Homeಮುಖಪುಟ'ಚುನಾವಣೆ ಪ್ರಚಾರದಲ್ಲಿ ಪದೇ ಪದೇ ಸುಳ್ಳು ಹೇಳುತ್ತಿರುವುದರಿಂದ.....',: ಮೋದಿಗೆ ಕಾಂಗ್ರೆಸ್‌ ಪ್ರಣಾಳಿಕೆಯನ್ನು ವಿವರಿಸಿ ಪತ್ರ ಬರೆದ...

‘ಚುನಾವಣೆ ಪ್ರಚಾರದಲ್ಲಿ ಪದೇ ಪದೇ ಸುಳ್ಳು ಹೇಳುತ್ತಿರುವುದರಿಂದ…..’,: ಮೋದಿಗೆ ಕಾಂಗ್ರೆಸ್‌ ಪ್ರಣಾಳಿಕೆಯನ್ನು ವಿವರಿಸಿ ಪತ್ರ ಬರೆದ ಖರ್ಗೆ

- Advertisement -
- Advertisement -

ಕಾಂಗ್ರೆಸ್‌ ಪ್ರಣಾಳಿಕೆಯ ಬಗ್ಗೆ ಮೋದಿ, ಅಮಿತ್‌ ಶಾ ಚುನಾವಣಾ ಭಾಷಣದಲ್ಲಿ ಸುಳ್ಳು ಆಪಾದನೆ ಮಾಡುತ್ತಿರುವ ಮಧ್ಯೆ ಕಾಂಗ್ರೆಸ್‌ ಪ್ರಣಾಳಿಕೆ ಬಗ್ಗೆ ಚರ್ಚೆಗೆ ನರೇಂದ್ರ ಮೋದಿ ಅಥವಾ ಅವರಿಂದ ನಿಯೋಜಿಸಲ್ಪಟ್ಟ ಯಾರಾದರು ಬನ್ನಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಹ್ವಾನವನ್ನು ನೀಡಿದ್ದರು. ಆದರೆ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ಬರದ ಹಿನ್ನೆಲೆ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿಯವರಿಗೆ ಪತ್ರವನ್ನು ಬರೆದು ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿನ ಅಂಶಗಳನ್ನು ವಿವರಿಸಿದ್ದಾರೆ.

ಈ ಕುರಿತು ಪತ್ರವನ್ನು ಎಕ್ಸ್‌ನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಂಚಿಕೊಂಡಿದ್ದಾರೆ. ಚುನಾವಣಾ ಪ್ರಚಾರದಲ್ಲಿ ಪದೇ ಪದೇ ಸುಳ್ಳು ಹೇಳುತ್ತಿರುವ ನರೇಂದ್ರ ಮೋದಿ ಅವರಿಗೆ ನನ್ನ ಪತ್ರ ಹಂಚಿಕೊಳ್ಳುತ್ತಿದ್ದೇನೆ ಎಂದು ಬರೆದಿದ್ದಾರೆ.

