Homeಮುಖಪುಟರೈತ ಚಳುವಳಿಯನ್ನು ಕೆಣಕುವ ಸಂಚು ಈಗ ಬಹಿರಂಗವಾಗಿದೆ - ರೈತ ಒಕ್ಕೂಟ

ರೈತ ಚಳುವಳಿಯನ್ನು ಕೆಣಕುವ ಸಂಚು ಈಗ ಬಹಿರಂಗವಾಗಿದೆ – ರೈತ ಒಕ್ಕೂಟ

"ರೈತರ ಚಳವಳಿಯನ್ನು 'ಹಿಂಸಾತ್ಮಕ' ಎಂದು ಹೇಳಲು ಸಾಧ್ಯವಿಲ್ಲ. ಯಾಕೆಂದರೆ ನಮ್ಮೊಂದಿಗೆ ಸಂಬಂಧವಿಲ್ಲದ ಕೆಲವು ಸಮಾಜ ವಿರೋಧಿ ವ್ಯಕ್ತಿ ಮತ್ತು ಸಂಘಟನೆಗಳು ರೈತರ ಹೆಸರಿನಲ್ಲಿ ಹಿಂಸಾಚಾರವನ್ನು ಮಾಡಿವೆ"

- Advertisement -
- Advertisement -

“ಕಳೆದ 7 ತಿಂಗಳ ಶಾಂತಿಯುತ ರೈತ ಚಳವಳಿಯನ್ನು ಕೆಣಕುವ ಸಂಚು ಈಗ ದೇಶದ ಮುಂದೆ ಬಹಿರಂಗವಾಗಿದೆ. ಎಸ್ ಸತ್ನಾಮ್ ಸಿಂಗ್ ಪನ್ನು ನೇತೃತ್ವದ ದೀಪ್ ಸಿಧು ಮತ್ತು ಕಿಸಾನ್ ಮಜ್ದೂರ್ ಸಂಘರ್ಷ ಸಮಿತಿಯಂತಹ ಕೆಲವು ವ್ಯಕ್ತಿಗಳು ಮತ್ತು ಸಂಘಟನೆಗಳ ಜೊತೆಗೆ ಶಾಮೀಲಾಗಿ ಕೇಂದ್ರ ಸರ್ಕಾರವು ಈ ನ್ಯಾಯಯುತ ರೈತ ಹೋರಾಟವನ್ನು ಹಿಂಸಾತ್ಮಕಗೊಳಿಸಿತು. ಕೆಂಪು ಕೋಟೆ ಮತ್ತು ದೆಹಲಿಯ ಇತರ ಭಾಗಗಳಲ್ಲಿ ನಡೆದ ಹಿಂಸಾತ್ಮಕ ಪ್ರತಿಭಟನೆಗಳಿಗೂ ನಮಗೂ ಸಂಬಂಧವಿಲ್ಲ ಎಂದು ನಾವು ಮತ್ತೆ ಸ್ಪಷ್ಟಪಡಿಸುತ್ತಿದ್ದೇವೆ” ಎಂದು ರೈತ ಸಂಘಟನೆಗಳು ತಮ್ಮ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿವೆ.

