Homeಕರ್ನಾಟಕನಮ್ಮ ನೀರು ನಮ್ಮ ಹಕ್ಕು ಘೋಷಣೆಯೊಂದಿಗೆ ಮೇಕೆದಾಟು ಪಾದಯಾತ್ರೆ ಆರಂಭಿಸಿದ ಕಾಂಗ್ರೆಸ್

ನಮ್ಮ ನೀರು ನಮ್ಮ ಹಕ್ಕು ಘೋಷಣೆಯೊಂದಿಗೆ ಮೇಕೆದಾಟು ಪಾದಯಾತ್ರೆ ಆರಂಭಿಸಿದ ಕಾಂಗ್ರೆಸ್

ಹರಿಯೋ ನೀರನ್ನು, ಬೀಸೋ ಗಾಳಿಯನ್ನು, ಉರಿಯೋ ಸೂರ್ಯನನ್ನು ನಿಲ್ಲಿಸಲು ಸಾಧ್ಯವೇ? ಉರಿಯೋ ಸೂರ್ಯನ ಮಕ್ಕಳು ನಾವು. ಹೋರಾಟವನ್ನು ಯಾರಿಂದಲೂ ನಿಲ್ಲಿಸಲು ಸಾಧ್ಯವಿಲ್ಲ ಎಂದು ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

- Advertisement -
- Advertisement -

“ನಮ್ಮ ನೀರು ನಮ್ಮ ಹಕ್ಕು” ಘೋಷಣೆಯೊಂದಿಗೆ ಪ್ರದೇಶ ಕಾಂಗ್ರೆಸ್‌ ಸಮಿತಿ ನೇತೃತ್ವದಲ್ಲಿ ಮೇಕೆದಾಟು ಪಾದಯಾತ್ರೆಗೆ ಭಾನುವಾರ ಚಾಲನೆ ನೀಡಿತು. ಕನಕಪುರ ತಾಲ್ಲೂಕಿನ ‘ಸಂಗಮ’ದಿಂದ ಬೆಂಗಳೂರಿನವರೆಗೆ ನಡೆಸಲು ಉದ್ದೇಶಿಸಿರುವ ಪಾದಯಾತ್ರೆ ಅಧಿಕೃತವಾಗಿ ಚಾಲನೆ ಪಡೆಯಿತು.

ಕಾವೇರಿ ನದಿಗೆ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್‌ ಅವರು ಪೂಜೆ ಸಲ್ಲಿಸಿದರು. ಕಾವೇರಿ ನದಿಯಲ್ಲಿ ಮಿಂದರು. ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆಯವರು ಪಾದಯಾತ್ರೆಯನ್ನು ಉದ್ಘಾಟಿಸಿದರು.

ಮಲ್ಲಿಕಾರ್ಜುನ ಖರ್ಗೆಯವರು ಮಾತನಾಡಿ, “ಈ ಯೋಜನೆಯು ಬೆಂಗಳೂರಿಗೆ ಕುಡಿಯುವ ನೀರು ಕೊಡುತ್ತದೆ. ಹಲವು ಹಳ್ಳಿಗಳಿಗೆ ನೀರು ಕೊಡುತ್ತದೆ. ನಾಲ್ಕು ನೂರು ಮೆಗಾವ್ಯಾಟ್ ವಿದ್ಯುತ್‌ ಶಕ್ತಿ ಉತ್ಪಾದಿಸಬಹುದು. ಇದೊಂದು ದೊಡ್ಡ ಕೆಲಸ. ಈ ಯೋಜನೆಯ ವೆಚ್ಚ 9,000 ಕೋಟಿ ರೂ.ಗಳು. ಇಂತಹದೊಂದು ದೊಡ್ಡ ಕೆಲಸವನ್ನು ಕಾಂಗ್ರೆಸ್‌ ಸರ್ಕಾರ ಪ್ರಾರಂಭಿಸಿತ್ತು” ಎಂದರು.

