Homeಚಳವಳಿನೀರಿಗಾಗಿ ನಿಲ್ಲದ ಹೋರಾಟ: ದ್ವಿಶತಕ ದಿನ ಪೂರೈಸಿದ ಅನಿರ್ದಿಷ್ಟಾವಧಿ ಧರಣಿ

ನೀರಿಗಾಗಿ ನಿಲ್ಲದ ಹೋರಾಟ: ದ್ವಿಶತಕ ದಿನ ಪೂರೈಸಿದ ಅನಿರ್ದಿಷ್ಟಾವಧಿ ಧರಣಿ

- Advertisement -
- Advertisement -

ಮಸ್ಕಿ ಕ್ಷೇತ್ರದ ಬರಪೀಡಿತ ನೂರಾರು ಹಳ್ಳಿಗಳ ರೈತರು ನಾರಾಯಣಪುರ ಬಲದಂಡೆ 5ಎ ಪಾಮನಕಲ್ಲೂರು ಶಾಖಾ ಕಾಲುವೆ ಯೋಜನೆ ಜಾರಿಗಾಗಿ ಹಮ್ಮಿಕೊಂಡಿರುವ ಅನಿರ್ದಿಷ್ಟಾವಧಿ ಧರಣಿ ಮಂಗಳವಾರ 201 ದಿನ ಪೂರೈಸಿದೆ.

1.72 ಲಕ್ಷ ಹೆಕ್ಟೇರ್ ಭೂಮಿಗೆ ಕೃಷ್ಣಾ ನೀರು ಕೊಡಿ ಎಂಬುದು 107 ಹಳ್ಳಿಗಳ, ಮುಖ್ಯವಾಗಿ 58 ಹಳ್ಳಿಗಳ ಹಕ್ಕೊತ್ತಾಯ. ಇದಕ್ಕಾಗಿ ದಶಕಗಳ ಹೋರಾಟ ನಡೆದಿದೆ. ಈ ವರ್ಷ ಕಳೆದ 200 ದಿನಗಳಿಂದ ನಿರಂತರವಾಗಿ ಈ ರೈತರು ಹೋರಾಟದಲ್ಲಿ ತೊಡಗಿಸಿಕೊಂಡಿದ್ದಾರೆ. ಮಸ್ಕಿ ವಿಧಾನಸಭಾ ಚುನಾವಣೆಯಲ್ಲಿಯೂ ಪ್ರಮುಖ ಪಾತ್ರ ವಹಿಸಿದ್ದರು.

ಏನಿದು NRBC_5A ಯೋಜನೆ?

ಮಸ್ಕಿ ತಾಲ್ಲೂಕಿನ ಬರಪೀಡಿತ 58 ಹಳ್ಳಿಗಳ ಗ್ರಾಮಸ್ಥರು, ರೈತರು ಕಳೆದ 12 ವರ್ಷಗಳಿಂದ ತಮ್ಮ ಗ್ರಾಮಕ್ಕೆ ನೀರಾವರಿ ಯೋಜನೆ ಬೇಕೆಂದು ಆಗ್ರಹಿಸಿ ಹೋರಾಟ ಆರಂಭಿಸಿದ್ದಾರೆ. ಕರ್ನಾಟಕ ನೀರಾವರಿ ಸಂಘ ಕಟ್ಟಿ ತಮ್ಮೂರಿಗೆ ಕಾಲುವೇ ನೀರು ಬಿಡಬೇಕೆಂದು ನೂರಾರು ಪ್ರತಿಭಟನೆಗಳನ್ನು ನಡೆಸಿದ್ದಾರೆ. ಈ 12 ವರ್ಷಗಳ ಅವಧಿಯಲ್ಲಿ ನಾಲ್ಕು ಸರ್ಕಾರಗಳು ಬದಲಾಗಿವೆ. ಎಲ್ಲಾ ಸರ್ಕಾರಗಳು ಭರವಸೆ ನೀಡಿವೆಯೇ ಹೊರತು ಒಬ್ಬರು ಕಾರ್ಯರೂಪಕ್ಕೆ ತಂದಿಲ್ಲ ಎಂದು ರೈತರು ಆರೋಪಿಸುತ್ತಾರೆ.