ಆತ್ಮೀಯ ಪ್ರಧಾನ ಮಂತ್ರಿಗಳೇ,

ಮತದಾರರಿಗೆ ಏನು ತಿಳಿಸಬೇಕು ಎಂದು ನೀವು ಎನ್‌ಡಿಎ ಅಭ್ಯರ್ಥಿಗಳಿಗೆ ಬರೆದ ಪತ್ರವನ್ನು ನಾನು ನೋಡಿದೆ.
ಪತ್ರದ ವಿಷಯಗಳನ್ನು ಗಮನಿಸಿದಾಗ ನಿಮ್ಮಲ್ಲಿ ಬಹಳಷ್ಟು ಹತಾಶೆ ಮತ್ತು ಚಿಂತೆ ಇದೆ ಎಂದು ತೋರುತ್ತದೆ, ಇದು ಪ್ರಧಾನ ಮಂತ್ರಿಯ ಘನತೆಗೆ ಹೊಂದಿಕೆಯಾಗದ ಭಾಷೆಯನ್ನು ಬಳಸಲು ನಿಮ್ಮನ್ನು ಪ್ರೇರೇಪಿಸುತ್ತದೆ. ಪತ್ರವು ನಿಮ್ಮ ಭಾಷಣಗಳಲ್ಲಿನ ಸುಳ್ಳುಗಳು ನೀವು ಉದ್ದೇಶಿಸಿರುವ ಪರಿಣಾಮವನ್ನು ಬೀರಿಲ್ಲ ಎಂದು ತೋರುತ್ತದೆ, ಅದಕ್ಕೆ ಈಗ ನಿಮ್ಮ ಅಭ್ಯರ್ಥಿಗಳಲ್ಲಿ ಈ ಸುಳ್ಳುಗಳನ್ನು ಹೇಳಿಸುತ್ತಿದ್ದೀರಿ, ಒಂದು ಸುಳ್ಳನ್ನು ಸಾವಿರ ಬಾರಿ ಪುನರಾವರ್ತಿಸಿದರೂ ಅದು ಸತ್ಯವಾಗುವುದಿಲ್ಲ ಎಂದು ಹೇಳಿದ್ದಾರೆ.

ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಏನು ಬರೆದಿದೆ ಮತ್ತು ನಾವು ಏನು ಭರವಸೆ ನೀಡಿದ್ದೇವೆ ಎಂಬುದನ್ನು ಸ್ವತಃ ಮತದಾರರು ಓದಿ ಅರ್ಥಮಾಡಿಕೊಳ್ಳುವಷ್ಟು ಬುದ್ಧಿವಂತರಾಗಿದ್ದಾರೆ. ನಮ್ಮ ಖಾತರಿಗಳು ತುಂಬಾ ಸರಳ ಮತ್ತು ಸ್ಪಷ್ಟವಾಗಿದೆ, ನಾವು ಅವರಿಗೆ ಅದನ್ನು ವಿವರಿಸಬೇಕಾಗಿಲ್ಲ. ನಿಮ್ಮ ಅನುಕೂಲಕ್ಕಾಗಿ, ನಾನು ಅವುಗಳನ್ನು ಇಲ್ಲಿ ಪುನರುಚ್ಚರಿಸುತ್ತೇನೆ…

1. ಯುವ ನ್ಯಾಯ – ನಿಮ್ಮ ಅತ್ಯಂತ ಕೆಟ್ಟ ನೀತಿಗಳಿಂದಾಗಿ ನಿರುದ್ಯೋಗದಿಂದ ಬಳಲುತ್ತಿರುವ ಈ ದೇಶದ ಯುವಕರಿಗೆ ನಾವು ಉದ್ಯೋಗ ನೀಡುವ ಭರವಸೆ ನೀಡುತ್ತೇವೆ. ಯುವಕರಿಗೆ ಕಾಂಗ್ರೆಸ್ ಭರವಸೆ – ಪೆಹ್ಲಿ ನೌಕ್ರಿ ಪಕ್ಕಿ.

2. ನಾರಿ ನ್ಯಾಯ – ನಿಮ್ಮ ನಾಯಕರು ಮತ್ತು ಅವರ ಮನಸ್ಥಿತಿಯಿಂದ ಅಭೂತಪೂರ್ವ ಕಿರುಕುಳವನ್ನು ಕಾಣುತ್ತಿರುವ ನಮ್ಮ ದೇಶದ ಮಹಿಳೆಯರು ಮತ್ತು ಯುವತಿಯರ ಸಬಲೀಕರಣ

3. ಕಿಸಾನ್ ನ್ಯಾಯ –ನ್ಯಾಯಯುತ ಬೆಲೆ ಕೇಳಿದ್ದಕ್ಕಾಗಿ ಗುಂಡು ಮತ್ತು ಹೊಡೆತಕ್ಕೆ ಒಳಗಾದ ರೈತರ ಸಬಲೀಕರಣ