ಎಂ.ಬಿ.ಪಾಟೀಲ ಅವರು ನೀರಾವರಿ ಸಚಿವರಾಗಿದ್ದಾಗ ಈ ಯೋಜನೆ ರೂಪ ಪಡೆಯಿತು. ಡಿ.ಕೆ.ಶಿವಕುಮಾರ್‌ ಅವರು ನೀರಾವರಿ ಸಚಿವರಾಗಿದ್ದಾಗ ಮತ್ತಷ್ಟು ಸ್ಪಷ್ಟತೆ ಪಡೆಯಿತು. ಕರ್ನಾಟಕ ರಾಜ್ಯದ ಎಲ್ಲ ಜನತೆಯು ಈ ಯೋಜನೆಗೆ ಸಂಪೂರ್ಣವಾದ ಬೆಂಬಲವನ್ನು ಕೊಡುತ್ತದೆ. ಇದು ಎಲ್ಲರಿಗೂ ಬೇಕಾದ ಯೋಜನೆಯಾಗಿದೆ ಎಂದು ತಿಳಿಸಿದರು.

ಕುಡಿಯುವ ನೀರಾಗಾಗಿ ಪದೇ ಪದೇ ಕಚ್ಚಾಡುತ್ತಿದ್ದೇವೆ. 67 ಟಿಎಂಸಿ ನೀರು ಸಂಗ್ರಹಿಸುವ ಯೋಜನೆಯ ಪ್ರಯತ್ನಕ್ಕಾಗಿ ಕಾಂಗ್ರೆಸ್‌ ನಾಯಕರನ್ನು ಅಭಿನಂದಿಸುವೆ. ಈ ಯೋಜನೆ ಕಾರ್ಯಗತವಾಗುವವರೆಗೂ ಬಿಡಬಾರದು. ಈ ಛಲ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ ಹಾಗೂ ಕಾಂಗ್ರೆಸ್ ಪಕ್ಷದ ಎಲ್ಲ ಕಾರ್ಯಕರ್ತರಲ್ಲಿ ಇದೆ ಎಂದು ಹೇಳಿದರು.

ಬೆಂಗಳೂರಿನಲ್ಲಿ ನಾಲ್ಕೈದು ದಿನ ಪಾದಯಾತ್ರೆ ನಡೆಯಲಿದೆ. ಆರೋಗ್ಯ ಕಾಪಾಡಿಕೊಳ್ಳಿ. ಕೋವಿಡ್ ಸೂಚನೆಯನ್ನು ಪಾಲನೆ ಮಾಡಿರಿ. ನಮ್ಮ ವಿರುದ್ಧ ಏನಾದರೂ ಹೇಳಿಕೊಳ್ಳುವಂತಹದ್ದು ಆಗಬಾರದು. ಮಾಸ್ಕ್‌ ಧರಿಸಬೇಕು. ದೈಹಿಕ ಅಂತ ಕಾಪಾಡಿಕೊಂಡು ಸಾಗಬೇಕು. ಹೋರಾಟದ ಕ್ರೆಡಿಟ್‌ ಕಾಂಗ್ರೆಸ್‌ ನಾಯಕರಿಗೆ ಹೋಗುತ್ತದೆ ಎಂದು ಭಾವಿಸಿ ಈ ಹೋರಾಟವನ್ನು ವಿಫಲ ಮಾಡಲು ಯತ್ನಿಸುತ್ತಿದೆ. ಆದರೆ ಈ ಹೋರಾಟವನ್ನು ಯಶಸ್ವಿಗೊಳಿಸಬೇಕು.

ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಮಾತನಾಡಿ, “ನಾಲ್ಕೈದು ವರ್ಷಗಳಲ್ಲಿ 260 ಟಿಎಂಸಿ ನೀರು ಹೆಚ್ಚುವರಿಯಾಗಿ ಸಮುದ್ರಕ್ಕೆ ಹೋಗಿದೆ. ಮಳೆಗಾಲದಲ್ಲಿ ಹೆಚ್ಚು ನೀರನ್ನು ನಾವು ಶೇಖರಣೆ ಮಾಡಿಕೊಳ್ಳುತ್ತೇವೆ. ಕುಡಿಯಲು ಬೆಂಗಳೂರಿಗೆ ನೀಡುತ್ತೇವೆ. ತಮಿಳುನಾಡಿನಲ್ಲಿ ನೀರಿಲ್ಲದಿದ್ದಾಗ ಅವರಿಗೂ ನೀಡುತ್ತೇವೆ. ಎರಡು ರಾಜ್ಯಕ್ಕೂ ಈ ಯೋಜನೆ ಸೂಕ್ತವಾಗಿದೆ” ಎಂದು ವಿವರಿಸಿದರು.

ಈ ಯೋಜನೆಯ ಕುರಿತು ತರಕಾರು ತೆಗೆಯಲು ಯಾವುದೇ ದಾಖಲಾತಿ, ಆಧಾರಗಳಿಲ್ಲ. ತಮಿಳುನಾಡಿದವರು ಕ್ಯಾತೆ ತೆಗೆದಯುವುದು ಸರಿ, ಇವರು (ಬಿಜೆಪಿಯವರು) ಯಾಕೆ ಅವರ ಜೊತೆ ಸೇರಿಕೊಂಡಿದ್ದಾರೆ. ಅಣ್ಣಾ ಮಲೈ (ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ) ಕರ್ನಾಟಕದಲ್ಲಿ ಇದ್ದ ಅಧಿಕಾರಿ. ಅವರಿಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಬೆಂಬಲ ನೀಡುವುದು ಏನನ್ನು ಸೂಚಿಸುತ್ತದೆ. ನಿಮ್ಮ ಶಕ್ತಿಯನ್ನು ವಿಸ್ತರಿಸಲು ಅಲ್ಲಿಗೆ ಸಪೋರ್ಟ್ ಮಾಡುತ್ತೀರಿ. ಈ ಯೋಜನೆ ಮಾಡಬಾರದು ಎಂಬುದು ಬಿಜೆಪಿಯ ಉದ್ದೇಶವಾಗಿದೆ. ಇದು ಕನ್ನಡ ನಾಡಿಗೆ ಮಾಡುವ ದ್ರೋಹ ಅಲ್ಲವಾ? ಅದಕ್ಕಾಗಿ ಈ ಪಾದಯಾತ್ರೆ ಮಾಡಬಾರದಾ? ಎಂದು ಪ್ರಶ್ನಿಸಿದರು.

“ಎಲ್ಲರೂ ಕಡ್ಡಾಯವಾಗಿ ಮಾಸ್ಕ್‌ ಹಾಕಿಕೊಳ್ಳಿ, ಗ್ಲೌಸ್ ಹಾಕಿಕೊಳ್ಳಿ. ಸ್ಯಾನಿಟೈಸ್ ಮಾಡಿಕೊಳ್ಳಿ. ಮಾಸ್ಕ್‌ ಹಾಕಿಕೊಳ್ಳದವರನ್ನು ವಾಪಸ್‌ ಕಳಿಸುತ್ತೇವೆ. ಸರ್ಕಾರದ ನಿಯಮಗಳಿಗೆ ಗೌರವ ಕೊಡಬೇಕು. ಆ ಜವಾಬ್ದಾರಿಯನ್ನು ನಿರ್ವಹಿಸಿ ಮುನ್ನಡೆಯಬೇಕು” ಎಂದು ಸೂಚಿಸಿದರು.

ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್‌ ಅವರು “ಕಾವೇರಿ ಹೋರಾಟಕ್ಕೆ ಜಯವಾಗಲಿ”, “ಭಾರತ್‌ ಮಾತಾಕೀ ಜೈ” ಎಂದು ಮಾತು ಆರಂಭಿಸಿದರು. “ಇದೊಂದು ಐತಿಹಾಸಿಕ ಕಾರ್ಯಕ್ರಮ. ಮನುಷ್ಯ ಎಷ್ಟು ದಿನ ಇರುತ್ತಾನೋ ಹೇಳಲು ಆಗಲ್ಲ. ಜನನ ಉಚಿತ, ಮರಣ ಖಚಿತ. ಈ ಹುಟ್ಟು ಸಾವಿನ ಮಧ್ಯೆದಲ್ಲಿ ನಾವು ಏನು ಮಾಡುತ್ತೇವೆ ಎಂಬುದು ಮುಖ್ಯ” ಎಂದರು.

“ನಮ್ಮ ಕಾಂಗ್ರೆಸ್ ನಾಯಕರಲ್ಲಿ ಹೋರಾಟ ರಕ್ತಗತವಾಗಿದೆ. ಈ ದೇಶದ ಏಕತೆ, ಸಮಗ್ರತೆಗಾಗಿ ಕಾಂಗ್ರೆಸ್ ಹೋರಾಡಿದೆ. ಕಾಂಗ್ರೆಸ್‌ ನಾಯಕರು ದೇಶಕ್ಕಾಗಿ ಬಲಿದಾನ ಮಾಡಿದ್ದಾರೆ. ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ. ಕಾಂಗ್ರೆಸ್‌ ಇತಿಹಾಸವೇ ದೇಶದ ಇತಿಹಾಸ. ಈ ಹೋರಾಟ ಅಧಿಕಾರಕ್ಕಾಗಿ ಅಲ್ಲ. ಬಡಜನರ ಅಭಿವೃದ್ಧಿಗಾಗಿ” ಎಂದು ತಿಳಿಸಿದರು.

ಈ ಹೋರಾಟಕ್ಕೆ ತೊಂದರೆ ಮಾಡಬೇಕೆಂದು ತೊಂದರೆ ಮಾಡುತ್ತಿದ್ದಾರೆ. ಅನೇಕ ರೀತಿಯಲ್ಲಿ ಟೀಕೆ-ಟಿಪ್ಪಣಿಯನ್ನು ನಮ್ಮ ನಡಿಗೆಗೆ ಮಾಡುತ್ತಿದ್ದಾರೆ. ಮುಖ್ಯಮಂತ್ರಿಯವರೇ ನೀವು ರೈತರ ಮಕ್ಕಳು. ಈ ರಾಜ್ಯವನ್ನು ಪ್ರತಿನಿಧಿಸುತ್ತಿರಿ. ಆದರೆ ಹೋರಾಟವನ್ನು ಮುಗಿಸಬೇಕೆಂದು ನಿಷೇದಾಜ್ಞೆ ಜಾರಿ ಮಾಡಿದ್ದೀರಲ್ಲ, ಇಲ್ಲಿ ಭಾಗವಹಿಸಿರುವ ಧರ್ಮ ಪೀಠದ ಪ್ರತಿನಿಧಿಗಳನ್ನು, ಸಿದ್ದರಾಮಯ್ಯನವರನ್ನು, ಖರ್ಗೆಯವರನ್ನು, ನೂರು ಜನ ಶಾಸಕರನ್ನು ಬಂಧಿಸಿ ನೋಡೋಣ ಎಂದು ಸವಾಲು ಹಾಕಿದರು.

ಇಲ್ಲಿ ಹಾರಾಡುತ್ತಿರುವ ಭಾರತದ ಧ್ವಜ, ಕರ್ನಾಟಕದ ಧ್ವಜ, ಕಾಂಗ್ರೆಸ್‌ ಧ್ವಜ, ಈ ಕಾವೇರಿ ನದಿಯ ಮೇಕೆದಾಟಿನ ಹೋರಾಟ ಧ್ವಜವನ್ನು ಮುಟ್ಟಲು ನಿಮ್ಮಿಂದ ಸಾಧ್ಯವಿಲ್ಲ. ಈ ನಡಿಗೆ ನಮ್ಮ ಪಕ್ಷಕ್ಕಲ್ಲ. ನೀರಿಗಾಗಿ. ಎರಡೂವರೆ ಕೋಟಿ ಜನರ ಬದುಕಿಗಾಗಿ ಎಂದು ಸ್ಪಷ್ಟಪಡಿಸಿದರು.

