Homeಕರ್ನಾಟಕಸಂವಿಧಾನ ಒಂದು ಅಸ್ತ್ರ; ಆದರೆ ಸಂಸ್ಥೆಗಳಿಲ್ಲದಿದ್ದರೆ ಅರ್ಥಹೀನ: ರಾಹುಲ್‌‌

ಸಂವಿಧಾನ ಒಂದು ಅಸ್ತ್ರ; ಆದರೆ ಸಂಸ್ಥೆಗಳಿಲ್ಲದಿದ್ದರೆ ಅರ್ಥಹೀನ: ರಾಹುಲ್‌‌

ಮಾಯಾವತಿಯವರ ವಿರುದ್ಧ ವಾಗ್ದಾಳಿ ನಡೆಸಿರುವ ರಾಹುಲ್‌ ಗಾಂಧಿ, “ಮೈತ್ರಿ ಮಾಡಿಕೊಳ್ಳುವಂತೆ ಸಂದೇಶ ಕಳುಹಿಸಿ ಮುಖ್ಯಮಂತ್ರಿಯಾಗುವಂತೆ ಹೇಳಿದ್ದೆವು. ಅವರು ನಮ್ಮೊಂದಿಗೆ ಮಾತನಾಡಲಿಲ್ಲ” ಎಂದಿದ್ದಾರೆ.

- Advertisement -
- Advertisement -

ಅಧಿಕಾರ ಕೇಂದ್ರದಲ್ಲಿ ಹುಟ್ಟಿದ್ದರೂ ಅಧಿಕಾರಕ್ಕಾಗಿ ಯಾವುದೇ ದುರಾಸೆ ಇಲ್ಲ ಎಂದು ಹೇಳಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಸಂವಿಧಾನಿಕ ಸಂಸ್ಥೆಗಳನ್ನು ಆರ್‌ಎಸ್‌ಎಸ್‌ ನಿಯಂತ್ರಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಮಾಜಿ ಐಎಎಸ್ ಅಧಿಕಾರಿ ಕೆ.ರಾಜು ಸಂಪಾದಿಸಿರುವ ಪ್ರಬಂಧಗಳ ಸಂಗ್ರಹವನ್ನು ಜವಾಹರ ಭವನದಲ್ಲಿ ಬಿಡುಗಡೆ ಮಾಡಿ ಅವರು ಮಾತನಾಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಅಧಿಕಾರದ ಹುಡುಕಾಟದಲ್ಲಿ ನಿರಂತರವಾಗಿ ಇರುವ ರಾಜಕಾರಣಿಗಳಿದ್ದಾರೆ. ನಾನು ಅಧಿಕಾರದ ಕೇಂದ್ರದಲ್ಲಿ ಹುಟ್ಟಿದ್ದೇನೆ. ಆದರೆ ಅದರ ಮೇಲೆ ನನಗೆ ಆಸಕ್ತಿಯಿಲ್ಲ. ನಾನು ಜನರನ್ನು ಮತ್ತು ದೇಶವನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸುತ್ತೇನೆ. ಈ ಪ್ರಕ್ರಿಯೆಯಲ್ಲಿ ಅಸ್ಪೃಶ್ಯತೆ ಇನ್ನೂ ಅಸ್ತಿತ್ವದಲ್ಲಿ ಇರುವ ವಿಶ್ವದ ಏಕೈಕ ದೇಶ ಭಾರತ ಎಂದು ನಾನು ತಿಳಿದುಕೊಂಡಿದ್ದೇನೆ” ಎಂದು ವಿಷಾದಿಸಿದ್ದಾರೆ.

ಜನರಿಂದ ಸಿಗುತ್ತಿರುವ ನಿರಂತರ ಪ್ರೀತಿಗೆ ಕೃತಜ್ಞತೆ ಸಲ್ಲಿಸಿದ ರಾಹುಲ್ ಗಾಂಧಿ, “ನನ್ನ ದೇಶವು ನನ್ನನ್ನು ಬೇಷರತ್ತಾಗಿ ಪ್ರೀತಿಸಿದೆ. ಅದಕ್ಕಾಗಿ ನಾನು ಶಾಶ್ವತವಾಗಿ ಋಣಿಯಾಗಿದ್ದೇನೆ” ಎಂದಿದ್ದಾರೆ.

