾರ್ ಪಾಲು ಹೆಚ್ಚಿದೆ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಮುಖಂಡ ವೆಂಕಟಾಚಲಯ್ಯ ಮಂಗಳವಾರ ಹೇಳಿದ್ದಾರೆ. ಬೆಂಗಳೂರಿನ ಗಾಂಧಿ ಭವನದಲ್ಲಿ ‘ಸಂಯುಕ್ತ ಹೋರಾಟ-ಕರ್ನಾಟಕ’ ಆಯೋಜಿಸಿದ್ದ ಜನಾಗ್ರಹ ಸಮಾವೇಶದಲ್ಲಿ ಅವರು ಮಾತನಾಡುತ್ತಿದ್ದರು.

ಸಮಾವೇಶದಲ್ಲಿ ಮಾತನಾಡಿದ ವೆಂಕಟಾಚಲಯ್ಯ ಅವರು, “ಕೋಮುವಾದಿಗಳು ಮನೆಗೆ ಹೋಗಬೇಕು ಎಂದು ಜನರು ನಿರ್ಧಾರ ತೆಗೆದುಕೊಂಡಿದ್ದರು. ಆದರೆ ರಾಜ್ಯದ ಈಗಿನ ಸ್ಥಿತಿ ನೋಡಿದರೆ ಈಗ ಬಿಜೆಪಿಗೂ ಕಾಂಗ್ರೆಸ್‌ಗೂ ವ್ಯತ್ಯಾಸ ಕಾಣುತ್ತಿಲ್ಲ. ರೈತ ಹೋರಾಟಕ್ಕೆ ನಾವು ಬೆಂಬಲ ನೀಡುತ್ತೇವೆ ಎಂದು ಕಾಂಗ್ರೆಸ್ ಹೇಳಿತ್ತು. ಆದರೆ ರಾಜ್ಯ ಕಾಂಗ್ರೆಸ್ ಕೇಂದ್ರದ ಬಿಜೆಪಿಗಿಂತ 3 ಪಟ್ಟು ಹೆಚ್ಚು ಭೂಮಿಯನ್ನು ಕಿತ್ತುಕೊಳ್ಳುತ್ತಿವೆ” ಎಂದು ಅವರು ಹೇಳಿದ್ದಾರೆ.

ರೈತರ ಭೂಮಿ ಕಿತ್ತಿಕೊಳ್ಳಲು ನೇರ ಕಾರಣ ಡಿಕೆ ಶಿವಕುಮಾರ್ ಆಗಿದ್ದು, ಉಳಿದವರು ಇದ್ದರೂ ಡಿಕೆ ಶಿವಕುಮಾರ್ ಪಾಲು ಹೆಚ್ಚಿದೆ ಎಂದು ಅವರು ಆರೋಪಿಸಿದ್ದಾರೆ.

“ಒಂದು ಕುಟುಂಬಕ್ಕೆ 58 ಎಕರೆ ಭೂಮಿ ಇರಬೇಕು ಎಂಬ ಕಾನೂನಿತ್ತು. ಆದರೆ ಅದಕ್ಕೆ ತಿದ್ದುಪಡಿ ತಂದಿದ್ದು ದೇವೇಗೌಡರರು. ನೈಸ್ ಕಂಪನಿ ಬಳಿ ಅಧೀಕೃತ ಮತ್ತು ಅನಧೀಕೃತವಾಗಿ ಲಕ್ಷ ಎಕರೆಗಿಂತಲೂ ಹೆಚ್ಚಿನ ಭೂಮಿಯಿದೆ. ರೈತರ ಭೂಮಿಯನ್ನು ಕಿತ್ತು ಎಲ್ಲಾ ರಿಯಲ್ ಎಸ್ಟೇಟ್‌ ಏಜೆಂಟ್‌ಗಳಿಗೆ, ಮಠಾಧೀಶರಿಗೆ, ವಿದೇಶಿ ಕಂಪನಿಗಳಿಗೆ ನೀಡಲಾಗುತ್ತಿದೆ. ನಾವು ಯಾರು ಅಭಿವೃದ್ಧಿಯ ವಿರೋಧಿಗಳು ಅಲ್ಲ. ಆದರೆ ಈ ಅಭಿವೃದ್ಧಿ ಯಾರಿಗಾಗಿ ಮಾಡುತ್ತಿದ್ದಾರೆ ಎಂದು ಗಮನಿಸಬೇಕಾಗುತ್ತದೆ‌. ಬೆಂಗಳೂರು ಸುತ್ತಮುತ್ತಲಿನ ರೈತರು ಭೂಮಿಯನ್ನು ಕಳೆದುಕೊಳ್ಳುತ್ತಿದ್ದಾರೆ.” ಎಂದು ಅವರು ಹೇಳಿದ್ದಾರೆ.