ಹೋರಾಟಕ್ಕೆ ಬೆಂಬಲ ಕೊಡಬೇಡಿ ಎಂದು ನಿಮಗೆ ಕರೆ ಮಾಡಿ ಯಾರಾದರೂ ಹೇಳಬಹುದು. ಹರಿಯೋ ನೀರನ್ನು, ಬೀಸೋ ಗಾಳಿಯನ್ನು, ಉರಿಯೋ ಸೂರ್ಯನನ್ನು ನಿಲ್ಲಿಸಲು ಸಾಧ್ಯವೇ? ಉರಿಯೋ ಸೂರ್ಯದ ಮಕ್ಕಳು ವೇದಿಕೆ ಮೇಲೆ ಕೂತಿದ್ದಾರೆ ಎಂದು ಗುಡುಗಿದರು.

ಸಾಧುಕೋಕಿಲ ಅವರ ತಂಡವು ಮೇಕೆದಾಟು ಕಾವೇರಿ ಗೀತೆಯನ್ನು ಹಾಡಿತು. “ಹರಿಯುತಿಹಳು ನಮಗಾಗಿ. ಹೆಜ್ಜೆ ಹಾಕುತ್ತೇವೆ ನಾವು, ಹೆಜ್ಜೆ ಹಾಕುತ್ತೇವೆ ನಾವು ಹೆಜ್ಜೆ. ಕಾವೇರಿಗಾಗಿ ಹೆಜ್ಜೆ. ನಮ್ಮ ನೀರಿಗಾಗಿ ಹೆಜ್ಜೆ. ನಾಡಿಗಾಗಿ ಹೆಜ್ಜೆ. ನಾಡ ಜನತೆಗಾಗಿ ಹೆಜ್ಜೆ. ಹೆಜ್ಜೆ ಹಾಕುತ್ತೇವೆ ನಾವು ಹೆಜ್ಜೆ. ಕಾವೇರಿ ತಾಯಿಗಾಗಿ ಹೆಜ್ಜೆ” ಎಂದು ಸಾಧು ಕೋಕಿಲ ತಂಡ ಹಾಡಿತು.

ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಮಾಧ್ಯಮಗಳ ಜೊತೆ ಮಾತನಾಡಿದ ಕಲಾವಿದ ಸಾಧು ಕೋಕಿಲ, “ನಾವು ಕಲಾವಿದರು. ಎಲ್ಲ ಕಡೆಗೂ ಸಲ್ಲುತ್ತಾರೆ. ಇದು ಪಕ್ಷದ ಕೆಲಸವಲ್ಲ. ನಮ್ಮ ಕೆಲಸ. ಮುಂದಿನ ಪೀಳಿಗೆಯ ಕೆಲಸ. ಇದಕ್ಕೆ ನಮ್ಮ ಪ್ರೋತ್ಸಾಹ ಇರಬೇಕು. ನಮ್ಮ ನೀರು ನಮ್ಮ ಹಕ್ಕು. ಈ ಕಾರ್ಯಕ್ರಮ ಮುಗಿಯುದಿಲ್ಲ. ಅಣೆಕಟ್ಟು ಕಟ್ಟುವವರೆಗೂ ಕಾರ್ಯಕ್ರಮವನ್ನು ನಡೆಸಲೇಬೇಕು” ಎಂದರು.

