Homeಮುಖಪುಟರೈತ ಚಳುವಳಿಯನ್ನು ಕೆಣಕುವ ಸಂಚು ಈಗ ಬಹಿರಂಗವಾಗಿದೆ - ರೈತ ಒಕ್ಕೂಟ

ರೈತ ಚಳುವಳಿಯನ್ನು ಕೆಣಕುವ ಸಂಚು ಈಗ ಬಹಿರಂಗವಾಗಿದೆ – ರೈತ ಒಕ್ಕೂಟ

"ರೈತರ ಚಳವಳಿಯನ್ನು 'ಹಿಂಸಾತ್ಮಕ' ಎಂದು ಹೇಳಲು ಸಾಧ್ಯವಿಲ್ಲ. ಯಾಕೆಂದರೆ ನಮ್ಮೊಂದಿಗೆ ಸಂಬಂಧವಿಲ್ಲದ ಕೆಲವು ಸಮಾಜ ವಿರೋಧಿ ವ್ಯಕ್ತಿ ಮತ್ತು ಸಂಘಟನೆಗಳು ರೈತರ ಹೆಸರಿನಲ್ಲಿ ಹಿಂಸಾಚಾರವನ್ನು ಮಾಡಿವೆ"

- Advertisement -
- Advertisement -

“ಕಳೆದ 7 ತಿಂಗಳ ಶಾಂತಿಯುತ ರೈತ ಚಳವಳಿಯನ್ನು ಕೆಣಕುವ ಸಂಚು ಈಗ ದೇಶದ ಮುಂದೆ ಬಹಿರಂಗವಾಗಿದೆ. ಎಸ್ ಸತ್ನಾಮ್ ಸಿಂಗ್ ಪನ್ನು ನೇತೃತ್ವದ ದೀಪ್ ಸಿಧು ಮತ್ತು ಕಿಸಾನ್ ಮಜ್ದೂರ್ ಸಂಘರ್ಷ ಸಮಿತಿಯಂತಹ ಕೆಲವು ವ್ಯಕ್ತಿಗಳು ಮತ್ತು ಸಂಘಟನೆಗಳ ಜೊತೆಗೆ ಶಾಮೀಲಾಗಿ ಕೇಂದ್ರ ಸರ್ಕಾರವು ಈ ನ್ಯಾಯಯುತ ರೈತ ಹೋರಾಟವನ್ನು ಹಿಂಸಾತ್ಮಕಗೊಳಿಸಿತು. ಕೆಂಪು ಕೋಟೆ ಮತ್ತು ದೆಹಲಿಯ ಇತರ ಭಾಗಗಳಲ್ಲಿ ನಡೆದ ಹಿಂಸಾತ್ಮಕ ಪ್ರತಿಭಟನೆಗಳಿಗೂ ನಮಗೂ ಸಂಬಂಧವಿಲ್ಲ ಎಂದು ನಾವು ಮತ್ತೆ ಸ್ಪಷ್ಟಪಡಿಸುತ್ತಿದ್ದೇವೆ” ಎಂದು ರೈತ ಸಂಘಟನೆಗಳು ತಮ್ಮ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿವೆ.