ಜನವಾದಿ ಮಹಿಳಾ ಸಂಘಟನೆ ರಾಜ್ಯ ಪ್ರಧಾನ ಕಾರ್ಯದರ್ಶಿ ದೇವಿ ಮಾತನಾಡಿ, ಬಿಡದಿಯಲ್ಲಿ ನಡೆದ ಅಲೆಮಾರಿ ಸಮುದಾಯದ ಬಾಲಕಿಯ ಅತ್ಯಾಚಾರವನ್ನು ಖಂಡಿಸಿದರು. “ಒಂದು ಕಡೆಗೆ ಘಟನಾ ಸ್ಥಳಕ್ಕೆ ತೆರಳಿದ ಜನಪರ ಸಂಘಟನೆಗಳೊಂದಿಗೆ ಪೊಲೀಸರು ದರ್ಪದಿಂದ ವರ್ತಿಸುತ್ತಿದ್ದಾರೆ. ಮತ್ತೊಂದೆಡೆ ಆರೆಸ್ಸೆಸ್ ಮತ್ತು ಬಿಜೆಪಿ ಅವರು ಈ ಘಟನೆಯನ್ನು ಇಟ್ಟು ಕೋಮುಗಲಭೆ ಎಬ್ಬಿಸಲು ಪ್ರಯತ್ನ ಮಾಡುತ್ತಿದ್ದಾರೆ.” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೇಂದ್ರದ ಬಿಜೆಪಿಗಿಂತ ಕಾಂಗ್ರೆಸ್‌ ಸರ್ಕಾರ 3 ಪಟ್ಟು ಹೆಚ್ಚು ರೈತರ ಭೂಮಿ ಕಿತ್ತುಕೊಳ್ಳುತ್ತಿದೆ, ಇದಕ್ಕೆ ಕಾರಣ ಡಿ.ಕೆ. ಶಿವಕುಮಾರ್: ರೈತ ಮುಖಂಡ ವೆಂಕಟಾಚಲಯ್ಯ, ಕೇಂದ್ರ, ಬಿಜೆಪಿ,ಕಾಂಗ್ರೆಸ್‌ ಸರ್ಕಾರ, ರೈತರ ಭೂಮಿ, ಡಿ.ಕೆ. ಶಿವಕುಮಾರ್, ರೈತ ಮುಖಂಡ ವೆಂಕಟಾಚಲಯ್ಯ, Center, BJP, Congress government, farmers' land, D.K. Shivakumar, farmer leader Venkatachaliah,
ಚಿತ್ರ ಕೃಪೆ: ಹೆಚ್‌.ಆರ್. ನವೀನ್ ಕುಮಾರ್

 

ಬೆಂಗಳೂರಿನಂತಹ ಮಹಾನಗರದಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ನಡೆಯುವುದು ಸಾಮಾನ್ಯ ಎಂದು ರಾಜ್ಯದ ಗೃಹ ಮಂತ್ರಿಯೆ ಹೇಳಿದ್ದರು. ಜನರ ಆಕ್ರೋಶದ ನಂತರ ಅದನ್ನು ವಾಪಾಸು ಪಡೆದರು, ಈ ಸರ್ಕಾರರಲ್ಲಿ ಎಲ್ಲವೂ ಸರಿಯಿಲ್ಲ ಎಂದು ದೇವಿ ಅವರು ಹೇಳಿದ್ದಾರೆ.

