Homeಕರ್ನಾಟಕನಮ್ಮ ನೀರು ನಮ್ಮ ಹಕ್ಕು ಘೋಷಣೆಯೊಂದಿಗೆ ಮೇಕೆದಾಟು ಪಾದಯಾತ್ರೆ ಆರಂಭಿಸಿದ ಕಾಂಗ್ರೆಸ್

ನಮ್ಮ ನೀರು ನಮ್ಮ ಹಕ್ಕು ಘೋಷಣೆಯೊಂದಿಗೆ ಮೇಕೆದಾಟು ಪಾದಯಾತ್ರೆ ಆರಂಭಿಸಿದ ಕಾಂಗ್ರೆಸ್

ಹರಿಯೋ ನೀರನ್ನು, ಬೀಸೋ ಗಾಳಿಯನ್ನು, ಉರಿಯೋ ಸೂರ್ಯನನ್ನು ನಿಲ್ಲಿಸಲು ಸಾಧ್ಯವೇ? ಉರಿಯೋ ಸೂರ್ಯನ ಮಕ್ಕಳು ನಾವು. ಹೋರಾಟವನ್ನು ಯಾರಿಂದಲೂ ನಿಲ್ಲಿಸಲು ಸಾಧ್ಯವಿಲ್ಲ ಎಂದು ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

- Advertisement -
- Advertisement -

“ನಮ್ಮ ನೀರು ನಮ್ಮ ಹಕ್ಕು” ಘೋಷಣೆಯೊಂದಿಗೆ ಪ್ರದೇಶ ಕಾಂಗ್ರೆಸ್‌ ಸಮಿತಿ ನೇತೃತ್ವದಲ್ಲಿ ಮೇಕೆದಾಟು ಪಾದಯಾತ್ರೆಗೆ ಭಾನುವಾರ ಚಾಲನೆ ನೀಡಿತು. ಕನಕಪುರ ತಾಲ್ಲೂಕಿನ ‘ಸಂಗಮ’ದಿಂದ ಬೆಂಗಳೂರಿನವರೆಗೆ ನಡೆಸಲು ಉದ್ದೇಶಿಸಿರುವ ಪಾದಯಾತ್ರೆ ಅಧಿಕೃತವಾಗಿ ಚಾಲನೆ ಪಡೆಯಿತು.

ಕಾವೇರಿ ನದಿಗೆ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್‌ ಅವರು ಪೂಜೆ ಸಲ್ಲಿಸಿದರು. ಕಾವೇರಿ ನದಿಯಲ್ಲಿ ಮಿಂದರು. ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆಯವರು ಪಾದಯಾತ್ರೆಯನ್ನು ಉದ್ಘಾಟಿಸಿದರು.

ಮಲ್ಲಿಕಾರ್ಜುನ ಖರ್ಗೆಯವರು ಮಾತನಾಡಿ, “ಈ ಯೋಜನೆಯು ಬೆಂಗಳೂರಿಗೆ ಕುಡಿಯುವ ನೀರು ಕೊಡುತ್ತದೆ. ಹಲವು ಹಳ್ಳಿಗಳಿಗೆ ನೀರು ಕೊಡುತ್ತದೆ. ನಾಲ್ಕು ನೂರು ಮೆಗಾವ್ಯಾಟ್ ವಿದ್ಯುತ್‌ ಶಕ್ತಿ ಉತ್ಪಾದಿಸಬಹುದು. ಇದೊಂದು ದೊಡ್ಡ ಕೆಲಸ. ಈ ಯೋಜನೆಯ ವೆಚ್ಚ 9,000 ಕೋಟಿ ರೂ.ಗಳು. ಇಂತಹದೊಂದು ದೊಡ್ಡ ಕೆಲಸವನ್ನು ಕಾಂಗ್ರೆಸ್‌ ಸರ್ಕಾರ ಪ್ರಾರಂಭಿಸಿತ್ತು” ಎಂದರು.