“ದೇಶದ ಮುಂದೆ ರೈತ ಹೋರಾಟವನ್ನು ಬೇರೆಯದೇ ರೀತಿಯಲ್ಲಿ ತೋರಿಸಲು ಸರ್ಕಾರ ಪ್ರಯತ್ನ ಮಾಡಿತು. ವಾಸ್ತವವಾಗಿ ರೈತರ ಮೆರವಣಿಗೆ ಶಾಂತಿಯುತವಾಗಿತ್ತು ಮತ್ತು ಸರಿಯಾದ ಮಾರ್ಗದಲ್ಲಿತ್ತು. ರಾಷ್ಟ್ರೀಯ ಚಿನ್ಹೆಗಳಿಗಾದ ಅವಮಾನವನ್ನು ರೈತರಾದ ನಾವು ಬಲವಾಗಿ ಖಂಡಿಸುತ್ತೇವೆ. ಹಾಗೆಂದು ರೈತರ ಚಳವಳಿಯನ್ನು ‘ಹಿಂಸಾತ್ಮಕ’ ಎಂದು ಹೇಳಲು ಸಾಧ್ಯವಿಲ್ಲ. ಯಾಕೆಂದರೆ ನಮ್ಮೊಂದಿಗೆ ಸಂಬಂಧವಿಲ್ಲದ ಕೆಲವು ಸಮಾಜ ವಿರೋಧಿ ವ್ಯಕ್ತಿ ಮತ್ತು ಸಂಘಟನೆಗಳು ರೈತರ ಹೆಸರಿನಲ್ಲಿ ಹಿಂಸಾಚಾರವನ್ನು ಮಾಡಿವೆ. ನಮ್ಮ ನೇತೃತ್ವದಲ್ಲಿ ಹೊರಟಿದ್ದ ಎಲ್ಲಾ ಗಡಿಗಳಲ್ಲಿನ ರೈತರು ತಮ್ಮ ಮೆರವಣಿಗೆಗಳನ್ನು ನಿನ್ನೆ ಶಾಂತಿಯುತ ರೀತಿಯಲ್ಲಿ ಪೂರ್ಣಗೊಳಿಸಿ ತಮ್ಮ ಮೂಲ ಸ್ಥಳವನ್ನು ಯಾವುದೇ ಅಡ್ಡಿ ಆತಂಕಗಳಿಲ್ಲದೆ, ಹಿಂಸೆಯಿಲ್ಲದೆ ತಲುಪಿದ್ದಾರೆ” ಎಂದು ವಿವರಿಸಲಾಗಿದೆ.

ಇದನ್ನೂ ಓದಿ: ಸರ್ಕಾರ ಮತ್ತು ಕಿಸಾನ್ ಮಜ್ದೂರ್ ಸಂಘರ್ಷ್ ಸಮಿತಿ ಸೇರಿ ಪಿತೂರಿ ನಡೆಸಿವೆ: ರೈತ ಒಕ್ಕೂಟ ಆರೋಪ

“ರೈತ ಪ್ರತಿಭಟನಾಕಾರರ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ನಾವು ಬಲವಾಗಿ ಖಂಡಿಸುತ್ತೇವೆ. ಪೊಲೀಸ್ ಮತ್ತು ಇತರ ಏಜೆನ್ಸಿಗಳನ್ನು ಬಳಸಿಕೊಂಡು ಈ ರೈತ ಹೋರಾಟವನ್ನು ಮಣಿಸಲು ಕೇಂದ್ರ ಸರ್ಕಾರ ಮಾಡಿದ ಪ್ರಯತ್ನಗಳು ಈಗಾಗಲೇ ಬಹಿರಂಗಗೊಂಡಿದೆ. ಮತ್ತು ಇನ್ನಷ್ಟೂ ಬಟಾಬಯಲಾಗುತ್ತದೆ. ಹಿಂಸಾಚಾರಕ್ಕೂ ನಿನ್ನೆ ಬಂಧಿಸಲ್ಪಟ್ಟ ಹಲವು ರೈತರಿಗೂ ಸಂಬಂಧವೇ ಇಲ್ಲ. ಹಾಗಾಗಿ ಬಂಧಿಸಲ್ಪಟ್ಟಿರುವ ಎಲ್ಲ ನಿಜವಾದ ರೈತ ಪ್ರತಿಭಟನಾಕಾರರು ಮತ್ತು ಬೆಂಬಲಿಗರನ್ನು ತಕ್ಷಣ ಬಿಡುಗಡೆ ಮಾಡಬೇಕೆಂದು ನಾವು ಒತ್ತಾಯಿಸುತ್ತೇವೆ. ರೈತರ ಗಣರಾಜ್ಯೋತ್ಸವ ಪೆರೇಡ್‌ನಲ್ಲಿ ಭಾಗಿಯಾಗಿದ್ದ ಟ್ರಾಕ್ಟರುಗಳು ಮತ್ತು ಇತರ ವಾಹನಗಳನ್ನು ಹಾನಿ ಮಾಡಲು ಪೊಲೀಸರು ಪ್ರಯತ್ನಿಸಿರುವುದನ್ನು ಕೂಡಾ ನಾವು ಖಂಡಿಸುತ್ತೇವೆ” ಎಂದು ಹೇಳಿದ್ದಾರೆ.

