Homeಮುಖಪುಟರೈತ ಚಳುವಳಿಯನ್ನು ಕೆಣಕುವ ಸಂಚು ಈಗ ಬಹಿರಂಗವಾಗಿದೆ - ರೈತ ಒಕ್ಕೂಟ

ರೈತ ಚಳುವಳಿಯನ್ನು ಕೆಣಕುವ ಸಂಚು ಈಗ ಬಹಿರಂಗವಾಗಿದೆ – ರೈತ ಒಕ್ಕೂಟ

"ರೈತರ ಚಳವಳಿಯನ್ನು 'ಹಿಂಸಾತ್ಮಕ' ಎಂದು ಹೇಳಲು ಸಾಧ್ಯವಿಲ್ಲ. ಯಾಕೆಂದರೆ ನಮ್ಮೊಂದಿಗೆ ಸಂಬಂಧವಿಲ್ಲದ ಕೆಲವು ಸಮಾಜ ವಿರೋಧಿ ವ್ಯಕ್ತಿ ಮತ್ತು ಸಂಘಟನೆಗಳು ರೈತರ ಹೆಸರಿನಲ್ಲಿ ಹಿಂಸಾಚಾರವನ್ನು ಮಾಡಿವೆ"

- Advertisement -
- Advertisement -

“ಕಳೆದ 7 ತಿಂಗಳ ಶಾಂತಿಯುತ ರೈತ ಚಳವಳಿಯನ್ನು ಕೆಣಕುವ ಸಂಚು ಈಗ ದೇಶದ ಮುಂದೆ ಬಹಿರಂಗವಾಗಿದೆ. ಎಸ್ ಸತ್ನಾಮ್ ಸಿಂಗ್ ಪನ್ನು ನೇತೃತ್ವದ ದೀಪ್ ಸಿಧು ಮತ್ತು ಕಿಸಾನ್ ಮಜ್ದೂರ್ ಸಂಘರ್ಷ ಸಮಿತಿಯಂತಹ ಕೆಲವು ವ್ಯಕ್ತಿಗಳು ಮತ್ತು ಸಂಘಟನೆಗಳ ಜೊತೆಗೆ ಶಾಮೀಲಾಗಿ ಕೇಂದ್ರ ಸರ್ಕಾರವು ಈ ನ್ಯಾಯಯುತ ರೈತ ಹೋರಾಟವನ್ನು ಹಿಂಸಾತ್ಮಕಗೊಳಿಸಿತು. ಕೆಂಪು ಕೋಟೆ ಮತ್ತು ದೆಹಲಿಯ ಇತರ ಭಾಗಗಳಲ್ಲಿ ನಡೆದ ಹಿಂಸಾತ್ಮಕ ಪ್ರತಿಭಟನೆಗಳಿಗೂ ನಮಗೂ ಸಂಬಂಧವಿಲ್ಲ ಎಂದು ನಾವು ಮತ್ತೆ ಸ್ಪಷ್ಟಪಡಿಸುತ್ತಿದ್ದೇವೆ” ಎಂದು ರೈತ ಸಂಘಟನೆಗಳು ತಮ್ಮ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿವೆ.

