Homeಮುಖಪುಟರೈತ ಚಳುವಳಿಯನ್ನು ಕೆಣಕುವ ಸಂಚು ಈಗ ಬಹಿರಂಗವಾಗಿದೆ - ರೈತ ಒಕ್ಕೂಟ

ರೈತ ಚಳುವಳಿಯನ್ನು ಕೆಣಕುವ ಸಂಚು ಈಗ ಬಹಿರಂಗವಾಗಿದೆ – ರೈತ ಒಕ್ಕೂಟ

"ರೈತರ ಚಳವಳಿಯನ್ನು 'ಹಿಂಸಾತ್ಮಕ' ಎಂದು ಹೇಳಲು ಸಾಧ್ಯವಿಲ್ಲ. ಯಾಕೆಂದರೆ ನಮ್ಮೊಂದಿಗೆ ಸಂಬಂಧವಿಲ್ಲದ ಕೆಲವು ಸಮಾಜ ವಿರೋಧಿ ವ್ಯಕ್ತಿ ಮತ್ತು ಸಂಘಟನೆಗಳು ರೈತರ ಹೆಸರಿನಲ್ಲಿ ಹಿಂಸಾಚಾರವನ್ನು ಮಾಡಿವೆ"

- Advertisement -
- Advertisement -

“ಕಳೆದ 7 ತಿಂಗಳ ಶಾಂತಿಯುತ ರೈತ ಚಳವಳಿಯನ್ನು ಕೆಣಕುವ ಸಂಚು ಈಗ ದೇಶದ ಮುಂದೆ ಬಹಿರಂಗವಾಗಿದೆ. ಎಸ್ ಸತ್ನಾಮ್ ಸಿಂಗ್ ಪನ್ನು ನೇತೃತ್ವದ ದೀಪ್ ಸಿಧು ಮತ್ತು ಕಿಸಾನ್ ಮಜ್ದೂರ್ ಸಂಘರ್ಷ ಸಮಿತಿಯಂತಹ ಕೆಲವು ವ್ಯಕ್ತಿಗಳು ಮತ್ತು ಸಂಘಟನೆಗಳ ಜೊತೆಗೆ ಶಾಮೀಲಾಗಿ ಕೇಂದ್ರ ಸರ್ಕಾರವು ಈ ನ್ಯಾಯಯುತ ರೈತ ಹೋರಾಟವನ್ನು ಹಿಂಸಾತ್ಮಕಗೊಳಿಸಿತು. ಕೆಂಪು ಕೋಟೆ ಮತ್ತು ದೆಹಲಿಯ ಇತರ ಭಾಗಗಳಲ್ಲಿ ನಡೆದ ಹಿಂಸಾತ್ಮಕ ಪ್ರತಿಭಟನೆಗಳಿಗೂ ನಮಗೂ ಸಂಬಂಧವಿಲ್ಲ ಎಂದು ನಾವು ಮತ್ತೆ ಸ್ಪಷ್ಟಪಡಿಸುತ್ತಿದ್ದೇವೆ” ಎಂದು ರೈತ ಸಂಘಟನೆಗಳು ತಮ್ಮ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿವೆ.