ರಾಷ್ಟ್ರೀಯ ಚಿಹ್ನೆಗಳನ್ನು ಕೀಳಾಗಿ ಮತ್ತು ಅಪವಿತ್ರಗೊಳಿಸಿದವರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕೆಂದು ಸಂಯುಕ್ತ ಕಿಸಾನ್ ಮೋರ್ಚಾ ಒತ್ತಾಯಿಸುತ್ತದೆ. ರೈತರು ಈ ದೇಶದ ದೊಡ್ಡ ರಾಷ್ಟ್ರೀಯವಾದಿಗಳು. ರೈತರೇ ಈ ರಾಷ್ಟ್ರದ ನಿಜವಾದ ರಕ್ಷಕರು. ರೈತರು ಮತ್ತು ರಾಷ್ಟ್ರೀಯವಾದ ಬೇರೆ ಬೇರೆ ಅಲ್ಲ ಎಂಬುದನ್ನು ಮತ್ತೆ ಮತ್ತೆ ಹೇಳಲು ಬಯಸುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.

ಆದರೂ ನಿನ್ನೆ ನಡೆದ ಕೆಲವು ವಿಷಾದನೀಯ ಘಟನೆಗಳಿಗೆ ಪ್ರತಿಭಟನೆಯ ನೇತೃತ್ವ ವಹಿಸಿಕೊಂಡ ಸಂಯುಕ್ತ ಕಿಸಾನ್ ಮೋರ್ಚ ನೈತಿಕ ಹೊಣೆಗಾರಿಕೆಯನ್ನು ವಹಿಸಿಕೊಳ್ಳುತ್ತದೆ. ತನ್ನದಲ್ಲದ ಹಿಂಸಾಚಾರದ ಹಿನ್ನೆಲೆಯಲ್ಲಿ ಸಂಯುಕ್ತ ಕಿಸಾನ್ ಮೋರ್ಚವು ಫೆಬ್ರವರಿ 1 ರಂದು ನಿಗದಿಯಾಗಿದ್ದ ಸಂಸತ್ ಛಲೋ ಕಾರ್ಯಕ್ರಮವನ್ನು ಮುಂದೂಡಲು ನಿರ್ಧರಿಸಿದೆ. ಬದಲಾಗಿ, ಜನವರಿ 30 ರಂದು, ಗಾಂಧೀಜಿಯವರ ಹುತಾತ್ಮ ದಿನದಂದು, ಶಾಂತಿ ಮತ್ತು ಅಹಿಂಸೆಯನ್ನು ಸಾರಲು ದೇಶಾದ್ಯಂತ ರೈತರು ಒಂದು ದಿನದ ಉಪವಾಸ ಆಚರಿಸಲಿದ್ದೇವೆ ಎಂದು ಹೇಳಿದರು.

“ದೀಪ್ ಸಿದ್ದು ಅವರಂತಹ ಕುತ್ಸಿತ ವ್ಯಕ್ತಿಗಳಿಗೆ ಸಾಮಾಜಿಕ ಬಹಿಷ್ಕಾರ ಹಾಕಬೇಕು” ಎಂದು ಸಂಯುಕ್ತ ಕಿಸಾನ್ ಮೋರ್ಚ್ ಸಾರ್ವಜನಿಕರಿಗೆ ಮನವಿ ಮಾಡಿದೆ.

ಇದನ್ನೂ ಓದಿ: ಕೆಂಪುಕೋಟೆ ಅಹಿತಕರ ಘಟನೆಯ ರೂವಾರಿ – ಯಾರು ಈ ದೀಪ್ ಸಿಧು?