 4. ಶ್ರಮಿಕ ನ್ಯಾಯ – ನಿಮ್ಮ ಸೂಟ್-ಬೂಟ್ ಕಿ ಸರ್ಕಾರ್ ನೀತಿಗಳಿಂದಾಗಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಹೆಚ್ಚುತ್ತಿರುವ ಆದಾಯದ ಅಸಮಾನತೆಯಿಂದ ಬಳಲುತ್ತಿರುವ ಕಾರ್ಮಿಕರ ಸಬಲೀಕರಣ

5.ಹಿಸ್ಸೆದಾರಿ ನ್ಯಾಯ – ತಮ್ಮ ಹಕ್ಕನ್ನು ಪಡೆಯಲು ಅರ್ಹರಾದ ಬಡವರ ಸಬಲೀಕರಣ
ನಮ್ಮ ಗ್ಯಾರಂಟಿ ಎಲ್ಲರಿಗೂ ನ್ಯಾಯವನ್ನು ನೀಡುವುದಾಗಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಅವರು ಮೋದಿಗೆ ಬರೆದ ಪತ್ರದಲ್ಲಿ ಉಲ್ಲೆಖಿಸಿದ್ದಾರೆ.

ಕಾಂಗ್ರೆಸ್ ತುಷ್ಟೀಕರಣ ರಾಜಕಾರಣ ಮಾಡುತ್ತಿದೆ ಎಂದು ನೀವು ಮತ್ತು ಗೃಹ ಸಚಿವರು ಹೇಳುವುದನ್ನು ಕೇಳಿದ್ದೇವೆ. ಕಳೆದ 10 ವರ್ಷಗಳಲ್ಲಿ ನಾವು ನೋಡಿದ ತುಷ್ಟೀಕರಣ ನೀತಿಯೆಂದರೆ ನೀವು ಮತ್ತು ನಿಮ್ಮ ಮಂತ್ರಿಗಳು ಚೀನಿಯರನ್ನು ಓಲೈಸುವುದು. ಇಂದಿಗೂ, ನೀವು ಚೀನಾದವರನ್ನು ಒಳನುಸುಳುಕೋರರು ಎಂದು ಕರೆಯಲು ನಿರಾಕರಿಸಿದ್ದೀರಿ, ಬದಲಿಗೆ ಜೂನ್ 19, 2020ರಂದು, ನೀವು “ನಾ ಕೋಯಿ ಘುಸಾ ಹೈ, ನ ಹೈ ಕೋಯಿ ಘುಸ್ ಆಯಾ ಹೈ” ಎಂದು ಹೇಳಿದ್ದೀರಿ, ಈ ರೀತಿ ಹೇಳಿ ಗಾಲ್ವಾನ್‌ನಲ್ಲಿ 20 ಭಾರತೀಯ ಸೈನಿಕರ ಅತ್ಯುನ್ನತ ತ್ಯಾಗವನ್ನು ಅವಮಾನಿಸಿದ್ದೀರಿ. ಚೀನಾಕ್ಕೆ ನೀವು ಸಾರ್ವಜನಿಕವಾಗಿ ನೀಡಿದ ‘ಕ್ಲೀನ್ ಚಿಟ್’, ಭಾರತದ ಪ್ರಕರಣವನ್ನು ದುರ್ಬಲಗೊಳಿಸಿದೆ. ಅರುಣಾಚಲ ಪ್ರದೇಶ, ಲಡಾಖ್ ಮತ್ತು ಉತ್ತರಾಖಂಡದ ಎಲ್‌ಎಸಿ ಬಳಿ ಚೀನಾದಿಂದ ನಿಯಮಗಳ ಉಲ್ಲಂಘನೆ ಮತ್ತು ಮಿಲಿಟರಿ ಮೂಲಸೌಕರ್ಯ ನಿರ್ಮಾಣದಿಂದಾಗಿ ಉದ್ವಿಗ್ನತೆ ಹೆಚ್ಚುತ್ತಿರುವಾಗಲೂ, ಭಾರತಕ್ಕೆ ಚೀನಾದ ಸರಕುಗಳ ಆಮದು ಕಳೆದ 5 ವರ್ಷಗಳಲ್ಲಿ 54.76% ರಷ್ಟು ಹೆಚ್ಚಾಗಿದೆ ಮತ್ತು 2023- 24ರಲ್ಲಿ 101 ಬಿಲಿಯನ್ ದಾಟಿದೆ ಎಂದು ಹೇಳಿದ್ದಾರೆ.