ಮಸ್ಕಿ ವಿಧಾನಸಭಾ ಉಪಚುನಾವಣೆಯಲ್ಲಿ ಈ ಹೋರಾಟ ಬಹಳ ಪ್ರಾಧಾನ್ಯತೆ ಪಡೆದುಕೊಂಡಿತ್ತು. ಆಡಳಿತ ಮತ್ತು ವಿರೋಧ ಪಕ್ಷಗಳು ಹೋರಾಟ ಸ್ಥಳಕ್ಕೆ ಭೇಟಿ ನೀಡಿ ಮತ ಯಾಚಿಸಿದ್ದವು. ಆದರೆ ರೈತರು ಬಿಜೆಪಿ ವಿರುದ್ಧ ಮತ ಹಾಕುವಂತೆ ಕರೆ ನೀಡಿದ್ದರು.

ಈ ಕ್ಷೇತ್ರದಲ್ಲಿ ಜಯಗಳಿಸಿದ ಕಾಂಗ್ರೆಸ್‌ ಶಾಸಕರಾದ ಬಸವನಗೌಡ ತುರುವಿಹಾಳರವರು ಎನ್.ಆರ್.ಬಿ.ಸಿ 5ಎ ನಾಲಾ ಯೋಜನೆ ಅನುಷ್ಠಾನಕ್ಕೆ ಸರ್ಕಾರದ ಮೇಲೆ ಒತ್ತಡ ಹೇರುವಂತೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರಿಗೆ ಇಂದು ಮನವಿ ಪತ್ರ ಸಲ್ಲಿಸಿದ್ದಾರೆ.

ಈ ಉಪಚುನಾವಣೆ ಫಲಿತಾಂಶದ ನಂತರವೂ ಹೋರಾಟ ಮಾತ್ರ ನಿಂತಿಲ್ಲ. ಪ್ರತಿಭಟನೆ, ಹೋರಾಟ ಮಾಡಬಾರದು ಎಂಬ ಪೊಲೀಸರ ಆದೇಶಗಳಿಗೆ ಹೋರಾಟಗಾರರು ಶಾಂತ ರೀತಿಯಿಂದಲೇ ಉತ್ತರಿಸಿದ್ದರು. ನಾವು ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಂಡೇ ಹೋರಾಟ ಮುಂದುವರೆಸುತ್ತೇವೆ ಎಂದು ರೈತರು ಸ್ಪಷ್ಟವಾಗಿ ಹೇಳಿದ್ದರು. ಪಾಮನಕಲ್ಲೂರಿನಲ್ಲಿ ನಡೆಯುತ್ತಿದ್ದ ಹೋರಾಟವನ್ನು ಇತ್ತೀಚೆಗೆ ಚಿಲ್ಕರಾಗಿಗೆ ಸ್ಥಳಾಂತರಿಸಲಾಗಿತ್ತು.

ಕೋವಿಡ್ ಸಾಂಕ್ರಾಮಿಕ ರೋಗದ ನಿಯಮಗಳನ್ನು ಪಾಲಿಸುತ್ತಾ ಹೋರಾಟ ಸಮಿತಿ ಗೌರವಾಧ್ಯಕ್ಷ ತಿಮ್ಮನಗೌಡ ಚಿಲ್ಕರಾಗಿ, ಮುಖಂಡ ಮಲ್ಲರಡ್ಡೆಪ್ಪ ಕಳ್ಳಿಲಿಂಗಸುಗೂರು ಸೇರಿದಂತೆ ಗ್ರಾಮದ ರೈತರು ಹೋರಾಟವನ್ನು ಮುಂದುವರಿಸಿದ್ದಾರೆ.


ಇದನ್ನೂ ಓದಿ: ಲಾಕ್‌ಡೌನ್ – ಪೊಲೀಸ್ ಬೆದರಿಕೆ: ಜಗ್ಗದ, ಬಗ್ಗದ ಮಸ್ಕಿಯ ನೀರಾವರಿ ಹೋರಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...