“ದೇಶದ ಮುಂದೆ ರೈತ ಹೋರಾಟವನ್ನು ಬೇರೆಯದೇ ರೀತಿಯಲ್ಲಿ ತೋರಿಸಲು ಸರ್ಕಾರ ಪ್ರಯತ್ನ ಮಾಡಿತು. ವಾಸ್ತವವಾಗಿ ರೈತರ ಮೆರವಣಿಗೆ ಶಾಂತಿಯುತವಾಗಿತ್ತು ಮತ್ತು ಸರಿಯಾದ ಮಾರ್ಗದಲ್ಲಿತ್ತು. ರಾಷ್ಟ್ರೀಯ ಚಿನ್ಹೆಗಳಿಗಾದ ಅವಮಾನವನ್ನು ರೈತರಾದ ನಾವು ಬಲವಾಗಿ ಖಂಡಿಸುತ್ತೇವೆ. ಹಾಗೆಂದು ರೈತರ ಚಳವಳಿಯನ್ನು ‘ಹಿಂಸಾತ್ಮಕ’ ಎಂದು ಹೇಳಲು ಸಾಧ್ಯವಿಲ್ಲ. ಯಾಕೆಂದರೆ ನಮ್ಮೊಂದಿಗೆ ಸಂಬಂಧವಿಲ್ಲದ ಕೆಲವು ಸಮಾಜ ವಿರೋಧಿ ವ್ಯಕ್ತಿ ಮತ್ತು ಸಂಘಟನೆಗಳು ರೈತರ ಹೆಸರಿನಲ್ಲಿ ಹಿಂಸಾಚಾರವನ್ನು ಮಾಡಿವೆ. ನಮ್ಮ ನೇತೃತ್ವದಲ್ಲಿ ಹೊರಟಿದ್ದ ಎಲ್ಲಾ ಗಡಿಗಳಲ್ಲಿನ ರೈತರು ತಮ್ಮ ಮೆರವಣಿಗೆಗಳನ್ನು ನಿನ್ನೆ ಶಾಂತಿಯುತ ರೀತಿಯಲ್ಲಿ ಪೂರ್ಣಗೊಳಿಸಿ ತಮ್ಮ ಮೂಲ ಸ್ಥಳವನ್ನು ಯಾವುದೇ ಅಡ್ಡಿ ಆತಂಕಗಳಿಲ್ಲದೆ, ಹಿಂಸೆಯಿಲ್ಲದೆ ತಲುಪಿದ್ದಾರೆ” ಎಂದು ವಿವರಿಸಲಾಗಿದೆ.

ಇದನ್ನೂ ಓದಿ: ಸರ್ಕಾರ ಮತ್ತು ಕಿಸಾನ್ ಮಜ್ದೂರ್ ಸಂಘರ್ಷ್ ಸಮಿತಿ ಸೇರಿ ಪಿತೂರಿ ನಡೆಸಿವೆ: ರೈತ ಒಕ್ಕೂಟ ಆರೋಪ

“ರೈತ ಪ್ರತಿಭಟನಾಕಾರರ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ನಾವು ಬಲವಾಗಿ ಖಂಡಿಸುತ್ತೇವೆ. ಪೊಲೀಸ್ ಮತ್ತು ಇತರ ಏಜೆನ್ಸಿಗಳನ್ನು ಬಳಸಿಕೊಂಡು ಈ ರೈತ ಹೋರಾಟವನ್ನು ಮಣಿಸಲು ಕೇಂದ್ರ ಸರ್ಕಾರ ಮಾಡಿದ ಪ್ರಯತ್ನಗಳು ಈಗಾಗಲೇ ಬಹಿರಂಗಗೊಂಡಿದೆ. ಮತ್ತು ಇನ್ನಷ್ಟೂ ಬಟಾಬಯಲಾಗುತ್ತದೆ. ಹಿಂಸಾಚಾರಕ್ಕೂ ನಿನ್ನೆ ಬಂಧಿಸಲ್ಪಟ್ಟ ಹಲವು ರೈತರಿಗೂ ಸಂಬಂಧವೇ ಇಲ್ಲ. ಹಾಗಾಗಿ ಬಂಧಿಸಲ್ಪಟ್ಟಿರುವ ಎಲ್ಲ ನಿಜವಾದ ರೈತ ಪ್ರತಿಭಟನಾಕಾರರು ಮತ್ತು ಬೆಂಬಲಿಗರನ್ನು ತಕ್ಷಣ ಬಿಡುಗಡೆ ಮಾಡಬೇಕೆಂದು ನಾವು ಒತ್ತಾಯಿಸುತ್ತೇವೆ. ರೈತರ ಗಣರಾಜ್ಯೋತ್ಸವ ಪೆರೇಡ್‌ನಲ್ಲಿ ಭಾಗಿಯಾಗಿದ್ದ ಟ್ರಾಕ್ಟರುಗಳು ಮತ್ತು ಇತರ ವಾಹನಗಳನ್ನು ಹಾನಿ ಮಾಡಲು ಪೊಲೀಸರು ಪ್ರಯತ್ನಿಸಿರುವುದನ್ನು ಕೂಡಾ ನಾವು ಖಂಡಿಸುತ್ತೇವೆ” ಎಂದು ಹೇಳಿದ್ದಾರೆ.