“ದೇಶದ ಮುಂದೆ ರೈತ ಹೋರಾಟವನ್ನು ಬೇರೆಯದೇ ರೀತಿಯಲ್ಲಿ ತೋರಿಸಲು ಸರ್ಕಾರ ಪ್ರಯತ್ನ ಮಾಡಿತು. ವಾಸ್ತವವಾಗಿ ರೈತರ ಮೆರವಣಿಗೆ ಶಾಂತಿಯುತವಾಗಿತ್ತು ಮತ್ತು ಸರಿಯಾದ ಮಾರ್ಗದಲ್ಲಿತ್ತು. ರಾಷ್ಟ್ರೀಯ ಚಿನ್ಹೆಗಳಿಗಾದ ಅವಮಾನವನ್ನು ರೈತರಾದ ನಾವು ಬಲವಾಗಿ ಖಂಡಿಸುತ್ತೇವೆ. ಹಾಗೆಂದು ರೈತರ ಚಳವಳಿಯನ್ನು ‘ಹಿಂಸಾತ್ಮಕ’ ಎಂದು ಹೇಳಲು ಸಾಧ್ಯವಿಲ್ಲ. ಯಾಕೆಂದರೆ ನಮ್ಮೊಂದಿಗೆ ಸಂಬಂಧವಿಲ್ಲದ ಕೆಲವು ಸಮಾಜ ವಿರೋಧಿ ವ್ಯಕ್ತಿ ಮತ್ತು ಸಂಘಟನೆಗಳು ರೈತರ ಹೆಸರಿನಲ್ಲಿ ಹಿಂಸಾಚಾರವನ್ನು ಮಾಡಿವೆ. ನಮ್ಮ ನೇತೃತ್ವದಲ್ಲಿ ಹೊರಟಿದ್ದ ಎಲ್ಲಾ ಗಡಿಗಳಲ್ಲಿನ ರೈತರು ತಮ್ಮ ಮೆರವಣಿಗೆಗಳನ್ನು ನಿನ್ನೆ ಶಾಂತಿಯುತ ರೀತಿಯಲ್ಲಿ ಪೂರ್ಣಗೊಳಿಸಿ ತಮ್ಮ ಮೂಲ ಸ್ಥಳವನ್ನು ಯಾವುದೇ ಅಡ್ಡಿ ಆತಂಕಗಳಿಲ್ಲದೆ, ಹಿಂಸೆಯಿಲ್ಲದೆ ತಲುಪಿದ್ದಾರೆ” ಎಂದು ವಿವರಿಸಲಾಗಿದೆ.

ಇದನ್ನೂ ಓದಿ: ಸರ್ಕಾರ ಮತ್ತು ಕಿಸಾನ್ ಮಜ್ದೂರ್ ಸಂಘರ್ಷ್ ಸಮಿತಿ ಸೇರಿ ಪಿತೂರಿ ನಡೆಸಿವೆ: ರೈತ ಒಕ್ಕೂಟ ಆರೋಪ

“ರೈತ ಪ್ರತಿಭಟನಾಕಾರರ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ನಾವು ಬಲವಾಗಿ ಖಂಡಿಸುತ್ತೇವೆ. ಪೊಲೀಸ್ ಮತ್ತು ಇತರ ಏಜೆನ್ಸಿಗಳನ್ನು ಬಳಸಿಕೊಂಡು ಈ ರೈತ ಹೋರಾಟವನ್ನು ಮಣಿಸಲು ಕೇಂದ್ರ ಸರ್ಕಾರ ಮಾಡಿದ ಪ್ರಯತ್ನಗಳು ಈಗಾಗಲೇ ಬಹಿರಂಗಗೊಂಡಿದೆ. ಮತ್ತು ಇನ್ನಷ್ಟೂ ಬಟಾಬಯಲಾಗುತ್ತದೆ. ಹಿಂಸಾಚಾರಕ್ಕೂ ನಿನ್ನೆ ಬಂಧಿಸಲ್ಪಟ್ಟ ಹಲವು ರೈತರಿಗೂ ಸಂಬಂಧವೇ ಇಲ್ಲ. ಹಾಗಾಗಿ ಬಂಧಿಸಲ್ಪಟ್ಟಿರುವ ಎಲ್ಲ ನಿಜವಾದ ರೈತ ಪ್ರತಿಭಟನಾಕಾರರು ಮತ್ತು ಬೆಂಬಲಿಗರನ್ನು ತಕ್ಷಣ ಬಿಡುಗಡೆ ಮಾಡಬೇಕೆಂದು ನಾವು ಒತ್ತಾಯಿಸುತ್ತೇವೆ. ರೈತರ ಗಣರಾಜ್ಯೋತ್ಸವ ಪೆರೇಡ್‌ನಲ್ಲಿ ಭಾಗಿಯಾಗಿದ್ದ ಟ್ರಾಕ್ಟರುಗಳು ಮತ್ತು ಇತರ ವಾಹನಗಳನ್ನು ಹಾನಿ ಮಾಡಲು ಪೊಲೀಸರು ಪ್ರಯತ್ನಿಸಿರುವುದನ್ನು ಕೂಡಾ ನಾವು ಖಂಡಿಸುತ್ತೇವೆ” ಎಂದು ಹೇಳಿದ್ದಾರೆ.