ಎಂ.ಬಿ.ಪಾಟೀಲ ಅವರು ನೀರಾವರಿ ಸಚಿವರಾಗಿದ್ದಾಗ ಈ ಯೋಜನೆ ರೂಪ ಪಡೆಯಿತು. ಡಿ.ಕೆ.ಶಿವಕುಮಾರ್‌ ಅವರು ನೀರಾವರಿ ಸಚಿವರಾಗಿದ್ದಾಗ ಮತ್ತಷ್ಟು ಸ್ಪಷ್ಟತೆ ಪಡೆಯಿತು. ಕರ್ನಾಟಕ ರಾಜ್ಯದ ಎಲ್ಲ ಜನತೆಯು ಈ ಯೋಜನೆಗೆ ಸಂಪೂರ್ಣವಾದ ಬೆಂಬಲವನ್ನು ಕೊಡುತ್ತದೆ. ಇದು ಎಲ್ಲರಿಗೂ ಬೇಕಾದ ಯೋಜನೆಯಾಗಿದೆ ಎಂದು ತಿಳಿಸಿದರು.

ಕುಡಿಯುವ ನೀರಾಗಾಗಿ ಪದೇ ಪದೇ ಕಚ್ಚಾಡುತ್ತಿದ್ದೇವೆ. 67 ಟಿಎಂಸಿ ನೀರು ಸಂಗ್ರಹಿಸುವ ಯೋಜನೆಯ ಪ್ರಯತ್ನಕ್ಕಾಗಿ ಕಾಂಗ್ರೆಸ್‌ ನಾಯಕರನ್ನು ಅಭಿನಂದಿಸುವೆ. ಈ ಯೋಜನೆ ಕಾರ್ಯಗತವಾಗುವವರೆಗೂ ಬಿಡಬಾರದು. ಈ ಛಲ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ ಹಾಗೂ ಕಾಂಗ್ರೆಸ್ ಪಕ್ಷದ ಎಲ್ಲ ಕಾರ್ಯಕರ್ತರಲ್ಲಿ ಇದೆ ಎಂದು ಹೇಳಿದರು.

ಬೆಂಗಳೂರಿನಲ್ಲಿ ನಾಲ್ಕೈದು ದಿನ ಪಾದಯಾತ್ರೆ ನಡೆಯಲಿದೆ. ಆರೋಗ್ಯ ಕಾಪಾಡಿಕೊಳ್ಳಿ. ಕೋವಿಡ್ ಸೂಚನೆಯನ್ನು ಪಾಲನೆ ಮಾಡಿರಿ. ನಮ್ಮ ವಿರುದ್ಧ ಏನಾದರೂ ಹೇಳಿಕೊಳ್ಳುವಂತಹದ್ದು ಆಗಬಾರದು. ಮಾಸ್ಕ್‌ ಧರಿಸಬೇಕು. ದೈಹಿಕ ಅಂತ ಕಾಪಾಡಿಕೊಂಡು ಸಾಗಬೇಕು. ಹೋರಾಟದ ಕ್ರೆಡಿಟ್‌ ಕಾಂಗ್ರೆಸ್‌ ನಾಯಕರಿಗೆ ಹೋಗುತ್ತದೆ ಎಂದು ಭಾವಿಸಿ ಈ ಹೋರಾಟವನ್ನು ವಿಫಲ ಮಾಡಲು ಯತ್ನಿಸುತ್ತಿದೆ. ಆದರೆ ಈ ಹೋರಾಟವನ್ನು ಯಶಸ್ವಿಗೊಳಿಸಬೇಕು.

ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಮಾತನಾಡಿ, “ನಾಲ್ಕೈದು ವರ್ಷಗಳಲ್ಲಿ 260 ಟಿಎಂಸಿ ನೀರು ಹೆಚ್ಚುವರಿಯಾಗಿ ಸಮುದ್ರಕ್ಕೆ ಹೋಗಿದೆ. ಮಳೆಗಾಲದಲ್ಲಿ ಹೆಚ್ಚು ನೀರನ್ನು ನಾವು ಶೇಖರಣೆ ಮಾಡಿಕೊಳ್ಳುತ್ತೇವೆ. ಕುಡಿಯಲು ಬೆಂಗಳೂರಿಗೆ ನೀಡುತ್ತೇವೆ. ತಮಿಳುನಾಡಿನಲ್ಲಿ ನೀರಿಲ್ಲದಿದ್ದಾಗ ಅವರಿಗೂ ನೀಡುತ್ತೇವೆ. ಎರಡು ರಾಜ್ಯಕ್ಕೂ ಈ ಯೋಜನೆ ಸೂಕ್ತವಾಗಿದೆ” ಎಂದು ವಿವರಿಸಿದರು.

ಈ ಯೋಜನೆಯ ಕುರಿತು ತರಕಾರು ತೆಗೆಯಲು ಯಾವುದೇ ದಾಖಲಾತಿ, ಆಧಾರಗಳಿಲ್ಲ. ತಮಿಳುನಾಡಿದವರು ಕ್ಯಾತೆ ತೆಗೆದಯುವುದು ಸರಿ, ಇವರು (ಬಿಜೆಪಿಯವರು) ಯಾಕೆ ಅವರ ಜೊತೆ ಸೇರಿಕೊಂಡಿದ್ದಾರೆ. ಅಣ್ಣಾ ಮಲೈ (ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ) ಕರ್ನಾಟಕದಲ್ಲಿ ಇದ್ದ ಅಧಿಕಾರಿ. ಅವರಿಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಬೆಂಬಲ ನೀಡುವುದು ಏನನ್ನು ಸೂಚಿಸುತ್ತದೆ. ನಿಮ್ಮ ಶಕ್ತಿಯನ್ನು ವಿಸ್ತರಿಸಲು ಅಲ್ಲಿಗೆ ಸಪೋರ್ಟ್ ಮಾಡುತ್ತೀರಿ. ಈ ಯೋಜನೆ ಮಾಡಬಾರದು ಎಂಬುದು ಬಿಜೆಪಿಯ ಉದ್ದೇಶವಾಗಿದೆ. ಇದು ಕನ್ನಡ ನಾಡಿಗೆ ಮಾಡುವ ದ್ರೋಹ ಅಲ್ಲವಾ? ಅದಕ್ಕಾಗಿ ಈ ಪಾದಯಾತ್ರೆ ಮಾಡಬಾರದಾ? ಎಂದು ಪ್ರಶ್ನಿಸಿದರು.

“ಎಲ್ಲರೂ ಕಡ್ಡಾಯವಾಗಿ ಮಾಸ್ಕ್‌ ಹಾಕಿಕೊಳ್ಳಿ, ಗ್ಲೌಸ್ ಹಾಕಿಕೊಳ್ಳಿ. ಸ್ಯಾನಿಟೈಸ್ ಮಾಡಿಕೊಳ್ಳಿ. ಮಾಸ್ಕ್‌ ಹಾಕಿಕೊಳ್ಳದವರನ್ನು ವಾಪಸ್‌ ಕಳಿಸುತ್ತೇವೆ. ಸರ್ಕಾರದ ನಿಯಮಗಳಿಗೆ ಗೌರವ ಕೊಡಬೇಕು. ಆ ಜವಾಬ್ದಾರಿಯನ್ನು ನಿರ್ವಹಿಸಿ ಮುನ್ನಡೆಯಬೇಕು” ಎಂದು ಸೂಚಿಸಿದರು.

ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್‌ ಅವರು “ಕಾವೇರಿ ಹೋರಾಟಕ್ಕೆ ಜಯವಾಗಲಿ”, “ಭಾರತ್‌ ಮಾತಾಕೀ ಜೈ” ಎಂದು ಮಾತು ಆರಂಭಿಸಿದರು. “ಇದೊಂದು ಐತಿಹಾಸಿಕ ಕಾರ್ಯಕ್ರಮ. ಮನುಷ್ಯ ಎಷ್ಟು ದಿನ ಇರುತ್ತಾನೋ ಹೇಳಲು ಆಗಲ್ಲ. ಜನನ ಉಚಿತ, ಮರಣ ಖಚಿತ. ಈ ಹುಟ್ಟು ಸಾವಿನ ಮಧ್ಯೆದಲ್ಲಿ ನಾವು ಏನು ಮಾಡುತ್ತೇವೆ ಎಂಬುದು ಮುಖ್ಯ” ಎಂದರು.

“ನಮ್ಮ ಕಾಂಗ್ರೆಸ್ ನಾಯಕರಲ್ಲಿ ಹೋರಾಟ ರಕ್ತಗತವಾಗಿದೆ. ಈ ದೇಶದ ಏಕತೆ, ಸಮಗ್ರತೆಗಾಗಿ ಕಾಂಗ್ರೆಸ್ ಹೋರಾಡಿದೆ. ಕಾಂಗ್ರೆಸ್‌ ನಾಯಕರು ದೇಶಕ್ಕಾಗಿ ಬಲಿದಾನ ಮಾಡಿದ್ದಾರೆ. ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ. ಕಾಂಗ್ರೆಸ್‌ ಇತಿಹಾಸವೇ ದೇಶದ ಇತಿಹಾಸ. ಈ ಹೋರಾಟ ಅಧಿಕಾರಕ್ಕಾಗಿ ಅಲ್ಲ. ಬಡಜನರ ಅಭಿವೃದ್ಧಿಗಾಗಿ” ಎಂದು ತಿಳಿಸಿದರು.

ಈ ಹೋರಾಟಕ್ಕೆ ತೊಂದರೆ ಮಾಡಬೇಕೆಂದು ತೊಂದರೆ ಮಾಡುತ್ತಿದ್ದಾರೆ. ಅನೇಕ ರೀತಿಯಲ್ಲಿ ಟೀಕೆ-ಟಿಪ್ಪಣಿಯನ್ನು ನಮ್ಮ ನಡಿಗೆಗೆ ಮಾಡುತ್ತಿದ್ದಾರೆ. ಮುಖ್ಯಮಂತ್ರಿಯವರೇ ನೀವು ರೈತರ ಮಕ್ಕಳು. ಈ ರಾಜ್ಯವನ್ನು ಪ್ರತಿನಿಧಿಸುತ್ತಿರಿ. ಆದರೆ ಹೋರಾಟವನ್ನು ಮುಗಿಸಬೇಕೆಂದು ನಿಷೇದಾಜ್ಞೆ ಜಾರಿ ಮಾಡಿದ್ದೀರಲ್ಲ, ಇಲ್ಲಿ ಭಾಗವಹಿಸಿರುವ ಧರ್ಮ ಪೀಠದ ಪ್ರತಿನಿಧಿಗಳನ್ನು, ಸಿದ್ದರಾಮಯ್ಯನವರನ್ನು, ಖರ್ಗೆಯವರನ್ನು, ನೂರು ಜನ ಶಾಸಕರನ್ನು ಬಂಧಿಸಿ ನೋಡೋಣ ಎಂದು ಸವಾಲು ಹಾಕಿದರು.

ಇಲ್ಲಿ ಹಾರಾಡುತ್ತಿರುವ ಭಾರತದ ಧ್ವಜ, ಕರ್ನಾಟಕದ ಧ್ವಜ, ಕಾಂಗ್ರೆಸ್‌ ಧ್ವಜ, ಈ ಕಾವೇರಿ ನದಿಯ ಮೇಕೆದಾಟಿನ ಹೋರಾಟ ಧ್ವಜವನ್ನು ಮುಟ್ಟಲು ನಿಮ್ಮಿಂದ ಸಾಧ್ಯವಿಲ್ಲ. ಈ ನಡಿಗೆ ನಮ್ಮ ಪಕ್ಷಕ್ಕಲ್ಲ. ನೀರಿಗಾಗಿ. ಎರಡೂವರೆ ಕೋಟಿ ಜನರ ಬದುಕಿಗಾಗಿ ಎಂದು ಸ್ಪಷ್ಟಪಡಿಸಿದರು.