ಜನರು ಒಂದು ನಿರ್ದಿಷ್ಟ ಜಾತಿ ಅಥವಾ ಧರ್ಮಕ್ಕೆ ಸೇರಿದವರಾಗಿರುವುದರಿಂದ ಮಾತ್ರ ಗುರಿಯಾಗುತ್ತಿರುವ ಬಗ್ಗೆ ಮಾತನಾಡಿದ ಅವರು, “ಬೇರೆ ಜಾತಿ ಅಥವಾ ಧರ್ಮಕ್ಕೆ ಸೇರಿದವರು ಎಂಬ ಕಾರಣಕ್ಕಾಗಿ ಮುಗ್ಧ ಜನರ ಮೇಲೆ ಹಲ್ಲೆ ಮಾಡಿದ ಸಂದರ್ಭಗಳನ್ನು ನಾನು ನೋಡಿದ್ದೇನೆ. ದೇಶದಲ್ಲಿ ದಲಿತರಿಗೆ ಈ ಅನ್ಯಾಯವಾಗುತ್ತಿದೆ” ಎಂದಿದ್ದಾರೆ.

ಸಂವಿಧಾನವು ಒಂದು ಅಸ್ತ್ರವಾಗಿದೆ. ಆದರೆ ಸಂಸ್ಥೆಗಳಿಲ್ಲದೆ ಅದು ಅರ್ಥಹೀನವಾಗಿದೆ ಎಂದಿರುವ ರಾಹುಲ್‌ ಗಾಂಧಿ, “ಸಂಸ್ಥೆಗಳನ್ನು ಆರ್‌ಎಸ್‌ಎಸ್ ವಶಪಡಿಸಿಕೊಂಡಿದೆ” ಎಂದು ದೂರಿದ್ದಾರೆ.

ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಮುಖ್ಯಸ್ಥೆ ಮಾಯಾವತಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಉತ್ತರ ಪ್ರದೇಶ ಚುನಾವಣೆಯಲ್ಲಿ ಒಟ್ಟಾಗಿ ಸ್ಪರ್ಧಿಸುವ ಕಾಂಗ್ರೆಸ್ ಪ್ರಸ್ತಾಪಕ್ಕೆ ಅವರು ಪ್ರತಿಕ್ರಿಯಿಸಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಅಂಬೇಡ್ಕರ್ ಮತ್ತು ಮಹಾತ್ಮ ಗಾಂಧಿಯವರು ತೋರಿಸಿದ ಹಾದಿಯಲ್ಲಿ ದಲಿತರು ತಮ್ಮ ಹಕ್ಕುಗಳಿಗಾಗಿ ಹೋರಾಡಬೇಕು ಎಂದು ಎಚ್ಚರಿಸಿರುವ ಅವರು, “ಸಂವಿಧಾನವು ಭಾರತದ ಅಸ್ತ್ರವಾಗಿದೆ. ಆದರೆ ಸಂಸ್ಥೆಗಳಿಲ್ಲದಿದ್ದರೆ ಸಂವಿಧಾನಕ್ಕೆ ಅರ್ಥವಿಲ್ಲ. ನಾವು ಸಂವಿಧಾನವನ್ನು ರಕ್ಷಿಸುವ ಬಗ್ಗೆ ಮಾತನಾಡುತ್ತೇವೆ. ಆದರೆ ಸಂವಿಧಾನವನ್ನು ಸಂಸ್ಥೆಗಳ ಜೊತೆಯಲ್ಲಿ ಹೇಗೆ ಜಾರಿಗೆ ತರಲಾಗುತ್ತದೆ? ಎಲ್ಲಾ ಸಂಸ್ಥೆಗಳು ಆರ್‌ಎಸ್‌ಎಸ್ ಕೈಯಲ್ಲಿವೆ” ಎಂದಿದ್ದಾರೆ.

“ಇದು ಹೊಸ ದಾಳಿಯಲ್ಲ, ಮಹಾತ್ಮ ಗಾಂಧಿಯವರನ್ನು ಹತ್ಯೆ ಮಾಡಿದ ದಿನದಿಂದಲೂ ಪ್ರಾರಂಭವಾಯಿತು” ಎಂದು ತಿಳಿಸಿದ್ದಾರೆ.

“ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರು ಜನರಿಗೆ ಅಸ್ತ್ರವನ್ನು ನೀಡಿದರು. ಆದರೆ ಇಂದು ಆ ಅಸ್ತ್ರಕ್ಕೆ ಅರ್ಥವಿಲ್ಲ. ಏಕೆಂದರೆ ಮಾಧ್ಯಮಗಳನ್ನು ನಿಯಂತ್ರಿಸಲಾಗುತ್ತಿದೆ. ರಾಜಕೀಯ ನಾಯಕರನ್ನು ನಿಯಂತ್ರಿಸಲು ಸ್ಪೈವೇರ್ (ಪೆಗಾಸಸ್) ಬಳಸಲಾಗುತ್ತಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ರಾಹುಲ್ ಗಾಂಧಿ ಅವರು ಯಾವುದೇ ಹಣವನ್ನು ತೆಗೆದುಕೊಂಡಿದ್ದರೆ ಸರ್ಕಾರದ ವಿರುದ್ಧ ಮಾತನಾಡಲು ಸಾಧ್ಯವಾಗುತ್ತಿರಲಿಲ್ಲ. ಸಿಬಿಐ ಮತ್ತು ಇಡಿ ರಾಜಕೀಯ ವ್ಯವಸ್ಥೆಯನ್ನು ನಿಯಂತ್ರಿಸುತ್ತವೆ ಎಂದು ಹೇಳಿದ್ದಾರೆ.

ಮಾಯಾವತಿಯವರ ವಿರುದ್ಧ ವಾಗ್ದಾಳಿ ನಡೆಸಿದ ಅವರು, “ಮೈತ್ರಿ ಮಾಡಿಕೊಳ್ಳುವಂತೆ ಸಂದೇಶ ಕಳುಹಿಸಿ ಮುಖ್ಯಮಂತ್ರಿಯಾಗುವಂತೆ ಹೇಳಿದ್ದೆವು, ಅವರು ನಮ್ಮೊಂದಿಗೆ ಮಾತನಾಡಲಿಲ್ಲ” ಎಂದು ತಿಳಿಸಿದ್ದಾರೆ.

ಉತ್ತರ ಪ್ರದೇಶದ ದಲಿತ ಧ್ವನಿಯನ್ನು ಉಚ್ಚರಿಸಿದ್ದಕ್ಕಾಗಿ ಕಾನ್ಶಿರಾಮ್ ಅವರ ಬಗ್ಗೆ ನನಗೆ ಗೌರವವಿದೆ ಎಂದು ಹೇಳಿದ ರಾಹುಲ್ ಗಾಂಧಿ, “ಇದರಿಂದಾಗಿ ಕಾಂಗ್ರೆಸ್ ನಷ್ಟವನ್ನು ಅನುಭವಿಸಿತು. ಮಾಯಾವತಿ ಅವರು ಆಡಳಿತಾರೂಢ ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸ್ಪಷ್ಟ ಮಾರ್ಗವನ್ನು ತೋರಿದರು. ಅದಕ್ಕೆ ಕಾರಣ- ಸಿಬಿಐ, ಇಡಿ ಮತ್ತು ಪೆಗಾಸಸ್” ಎಂದು ದೂರಿದ್ದಾರೆ.

ಕೆ.ರಾಜು ಅವರು ತಮ್ಮ ಹೊಸ ಪುಸ್ತಕ “ದ ದಲಿತ್ ಟ್ರುತ್: ದಿ ಬ್ಯಾಟಲ್ ಫಾರ್ ರಿಯಲೈಸಿಂಗ್ ಅಂಬೇಡ್ಕರ್’ಸ್ ವಿಷನ್”ನಲ್ಲಿ ದಲಿತರ ಧ್ವನಿಯನ್ನು ಚಿತ್ರಿಸಲು ಪ್ರಯತ್ನಿಸಿದ್ದಾರೆ. ಇದು ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾದ ‘ರೀಥಿಂಕಿಂಗ್ ಇಂಡಿಯಾ’ ಸರಣಿಯ ಎಂಟನೇ ಸಂಪುಟವಾಗಿದೆ.


ಇದನ್ನೂ ಓದಿರಿ: ವಿಮಾನಗಳಲ್ಲಿ ಮಾಂಸಾಹಾರ ನಿಷೇಧಿಸುವಂತೆ ಒಕ್ಕೂಟ ಸರ್ಕಾರಕ್ಕೆ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...