ರಾಷ್ಟ್ರೀಯ ಚಿಹ್ನೆಗಳನ್ನು ಕೀಳಾಗಿ ಮತ್ತು ಅಪವಿತ್ರಗೊಳಿಸಿದವರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕೆಂದು ಸಂಯುಕ್ತ ಕಿಸಾನ್ ಮೋರ್ಚಾ ಒತ್ತಾಯಿಸುತ್ತದೆ. ರೈತರು ಈ ದೇಶದ ದೊಡ್ಡ ರಾಷ್ಟ್ರೀಯವಾದಿಗಳು. ರೈತರೇ ಈ ರಾಷ್ಟ್ರದ ನಿಜವಾದ ರಕ್ಷಕರು. ರೈತರು ಮತ್ತು ರಾಷ್ಟ್ರೀಯವಾದ ಬೇರೆ ಬೇರೆ ಅಲ್ಲ ಎಂಬುದನ್ನು ಮತ್ತೆ ಮತ್ತೆ ಹೇಳಲು ಬಯಸುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.

ಆದರೂ ನಿನ್ನೆ ನಡೆದ ಕೆಲವು ವಿಷಾದನೀಯ ಘಟನೆಗಳಿಗೆ ಪ್ರತಿಭಟನೆಯ ನೇತೃತ್ವ ವಹಿಸಿಕೊಂಡ ಸಂಯುಕ್ತ ಕಿಸಾನ್ ಮೋರ್ಚ ನೈತಿಕ ಹೊಣೆಗಾರಿಕೆಯನ್ನು ವಹಿಸಿಕೊಳ್ಳುತ್ತದೆ. ತನ್ನದಲ್ಲದ ಹಿಂಸಾಚಾರದ ಹಿನ್ನೆಲೆಯಲ್ಲಿ ಸಂಯುಕ್ತ ಕಿಸಾನ್ ಮೋರ್ಚವು ಫೆಬ್ರವರಿ 1 ರಂದು ನಿಗದಿಯಾಗಿದ್ದ ಸಂಸತ್ ಛಲೋ ಕಾರ್ಯಕ್ರಮವನ್ನು ಮುಂದೂಡಲು ನಿರ್ಧರಿಸಿದೆ. ಬದಲಾಗಿ, ಜನವರಿ 30 ರಂದು, ಗಾಂಧೀಜಿಯವರ ಹುತಾತ್ಮ ದಿನದಂದು, ಶಾಂತಿ ಮತ್ತು ಅಹಿಂಸೆಯನ್ನು ಸಾರಲು ದೇಶಾದ್ಯಂತ ರೈತರು ಒಂದು ದಿನದ ಉಪವಾಸ ಆಚರಿಸಲಿದ್ದೇವೆ ಎಂದು ಹೇಳಿದರು.

“ದೀಪ್ ಸಿದ್ದು ಅವರಂತಹ ಕುತ್ಸಿತ ವ್ಯಕ್ತಿಗಳಿಗೆ ಸಾಮಾಜಿಕ ಬಹಿಷ್ಕಾರ ಹಾಕಬೇಕು” ಎಂದು ಸಂಯುಕ್ತ ಕಿಸಾನ್ ಮೋರ್ಚ್ ಸಾರ್ವಜನಿಕರಿಗೆ ಮನವಿ ಮಾಡಿದೆ.

ಇದನ್ನೂ ಓದಿ: ಕೆಂಪುಕೋಟೆ ಅಹಿತಕರ ಘಟನೆಯ ರೂವಾರಿ – ಯಾರು ಈ ದೀಪ್ ಸಿಧು?

