Homeಕರ್ನಾಟಕನಮ್ಮ ನೀರು ನಮ್ಮ ಹಕ್ಕು ಘೋಷಣೆಯೊಂದಿಗೆ ಮೇಕೆದಾಟು ಪಾದಯಾತ್ರೆ ಆರಂಭಿಸಿದ ಕಾಂಗ್ರೆಸ್

ನಮ್ಮ ನೀರು ನಮ್ಮ ಹಕ್ಕು ಘೋಷಣೆಯೊಂದಿಗೆ ಮೇಕೆದಾಟು ಪಾದಯಾತ್ರೆ ಆರಂಭಿಸಿದ ಕಾಂಗ್ರೆಸ್

ಹರಿಯೋ ನೀರನ್ನು, ಬೀಸೋ ಗಾಳಿಯನ್ನು, ಉರಿಯೋ ಸೂರ್ಯನನ್ನು ನಿಲ್ಲಿಸಲು ಸಾಧ್ಯವೇ? ಉರಿಯೋ ಸೂರ್ಯನ ಮಕ್ಕಳು ನಾವು. ಹೋರಾಟವನ್ನು ಯಾರಿಂದಲೂ ನಿಲ್ಲಿಸಲು ಸಾಧ್ಯವಿಲ್ಲ ಎಂದು ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

- Advertisement -
- Advertisement -

“ನಮ್ಮ ನೀರು ನಮ್ಮ ಹಕ್ಕು” ಘೋಷಣೆಯೊಂದಿಗೆ ಪ್ರದೇಶ ಕಾಂಗ್ರೆಸ್‌ ಸಮಿತಿ ನೇತೃತ್ವದಲ್ಲಿ ಮೇಕೆದಾಟು ಪಾದಯಾತ್ರೆಗೆ ಭಾನುವಾರ ಚಾಲನೆ ನೀಡಿತು. ಕನಕಪುರ ತಾಲ್ಲೂಕಿನ ‘ಸಂಗಮ’ದಿಂದ ಬೆಂಗಳೂರಿನವರೆಗೆ ನಡೆಸಲು ಉದ್ದೇಶಿಸಿರುವ ಪಾದಯಾತ್ರೆ ಅಧಿಕೃತವಾಗಿ ಚಾಲನೆ ಪಡೆಯಿತು.

ಕಾವೇರಿ ನದಿಗೆ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್‌ ಅವರು ಪೂಜೆ ಸಲ್ಲಿಸಿದರು. ಕಾವೇರಿ ನದಿಯಲ್ಲಿ ಮಿಂದರು. ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆಯವರು ಪಾದಯಾತ್ರೆಯನ್ನು ಉದ್ಘಾಟಿಸಿದರು.

ಮಲ್ಲಿಕಾರ್ಜುನ ಖರ್ಗೆಯವರು ಮಾತನಾಡಿ, “ಈ ಯೋಜನೆಯು ಬೆಂಗಳೂರಿಗೆ ಕುಡಿಯುವ ನೀರು ಕೊಡುತ್ತದೆ. ಹಲವು ಹಳ್ಳಿಗಳಿಗೆ ನೀರು ಕೊಡುತ್ತದೆ. ನಾಲ್ಕು ನೂರು ಮೆಗಾವ್ಯಾಟ್ ವಿದ್ಯುತ್‌ ಶಕ್ತಿ ಉತ್ಪಾದಿಸಬಹುದು. ಇದೊಂದು ದೊಡ್ಡ ಕೆಲಸ. ಈ ಯೋಜನೆಯ ವೆಚ್ಚ 9,000 ಕೋಟಿ ರೂ.ಗಳು. ಇಂತಹದೊಂದು ದೊಡ್ಡ ಕೆಲಸವನ್ನು ಕಾಂಗ್ರೆಸ್‌ ಸರ್ಕಾರ ಪ್ರಾರಂಭಿಸಿತ್ತು” ಎಂದರು.

