Homeಚಳವಳಿನೀರಿಗಾಗಿ ನಿಲ್ಲದ ಹೋರಾಟ: ದ್ವಿಶತಕ ದಿನ ಪೂರೈಸಿದ ಅನಿರ್ದಿಷ್ಟಾವಧಿ ಧರಣಿ

ನೀರಿಗಾಗಿ ನಿಲ್ಲದ ಹೋರಾಟ: ದ್ವಿಶತಕ ದಿನ ಪೂರೈಸಿದ ಅನಿರ್ದಿಷ್ಟಾವಧಿ ಧರಣಿ

- Advertisement -
- Advertisement -

ಮಸ್ಕಿ ಕ್ಷೇತ್ರದ ಬರಪೀಡಿತ ನೂರಾರು ಹಳ್ಳಿಗಳ ರೈತರು ನಾರಾಯಣಪುರ ಬಲದಂಡೆ 5ಎ ಪಾಮನಕಲ್ಲೂರು ಶಾಖಾ ಕಾಲುವೆ ಯೋಜನೆ ಜಾರಿಗಾಗಿ ಹಮ್ಮಿಕೊಂಡಿರುವ ಅನಿರ್ದಿಷ್ಟಾವಧಿ ಧರಣಿ ಮಂಗಳವಾರ 201 ದಿನ ಪೂರೈಸಿದೆ.

1.72 ಲಕ್ಷ ಹೆಕ್ಟೇರ್ ಭೂಮಿಗೆ ಕೃಷ್ಣಾ ನೀರು ಕೊಡಿ ಎಂಬುದು 107 ಹಳ್ಳಿಗಳ, ಮುಖ್ಯವಾಗಿ 58 ಹಳ್ಳಿಗಳ ಹಕ್ಕೊತ್ತಾಯ. ಇದಕ್ಕಾಗಿ ದಶಕಗಳ ಹೋರಾಟ ನಡೆದಿದೆ. ಈ ವರ್ಷ ಕಳೆದ 200 ದಿನಗಳಿಂದ ನಿರಂತರವಾಗಿ ಈ ರೈತರು ಹೋರಾಟದಲ್ಲಿ ತೊಡಗಿಸಿಕೊಂಡಿದ್ದಾರೆ. ಮಸ್ಕಿ ವಿಧಾನಸಭಾ ಚುನಾವಣೆಯಲ್ಲಿಯೂ ಪ್ರಮುಖ ಪಾತ್ರ ವಹಿಸಿದ್ದರು.

ಏನಿದು NRBC_5A ಯೋಜನೆ?

ಮಸ್ಕಿ ತಾಲ್ಲೂಕಿನ ಬರಪೀಡಿತ 58 ಹಳ್ಳಿಗಳ ಗ್ರಾಮಸ್ಥರು, ರೈತರು ಕಳೆದ 12 ವರ್ಷಗಳಿಂದ ತಮ್ಮ ಗ್ರಾಮಕ್ಕೆ ನೀರಾವರಿ ಯೋಜನೆ ಬೇಕೆಂದು ಆಗ್ರಹಿಸಿ ಹೋರಾಟ ಆರಂಭಿಸಿದ್ದಾರೆ. ಕರ್ನಾಟಕ ನೀರಾವರಿ ಸಂಘ ಕಟ್ಟಿ ತಮ್ಮೂರಿಗೆ ಕಾಲುವೇ ನೀರು ಬಿಡಬೇಕೆಂದು ನೂರಾರು ಪ್ರತಿಭಟನೆಗಳನ್ನು ನಡೆಸಿದ್ದಾರೆ. ಈ 12 ವರ್ಷಗಳ ಅವಧಿಯಲ್ಲಿ ನಾಲ್ಕು ಸರ್ಕಾರಗಳು ಬದಲಾಗಿವೆ. ಎಲ್ಲಾ ಸರ್ಕಾರಗಳು ಭರವಸೆ ನೀಡಿವೆಯೇ ಹೊರತು ಒಬ್ಬರು ಕಾರ್ಯರೂಪಕ್ಕೆ ತಂದಿಲ್ಲ ಎಂದು ರೈತರು ಆರೋಪಿಸುತ್ತಾರೆ.