“ಗ್ಯಾರೆಂಟಿ ಹೆಸರಿನಲ್ಲಿ ಮಹಿಳೆಗೆ ಏನೂ ಬೇಕಾಗಿಲ್ಲ ಎಂಬಂತೆ ಸರ್ಕಾರ ಬಿಂಬಿಸುತ್ತಿದೆ. ಬೆಂಗಳೂರಿಗೆ ವಲಸೆ ಬಂದ ರೈತ ಮಹಿಳೆಯರು ಕಾರ್ಪೋರೇಟ್‌ ಕಂಪೆನಿಗಳ ಬಾಗಿಲು ಕಾಯುತ್ತಾ, ಅವರ ಮನೆ ಕ್ಲೀನ್ ಮಾಡುವ ಕೆಲಸ ಮಾಡುತ್ತಿದ್ದಾರೆ. ಕಾರ್ಪೋರೇಟ್‌ಗಳಿಗೆ ರತ್ನಗಂಬಳಿ ಹಾಸಿ ಭೂಮಿ ಕೊಡುವ ಸರ್ಕಾರ, ಬಡವರಿಗೆ ಮತ್ತು ನಿವೇಶನ ಇಲ್ಲದವರಿಗೆ ಸರ್ಕಾರ ನಿವೇಶನ ನೀಡದೆ ಕಾಡಿಸುತ್ತಿದೆ. ವಿಧವೆಯರಿಗೆ ಮೂರಂಕಿಯ ಸಹಾಯಧನವನ್ನು ನೀಡುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಐಸಿಸಿಟಿಯು ರಾಜ್ಯಾಧ್ಯಕ್ಷ ಪಿಪಿ ಅಪ್ಪಣ್ಣ ಮಾತನಾಡಿ, “ಕಾರ್ಮಿಕರು, ರೈತರು ಅನುಭವಿಸುತ್ತಿರುವ ಸಂಕಷ್ಟಗಳನ್ನು ನೋಡುತ್ತಿದ್ದರೆ ಯಾರಿಗೂ ಇಲ್ಲಿ ರಕ್ಷಣೆಯಿಲ್ಲ ಎಂಬಂತಾಗಿದೆ. ಪಾಕಿಸ್ತಾನ ಮತ್ತು ಭಾರತದ ಸಂಘರ್ಷವನ್ನು ಮೋದಿ ನಿಲ್ಲಿಸಿದರೆ ಅಥವಾ ಟ್ರಂಪ್ ನಿಲ್ಲಿಸಿದರೆ ಎಂಬ ಚರ್ಚೆ ನಡೆಯುತ್ತಿದೆ. ಆದರೆ ಯುದ್ದ ನಿಲ್ಲಿಸಿದ್ದು, ಅಮೆರಿಕದ ಬ್ಯಾಂಕ್‌ಗಳು ಆಗಿವೆ. ಅದಕ್ಕಾಗಿ ಹಣ ಸುರಿದಿದ್ದು ಕೂಡಾ ಅವರೇ ಆಗಿದ್ದಾರೆ.” ಎಂದು ಹೇಳಿದ್ದಾರೆ.