ಕಾಂಗ್ರೆಸ್ ನಾಯಕಿ ಜಯಮಾಲ ಮಾತನಾಡಿ, “ನಿದ್ದೆ ಬಂದಂತೆ ನಟಿಸುತ್ತಿರುವವರನ್ನು ಎಬ್ಬಿಸಲು ಸಾಧ್ಯವಿಲ್ಲ. ಕೋವಿಡ್ ನಿಯಮಗಳನ್ನು ಪಾಲಿಸಿಯೇ ಪಾದಯಾತ್ರೆ ಮಾಡಿದ್ದೇವೆ” ಎಂದರು. ಕರ್ನಾಟಕ ಚಲನಚಿತ್ರ ಮಂಡಳಿಯ ಮಾಜಿ ಅಧ್ಯಕ್ಷರಾದ ಸಾ.ರಾ.ಗೋವಿಂದ್, ನಟ ದುನಿಯಾ ವಿಜಯ್‌ ಭಾಗಿಯಾಗಿ ಚಿತ್ರರಂಗದ ಪರ ಬೆಂಬಲ ಸೂಚಿಸಿದರು.

ವೇದಿಕೆ ಕಾರ್ಯಕ್ರಮದ ನಿರೂಪಣೆಯನ್ನು ಕಾಂಗ್ರೆಸ್ ನಾಯಕ ಆರ್‌.ಧ್ರುವನಾರಾಯಣ ಮಾಡಿದರು. ಸ್ವಾಗತ ಹಾಗೂ ಪ್ರಸ್ತಾವಿಕ ಭಾಷಣವನ್ನು ಡಿ.ಕೆ.ಸುರೇಶ್‌ ಮಾಡಿದರು. ಕೆಪಿಸಿಸಿ ಮಾಜಿ ಅಧ್ಯಕ್ಷರಾದ, ಆರ್‌.ವಿ.ದೇಶಪಾಂಡೆ, ಡಾ.ಜಿ.ಪರಮೇಶ್ವರ್‌‌, ಮಾಜಿ ಮುಖ್ಯಮಂತ್ರಿ ವೀರಪ್ಪ ಮೋಯ್ಲಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಎಚ್‌.ಕೆ.ಪಾಟೀಲ್‌, ಕೇಂದ್ರದ ಮಾಜಿ ಸಚಿವರಾದ ಕೆ.ಎಚ್‌.ಮುನಿಯಪ್ಪ, ಯುವ ಕಾಂಗ್ರೆಸ್ ಅಧ್ಯಕ್ಷರಾದ ಬಿ.ವಿ.ಶ್ರೀನಿವಾಸ್‌, ಕಾಂಗ್ರೆಸ್ ನಾಯಕರಾದ ರಾಮಲಿಂಗರೆಡ್ಡಿ, ಸಲೀಂ ಮಹಮದ್, ಈಶ್ವರ್‌ ಖಂಡ್ರೆ, ಹರಿಪ್ರಸಾದ್‌, ಮಾಜಿ ಸಚಿವರಾದ ಎಂ.ಬಿ.ಪಾಟೀಲ್‌, ಕೆ.ಜೆ.ಜಾರ್ಜ್, ಮೋಟಮ್ಮ, ಟಿ.ಬಿ.ಜಯಚಂದ್ರ, ಎಚ್.ಎಂ.ರೇವಣ್ಣ, ರಮೇಶ್‌ಕುಮಾರ್‌, ಲಕ್ಷ್ಮಿ ಹೆಬ್ಬಾಳ್ಕರ್‌ ಸೇರಿದಂತೆ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಹಾಜರಿದ್ದರು.


ಇದನ್ನೂ ಓದಿರಿ: ಚಂಡೀಗಢ: ಹೆಚ್ಚು ಸ್ಥಾನ ಗೆದ್ದರೂ ಎಎಪಿಗೆ ಒಲಿಯದ ಮೇಯರ್‌ ಸ್ಥಾನ; ಬಿಜೆಪಿ ಅಭ್ಯರ್ಥಿ ಆಯ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...