ಮಸ್ಕಿ ವಿಧಾನಸಭಾ ಉಪಚುನಾವಣೆಯಲ್ಲಿ ಈ ಹೋರಾಟ ಬಹಳ ಪ್ರಾಧಾನ್ಯತೆ ಪಡೆದುಕೊಂಡಿತ್ತು. ಆಡಳಿತ ಮತ್ತು ವಿರೋಧ ಪಕ್ಷಗಳು ಹೋರಾಟ ಸ್ಥಳಕ್ಕೆ ಭೇಟಿ ನೀಡಿ ಮತ ಯಾಚಿಸಿದ್ದವು. ಆದರೆ ರೈತರು ಬಿಜೆಪಿ ವಿರುದ್ಧ ಮತ ಹಾಕುವಂತೆ ಕರೆ ನೀಡಿದ್ದರು.

ಈ ಕ್ಷೇತ್ರದಲ್ಲಿ ಜಯಗಳಿಸಿದ ಕಾಂಗ್ರೆಸ್‌ ಶಾಸಕರಾದ ಬಸವನಗೌಡ ತುರುವಿಹಾಳರವರು ಎನ್.ಆರ್.ಬಿ.ಸಿ 5ಎ ನಾಲಾ ಯೋಜನೆ ಅನುಷ್ಠಾನಕ್ಕೆ ಸರ್ಕಾರದ ಮೇಲೆ ಒತ್ತಡ ಹೇರುವಂತೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರಿಗೆ ಇಂದು ಮನವಿ ಪತ್ರ ಸಲ್ಲಿಸಿದ್ದಾರೆ.

ಈ ಉಪಚುನಾವಣೆ ಫಲಿತಾಂಶದ ನಂತರವೂ ಹೋರಾಟ ಮಾತ್ರ ನಿಂತಿಲ್ಲ. ಪ್ರತಿಭಟನೆ, ಹೋರಾಟ ಮಾಡಬಾರದು ಎಂಬ ಪೊಲೀಸರ ಆದೇಶಗಳಿಗೆ ಹೋರಾಟಗಾರರು ಶಾಂತ ರೀತಿಯಿಂದಲೇ ಉತ್ತರಿಸಿದ್ದರು. ನಾವು ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಂಡೇ ಹೋರಾಟ ಮುಂದುವರೆಸುತ್ತೇವೆ ಎಂದು ರೈತರು ಸ್ಪಷ್ಟವಾಗಿ ಹೇಳಿದ್ದರು. ಪಾಮನಕಲ್ಲೂರಿನಲ್ಲಿ ನಡೆಯುತ್ತಿದ್ದ ಹೋರಾಟವನ್ನು ಇತ್ತೀಚೆಗೆ ಚಿಲ್ಕರಾಗಿಗೆ ಸ್ಥಳಾಂತರಿಸಲಾಗಿತ್ತು.

ಕೋವಿಡ್ ಸಾಂಕ್ರಾಮಿಕ ರೋಗದ ನಿಯಮಗಳನ್ನು ಪಾಲಿಸುತ್ತಾ ಹೋರಾಟ ಸಮಿತಿ ಗೌರವಾಧ್ಯಕ್ಷ ತಿಮ್ಮನಗೌಡ ಚಿಲ್ಕರಾಗಿ, ಮುಖಂಡ ಮಲ್ಲರಡ್ಡೆಪ್ಪ ಕಳ್ಳಿಲಿಂಗಸುಗೂರು ಸೇರಿದಂತೆ ಗ್ರಾಮದ ರೈತರು ಹೋರಾಟವನ್ನು ಮುಂದುವರಿಸಿದ್ದಾರೆ.


ಇದನ್ನೂ ಓದಿ: ಲಾಕ್‌ಡೌನ್ – ಪೊಲೀಸ್ ಬೆದರಿಕೆ: ಜಗ್ಗದ, ಬಗ್ಗದ ಮಸ್ಕಿಯ ನೀರಾವರಿ ಹೋರಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...