Homeಮುಖಪುಟರೈತ ಚಳುವಳಿಯನ್ನು ಕೆಣಕುವ ಸಂಚು ಈಗ ಬಹಿರಂಗವಾಗಿದೆ - ರೈತ ಒಕ್ಕೂಟ

ರೈತ ಚಳುವಳಿಯನ್ನು ಕೆಣಕುವ ಸಂಚು ಈಗ ಬಹಿರಂಗವಾಗಿದೆ – ರೈತ ಒಕ್ಕೂಟ

"ರೈತರ ಚಳವಳಿಯನ್ನು 'ಹಿಂಸಾತ್ಮಕ' ಎಂದು ಹೇಳಲು ಸಾಧ್ಯವಿಲ್ಲ. ಯಾಕೆಂದರೆ ನಮ್ಮೊಂದಿಗೆ ಸಂಬಂಧವಿಲ್ಲದ ಕೆಲವು ಸಮಾಜ ವಿರೋಧಿ ವ್ಯಕ್ತಿ ಮತ್ತು ಸಂಘಟನೆಗಳು ರೈತರ ಹೆಸರಿನಲ್ಲಿ ಹಿಂಸಾಚಾರವನ್ನು ಮಾಡಿವೆ"

- Advertisement -
- Advertisement -

“ಕಳೆದ 7 ತಿಂಗಳ ಶಾಂತಿಯುತ ರೈತ ಚಳವಳಿಯನ್ನು ಕೆಣಕುವ ಸಂಚು ಈಗ ದೇಶದ ಮುಂದೆ ಬಹಿರಂಗವಾಗಿದೆ. ಎಸ್ ಸತ್ನಾಮ್ ಸಿಂಗ್ ಪನ್ನು ನೇತೃತ್ವದ ದೀಪ್ ಸಿಧು ಮತ್ತು ಕಿಸಾನ್ ಮಜ್ದೂರ್ ಸಂಘರ್ಷ ಸಮಿತಿಯಂತಹ ಕೆಲವು ವ್ಯಕ್ತಿಗಳು ಮತ್ತು ಸಂಘಟನೆಗಳ ಜೊತೆಗೆ ಶಾಮೀಲಾಗಿ ಕೇಂದ್ರ ಸರ್ಕಾರವು ಈ ನ್ಯಾಯಯುತ ರೈತ ಹೋರಾಟವನ್ನು ಹಿಂಸಾತ್ಮಕಗೊಳಿಸಿತು. ಕೆಂಪು ಕೋಟೆ ಮತ್ತು ದೆಹಲಿಯ ಇತರ ಭಾಗಗಳಲ್ಲಿ ನಡೆದ ಹಿಂಸಾತ್ಮಕ ಪ್ರತಿಭಟನೆಗಳಿಗೂ ನಮಗೂ ಸಂಬಂಧವಿಲ್ಲ ಎಂದು ನಾವು ಮತ್ತೆ ಸ್ಪಷ್ಟಪಡಿಸುತ್ತಿದ್ದೇವೆ” ಎಂದು ರೈತ ಸಂಘಟನೆಗಳು ತಮ್ಮ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿವೆ.