ರಾಷ್ಟ್ರೀಯ ಚಿಹ್ನೆಗಳನ್ನು ಕೀಳಾಗಿ ಮತ್ತು ಅಪವಿತ್ರಗೊಳಿಸಿದವರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕೆಂದು ಸಂಯುಕ್ತ ಕಿಸಾನ್ ಮೋರ್ಚಾ ಒತ್ತಾಯಿಸುತ್ತದೆ. ರೈತರು ಈ ದೇಶದ ದೊಡ್ಡ ರಾಷ್ಟ್ರೀಯವಾದಿಗಳು. ರೈತರೇ ಈ ರಾಷ್ಟ್ರದ ನಿಜವಾದ ರಕ್ಷಕರು. ರೈತರು ಮತ್ತು ರಾಷ್ಟ್ರೀಯವಾದ ಬೇರೆ ಬೇರೆ ಅಲ್ಲ ಎಂಬುದನ್ನು ಮತ್ತೆ ಮತ್ತೆ ಹೇಳಲು ಬಯಸುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.

ಆದರೂ ನಿನ್ನೆ ನಡೆದ ಕೆಲವು ವಿಷಾದನೀಯ ಘಟನೆಗಳಿಗೆ ಪ್ರತಿಭಟನೆಯ ನೇತೃತ್ವ ವಹಿಸಿಕೊಂಡ ಸಂಯುಕ್ತ ಕಿಸಾನ್ ಮೋರ್ಚ ನೈತಿಕ ಹೊಣೆಗಾರಿಕೆಯನ್ನು ವಹಿಸಿಕೊಳ್ಳುತ್ತದೆ. ತನ್ನದಲ್ಲದ ಹಿಂಸಾಚಾರದ ಹಿನ್ನೆಲೆಯಲ್ಲಿ ಸಂಯುಕ್ತ ಕಿಸಾನ್ ಮೋರ್ಚವು ಫೆಬ್ರವರಿ 1 ರಂದು ನಿಗದಿಯಾಗಿದ್ದ ಸಂಸತ್ ಛಲೋ ಕಾರ್ಯಕ್ರಮವನ್ನು ಮುಂದೂಡಲು ನಿರ್ಧರಿಸಿದೆ. ಬದಲಾಗಿ, ಜನವರಿ 30 ರಂದು, ಗಾಂಧೀಜಿಯವರ ಹುತಾತ್ಮ ದಿನದಂದು, ಶಾಂತಿ ಮತ್ತು ಅಹಿಂಸೆಯನ್ನು ಸಾರಲು ದೇಶಾದ್ಯಂತ ರೈತರು ಒಂದು ದಿನದ ಉಪವಾಸ ಆಚರಿಸಲಿದ್ದೇವೆ ಎಂದು ಹೇಳಿದರು.

“ದೀಪ್ ಸಿದ್ದು ಅವರಂತಹ ಕುತ್ಸಿತ ವ್ಯಕ್ತಿಗಳಿಗೆ ಸಾಮಾಜಿಕ ಬಹಿಷ್ಕಾರ ಹಾಕಬೇಕು” ಎಂದು ಸಂಯುಕ್ತ ಕಿಸಾನ್ ಮೋರ್ಚ್ ಸಾರ್ವಜನಿಕರಿಗೆ ಮನವಿ ಮಾಡಿದೆ.

ಇದನ್ನೂ ಓದಿ: ಕೆಂಪುಕೋಟೆ ಅಹಿತಕರ ಘಟನೆಯ ರೂವಾರಿ – ಯಾರು ಈ ದೀಪ್ ಸಿಧು?