ಕರ್ನಾಟಕ ರೈತ ಸಂಘ (ಎಐಯುಕೆಎಸ್) ರಾಜ್ಯಾಧ್ಯಕ್ಷ ಡಿ.ಎಚ್. ಪೂಜಾರ್ ಮಾತನಾಡಿ, “ಕಾಂಗ್ರೆಸ್‌ಗೆ ಈ ಹಿಂದೆ ಬೆಂಬಲ ನೀಡಿದ್ದು, ದೊಡ್ಡ ಶತ್ರುವನ್ನು ಮಣಿಸಲು ಸಣ್ಣ ಶತ್ರುವನ್ನು ಮುಂದೆ ತಳ್ಳಿದಂತೆ ಅಷ್ಟೆ. ಕಾಂಗ್ರೆಸ್‌ನ ಜನವಿರೋಧಿ ಮತ್ತು ಕಾರ್ಪೊರೇಟ್ ಪರ ನೀತಿಗಳ ಕಾರಣಕ್ಕೆ ದೇಶದಲ್ಲಿ ಇಂದು ಬಿಜೆಪಿ ಅಧಿಕಾರಕ್ಕೆ ಬಂದಿವೆ. ಇಂಡಿಯಾ ಮೈತ್ರಿ ಅಧಿಕಾರಕ್ಕೆ ಬಂದರೆ ಸ್ವಾಮಿನಾಥನ್ ವರದಿ ಜಾರಿಗೆ ಮಾಡುತ್ತೇವೆ ಎಂದು ಕಾಂಗ್ರೆಸ್ ಹೇಳಿತ್ತು. ಹಾಗಾದರೆ ಜಾರ್ಖಂಡ್ ಮತ್ತು ಕರ್ನಾಟಕದಲ್ಲಿ ಅದನ್ನು ಜಾರಿ ಮಾಡಬಹುದು ಅಲ್ಲವೇ?” ಎಂದು ಹೇಳಿದ್ದರೆ.

ಕೇಂದ್ರ ಜಾರಿ ಮಾಡಿದ್ದ ರೈತ ವಿರೋಧಿ ಕಾಯ್ದೆ ರಚನೆ ಮಾಡಿದ್ದ ತಂಡದಲ್ಲಿ ಇದ್ದವರೇ ರಾಜ್ಯ ಬೆಲೆ ಆಯೋಗದ ಅಧ್ಯಕ್ಷ ಆಗಿದ್ದಾರೆ. ಅವರನ್ನು ಕಿತ್ತೊಗೆಯಲು ನಾವು ಹೋರಾಟ ಮಾಡಬೇಕಿದೆ ಎಂದು ಬೇಸರ ತೋಡಿಕೊಂಡಿದ್ದಾರೆ.

ಕರ್ನಾಟಕ ಜನಶಕ್ತಿ ರಾಜ್ಯ ಕಾರ್ಯದರ್ಶಿ ಕುಮಾರ್ ಸಮತಳ ಮಾತನಾಡಿ, ನಾವು ಹಿಂದೆ ಕೂಡಾ ವಿರೋಧ ಪಕ್ಷವಾಗಿ ಕೆಲಸ ಮಾಡಿದ್ದೆವು.‌ ಈಗಲೂ ಅದನ್ನೇ ಮಾಡುತ್ತಿದ್ದೇವೆ. ಕಾಂಗ್ರೆಸ್ ಸರ್ಕಾರ ಅಲ್ಪ ಸಾಧನೆಯನ್ನು ದೊಡ್ಡ ಸಾಧನೆ ಎಂಬಂತೆ ಬಿಂಬಿಸಲಾಗುತ್ತಿದೆ. ಬಗರ್ ಹುಂಕುಂ ಸಾಗುವಳಿದಾರರಿಗೆ ಭೂಮಿ ಒಡೆತನ ಸಿಕ್ಕಿಲ್ಲ, ನಿವೇಶನ ರಹಿತರಿಗೆ ನಿವೇಶನ, ಮನೆ ಇಲ್ಲದವರಿಗೆ ಮನೆ ನೀಡಿ ದೊಡ್ಡ ಸಾಧನೆ ಮಾಡಿದ್ದೇವೆ ಎಂದು ಪ್ರಚಾರ ಮಾಡಲಿ. ನಾವು ಕರ್ನಾಟಕ ಸರ್ಕಾರದ ಬಾಲ ಅಲ್ಲ ಎಂದು ಹೇಳಿದ್ದಾರೆ.