“ದೇಶದ ಮುಂದೆ ರೈತ ಹೋರಾಟವನ್ನು ಬೇರೆಯದೇ ರೀತಿಯಲ್ಲಿ ತೋರಿಸಲು ಸರ್ಕಾರ ಪ್ರಯತ್ನ ಮಾಡಿತು. ವಾಸ್ತವವಾಗಿ ರೈತರ ಮೆರವಣಿಗೆ ಶಾಂತಿಯುತವಾಗಿತ್ತು ಮತ್ತು ಸರಿಯಾದ ಮಾರ್ಗದಲ್ಲಿತ್ತು. ರಾಷ್ಟ್ರೀಯ ಚಿನ್ಹೆಗಳಿಗಾದ ಅವಮಾನವನ್ನು ರೈತರಾದ ನಾವು ಬಲವಾಗಿ ಖಂಡಿಸುತ್ತೇವೆ. ಹಾಗೆಂದು ರೈತರ ಚಳವಳಿಯನ್ನು ‘ಹಿಂಸಾತ್ಮಕ’ ಎಂದು ಹೇಳಲು ಸಾಧ್ಯವಿಲ್ಲ. ಯಾಕೆಂದರೆ ನಮ್ಮೊಂದಿಗೆ ಸಂಬಂಧವಿಲ್ಲದ ಕೆಲವು ಸಮಾಜ ವಿರೋಧಿ ವ್ಯಕ್ತಿ ಮತ್ತು ಸಂಘಟನೆಗಳು ರೈತರ ಹೆಸರಿನಲ್ಲಿ ಹಿಂಸಾಚಾರವನ್ನು ಮಾಡಿವೆ. ನಮ್ಮ ನೇತೃತ್ವದಲ್ಲಿ ಹೊರಟಿದ್ದ ಎಲ್ಲಾ ಗಡಿಗಳಲ್ಲಿನ ರೈತರು ತಮ್ಮ ಮೆರವಣಿಗೆಗಳನ್ನು ನಿನ್ನೆ ಶಾಂತಿಯುತ ರೀತಿಯಲ್ಲಿ ಪೂರ್ಣಗೊಳಿಸಿ ತಮ್ಮ ಮೂಲ ಸ್ಥಳವನ್ನು ಯಾವುದೇ ಅಡ್ಡಿ ಆತಂಕಗಳಿಲ್ಲದೆ, ಹಿಂಸೆಯಿಲ್ಲದೆ ತಲುಪಿದ್ದಾರೆ” ಎಂದು ವಿವರಿಸಲಾಗಿದೆ.

ಇದನ್ನೂ ಓದಿ: ಸರ್ಕಾರ ಮತ್ತು ಕಿಸಾನ್ ಮಜ್ದೂರ್ ಸಂಘರ್ಷ್ ಸಮಿತಿ ಸೇರಿ ಪಿತೂರಿ ನಡೆಸಿವೆ: ರೈತ ಒಕ್ಕೂಟ ಆರೋಪ

“ರೈತ ಪ್ರತಿಭಟನಾಕಾರರ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ನಾವು ಬಲವಾಗಿ ಖಂಡಿಸುತ್ತೇವೆ. ಪೊಲೀಸ್ ಮತ್ತು ಇತರ ಏಜೆನ್ಸಿಗಳನ್ನು ಬಳಸಿಕೊಂಡು ಈ ರೈತ ಹೋರಾಟವನ್ನು ಮಣಿಸಲು ಕೇಂದ್ರ ಸರ್ಕಾರ ಮಾಡಿದ ಪ್ರಯತ್ನಗಳು ಈಗಾಗಲೇ ಬಹಿರಂಗಗೊಂಡಿದೆ. ಮತ್ತು ಇನ್ನಷ್ಟೂ ಬಟಾಬಯಲಾಗುತ್ತದೆ. ಹಿಂಸಾಚಾರಕ್ಕೂ ನಿನ್ನೆ ಬಂಧಿಸಲ್ಪಟ್ಟ ಹಲವು ರೈತರಿಗೂ ಸಂಬಂಧವೇ ಇಲ್ಲ. ಹಾಗಾಗಿ ಬಂಧಿಸಲ್ಪಟ್ಟಿರುವ ಎಲ್ಲ ನಿಜವಾದ ರೈತ ಪ್ರತಿಭಟನಾಕಾರರು ಮತ್ತು ಬೆಂಬಲಿಗರನ್ನು ತಕ್ಷಣ ಬಿಡುಗಡೆ ಮಾಡಬೇಕೆಂದು ನಾವು ಒತ್ತಾಯಿಸುತ್ತೇವೆ. ರೈತರ ಗಣರಾಜ್ಯೋತ್ಸವ ಪೆರೇಡ್‌ನಲ್ಲಿ ಭಾಗಿಯಾಗಿದ್ದ ಟ್ರಾಕ್ಟರುಗಳು ಮತ್ತು ಇತರ ವಾಹನಗಳನ್ನು ಹಾನಿ ಮಾಡಲು ಪೊಲೀಸರು ಪ್ರಯತ್ನಿಸಿರುವುದನ್ನು ಕೂಡಾ ನಾವು ಖಂಡಿಸುತ್ತೇವೆ” ಎಂದು ಹೇಳಿದ್ದಾರೆ.