ದೆಹಲಿಯಲ್ಲಿ ಮಾತ್ರವಲ್ಲದೆ ರೈತ ಸಂಘಟನೆಗಳ ರೈತ ಗಣರಾಜ್ಯೋತ್ಸವ ಪೆರೇಡ್ ಅನ್ನು ಅನೇಕ ರಾಜ್ಯಗಳಲ್ಲಿ ನಡೆಸಲಾಯಿತು. ಬಿಹಾರ, ಪಾಟ್ನಾ ಸೇರಿದಂತೆ ದೇಶದ ಅನೇಕ ಸ್ಥಳಗಳಲ್ಲಿ ರೈತ ಗಣರಾಜ್ಯೋತ್ಸವವನ್ನು ರೈತರು ಉತ್ಸಾಹದಿಂದ ಆಚರಿಸಿದರು. ಮಧ್ಯಪ್ರದೇಶದಲ್ಲಂತೂ ರೈತರು ಈ ಅದ್ಭುತ ದಿನವನ್ನು ಅತ್ಯಂತ ಉತ್ಸಾಹದಿಂದ ಆಚರಿಸಿದ್ದನ್ನು ದೇಶದ ರೈತರು ಗಮನಿಸಿದ್ದಾರೆ. ದೆಹಲಿಯಲ್ಲಿ ನಡೆದ ರೈತ ಮೆರವಣಿಗೆಯಲ್ಲಿ ಎನ್‌ಎಪಿಎಂನ ಕಾರ್ಮಿಕರು ಸೇರಿಕೊಂಡರು. ಮುಂಬೈನ ಆಜಾದ್ ಮೈದಾನದಲ್ಲಿ ಬೃಹತ್ ರ್ಯಾಲಿ ಆಯೋಜಿಸಲಾಗಿತ್ತು. ಬೆಂಗಳೂರಿನಲ್ಲಿ ನಡೆದ ಅಭೂತಪೂರ್ವ ರೈತರ ಪೆರೇಡ್‌ನಲ್ಲಿ ಸಾವಿರಾರು ರೈತರು ಭಾಗವಹಿಸಿದ್ದರು. ಇವೆಲ್ಲವೂ ಸಂಪೂರ್ಣವಾಗಿ ಶಾಂತಿಯುತವಾಗಿತ್ತು. ರೈತರ ಗಣರಾಜ್ಯ ಮೆರವಣಿಗೆಯಲ್ಲಿ ತಮಿಳುನಾಡು, ಕೇರಳ, ಹೈದರಾಬಾದ್, ಒಡಿಶಾ, ಬಿಹಾರ, ಪಶ್ಚಿಮ ಬಂಗಾಳ, ಛತ್ತೀಸ್ ಘಡ್ ಮತ್ತು ಉತ್ತರ ಪ್ರದೇಶದ ರೈತರು ಭಾಗವಹಿಸಿದ್ದರು. ಮುಂದಿನ ದಿನಗಳಲ್ಲಿ ಸಂಘಟಿತ ರೈತರ ಇತರ ಯೋಜನೆಗಳು ಮತ್ತು ಚಟುವಟಿಕೆಗಳನ್ನು ಪ್ರಕಟಿಸಲಾಗುವುದು ಎಂದು ಹೇಳಿದ್ದಾರೆ.

ನಮ್ಮ ರೈತ ಚಳುವಳಿ ಎಂದೆಂದಿಗೂ ಶಾಂತಿಯುತವಾಗಿ ಮುಂದುವರೆಯುತ್ತದೆ ಎಂಬುದನ್ನು ನಾವು ಮತ್ತೊಮ್ಮೆ ಸ್ಪಷ್ಟಪಡಿಸಲು ಬಯಸುತ್ತೇವೆ. ದೇಶದ ರೈತರು ಬಹಳ ಆತ್ಮವಿಶ್ವಾಸ ಮತ್ತು ಶಾಂತಿಯುತವಾಗಿ ಈಗಿನ ಕೇಂದ್ರ ಸರ್ಕಾರದೊಂದಿಗೆ ತಮ್ಮ ಭಿನ್ನಾಭಿಪ್ರಾಯವನ್ನು ಮಂಡಿಸುತ್ತಾರೆ. ಜನವರಿ 26 ರಂದು ನಡೆದ ರೈತರ ಪೆರೇಡ್ ಗೆ ದೇಶದ ನಾಗರಿಕರು ವ್ಯಕ್ತಪಡಿಸಿದ ಪ್ರೀತಿಗೆ ರೈತ ಸಮುದಾಯ ಅಭಾರಿಯಾಗಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಅನುವಾದ : ನವೀನ್ ಸೂರಿಂಜೆ


ಇದನ್ನೂ ಓದಿ: ‘ನನಗೆ ಕುರ್ಚಿ ಬೇಡ, ನನ್ನ ದೇಶದ ರೈತನಿಗೆ ಸಂತೋಷ ಬೇಕು’ – ಮತ್ತೋರ್ವ ಶಾಸಕ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...