ಸಿಐಟಿಯು ರಾಜ್ಯಾಧ್ಯಕ್ಷೆ ಎಸ್. ವರಲಕ್ಷ್ಮಿ ಮಾತನಾಡಿ, ಕಾಂಗ್ರೆಸ್ ಮತ್ತು ಬಿಜೆಪಿಯ ಮೂಲ ಸಿದ್ಧಾಂತವೆ ಶ್ರೀಮಂತರ ಓಲೈಕೆ ಆಗಿದೆ. ಅದು ಗೊತ್ತಿದ್ದೂ ಕಾಂಗ್ರೆಸ್ ಬೆಂಬಲಿಸಿದ್ದು ಬಿಜೆಪಿಯ ಕೋಮು ಕಾರಣಕ್ಕಾಗಿ ಮಾತ್ರ ಎಂದು ಹೇಳಿದ್ದಾರೆ. ಅದಾಗ್ಯೂ, ಕಾಂಗ್ರೆಸ್ ಮೇಲೆ ನಮಗೆ ಅಂದೂ ಕೂಡಾ ಅಥವಾ ಇಂದೂ ಕೂಡ ಅಂತಹ ಭರವಸೆ ಇಲ್ಲ ಎಂದು ಹೇಳಿದರು.

ಕೇಂದ್ರದ ಬಿಜೆಪಿಗಿಂತ ಕಾಂಗ್ರೆಸ್‌ ಸರ್ಕಾರ 3 ಪಟ್ಟು ಹೆಚ್ಚು ರೈತರ ಭೂಮಿ ಕಿತ್ತುಕೊಳ್ಳುತ್ತಿದೆ, ಇದಕ್ಕೆ ಕಾರಣ ಡಿ.ಕೆ. ಶಿವಕುಮಾರ್: ರೈತ ಮುಖಂಡ ವೆಂಕಟಾಚಲಯ್ಯ, ಕೇಂದ್ರ, ಬಿಜೆಪಿ,ಕಾಂಗ್ರೆಸ್‌ ಸರ್ಕಾರ, ರೈತರ ಭೂಮಿ, ಡಿ.ಕೆ. ಶಿವಕುಮಾರ್, ರೈತ ಮುಖಂಡ ವೆಂಕಟಾಚಲಯ್ಯ, Center, BJP, Congress government, farmers' land, D.K. Shivakumar, farmer leader Venkatachaliah,
ಚಿತ್ರ ಕೃಪೆ: ಹೆಚ್‌.ಆರ್. ನವೀನ್ ಕುಮಾರ್

“ರಾಜ್ಯದಲ್ಲಿ 116 ಕೊಮುಗಲಭೆಳು ನಡೆದಿವೆ. ಅದರ ಬಗ್ಗೆ ರಾಜ್ಯ ಸರ್ಕಾರಕ್ಕೆ ಸರಿಯಾದ ನಿಲುವು ಇಲ್ಲ. ಕೋಮು ಸೌಹಾರ್ದತೆ ಹಾಳು ಮಾಡುವ ಮಠಾಧೀಶರ ಕಾಲಿಗೆ ಸರ್ಕಾರ ಬೀಳುತ್ತಿದೆ. ಈ ಸರ್ಕಾರದಿಂದ ಸಕಾರಾತ್ಮಕ ವಿಚಾರಕ್ಕಿಂತ ನಕಾರಾತ್ಮಕ ವಿಚಾರಗಳೆ ನಮಗೆ ಹೆಚ್ಚಾಗಿ ಕಾಣುತ್ತಿವೆ. ರಾಜ್ಯ ಸರ್ಕಾರ ಈ ಎರಡು ವರ್ಷಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ಗೆ ಯಾವುದೇ ವ್ಯತ್ಯಾಸ ಇಲ್ಲ. ಹೋರಾಟದಿಂದಲೆ ಬಂದ ಸಿದ್ದರಾಮಯ್ಯ ಅವರು ಹೋರಾಟಗಾರರನ್ನು ಅವಮಾನಿಸುತ್ತಿದ್ದಾರೆ.‌ ಇನ್ನೂ ಮೂರು ವರ್ಷ ಅಧಿಕಾರ ಇದೆ, ಬದಲಾಗದಿದ್ದರೆ ನಮ್ಮ ಹೋರಾಟಗಳ ಮೂಲಕ ಬದಲಾಯಿಸಬೇಕು” ಎಂದು ವರಲಕ್ಷ್ಮಿ ಹೇಳಿದ್ದಾರೆ.