“ದೇಶದ ಮುಂದೆ ರೈತ ಹೋರಾಟವನ್ನು ಬೇರೆಯದೇ ರೀತಿಯಲ್ಲಿ ತೋರಿಸಲು ಸರ್ಕಾರ ಪ್ರಯತ್ನ ಮಾಡಿತು. ವಾಸ್ತವವಾಗಿ ರೈತರ ಮೆರವಣಿಗೆ ಶಾಂತಿಯುತವಾಗಿತ್ತು ಮತ್ತು ಸರಿಯಾದ ಮಾರ್ಗದಲ್ಲಿತ್ತು. ರಾಷ್ಟ್ರೀಯ ಚಿನ್ಹೆಗಳಿಗಾದ ಅವಮಾನವನ್ನು ರೈತರಾದ ನಾವು ಬಲವಾಗಿ ಖಂಡಿಸುತ್ತೇವೆ. ಹಾಗೆಂದು ರೈತರ ಚಳವಳಿಯನ್ನು ‘ಹಿಂಸಾತ್ಮಕ’ ಎಂದು ಹೇಳಲು ಸಾಧ್ಯವಿಲ್ಲ. ಯಾಕೆಂದರೆ ನಮ್ಮೊಂದಿಗೆ ಸಂಬಂಧವಿಲ್ಲದ ಕೆಲವು ಸಮಾಜ ವಿರೋಧಿ ವ್ಯಕ್ತಿ ಮತ್ತು ಸಂಘಟನೆಗಳು ರೈತರ ಹೆಸರಿನಲ್ಲಿ ಹಿಂಸಾಚಾರವನ್ನು ಮಾಡಿವೆ. ನಮ್ಮ ನೇತೃತ್ವದಲ್ಲಿ ಹೊರಟಿದ್ದ ಎಲ್ಲಾ ಗಡಿಗಳಲ್ಲಿನ ರೈತರು ತಮ್ಮ ಮೆರವಣಿಗೆಗಳನ್ನು ನಿನ್ನೆ ಶಾಂತಿಯುತ ರೀತಿಯಲ್ಲಿ ಪೂರ್ಣಗೊಳಿಸಿ ತಮ್ಮ ಮೂಲ ಸ್ಥಳವನ್ನು ಯಾವುದೇ ಅಡ್ಡಿ ಆತಂಕಗಳಿಲ್ಲದೆ, ಹಿಂಸೆಯಿಲ್ಲದೆ ತಲುಪಿದ್ದಾರೆ” ಎಂದು ವಿವರಿಸಲಾಗಿದೆ.

ಇದನ್ನೂ ಓದಿ: ಸರ್ಕಾರ ಮತ್ತು ಕಿಸಾನ್ ಮಜ್ದೂರ್ ಸಂಘರ್ಷ್ ಸಮಿತಿ ಸೇರಿ ಪಿತೂರಿ ನಡೆಸಿವೆ: ರೈತ ಒಕ್ಕೂಟ ಆರೋಪ

“ರೈತ ಪ್ರತಿಭಟನಾಕಾರರ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ನಾವು ಬಲವಾಗಿ ಖಂಡಿಸುತ್ತೇವೆ. ಪೊಲೀಸ್ ಮತ್ತು ಇತರ ಏಜೆನ್ಸಿಗಳನ್ನು ಬಳಸಿಕೊಂಡು ಈ ರೈತ ಹೋರಾಟವನ್ನು ಮಣಿಸಲು ಕೇಂದ್ರ ಸರ್ಕಾರ ಮಾಡಿದ ಪ್ರಯತ್ನಗಳು ಈಗಾಗಲೇ ಬಹಿರಂಗಗೊಂಡಿದೆ. ಮತ್ತು ಇನ್ನಷ್ಟೂ ಬಟಾಬಯಲಾಗುತ್ತದೆ. ಹಿಂಸಾಚಾರಕ್ಕೂ ನಿನ್ನೆ ಬಂಧಿಸಲ್ಪಟ್ಟ ಹಲವು ರೈತರಿಗೂ ಸಂಬಂಧವೇ ಇಲ್ಲ. ಹಾಗಾಗಿ ಬಂಧಿಸಲ್ಪಟ್ಟಿರುವ ಎಲ್ಲ ನಿಜವಾದ ರೈತ ಪ್ರತಿಭಟನಾಕಾರರು ಮತ್ತು ಬೆಂಬಲಿಗರನ್ನು ತಕ್ಷಣ ಬಿಡುಗಡೆ ಮಾಡಬೇಕೆಂದು ನಾವು ಒತ್ತಾಯಿಸುತ್ತೇವೆ. ರೈತರ ಗಣರಾಜ್ಯೋತ್ಸವ ಪೆರೇಡ್‌ನಲ್ಲಿ ಭಾಗಿಯಾಗಿದ್ದ ಟ್ರಾಕ್ಟರುಗಳು ಮತ್ತು ಇತರ ವಾಹನಗಳನ್ನು ಹಾನಿ ಮಾಡಲು ಪೊಲೀಸರು ಪ್ರಯತ್ನಿಸಿರುವುದನ್ನು ಕೂಡಾ ನಾವು ಖಂಡಿಸುತ್ತೇವೆ” ಎಂದು ಹೇಳಿದ್ದಾರೆ.