ಹೋರಾಟಕ್ಕೆ ಬೆಂಬಲ ಕೊಡಬೇಡಿ ಎಂದು ನಿಮಗೆ ಕರೆ ಮಾಡಿ ಯಾರಾದರೂ ಹೇಳಬಹುದು. ಹರಿಯೋ ನೀರನ್ನು, ಬೀಸೋ ಗಾಳಿಯನ್ನು, ಉರಿಯೋ ಸೂರ್ಯನನ್ನು ನಿಲ್ಲಿಸಲು ಸಾಧ್ಯವೇ? ಉರಿಯೋ ಸೂರ್ಯದ ಮಕ್ಕಳು ವೇದಿಕೆ ಮೇಲೆ ಕೂತಿದ್ದಾರೆ ಎಂದು ಗುಡುಗಿದರು.

ಸಾಧುಕೋಕಿಲ ಅವರ ತಂಡವು ಮೇಕೆದಾಟು ಕಾವೇರಿ ಗೀತೆಯನ್ನು ಹಾಡಿತು. “ಹರಿಯುತಿಹಳು ನಮಗಾಗಿ. ಹೆಜ್ಜೆ ಹಾಕುತ್ತೇವೆ ನಾವು, ಹೆಜ್ಜೆ ಹಾಕುತ್ತೇವೆ ನಾವು ಹೆಜ್ಜೆ. ಕಾವೇರಿಗಾಗಿ ಹೆಜ್ಜೆ. ನಮ್ಮ ನೀರಿಗಾಗಿ ಹೆಜ್ಜೆ. ನಾಡಿಗಾಗಿ ಹೆಜ್ಜೆ. ನಾಡ ಜನತೆಗಾಗಿ ಹೆಜ್ಜೆ. ಹೆಜ್ಜೆ ಹಾಕುತ್ತೇವೆ ನಾವು ಹೆಜ್ಜೆ. ಕಾವೇರಿ ತಾಯಿಗಾಗಿ ಹೆಜ್ಜೆ” ಎಂದು ಸಾಧು ಕೋಕಿಲ ತಂಡ ಹಾಡಿತು.

ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಮಾಧ್ಯಮಗಳ ಜೊತೆ ಮಾತನಾಡಿದ ಕಲಾವಿದ ಸಾಧು ಕೋಕಿಲ, “ನಾವು ಕಲಾವಿದರು. ಎಲ್ಲ ಕಡೆಗೂ ಸಲ್ಲುತ್ತಾರೆ. ಇದು ಪಕ್ಷದ ಕೆಲಸವಲ್ಲ. ನಮ್ಮ ಕೆಲಸ. ಮುಂದಿನ ಪೀಳಿಗೆಯ ಕೆಲಸ. ಇದಕ್ಕೆ ನಮ್ಮ ಪ್ರೋತ್ಸಾಹ ಇರಬೇಕು. ನಮ್ಮ ನೀರು ನಮ್ಮ ಹಕ್ಕು. ಈ ಕಾರ್ಯಕ್ರಮ ಮುಗಿಯುದಿಲ್ಲ. ಅಣೆಕಟ್ಟು ಕಟ್ಟುವವರೆಗೂ ಕಾರ್ಯಕ್ರಮವನ್ನು ನಡೆಸಲೇಬೇಕು” ಎಂದರು.