ಕರ್ನಾಟಕ ಜನಶಕ್ತಿ ರಾಜ್ಯಾಧ್ಯಕ್ಷ ನೂರ್ ಶ್ರೀಧರ್ ಮಾತನಾಡಿ, “ಈ ಸಮಾವೇಶ ಕಾಂಗ್ರೆಸ್ ಸರ್ಕಾರದ ಜೊತೆಗಿನ ಗುದ್ದಾಟದ ಆರಂಭ ಬಿಂದು. ಸರ್ಕಾರ ಬೆಳಗಾವಿಯಲ್ಲಿ ಖಾಸಗಿ ಎಪಿಎಂಸಿಗೆ ಅವಕಾಶ ಮಾಡಿಕೊಟ್ಟಿದ್ದು, 200 ಕೊಟಿ ಖರ್ಚು ಮಾಡಿ ಕಟ್ಟಿದ ಸರ್ಕಾರಿ ಎಪಿಎಂಸಿ ಮುಚ್ಚಲಾಗಿದೆ. ಮಹಿಳೆಯರ ಅಪೌಷ್ಟಿಕತೆ ಹೆಚ್ಚಾಗುತ್ತಿವೆ. ಬಗರ್‌ಹುಕುಂ ಅರ್ಜಿಗಳನ್ನು ಹರಿದು ಬಿಸಾಕಲಾಗುತ್ತಿವೆ. ಇದನ್ನು ಪ್ರತಿಭಟಿಸಿ ದೆಹಲಿ ಮಾದರಿಯಂತೆ ಬೆಂಗಳೂರಿಗೆ ಮುತ್ತಿಗೆ ಹಾಕಬೇಕಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ 2 ವರ್ಷಗಳಾದ ಹಿನ್ನಲೆ ಪಕ್ಷವು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಬೃಹತ್ ಸಾಧನಾ ಸಮಾವೇಶವನ್ನು ಮಂಗಳವಾರ ಆಯೋಜಿಸಿದೆ. ಈ ಸಮಾವೇಶದ ನೈತಿಕತೆಯನ್ನು ಪ್ರಶ್ನಿಸಿ ಸಂಯುಕ್ತ ಹೋರಾಟ – ಕರ್ನಾಟಕ ಜನ ಚಳವಳಿಗಳಿಂದ ಜನಾಗ್ರಹ ಸಮಾವೇಶವನ್ನು ನಡೆಸಿದೆ. ‘ಸಂಯುಕ್ತ ಹೋರಾಟ-ಕರ್ನಾಟಕ’ ರಾಜ್ಯದ ರೈತ, ದಲಿತ, ಕಾರ್ಮಿಕ, ವಿದ್ಯಾರ್ಥಿ, ಯುವಜನ, ಮಹಿಳಾ ಸಂಘಟನೆಗಳ ಸಮನ್ವಯ ಸಮಿತಿಯಾಗಿದೆ. ಕೇಂದ್ರದ ಬಿಜೆಪಿಗಿಂತ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಸುಳ್ಳು ಮಾಹಿತಿ ನೀಡಿದ ಆರೋಪ: ಅರ್ನಬ್ ಗೋಸ್ವಾಮಿ, ಅಮಿತ್ ಮಾಳವೀಯ ವಿರುದ್ಧ ದೂರು ನೀಡಿದ ಕಾಂಗ್ರೆಸ್, ಎಫ್‌ಐಆರ್ ದಾಖಲು