ರಾಷ್ಟ್ರೀಯ ಚಿಹ್ನೆಗಳನ್ನು ಕೀಳಾಗಿ ಮತ್ತು ಅಪವಿತ್ರಗೊಳಿಸಿದವರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕೆಂದು ಸಂಯುಕ್ತ ಕಿಸಾನ್ ಮೋರ್ಚಾ ಒತ್ತಾಯಿಸುತ್ತದೆ. ರೈತರು ಈ ದೇಶದ ದೊಡ್ಡ ರಾಷ್ಟ್ರೀಯವಾದಿಗಳು. ರೈತರೇ ಈ ರಾಷ್ಟ್ರದ ನಿಜವಾದ ರಕ್ಷಕರು. ರೈತರು ಮತ್ತು ರಾಷ್ಟ್ರೀಯವಾದ ಬೇರೆ ಬೇರೆ ಅಲ್ಲ ಎಂಬುದನ್ನು ಮತ್ತೆ ಮತ್ತೆ ಹೇಳಲು ಬಯಸುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.

ಆದರೂ ನಿನ್ನೆ ನಡೆದ ಕೆಲವು ವಿಷಾದನೀಯ ಘಟನೆಗಳಿಗೆ ಪ್ರತಿಭಟನೆಯ ನೇತೃತ್ವ ವಹಿಸಿಕೊಂಡ ಸಂಯುಕ್ತ ಕಿಸಾನ್ ಮೋರ್ಚ ನೈತಿಕ ಹೊಣೆಗಾರಿಕೆಯನ್ನು ವಹಿಸಿಕೊಳ್ಳುತ್ತದೆ. ತನ್ನದಲ್ಲದ ಹಿಂಸಾಚಾರದ ಹಿನ್ನೆಲೆಯಲ್ಲಿ ಸಂಯುಕ್ತ ಕಿಸಾನ್ ಮೋರ್ಚವು ಫೆಬ್ರವರಿ 1 ರಂದು ನಿಗದಿಯಾಗಿದ್ದ ಸಂಸತ್ ಛಲೋ ಕಾರ್ಯಕ್ರಮವನ್ನು ಮುಂದೂಡಲು ನಿರ್ಧರಿಸಿದೆ. ಬದಲಾಗಿ, ಜನವರಿ 30 ರಂದು, ಗಾಂಧೀಜಿಯವರ ಹುತಾತ್ಮ ದಿನದಂದು, ಶಾಂತಿ ಮತ್ತು ಅಹಿಂಸೆಯನ್ನು ಸಾರಲು ದೇಶಾದ್ಯಂತ ರೈತರು ಒಂದು ದಿನದ ಉಪವಾಸ ಆಚರಿಸಲಿದ್ದೇವೆ ಎಂದು ಹೇಳಿದರು.

“ದೀಪ್ ಸಿದ್ದು ಅವರಂತಹ ಕುತ್ಸಿತ ವ್ಯಕ್ತಿಗಳಿಗೆ ಸಾಮಾಜಿಕ ಬಹಿಷ್ಕಾರ ಹಾಕಬೇಕು” ಎಂದು ಸಂಯುಕ್ತ ಕಿಸಾನ್ ಮೋರ್ಚ್ ಸಾರ್ವಜನಿಕರಿಗೆ ಮನವಿ ಮಾಡಿದೆ.

ಇದನ್ನೂ ಓದಿ: ಕೆಂಪುಕೋಟೆ ಅಹಿತಕರ ಘಟನೆಯ ರೂವಾರಿ – ಯಾರು ಈ ದೀಪ್ ಸಿಧು?