ಎಂ.ಬಿ.ಪಾಟೀಲ ಅವರು ನೀರಾವರಿ ಸಚಿವರಾಗಿದ್ದಾಗ ಈ ಯೋಜನೆ ರೂಪ ಪಡೆಯಿತು. ಡಿ.ಕೆ.ಶಿವಕುಮಾರ್‌ ಅವರು ನೀರಾವರಿ ಸಚಿವರಾಗಿದ್ದಾಗ ಮತ್ತಷ್ಟು ಸ್ಪಷ್ಟತೆ ಪಡೆಯಿತು. ಕರ್ನಾಟಕ ರಾಜ್ಯದ ಎಲ್ಲ ಜನತೆಯು ಈ ಯೋಜನೆಗೆ ಸಂಪೂರ್ಣವಾದ ಬೆಂಬಲವನ್ನು ಕೊಡುತ್ತದೆ. ಇದು ಎಲ್ಲರಿಗೂ ಬೇಕಾದ ಯೋಜನೆಯಾಗಿದೆ ಎಂದು ತಿಳಿಸಿದರು.

ಕುಡಿಯುವ ನೀರಾಗಾಗಿ ಪದೇ ಪದೇ ಕಚ್ಚಾಡುತ್ತಿದ್ದೇವೆ. 67 ಟಿಎಂಸಿ ನೀರು ಸಂಗ್ರಹಿಸುವ ಯೋಜನೆಯ ಪ್ರಯತ್ನಕ್ಕಾಗಿ ಕಾಂಗ್ರೆಸ್‌ ನಾಯಕರನ್ನು ಅಭಿನಂದಿಸುವೆ. ಈ ಯೋಜನೆ ಕಾರ್ಯಗತವಾಗುವವರೆಗೂ ಬಿಡಬಾರದು. ಈ ಛಲ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ ಹಾಗೂ ಕಾಂಗ್ರೆಸ್ ಪಕ್ಷದ ಎಲ್ಲ ಕಾರ್ಯಕರ್ತರಲ್ಲಿ ಇದೆ ಎಂದು ಹೇಳಿದರು.

ಬೆಂಗಳೂರಿನಲ್ಲಿ ನಾಲ್ಕೈದು ದಿನ ಪಾದಯಾತ್ರೆ ನಡೆಯಲಿದೆ. ಆರೋಗ್ಯ ಕಾಪಾಡಿಕೊಳ್ಳಿ. ಕೋವಿಡ್ ಸೂಚನೆಯನ್ನು ಪಾಲನೆ ಮಾಡಿರಿ. ನಮ್ಮ ವಿರುದ್ಧ ಏನಾದರೂ ಹೇಳಿಕೊಳ್ಳುವಂತಹದ್ದು ಆಗಬಾರದು. ಮಾಸ್ಕ್‌ ಧರಿಸಬೇಕು. ದೈಹಿಕ ಅಂತ ಕಾಪಾಡಿಕೊಂಡು ಸಾಗಬೇಕು. ಹೋರಾಟದ ಕ್ರೆಡಿಟ್‌ ಕಾಂಗ್ರೆಸ್‌ ನಾಯಕರಿಗೆ ಹೋಗುತ್ತದೆ ಎಂದು ಭಾವಿಸಿ ಈ ಹೋರಾಟವನ್ನು ವಿಫಲ ಮಾಡಲು ಯತ್ನಿಸುತ್ತಿದೆ. ಆದರೆ ಈ ಹೋರಾಟವನ್ನು ಯಶಸ್ವಿಗೊಳಿಸಬೇಕು.

ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಮಾತನಾಡಿ, “ನಾಲ್ಕೈದು ವರ್ಷಗಳಲ್ಲಿ 260 ಟಿಎಂಸಿ ನೀರು ಹೆಚ್ಚುವರಿಯಾಗಿ ಸಮುದ್ರಕ್ಕೆ ಹೋಗಿದೆ. ಮಳೆಗಾಲದಲ್ಲಿ ಹೆಚ್ಚು ನೀರನ್ನು ನಾವು ಶೇಖರಣೆ ಮಾಡಿಕೊಳ್ಳುತ್ತೇವೆ. ಕುಡಿಯಲು ಬೆಂಗಳೂರಿಗೆ ನೀಡುತ್ತೇವೆ. ತಮಿಳುನಾಡಿನಲ್ಲಿ ನೀರಿಲ್ಲದಿದ್ದಾಗ ಅವರಿಗೂ ನೀಡುತ್ತೇವೆ. ಎರಡು ರಾಜ್ಯಕ್ಕೂ ಈ ಯೋಜನೆ ಸೂಕ್ತವಾಗಿದೆ” ಎಂದು ವಿವರಿಸಿದರು.

ಈ ಯೋಜನೆಯ ಕುರಿತು ತರಕಾರು ತೆಗೆಯಲು ಯಾವುದೇ ದಾಖಲಾತಿ, ಆಧಾರಗಳಿಲ್ಲ. ತಮಿಳುನಾಡಿದವರು ಕ್ಯಾತೆ ತೆಗೆದಯುವುದು ಸರಿ, ಇವರು (ಬಿಜೆಪಿಯವರು) ಯಾಕೆ ಅವರ ಜೊತೆ ಸೇರಿಕೊಂಡಿದ್ದಾರೆ. ಅಣ್ಣಾ ಮಲೈ (ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ) ಕರ್ನಾಟಕದಲ್ಲಿ ಇದ್ದ ಅಧಿಕಾರಿ. ಅವರಿಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಬೆಂಬಲ ನೀಡುವುದು ಏನನ್ನು ಸೂಚಿಸುತ್ತದೆ. ನಿಮ್ಮ ಶಕ್ತಿಯನ್ನು ವಿಸ್ತರಿಸಲು ಅಲ್ಲಿಗೆ ಸಪೋರ್ಟ್ ಮಾಡುತ್ತೀರಿ. ಈ ಯೋಜನೆ ಮಾಡಬಾರದು ಎಂಬುದು ಬಿಜೆಪಿಯ ಉದ್ದೇಶವಾಗಿದೆ. ಇದು ಕನ್ನಡ ನಾಡಿಗೆ ಮಾಡುವ ದ್ರೋಹ ಅಲ್ಲವಾ? ಅದಕ್ಕಾಗಿ ಈ ಪಾದಯಾತ್ರೆ ಮಾಡಬಾರದಾ? ಎಂದು ಪ್ರಶ್ನಿಸಿದರು.

“ಎಲ್ಲರೂ ಕಡ್ಡಾಯವಾಗಿ ಮಾಸ್ಕ್‌ ಹಾಕಿಕೊಳ್ಳಿ, ಗ್ಲೌಸ್ ಹಾಕಿಕೊಳ್ಳಿ. ಸ್ಯಾನಿಟೈಸ್ ಮಾಡಿಕೊಳ್ಳಿ. ಮಾಸ್ಕ್‌ ಹಾಕಿಕೊಳ್ಳದವರನ್ನು ವಾಪಸ್‌ ಕಳಿಸುತ್ತೇವೆ. ಸರ್ಕಾರದ ನಿಯಮಗಳಿಗೆ ಗೌರವ ಕೊಡಬೇಕು. ಆ ಜವಾಬ್ದಾರಿಯನ್ನು ನಿರ್ವಹಿಸಿ ಮುನ್ನಡೆಯಬೇಕು” ಎಂದು ಸೂಚಿಸಿದರು.

ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್‌ ಅವರು “ಕಾವೇರಿ ಹೋರಾಟಕ್ಕೆ ಜಯವಾಗಲಿ”, “ಭಾರತ್‌ ಮಾತಾಕೀ ಜೈ” ಎಂದು ಮಾತು ಆರಂಭಿಸಿದರು. “ಇದೊಂದು ಐತಿಹಾಸಿಕ ಕಾರ್ಯಕ್ರಮ. ಮನುಷ್ಯ ಎಷ್ಟು ದಿನ ಇರುತ್ತಾನೋ ಹೇಳಲು ಆಗಲ್ಲ. ಜನನ ಉಚಿತ, ಮರಣ ಖಚಿತ. ಈ ಹುಟ್ಟು ಸಾವಿನ ಮಧ್ಯೆದಲ್ಲಿ ನಾವು ಏನು ಮಾಡುತ್ತೇವೆ ಎಂಬುದು ಮುಖ್ಯ” ಎಂದರು.

“ನಮ್ಮ ಕಾಂಗ್ರೆಸ್ ನಾಯಕರಲ್ಲಿ ಹೋರಾಟ ರಕ್ತಗತವಾಗಿದೆ. ಈ ದೇಶದ ಏಕತೆ, ಸಮಗ್ರತೆಗಾಗಿ ಕಾಂಗ್ರೆಸ್ ಹೋರಾಡಿದೆ. ಕಾಂಗ್ರೆಸ್‌ ನಾಯಕರು ದೇಶಕ್ಕಾಗಿ ಬಲಿದಾನ ಮಾಡಿದ್ದಾರೆ. ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ. ಕಾಂಗ್ರೆಸ್‌ ಇತಿಹಾಸವೇ ದೇಶದ ಇತಿಹಾಸ. ಈ ಹೋರಾಟ ಅಧಿಕಾರಕ್ಕಾಗಿ ಅಲ್ಲ. ಬಡಜನರ ಅಭಿವೃದ್ಧಿಗಾಗಿ” ಎಂದು ತಿಳಿಸಿದರು.

ಈ ಹೋರಾಟಕ್ಕೆ ತೊಂದರೆ ಮಾಡಬೇಕೆಂದು ತೊಂದರೆ ಮಾಡುತ್ತಿದ್ದಾರೆ. ಅನೇಕ ರೀತಿಯಲ್ಲಿ ಟೀಕೆ-ಟಿಪ್ಪಣಿಯನ್ನು ನಮ್ಮ ನಡಿಗೆಗೆ ಮಾಡುತ್ತಿದ್ದಾರೆ. ಮುಖ್ಯಮಂತ್ರಿಯವರೇ ನೀವು ರೈತರ ಮಕ್ಕಳು. ಈ ರಾಜ್ಯವನ್ನು ಪ್ರತಿನಿಧಿಸುತ್ತಿರಿ. ಆದರೆ ಹೋರಾಟವನ್ನು ಮುಗಿಸಬೇಕೆಂದು ನಿಷೇದಾಜ್ಞೆ ಜಾರಿ ಮಾಡಿದ್ದೀರಲ್ಲ, ಇಲ್ಲಿ ಭಾಗವಹಿಸಿರುವ ಧರ್ಮ ಪೀಠದ ಪ್ರತಿನಿಧಿಗಳನ್ನು, ಸಿದ್ದರಾಮಯ್ಯನವರನ್ನು, ಖರ್ಗೆಯವರನ್ನು, ನೂರು ಜನ ಶಾಸಕರನ್ನು ಬಂಧಿಸಿ ನೋಡೋಣ ಎಂದು ಸವಾಲು ಹಾಕಿದರು.

ಇಲ್ಲಿ ಹಾರಾಡುತ್ತಿರುವ ಭಾರತದ ಧ್ವಜ, ಕರ್ನಾಟಕದ ಧ್ವಜ, ಕಾಂಗ್ರೆಸ್‌ ಧ್ವಜ, ಈ ಕಾವೇರಿ ನದಿಯ ಮೇಕೆದಾಟಿನ ಹೋರಾಟ ಧ್ವಜವನ್ನು ಮುಟ್ಟಲು ನಿಮ್ಮಿಂದ ಸಾಧ್ಯವಿಲ್ಲ. ಈ ನಡಿಗೆ ನಮ್ಮ ಪಕ್ಷಕ್ಕಲ್ಲ. ನೀರಿಗಾಗಿ. ಎರಡೂವರೆ ಕೋಟಿ ಜನರ ಬದುಕಿಗಾಗಿ ಎಂದು ಸ್ಪಷ್ಟಪಡಿಸಿದರು.