ನಿಮ್ಮ ಪತ್ರದಲ್ಲಿ, ಕಾಂಗ್ರೆಸ್‌ SC, ST ಮತ್ತು OBCಯಿಂದ ಮೀಸಲಾತಿಯನ್ನು ಕಿತ್ತು “ಮತಬ್ಯಾಂಕ್” ಗೆ ನೀಡುತ್ತದೆ ಎಂದು ಹೇಳುತ್ತೀರಿ. ನಮ್ಮ ಮತಬ್ಯಾಂಕ್ ಪ್ರತಿಯೊಬ್ಬ ಭಾರತೀಯರಾದ ಬಡವರು, ಅಂಚಿನಲ್ಲಿರುವವರು, ಮಹಿಳೆಯರು, ಯುವಕರು, ಕಾರ್ಮಿಕ ವರ್ಗ, ದಲಿತರು ಮತ್ತು ಆದಿವಾಸಿಗಳು. 1947 ರಿಂದ ಪ್ರತಿ ಹಂತದಲ್ಲೂ ಮೀಸಲಾತಿಯನ್ನು ವಿರೋಧಿಸಿದವರು ಆರೆಸ್ಸೆಸ್‌ ಮತ್ತು ಬಿಜೆಪಿ ಎಂದು ಎಲ್ಲರಿಗೂ ತಿಳಿದಿದೆ. ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ಬದಲಾಯಿಸಲು ಬಯಸುತ್ತಿರುವುದು ಆರೆಸ್ಸೆಸ್‌ ಮತ್ತು ಬಿಜೆಪಿ ಎಂದು ಎಲ್ಲರಿಗೂ ತಿಳಿದಿದೆ. ನಿಮ್ಮ ನಾಯಕರು ಈ ಬಗ್ಗೆ ಬಹಿರಂಗವಾಗಿ ಮಾತನಾಡಿದ್ದಾರೆ. ನಮ್ಮ ಸಂವಿಧಾನದ 16ನೇ ವಿಧಿಯ ಪ್ರಕಾರ ಜನಸಂಖ್ಯೆಯ ಆಧಾರದ ಮೇಲೆ SC, ST ಮತ್ತು OBC ಗಳಿಗೆ ಮೀಸಲಾತಿಯನ್ನು ನೀವು ಏಕೆ ವಿರೋಧಿಸುತ್ತೀರಿ ಎಂಬುದನ್ನು ನೀವು ಸ್ಪಷ್ಟಪಡಿಸಬೇಕು ಎಂದು ಹೇಳಿದ್ದಾರೆ.