ಸುಳ್ಳು ಮಾಹಿತಿ ನೀಡಿದ ಆರೋಪ: ಅರ್ನಬ್ ಗೋಸ್ವಾಮಿ, ಅಮಿತ್ ಮಾಳವೀಯ ವಿರುದ್ಧ ದೂರು ನೀಡಿದ ಕಾಂಗ್ರೆಸ್, ಎಫ್‌ಐಆರ್ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ ಎಸ್‌ಐಆರ್ | ಮೇಲ್ಮನವಿ ನ್ಯಾಯಮಂಡಳಿಗಳಿಗೆ ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಮೇಲ್ಮನವಿಗಳ ವಿಚಾರಣೆ ನಡೆಸುತ್ತಿರುವ ಮೇಲ್ಮನವಿ ನ್ಯಾಯಾಧಿಕರಣಗಳ ನಿರ್ಧಾರಗಳಿಗೆ ಯಾವುದೇ ನಿರ್ದಿಷ್ಟ ಸಮಯದ ಮಿತಿಯನ್ನು ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್...

‘ಎಸ್‌ಐಆರ್‌’ನಿಂದ ಹೆಸರು ಡಿಲೀಟ್‌ ಆದವರಿಗೆ ‘ಹೊಸ ಮತದಾರರ ನೋಂದಣಿ’ ಯಾಕೆ?

ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದ್ದರೆ ನಮೂನೆ ಸಂಖ್ಯೆ 6 ಅನ್ನು (Form No. 6) ಸಲ್ಲಿಸಿ ಎಂದು ಜುಲೈ 22 ರಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ...

ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ...

‘ಬಹುಸಂಖ್ಯಾತ ಭಾವನೆಯು ಸಾಂವಿಧಾನಿಕ ಹಕ್ಕುಗಳನ್ನು ಮರೆಮಾಡಲು ಸಾಧ್ಯವಿಲ್ಲ’: ಇಸ್ಲಾಂ ಧರ್ಮ ಸ್ವೀಕರಿಸಿದ್ದ ಸಹೋದರಿಯರ ಅಕ್ರಮ ಬಂಧನಕ್ಕೆ ಅಲಹಾಬಾದ್ ಹೈಕೋರ್ಟ್ ತೀವ್ರ ತರಾಟೆ

ಹಿಂದೂ ಧರ್ಮದಿಂದ ಸ್ವಯಂಪ್ರೇರಿತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ನಂತರ, ಸ್ವಂತ ತಂದೆ ಹಾಗೂ ಉತ್ತರ ಪ್ರದೇಶ ರಾಜ್ಯ ಸರ್ಕಾರದ ಅಕ್ರಮ ಹಸ್ತಕ್ಷೇಪದಿಂದಾಗಿ ವರ್ಷಗಳ ಕಾಲ ತಮ್ಮ ಮೂಲಭೂತ ಸ್ವಾತಂತ್ರ್ಯವನ್ನು ಕಳೆದುಕೊಂಡಿದ್ದ ಇಬ್ಬರು ವಯಸ್ಕ...

ಸಂವಿಧಾನಬದ್ಧ ದಾಖಲೆಗಳಿದ್ದರೂ ಪಶ್ಚಿಮ ಬಂಗಾಳದ ಮುಸ್ಲಿಂ ಮಹಿಳೆ ‘ಒಳನುಸುಳುಕೋರ’ರೆಂದು ಬಾಂಗ್ಲಾಕ್ಕೆ ಗಡೀಪಾರು: ಭಾರತದಲ್ಲೇ ಉಳಿದ ಪತಿ, ಇಬ್ಬರು ಮಕ್ಕಳು

ಭಾರತೀಯ ಪೌರತ್ವವನ್ನು ಸ್ಪಷ್ಟವಾಗಿ ಸಾಬೀತುಪಡಿಸುವ ಜನನ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್ ಮತ್ತು ಸ್ವಂತ ಭೂಮಿಯ ದಾಖಲೆಗಳು ಕೈಯಲ್ಲಿದ್ದರೂ, ಪಶ್ಚಿಮ ಬಂಗಾಳದ 40 ವರ್ಷದ ಮುಸ್ಲಿಂ ಮಹಿಳೆಯೊಬ್ಬರನ್ನು 'ಒಳನುಸುಳುಕೋರ' ಎಂಬ...