ರಾಷ್ಟ್ರೀಯ ಚಿಹ್ನೆಗಳನ್ನು ಕೀಳಾಗಿ ಮತ್ತು ಅಪವಿತ್ರಗೊಳಿಸಿದವರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕೆಂದು ಸಂಯುಕ್ತ ಕಿಸಾನ್ ಮೋರ್ಚಾ ಒತ್ತಾಯಿಸುತ್ತದೆ. ರೈತರು ಈ ದೇಶದ ದೊಡ್ಡ ರಾಷ್ಟ್ರೀಯವಾದಿಗಳು. ರೈತರೇ ಈ ರಾಷ್ಟ್ರದ ನಿಜವಾದ ರಕ್ಷಕರು. ರೈತರು ಮತ್ತು ರಾಷ್ಟ್ರೀಯವಾದ ಬೇರೆ ಬೇರೆ ಅಲ್ಲ ಎಂಬುದನ್ನು ಮತ್ತೆ ಮತ್ತೆ ಹೇಳಲು ಬಯಸುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.

ಆದರೂ ನಿನ್ನೆ ನಡೆದ ಕೆಲವು ವಿಷಾದನೀಯ ಘಟನೆಗಳಿಗೆ ಪ್ರತಿಭಟನೆಯ ನೇತೃತ್ವ ವಹಿಸಿಕೊಂಡ ಸಂಯುಕ್ತ ಕಿಸಾನ್ ಮೋರ್ಚ ನೈತಿಕ ಹೊಣೆಗಾರಿಕೆಯನ್ನು ವಹಿಸಿಕೊಳ್ಳುತ್ತದೆ. ತನ್ನದಲ್ಲದ ಹಿಂಸಾಚಾರದ ಹಿನ್ನೆಲೆಯಲ್ಲಿ ಸಂಯುಕ್ತ ಕಿಸಾನ್ ಮೋರ್ಚವು ಫೆಬ್ರವರಿ 1 ರಂದು ನಿಗದಿಯಾಗಿದ್ದ ಸಂಸತ್ ಛಲೋ ಕಾರ್ಯಕ್ರಮವನ್ನು ಮುಂದೂಡಲು ನಿರ್ಧರಿಸಿದೆ. ಬದಲಾಗಿ, ಜನವರಿ 30 ರಂದು, ಗಾಂಧೀಜಿಯವರ ಹುತಾತ್ಮ ದಿನದಂದು, ಶಾಂತಿ ಮತ್ತು ಅಹಿಂಸೆಯನ್ನು ಸಾರಲು ದೇಶಾದ್ಯಂತ ರೈತರು ಒಂದು ದಿನದ ಉಪವಾಸ ಆಚರಿಸಲಿದ್ದೇವೆ ಎಂದು ಹೇಳಿದರು.

“ದೀಪ್ ಸಿದ್ದು ಅವರಂತಹ ಕುತ್ಸಿತ ವ್ಯಕ್ತಿಗಳಿಗೆ ಸಾಮಾಜಿಕ ಬಹಿಷ್ಕಾರ ಹಾಕಬೇಕು” ಎಂದು ಸಂಯುಕ್ತ ಕಿಸಾನ್ ಮೋರ್ಚ್ ಸಾರ್ವಜನಿಕರಿಗೆ ಮನವಿ ಮಾಡಿದೆ.

ಇದನ್ನೂ ಓದಿ: ಕೆಂಪುಕೋಟೆ ಅಹಿತಕರ ಘಟನೆಯ ರೂವಾರಿ – ಯಾರು ಈ ದೀಪ್ ಸಿಧು?