ದೆಹಲಿಯಲ್ಲಿ ಮಾತ್ರವಲ್ಲದೆ ರೈತ ಸಂಘಟನೆಗಳ ರೈತ ಗಣರಾಜ್ಯೋತ್ಸವ ಪೆರೇಡ್ ಅನ್ನು ಅನೇಕ ರಾಜ್ಯಗಳಲ್ಲಿ ನಡೆಸಲಾಯಿತು. ಬಿಹಾರ, ಪಾಟ್ನಾ ಸೇರಿದಂತೆ ದೇಶದ ಅನೇಕ ಸ್ಥಳಗಳಲ್ಲಿ ರೈತ ಗಣರಾಜ್ಯೋತ್ಸವವನ್ನು ರೈತರು ಉತ್ಸಾಹದಿಂದ ಆಚರಿಸಿದರು. ಮಧ್ಯಪ್ರದೇಶದಲ್ಲಂತೂ ರೈತರು ಈ ಅದ್ಭುತ ದಿನವನ್ನು ಅತ್ಯಂತ ಉತ್ಸಾಹದಿಂದ ಆಚರಿಸಿದ್ದನ್ನು ದೇಶದ ರೈತರು ಗಮನಿಸಿದ್ದಾರೆ. ದೆಹಲಿಯಲ್ಲಿ ನಡೆದ ರೈತ ಮೆರವಣಿಗೆಯಲ್ಲಿ ಎನ್‌ಎಪಿಎಂನ ಕಾರ್ಮಿಕರು ಸೇರಿಕೊಂಡರು. ಮುಂಬೈನ ಆಜಾದ್ ಮೈದಾನದಲ್ಲಿ ಬೃಹತ್ ರ್ಯಾಲಿ ಆಯೋಜಿಸಲಾಗಿತ್ತು. ಬೆಂಗಳೂರಿನಲ್ಲಿ ನಡೆದ ಅಭೂತಪೂರ್ವ ರೈತರ ಪೆರೇಡ್‌ನಲ್ಲಿ ಸಾವಿರಾರು ರೈತರು ಭಾಗವಹಿಸಿದ್ದರು. ಇವೆಲ್ಲವೂ ಸಂಪೂರ್ಣವಾಗಿ ಶಾಂತಿಯುತವಾಗಿತ್ತು. ರೈತರ ಗಣರಾಜ್ಯ ಮೆರವಣಿಗೆಯಲ್ಲಿ ತಮಿಳುನಾಡು, ಕೇರಳ, ಹೈದರಾಬಾದ್, ಒಡಿಶಾ, ಬಿಹಾರ, ಪಶ್ಚಿಮ ಬಂಗಾಳ, ಛತ್ತೀಸ್ ಘಡ್ ಮತ್ತು ಉತ್ತರ ಪ್ರದೇಶದ ರೈತರು ಭಾಗವಹಿಸಿದ್ದರು. ಮುಂದಿನ ದಿನಗಳಲ್ಲಿ ಸಂಘಟಿತ ರೈತರ ಇತರ ಯೋಜನೆಗಳು ಮತ್ತು ಚಟುವಟಿಕೆಗಳನ್ನು ಪ್ರಕಟಿಸಲಾಗುವುದು ಎಂದು ಹೇಳಿದ್ದಾರೆ.

ನಮ್ಮ ರೈತ ಚಳುವಳಿ ಎಂದೆಂದಿಗೂ ಶಾಂತಿಯುತವಾಗಿ ಮುಂದುವರೆಯುತ್ತದೆ ಎಂಬುದನ್ನು ನಾವು ಮತ್ತೊಮ್ಮೆ ಸ್ಪಷ್ಟಪಡಿಸಲು ಬಯಸುತ್ತೇವೆ. ದೇಶದ ರೈತರು ಬಹಳ ಆತ್ಮವಿಶ್ವಾಸ ಮತ್ತು ಶಾಂತಿಯುತವಾಗಿ ಈಗಿನ ಕೇಂದ್ರ ಸರ್ಕಾರದೊಂದಿಗೆ ತಮ್ಮ ಭಿನ್ನಾಭಿಪ್ರಾಯವನ್ನು ಮಂಡಿಸುತ್ತಾರೆ. ಜನವರಿ 26 ರಂದು ನಡೆದ ರೈತರ ಪೆರೇಡ್ ಗೆ ದೇಶದ ನಾಗರಿಕರು ವ್ಯಕ್ತಪಡಿಸಿದ ಪ್ರೀತಿಗೆ ರೈತ ಸಮುದಾಯ ಅಭಾರಿಯಾಗಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಅನುವಾದ : ನವೀನ್ ಸೂರಿಂಜೆ


ಇದನ್ನೂ ಓದಿ: ‘ನನಗೆ ಕುರ್ಚಿ ಬೇಡ, ನನ್ನ ದೇಶದ ರೈತನಿಗೆ ಸಂತೋಷ ಬೇಕು’ – ಮತ್ತೋರ್ವ ಶಾಸಕ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...