ಹೋರಾಟಕ್ಕೆ ಬೆಂಬಲ ಕೊಡಬೇಡಿ ಎಂದು ನಿಮಗೆ ಕರೆ ಮಾಡಿ ಯಾರಾದರೂ ಹೇಳಬಹುದು. ಹರಿಯೋ ನೀರನ್ನು, ಬೀಸೋ ಗಾಳಿಯನ್ನು, ಉರಿಯೋ ಸೂರ್ಯನನ್ನು ನಿಲ್ಲಿಸಲು ಸಾಧ್ಯವೇ? ಉರಿಯೋ ಸೂರ್ಯದ ಮಕ್ಕಳು ವೇದಿಕೆ ಮೇಲೆ ಕೂತಿದ್ದಾರೆ ಎಂದು ಗುಡುಗಿದರು.

ಸಾಧುಕೋಕಿಲ ಅವರ ತಂಡವು ಮೇಕೆದಾಟು ಕಾವೇರಿ ಗೀತೆಯನ್ನು ಹಾಡಿತು. “ಹರಿಯುತಿಹಳು ನಮಗಾಗಿ. ಹೆಜ್ಜೆ ಹಾಕುತ್ತೇವೆ ನಾವು, ಹೆಜ್ಜೆ ಹಾಕುತ್ತೇವೆ ನಾವು ಹೆಜ್ಜೆ. ಕಾವೇರಿಗಾಗಿ ಹೆಜ್ಜೆ. ನಮ್ಮ ನೀರಿಗಾಗಿ ಹೆಜ್ಜೆ. ನಾಡಿಗಾಗಿ ಹೆಜ್ಜೆ. ನಾಡ ಜನತೆಗಾಗಿ ಹೆಜ್ಜೆ. ಹೆಜ್ಜೆ ಹಾಕುತ್ತೇವೆ ನಾವು ಹೆಜ್ಜೆ. ಕಾವೇರಿ ತಾಯಿಗಾಗಿ ಹೆಜ್ಜೆ” ಎಂದು ಸಾಧು ಕೋಕಿಲ ತಂಡ ಹಾಡಿತು.

ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಮಾಧ್ಯಮಗಳ ಜೊತೆ ಮಾತನಾಡಿದ ಕಲಾವಿದ ಸಾಧು ಕೋಕಿಲ, “ನಾವು ಕಲಾವಿದರು. ಎಲ್ಲ ಕಡೆಗೂ ಸಲ್ಲುತ್ತಾರೆ. ಇದು ಪಕ್ಷದ ಕೆಲಸವಲ್ಲ. ನಮ್ಮ ಕೆಲಸ. ಮುಂದಿನ ಪೀಳಿಗೆಯ ಕೆಲಸ. ಇದಕ್ಕೆ ನಮ್ಮ ಪ್ರೋತ್ಸಾಹ ಇರಬೇಕು. ನಮ್ಮ ನೀರು ನಮ್ಮ ಹಕ್ಕು. ಈ ಕಾರ್ಯಕ್ರಮ ಮುಗಿಯುದಿಲ್ಲ. ಅಣೆಕಟ್ಟು ಕಟ್ಟುವವರೆಗೂ ಕಾರ್ಯಕ್ರಮವನ್ನು ನಡೆಸಲೇಬೇಕು” ಎಂದರು.