ದೆಹಲಿಯಲ್ಲಿ ಮಾತ್ರವಲ್ಲದೆ ರೈತ ಸಂಘಟನೆಗಳ ರೈತ ಗಣರಾಜ್ಯೋತ್ಸವ ಪೆರೇಡ್ ಅನ್ನು ಅನೇಕ ರಾಜ್ಯಗಳಲ್ಲಿ ನಡೆಸಲಾಯಿತು. ಬಿಹಾರ, ಪಾಟ್ನಾ ಸೇರಿದಂತೆ ದೇಶದ ಅನೇಕ ಸ್ಥಳಗಳಲ್ಲಿ ರೈತ ಗಣರಾಜ್ಯೋತ್ಸವವನ್ನು ರೈತರು ಉತ್ಸಾಹದಿಂದ ಆಚರಿಸಿದರು. ಮಧ್ಯಪ್ರದೇಶದಲ್ಲಂತೂ ರೈತರು ಈ ಅದ್ಭುತ ದಿನವನ್ನು ಅತ್ಯಂತ ಉತ್ಸಾಹದಿಂದ ಆಚರಿಸಿದ್ದನ್ನು ದೇಶದ ರೈತರು ಗಮನಿಸಿದ್ದಾರೆ. ದೆಹಲಿಯಲ್ಲಿ ನಡೆದ ರೈತ ಮೆರವಣಿಗೆಯಲ್ಲಿ ಎನ್‌ಎಪಿಎಂನ ಕಾರ್ಮಿಕರು ಸೇರಿಕೊಂಡರು. ಮುಂಬೈನ ಆಜಾದ್ ಮೈದಾನದಲ್ಲಿ ಬೃಹತ್ ರ್ಯಾಲಿ ಆಯೋಜಿಸಲಾಗಿತ್ತು. ಬೆಂಗಳೂರಿನಲ್ಲಿ ನಡೆದ ಅಭೂತಪೂರ್ವ ರೈತರ ಪೆರೇಡ್‌ನಲ್ಲಿ ಸಾವಿರಾರು ರೈತರು ಭಾಗವಹಿಸಿದ್ದರು. ಇವೆಲ್ಲವೂ ಸಂಪೂರ್ಣವಾಗಿ ಶಾಂತಿಯುತವಾಗಿತ್ತು. ರೈತರ ಗಣರಾಜ್ಯ ಮೆರವಣಿಗೆಯಲ್ಲಿ ತಮಿಳುನಾಡು, ಕೇರಳ, ಹೈದರಾಬಾದ್, ಒಡಿಶಾ, ಬಿಹಾರ, ಪಶ್ಚಿಮ ಬಂಗಾಳ, ಛತ್ತೀಸ್ ಘಡ್ ಮತ್ತು ಉತ್ತರ ಪ್ರದೇಶದ ರೈತರು ಭಾಗವಹಿಸಿದ್ದರು. ಮುಂದಿನ ದಿನಗಳಲ್ಲಿ ಸಂಘಟಿತ ರೈತರ ಇತರ ಯೋಜನೆಗಳು ಮತ್ತು ಚಟುವಟಿಕೆಗಳನ್ನು ಪ್ರಕಟಿಸಲಾಗುವುದು ಎಂದು ಹೇಳಿದ್ದಾರೆ.

ನಮ್ಮ ರೈತ ಚಳುವಳಿ ಎಂದೆಂದಿಗೂ ಶಾಂತಿಯುತವಾಗಿ ಮುಂದುವರೆಯುತ್ತದೆ ಎಂಬುದನ್ನು ನಾವು ಮತ್ತೊಮ್ಮೆ ಸ್ಪಷ್ಟಪಡಿಸಲು ಬಯಸುತ್ತೇವೆ. ದೇಶದ ರೈತರು ಬಹಳ ಆತ್ಮವಿಶ್ವಾಸ ಮತ್ತು ಶಾಂತಿಯುತವಾಗಿ ಈಗಿನ ಕೇಂದ್ರ ಸರ್ಕಾರದೊಂದಿಗೆ ತಮ್ಮ ಭಿನ್ನಾಭಿಪ್ರಾಯವನ್ನು ಮಂಡಿಸುತ್ತಾರೆ. ಜನವರಿ 26 ರಂದು ನಡೆದ ರೈತರ ಪೆರೇಡ್ ಗೆ ದೇಶದ ನಾಗರಿಕರು ವ್ಯಕ್ತಪಡಿಸಿದ ಪ್ರೀತಿಗೆ ರೈತ ಸಮುದಾಯ ಅಭಾರಿಯಾಗಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಅನುವಾದ : ನವೀನ್ ಸೂರಿಂಜೆ


ಇದನ್ನೂ ಓದಿ: ‘ನನಗೆ ಕುರ್ಚಿ ಬೇಡ, ನನ್ನ ದೇಶದ ರೈತನಿಗೆ ಸಂತೋಷ ಬೇಕು’ – ಮತ್ತೋರ್ವ ಶಾಸಕ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...