SIR ನಂತರ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ : ನಟ ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಂತರ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ ಎಂದು ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ...

ಸರ್ಕಾರಿ ಶಾಲೆಗಳ ಸುಧಾರಣೆಗೆ ದೇಶಾದ್ಯಂತ ಅಭಿಯಾನ ಘೋಷಿಸಿದ ಅಭಿಜೀತ್ ದೀಪ್ಕೆ

ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳನ್ನು ಸುಧಾರಿಸಲು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ರಾಷ್ಟ್ರವ್ಯಾಪಿ ಅಭಿಯಾನ ಘೋಷಿಸಿದ್ದಾರೆ. "ಪೋಷಕರು ಶಾಲೆಗಳ ಮೂಲಭೂತ ಸೌಲಭ್ಯಗಳ ಸಾಮಾಜಿಕ ಲೆಕ್ಕಪರಿಶೋಧನೆ ನಡೆಸಬೇಕು, ಶಾಲೆಗಳನ್ನು ಸುಧಾರಿಸುವ...

ಕರ್ನಾಟಕದ ASDDO ಸಂಖ್ಯೆ 3 ಲಕ್ಷದಷ್ಟು ಇಳಿಕೆ : SIR ಪ್ರಕ್ರಿಯೆ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದ ವರದಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಲ್ಲಿ ಇದುವರೆಗಿನ ಅತಿ ದೊಡ್ಡ ತಿದ್ದುಪಡಿ ಕರ್ನಾಟಕದಲ್ಲಿ ಆಗಿದ್ದು, ಮತದಾನದ ಹಕ್ಕನ್ನು ಕಳೆದುಕೊಳ್ಳುವ ಹಂತದಲ್ಲಿದ್ದ ಸುಮಾರು 3 ಲಕ್ಷ ಜನರನ್ನು ಮತ್ತೆ ಮತದಾರರ ಪಟ್ಟಿಗೆ...

ವಸತಿಗೃಹದಲ್ಲಿ ಹೋಮ-ಪೂಜೆ ಆಯೋಜನೆ; ಬಾಗಲಕೋಟೆ ತೋಟಗಾರಿಕೆ ವಿವಿ ಕುಲಪತಿಗಳಿಂದ ಅಧಿಕಾರ ದುರುಪಯೋಗ

ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಸತಿಗೃಹದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಅಧಿಕೃತ‌ ಲೆಟರ್‌ಹೆಡ್‌ ಮೂಲಕ ಆಹ್ವಾನವನ್ನೂ ಹೊರಡಿಸುವ ಮೂಲಕ ಕುಲಪತಿ ಡಾ. ವಿಷ್ಣುವರ್ಧನ ಅವರು ಅಧಿಕಾರ ದುರುಪಯೋಗ...

ಕಪ್ಪು ಕುರ್ತಾ-ಪೈಜಾಮ ಧರಿಸಿದ್ದ ಕಲಾವಿದನಿಗೆ ಥಳಿಸಿದ ಹಿಂದುತ್ವ ಗುಂಪು: ಮುಸ್ಲಿಂ ಎಂದು ಶಂಕಿಸಿ ಅಮಾನವೀಯ ಹಲ್ಲೆ

ರಂಗಭೂಮಿ ಕಲಾವಿದರೊಬ್ಬರು ಕಪ್ಪು ಕುರ್ತಾ-ಪೈಜಾಮ ಧರಿಸಿದ್ದಕ್ಕಾಗಿ ಮುಸ್ಲಿಂ ಎಂದು ಶಂಕಿಸಿ ಹಿಂದುತ್ವ ಯುವಕರ ಗುಂಪೊಂದು ಅವರನ್ನು ಕ್ರೂರವಾಗಿ ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಶುಭಂಕರ್ ದಾಸ್ ಶರ್ಮಾ...