ಕಾಂಗ್ರೆಸ್ ನಾಯಕಿ ಜಯಮಾಲ ಮಾತನಾಡಿ, “ನಿದ್ದೆ ಬಂದಂತೆ ನಟಿಸುತ್ತಿರುವವರನ್ನು ಎಬ್ಬಿಸಲು ಸಾಧ್ಯವಿಲ್ಲ. ಕೋವಿಡ್ ನಿಯಮಗಳನ್ನು ಪಾಲಿಸಿಯೇ ಪಾದಯಾತ್ರೆ ಮಾಡಿದ್ದೇವೆ” ಎಂದರು. ಕರ್ನಾಟಕ ಚಲನಚಿತ್ರ ಮಂಡಳಿಯ ಮಾಜಿ ಅಧ್ಯಕ್ಷರಾದ ಸಾ.ರಾ.ಗೋವಿಂದ್, ನಟ ದುನಿಯಾ ವಿಜಯ್‌ ಭಾಗಿಯಾಗಿ ಚಿತ್ರರಂಗದ ಪರ ಬೆಂಬಲ ಸೂಚಿಸಿದರು.

ವೇದಿಕೆ ಕಾರ್ಯಕ್ರಮದ ನಿರೂಪಣೆಯನ್ನು ಕಾಂಗ್ರೆಸ್ ನಾಯಕ ಆರ್‌.ಧ್ರುವನಾರಾಯಣ ಮಾಡಿದರು. ಸ್ವಾಗತ ಹಾಗೂ ಪ್ರಸ್ತಾವಿಕ ಭಾಷಣವನ್ನು ಡಿ.ಕೆ.ಸುರೇಶ್‌ ಮಾಡಿದರು. ಕೆಪಿಸಿಸಿ ಮಾಜಿ ಅಧ್ಯಕ್ಷರಾದ, ಆರ್‌.ವಿ.ದೇಶಪಾಂಡೆ, ಡಾ.ಜಿ.ಪರಮೇಶ್ವರ್‌‌, ಮಾಜಿ ಮುಖ್ಯಮಂತ್ರಿ ವೀರಪ್ಪ ಮೋಯ್ಲಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಎಚ್‌.ಕೆ.ಪಾಟೀಲ್‌, ಕೇಂದ್ರದ ಮಾಜಿ ಸಚಿವರಾದ ಕೆ.ಎಚ್‌.ಮುನಿಯಪ್ಪ, ಯುವ ಕಾಂಗ್ರೆಸ್ ಅಧ್ಯಕ್ಷರಾದ ಬಿ.ವಿ.ಶ್ರೀನಿವಾಸ್‌, ಕಾಂಗ್ರೆಸ್ ನಾಯಕರಾದ ರಾಮಲಿಂಗರೆಡ್ಡಿ, ಸಲೀಂ ಮಹಮದ್, ಈಶ್ವರ್‌ ಖಂಡ್ರೆ, ಹರಿಪ್ರಸಾದ್‌, ಮಾಜಿ ಸಚಿವರಾದ ಎಂ.ಬಿ.ಪಾಟೀಲ್‌, ಕೆ.ಜೆ.ಜಾರ್ಜ್, ಮೋಟಮ್ಮ, ಟಿ.ಬಿ.ಜಯಚಂದ್ರ, ಎಚ್.ಎಂ.ರೇವಣ್ಣ, ರಮೇಶ್‌ಕುಮಾರ್‌, ಲಕ್ಷ್ಮಿ ಹೆಬ್ಬಾಳ್ಕರ್‌ ಸೇರಿದಂತೆ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಹಾಜರಿದ್ದರು.


ಇದನ್ನೂ ಓದಿರಿ: ಚಂಡೀಗಢ: ಹೆಚ್ಚು ಸ್ಥಾನ ಗೆದ್ದರೂ ಎಎಪಿಗೆ ಒಲಿಯದ ಮೇಯರ್‌ ಸ್ಥಾನ; ಬಿಜೆಪಿ ಅಭ್ಯರ್ಥಿ ಆಯ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...