ದೆಹಲಿಯಲ್ಲಿ ಮಾತ್ರವಲ್ಲದೆ ರೈತ ಸಂಘಟನೆಗಳ ರೈತ ಗಣರಾಜ್ಯೋತ್ಸವ ಪೆರೇಡ್ ಅನ್ನು ಅನೇಕ ರಾಜ್ಯಗಳಲ್ಲಿ ನಡೆಸಲಾಯಿತು. ಬಿಹಾರ, ಪಾಟ್ನಾ ಸೇರಿದಂತೆ ದೇಶದ ಅನೇಕ ಸ್ಥಳಗಳಲ್ಲಿ ರೈತ ಗಣರಾಜ್ಯೋತ್ಸವವನ್ನು ರೈತರು ಉತ್ಸಾಹದಿಂದ ಆಚರಿಸಿದರು. ಮಧ್ಯಪ್ರದೇಶದಲ್ಲಂತೂ ರೈತರು ಈ ಅದ್ಭುತ ದಿನವನ್ನು ಅತ್ಯಂತ ಉತ್ಸಾಹದಿಂದ ಆಚರಿಸಿದ್ದನ್ನು ದೇಶದ ರೈತರು ಗಮನಿಸಿದ್ದಾರೆ. ದೆಹಲಿಯಲ್ಲಿ ನಡೆದ ರೈತ ಮೆರವಣಿಗೆಯಲ್ಲಿ ಎನ್‌ಎಪಿಎಂನ ಕಾರ್ಮಿಕರು ಸೇರಿಕೊಂಡರು. ಮುಂಬೈನ ಆಜಾದ್ ಮೈದಾನದಲ್ಲಿ ಬೃಹತ್ ರ್ಯಾಲಿ ಆಯೋಜಿಸಲಾಗಿತ್ತು. ಬೆಂಗಳೂರಿನಲ್ಲಿ ನಡೆದ ಅಭೂತಪೂರ್ವ ರೈತರ ಪೆರೇಡ್‌ನಲ್ಲಿ ಸಾವಿರಾರು ರೈತರು ಭಾಗವಹಿಸಿದ್ದರು. ಇವೆಲ್ಲವೂ ಸಂಪೂರ್ಣವಾಗಿ ಶಾಂತಿಯುತವಾಗಿತ್ತು. ರೈತರ ಗಣರಾಜ್ಯ ಮೆರವಣಿಗೆಯಲ್ಲಿ ತಮಿಳುನಾಡು, ಕೇರಳ, ಹೈದರಾಬಾದ್, ಒಡಿಶಾ, ಬಿಹಾರ, ಪಶ್ಚಿಮ ಬಂಗಾಳ, ಛತ್ತೀಸ್ ಘಡ್ ಮತ್ತು ಉತ್ತರ ಪ್ರದೇಶದ ರೈತರು ಭಾಗವಹಿಸಿದ್ದರು. ಮುಂದಿನ ದಿನಗಳಲ್ಲಿ ಸಂಘಟಿತ ರೈತರ ಇತರ ಯೋಜನೆಗಳು ಮತ್ತು ಚಟುವಟಿಕೆಗಳನ್ನು ಪ್ರಕಟಿಸಲಾಗುವುದು ಎಂದು ಹೇಳಿದ್ದಾರೆ.

ನಮ್ಮ ರೈತ ಚಳುವಳಿ ಎಂದೆಂದಿಗೂ ಶಾಂತಿಯುತವಾಗಿ ಮುಂದುವರೆಯುತ್ತದೆ ಎಂಬುದನ್ನು ನಾವು ಮತ್ತೊಮ್ಮೆ ಸ್ಪಷ್ಟಪಡಿಸಲು ಬಯಸುತ್ತೇವೆ. ದೇಶದ ರೈತರು ಬಹಳ ಆತ್ಮವಿಶ್ವಾಸ ಮತ್ತು ಶಾಂತಿಯುತವಾಗಿ ಈಗಿನ ಕೇಂದ್ರ ಸರ್ಕಾರದೊಂದಿಗೆ ತಮ್ಮ ಭಿನ್ನಾಭಿಪ್ರಾಯವನ್ನು ಮಂಡಿಸುತ್ತಾರೆ. ಜನವರಿ 26 ರಂದು ನಡೆದ ರೈತರ ಪೆರೇಡ್ ಗೆ ದೇಶದ ನಾಗರಿಕರು ವ್ಯಕ್ತಪಡಿಸಿದ ಪ್ರೀತಿಗೆ ರೈತ ಸಮುದಾಯ ಅಭಾರಿಯಾಗಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಅನುವಾದ : ನವೀನ್ ಸೂರಿಂಜೆ


ಇದನ್ನೂ ಓದಿ: ‘ನನಗೆ ಕುರ್ಚಿ ಬೇಡ, ನನ್ನ ದೇಶದ ರೈತನಿಗೆ ಸಂತೋಷ ಬೇಕು’ – ಮತ್ತೋರ್ವ ಶಾಸಕ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...