ಕಾಂಗ್ರೆಸ್ ನಾಯಕಿ ಜಯಮಾಲ ಮಾತನಾಡಿ, “ನಿದ್ದೆ ಬಂದಂತೆ ನಟಿಸುತ್ತಿರುವವರನ್ನು ಎಬ್ಬಿಸಲು ಸಾಧ್ಯವಿಲ್ಲ. ಕೋವಿಡ್ ನಿಯಮಗಳನ್ನು ಪಾಲಿಸಿಯೇ ಪಾದಯಾತ್ರೆ ಮಾಡಿದ್ದೇವೆ” ಎಂದರು. ಕರ್ನಾಟಕ ಚಲನಚಿತ್ರ ಮಂಡಳಿಯ ಮಾಜಿ ಅಧ್ಯಕ್ಷರಾದ ಸಾ.ರಾ.ಗೋವಿಂದ್, ನಟ ದುನಿಯಾ ವಿಜಯ್‌ ಭಾಗಿಯಾಗಿ ಚಿತ್ರರಂಗದ ಪರ ಬೆಂಬಲ ಸೂಚಿಸಿದರು.

ವೇದಿಕೆ ಕಾರ್ಯಕ್ರಮದ ನಿರೂಪಣೆಯನ್ನು ಕಾಂಗ್ರೆಸ್ ನಾಯಕ ಆರ್‌.ಧ್ರುವನಾರಾಯಣ ಮಾಡಿದರು. ಸ್ವಾಗತ ಹಾಗೂ ಪ್ರಸ್ತಾವಿಕ ಭಾಷಣವನ್ನು ಡಿ.ಕೆ.ಸುರೇಶ್‌ ಮಾಡಿದರು. ಕೆಪಿಸಿಸಿ ಮಾಜಿ ಅಧ್ಯಕ್ಷರಾದ, ಆರ್‌.ವಿ.ದೇಶಪಾಂಡೆ, ಡಾ.ಜಿ.ಪರಮೇಶ್ವರ್‌‌, ಮಾಜಿ ಮುಖ್ಯಮಂತ್ರಿ ವೀರಪ್ಪ ಮೋಯ್ಲಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಎಚ್‌.ಕೆ.ಪಾಟೀಲ್‌, ಕೇಂದ್ರದ ಮಾಜಿ ಸಚಿವರಾದ ಕೆ.ಎಚ್‌.ಮುನಿಯಪ್ಪ, ಯುವ ಕಾಂಗ್ರೆಸ್ ಅಧ್ಯಕ್ಷರಾದ ಬಿ.ವಿ.ಶ್ರೀನಿವಾಸ್‌, ಕಾಂಗ್ರೆಸ್ ನಾಯಕರಾದ ರಾಮಲಿಂಗರೆಡ್ಡಿ, ಸಲೀಂ ಮಹಮದ್, ಈಶ್ವರ್‌ ಖಂಡ್ರೆ, ಹರಿಪ್ರಸಾದ್‌, ಮಾಜಿ ಸಚಿವರಾದ ಎಂ.ಬಿ.ಪಾಟೀಲ್‌, ಕೆ.ಜೆ.ಜಾರ್ಜ್, ಮೋಟಮ್ಮ, ಟಿ.ಬಿ.ಜಯಚಂದ್ರ, ಎಚ್.ಎಂ.ರೇವಣ್ಣ, ರಮೇಶ್‌ಕುಮಾರ್‌, ಲಕ್ಷ್ಮಿ ಹೆಬ್ಬಾಳ್ಕರ್‌ ಸೇರಿದಂತೆ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಹಾಜರಿದ್ದರು.


ಇದನ್ನೂ ಓದಿರಿ: ಚಂಡೀಗಢ: ಹೆಚ್ಚು ಸ್ಥಾನ ಗೆದ್ದರೂ ಎಎಪಿಗೆ ಒಲಿಯದ ಮೇಯರ್‌ ಸ್ಥಾನ; ಬಿಜೆಪಿ ಅಭ್ಯರ್ಥಿ ಆಯ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...