ನಿಮ್ಮ ಪತ್ರದಲ್ಲಿ, ಜನರ ಕಷ್ಟಪಟ್ಟು ದುಡಿದ ಹಣವನ್ನು ಕಸಿದುಕೊಳ್ಳಲಾಗುವುದು ಎಂದು ಹೇಳಿದ್ದೀರಿ. ಗುಜರಾತ್‌ನ ಬಡ ದಲಿತ ರೈತರಿಂದ ವಂಚಿಸಿ ಬಿಜೆಪಿಗೆ ಚುನಾವಣಾ ಬಾಂಡ್‌ಗಳಾಗಿ ಪಡೆದಿರುವ 10 ಕೋಟಿ ರೂ.ಗಳನ್ನು ಹಿಂದಿರುಗಿಸಲು ನಿಮ್ಮ ಪಕ್ಷಕ್ಕೆ ನಿರ್ದೇಶನ ನೀಡುವಂತೆ ನಾನು ಈ ಸಂದರ್ಭದಲ್ಲಿ ವಿನಂತಿಸುತ್ತೇನೆ. ನಿಮ್ಮ ಪಕ್ಷವು  ಹಫ್ತಾ ವಸೂಲಿ ಮೂಲಕ ವಿವಿಧ ಕಂಪನಿಗಳಿಂದ ಅಕ್ರಮ ಮತ್ತು ಅಸಂವಿಧಾನಿಕ ಚುನಾವಣಾ ಬಾಂಡ್‌ಗಳ ಮೂಲಕ 8,250 ಕೋಟಿ ರೂ.ಗಳನ್ನು ಸಂಗ್ರಹಿಸಿದೆ. 8,250 ಕೋಟಿಗಳಲ್ಲಿ ಕನಿಷ್ಠ 10 ಕೋಟಿ ರೂಪಾಯಿಯನ್ನು ಈ ದಲಿತ ಕುಟುಂಬಕ್ಕೆ ಹಿಂತಿರುಗಿಸಬಹುದು. ನಿಮ್ಮ ಹಿಂದಿನ ಹಣಕಾಸು ಸಚಿವರು ಮತ್ತು ನಿಮ್ಮ ಪಕ್ಷದ ನಾಯಕರು ಪಿತ್ರಾರ್ಜಿತ ತೆರಿಗೆ ಬೇಕು ಎಂದು ಪದೇ ಪದೇ ಪ್ರಸ್ತಾಪಿಸುತ್ತಿರುವಾಗ ಕಾಂಗ್ರೆಸ್ ಪಿತ್ರಾರ್ಜಿತ ತೆರಿಗೆಯನ್ನು ತರಲು ಬಯಸುತ್ತದೆ ಎಂದು ನಿಮ್ಮ ಪತ್ರ ಸುಳ್ಳು ಹೇಳುತ್ತಿದೆ ಎಂದು ಹೇಳಿದ್ದಾರೆ.

ಮೊದಲೆರಡು ಹಂತದ ಚುನಾವಣೆಗಳಲ್ಲಿ ಕಡಿಮೆ ಮತದಾನವಾಗಿರುವುದರ ಬಗ್ಗೆ ನೀವು ಚಿಂತೆಗೀಡಾಗಿರುವುದು ನಿಮ್ಮ ಪತ್ರದಿಂದ ಮನವರಿಕೆಯಾಗುತ್ತದೆ. ನಿಮ್ಮ ನೀತಿಗಳು ಅಥವಾ ನಿಮ್ಮ ಪ್ರಚಾರ ಭಾಷಣಗಳ ಬಗ್ಗೆ ಜನರು ಉತ್ಸಾಹ ಹೊಂದಿಲ್ಲ ಎಂದು ಇದು ತೋರಿಸುತ್ತದೆ. ಬೇಸಿಗೆಯ ಬೇಗೆಯಿಂದಲ್ಲ, ನಿಮ್ಮ ನೀತಿಗಳಿಂದ ಬಡವರು ಸುಟ್ಟು ಹೋಗಿದ್ದಾರೆ. ಧರ್ಮದ ಹೆಸರಿನಲ್ಲಿ ಮತದಾರರನ್ನು ಒಗ್ಗೂಡಿಸುವಂತೆ ನಿಮ್ಮ ಕಾರ್ಯಕರ್ತರಿಗೆ ಮನವಿ ಮಾಡಿದ್ದೀರಿ. ಮತದಾರರು ನಿಮಗೆ ಮತ ಹಾಕಲು ಉತ್ಸುಕರಾಗದಿದ್ದರೆ, ನಿಮ್ಮ ಕಾರ್ಯಕರ್ತರನ್ನು ದೂಷಿಸಬೇಡಿ ಎಂದು ಹೇಳಿದ್ದಾರೆ.