ದೆಹಲಿಯಲ್ಲಿ ಮಾತ್ರವಲ್ಲದೆ ರೈತ ಸಂಘಟನೆಗಳ ರೈತ ಗಣರಾಜ್ಯೋತ್ಸವ ಪೆರೇಡ್ ಅನ್ನು ಅನೇಕ ರಾಜ್ಯಗಳಲ್ಲಿ ನಡೆಸಲಾಯಿತು. ಬಿಹಾರ, ಪಾಟ್ನಾ ಸೇರಿದಂತೆ ದೇಶದ ಅನೇಕ ಸ್ಥಳಗಳಲ್ಲಿ ರೈತ ಗಣರಾಜ್ಯೋತ್ಸವವನ್ನು ರೈತರು ಉತ್ಸಾಹದಿಂದ ಆಚರಿಸಿದರು. ಮಧ್ಯಪ್ರದೇಶದಲ್ಲಂತೂ ರೈತರು ಈ ಅದ್ಭುತ ದಿನವನ್ನು ಅತ್ಯಂತ ಉತ್ಸಾಹದಿಂದ ಆಚರಿಸಿದ್ದನ್ನು ದೇಶದ ರೈತರು ಗಮನಿಸಿದ್ದಾರೆ. ದೆಹಲಿಯಲ್ಲಿ ನಡೆದ ರೈತ ಮೆರವಣಿಗೆಯಲ್ಲಿ ಎನ್‌ಎಪಿಎಂನ ಕಾರ್ಮಿಕರು ಸೇರಿಕೊಂಡರು. ಮುಂಬೈನ ಆಜಾದ್ ಮೈದಾನದಲ್ಲಿ ಬೃಹತ್ ರ್ಯಾಲಿ ಆಯೋಜಿಸಲಾಗಿತ್ತು. ಬೆಂಗಳೂರಿನಲ್ಲಿ ನಡೆದ ಅಭೂತಪೂರ್ವ ರೈತರ ಪೆರೇಡ್‌ನಲ್ಲಿ ಸಾವಿರಾರು ರೈತರು ಭಾಗವಹಿಸಿದ್ದರು. ಇವೆಲ್ಲವೂ ಸಂಪೂರ್ಣವಾಗಿ ಶಾಂತಿಯುತವಾಗಿತ್ತು. ರೈತರ ಗಣರಾಜ್ಯ ಮೆರವಣಿಗೆಯಲ್ಲಿ ತಮಿಳುನಾಡು, ಕೇರಳ, ಹೈದರಾಬಾದ್, ಒಡಿಶಾ, ಬಿಹಾರ, ಪಶ್ಚಿಮ ಬಂಗಾಳ, ಛತ್ತೀಸ್ ಘಡ್ ಮತ್ತು ಉತ್ತರ ಪ್ರದೇಶದ ರೈತರು ಭಾಗವಹಿಸಿದ್ದರು. ಮುಂದಿನ ದಿನಗಳಲ್ಲಿ ಸಂಘಟಿತ ರೈತರ ಇತರ ಯೋಜನೆಗಳು ಮತ್ತು ಚಟುವಟಿಕೆಗಳನ್ನು ಪ್ರಕಟಿಸಲಾಗುವುದು ಎಂದು ಹೇಳಿದ್ದಾರೆ.

ನಮ್ಮ ರೈತ ಚಳುವಳಿ ಎಂದೆಂದಿಗೂ ಶಾಂತಿಯುತವಾಗಿ ಮುಂದುವರೆಯುತ್ತದೆ ಎಂಬುದನ್ನು ನಾವು ಮತ್ತೊಮ್ಮೆ ಸ್ಪಷ್ಟಪಡಿಸಲು ಬಯಸುತ್ತೇವೆ. ದೇಶದ ರೈತರು ಬಹಳ ಆತ್ಮವಿಶ್ವಾಸ ಮತ್ತು ಶಾಂತಿಯುತವಾಗಿ ಈಗಿನ ಕೇಂದ್ರ ಸರ್ಕಾರದೊಂದಿಗೆ ತಮ್ಮ ಭಿನ್ನಾಭಿಪ್ರಾಯವನ್ನು ಮಂಡಿಸುತ್ತಾರೆ. ಜನವರಿ 26 ರಂದು ನಡೆದ ರೈತರ ಪೆರೇಡ್ ಗೆ ದೇಶದ ನಾಗರಿಕರು ವ್ಯಕ್ತಪಡಿಸಿದ ಪ್ರೀತಿಗೆ ರೈತ ಸಮುದಾಯ ಅಭಾರಿಯಾಗಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಅನುವಾದ : ನವೀನ್ ಸೂರಿಂಜೆ


ಇದನ್ನೂ ಓದಿ: ‘ನನಗೆ ಕುರ್ಚಿ ಬೇಡ, ನನ್ನ ದೇಶದ ರೈತನಿಗೆ ಸಂತೋಷ ಬೇಕು’ – ಮತ್ತೋರ್ವ ಶಾಸಕ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...