ಹೆಚ್ಚುತ್ತಿರುವ ಅಸಮಾನತೆಯ ಬಗ್ಗೆ ಮಾತನಾಡಲು ನಿಮಗೆ ಆಸಕ್ತಿ ಇಲ್ಲ. ನಿರುದ್ಯೋಗ ಮತ್ತು ಬೆಲೆ ಏರಿಕೆಯ ಬಗ್ಗೆ ಮಾತನಾಡಲು ನಿಮಗೆ ಆಸಕ್ತಿ ಇಲ್ಲ, ಅದು ನಮ್ಮ ಜನರ ಮೇಲೆ ಪರಿಣಾಮ ಬೀರುತ್ತದೆ. ನಿಮ್ಮ ನಾಯಕರಿಂದ ಮಹಿಳೆಯರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯದ ಬಗ್ಗೆ ಮಾತನಾಡಲು ನಿಮಗೆ ಆಸಕ್ತಿ ಇಲ್ಲ. ನಮ್ಮ ಪ್ರಣಾಳಿಕೆ ನ್ಯಾಯ ಮತ್ತು ಸಮಾಜದ ಎಲ್ಲಾ ವರ್ಗಗಳ ಬೆಳವಣಿಗೆಯನ್ನು ಹೇಗೆ ಮಾಡಬಹದು ಎಂದು ಹೇಳುತ್ತದೆ. ಪ್ರಧಾನಿಯಾಗಿ ನೀವು ದ್ವೇಷದ ಭಾಷಣಗಳನ್ನು ಮಾಡುವ ಬದಲು ಕಳೆದ ಹತ್ತು ವರ್ಷಗಳ ನಿಮ್ಮ ಸರ್ಕಾರದ ಸಾಧನೆಯ ಬಗ್ಗೆ ಮತ ಕೇಳುವುದು ಉತ್ತಮ. ಕಾಂಗ್ರೆಸ್ ಪಕ್ಷವು ನಿಮಗೆ ಅಥವಾ ನಿಮ್ಮನ್ನು ಪ್ರತಿನಿಧಿಸುವ ಯಾರಿಗಾದರೂ ನಮ್ಮ ಪ್ರಣಾಳಿಕೆ ಮತ್ತು ಅಂಶಗಳ ಬಗ್ಗೆ ನಮ್ಮೊಂದಿಗೆ ಚರ್ಚೆಗೆ ಬರುವಂತೆ ಸವಾಲು ಹಾಕುತ್ತದೆ ಎಂದು ಮಲ್ಲಿಕಾರ್ಜುನ ಖರ್ಗೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ನಾನು ನನ್ನ ಹಿಂದಿನ ಪತ್ರದಲ್ಲಿ ಪ್ರಸ್ತಾಪಿಸಿದಂತೆ, ಚುನಾವಣೆಗಳು ಮುಗಿದ ನಂತರ, ಅನಿವಾರ್ಯ ಸೋಲನ್ನು ತಪ್ಪಿಸಲು ಸುಳ್ಳುಗಳಿಂದ ತುಂಬಿದ ಒಡೆದು ಆಳುವ ಮತ್ತು ಕೋಮುವಾದಿ ಭಾಷಣಗಳನ್ನು ಮಾಡಿದ ಪ್ರಧಾನಿಯಾಗಿ ಜನರು ನಿಮ್ಮನ್ನು ನೆನಪಿಸಿಕೊಳ್ಳುತ್ತಾರೆ ಎಂದು ಖರ್ಗೆ ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನು ಓದಿ: ಮಣಿಪುರ ಸಂಘರ್ಷಕ್ಕೆ ಒಂದು ವರ್ಷ: ಮೈತೈ, ಕುಕಿ ಸಮುದಾಯಗಳಿಂದ ಪ್ರತ್ಯೇಕ ಕಾರ್ಯಕ್ರಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...