Homeಕರ್ನಾಟಕಸಂವಿಧಾನ ಒಂದು ಅಸ್ತ್ರ; ಆದರೆ ಸಂಸ್ಥೆಗಳಿಲ್ಲದಿದ್ದರೆ ಅರ್ಥಹೀನ: ರಾಹುಲ್‌‌

ಸಂವಿಧಾನ ಒಂದು ಅಸ್ತ್ರ; ಆದರೆ ಸಂಸ್ಥೆಗಳಿಲ್ಲದಿದ್ದರೆ ಅರ್ಥಹೀನ: ರಾಹುಲ್‌‌

ಮಾಯಾವತಿಯವರ ವಿರುದ್ಧ ವಾಗ್ದಾಳಿ ನಡೆಸಿರುವ ರಾಹುಲ್‌ ಗಾಂಧಿ, “ಮೈತ್ರಿ ಮಾಡಿಕೊಳ್ಳುವಂತೆ ಸಂದೇಶ ಕಳುಹಿಸಿ ಮುಖ್ಯಮಂತ್ರಿಯಾಗುವಂತೆ ಹೇಳಿದ್ದೆವು. ಅವರು ನಮ್ಮೊಂದಿಗೆ ಮಾತನಾಡಲಿಲ್ಲ” ಎಂದಿದ್ದಾರೆ.

- Advertisement -
- Advertisement -

ಅಧಿಕಾರ ಕೇಂದ್ರದಲ್ಲಿ ಹುಟ್ಟಿದ್ದರೂ ಅಧಿಕಾರಕ್ಕಾಗಿ ಯಾವುದೇ ದುರಾಸೆ ಇಲ್ಲ ಎಂದು ಹೇಳಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಸಂವಿಧಾನಿಕ ಸಂಸ್ಥೆಗಳನ್ನು ಆರ್‌ಎಸ್‌ಎಸ್‌ ನಿಯಂತ್ರಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಮಾಜಿ ಐಎಎಸ್ ಅಧಿಕಾರಿ ಕೆ.ರಾಜು ಸಂಪಾದಿಸಿರುವ ಪ್ರಬಂಧಗಳ ಸಂಗ್ರಹವನ್ನು ಜವಾಹರ ಭವನದಲ್ಲಿ ಬಿಡುಗಡೆ ಮಾಡಿ ಅವರು ಮಾತನಾಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಅಧಿಕಾರದ ಹುಡುಕಾಟದಲ್ಲಿ ನಿರಂತರವಾಗಿ ಇರುವ ರಾಜಕಾರಣಿಗಳಿದ್ದಾರೆ. ನಾನು ಅಧಿಕಾರದ ಕೇಂದ್ರದಲ್ಲಿ ಹುಟ್ಟಿದ್ದೇನೆ. ಆದರೆ ಅದರ ಮೇಲೆ ನನಗೆ ಆಸಕ್ತಿಯಿಲ್ಲ. ನಾನು ಜನರನ್ನು ಮತ್ತು ದೇಶವನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸುತ್ತೇನೆ. ಈ ಪ್ರಕ್ರಿಯೆಯಲ್ಲಿ ಅಸ್ಪೃಶ್ಯತೆ ಇನ್ನೂ ಅಸ್ತಿತ್ವದಲ್ಲಿ ಇರುವ ವಿಶ್ವದ ಏಕೈಕ ದೇಶ ಭಾರತ ಎಂದು ನಾನು ತಿಳಿದುಕೊಂಡಿದ್ದೇನೆ” ಎಂದು ವಿಷಾದಿಸಿದ್ದಾರೆ.

ಜನರಿಂದ ಸಿಗುತ್ತಿರುವ ನಿರಂತರ ಪ್ರೀತಿಗೆ ಕೃತಜ್ಞತೆ ಸಲ್ಲಿಸಿದ ರಾಹುಲ್ ಗಾಂಧಿ, “ನನ್ನ ದೇಶವು ನನ್ನನ್ನು ಬೇಷರತ್ತಾಗಿ ಪ್ರೀತಿಸಿದೆ. ಅದಕ್ಕಾಗಿ ನಾನು ಶಾಶ್ವತವಾಗಿ ಋಣಿಯಾಗಿದ್ದೇನೆ” ಎಂದಿದ್ದಾರೆ.

ಜನರು ಒಂದು ನಿರ್ದಿಷ್ಟ ಜಾತಿ ಅಥವಾ ಧರ್ಮಕ್ಕೆ ಸೇರಿದವರಾಗಿರುವುದರಿಂದ ಮಾತ್ರ ಗುರಿಯಾಗುತ್ತಿರುವ ಬಗ್ಗೆ ಮಾತನಾಡಿದ ಅವರು, “ಬೇರೆ ಜಾತಿ ಅಥವಾ ಧರ್ಮಕ್ಕೆ ಸೇರಿದವರು ಎಂಬ ಕಾರಣಕ್ಕಾಗಿ ಮುಗ್ಧ ಜನರ ಮೇಲೆ ಹಲ್ಲೆ ಮಾಡಿದ ಸಂದರ್ಭಗಳನ್ನು ನಾನು ನೋಡಿದ್ದೇನೆ. ದೇಶದಲ್ಲಿ ದಲಿತರಿಗೆ ಈ ಅನ್ಯಾಯವಾಗುತ್ತಿದೆ” ಎಂದಿದ್ದಾರೆ.

ಸಂವಿಧಾನವು ಒಂದು ಅಸ್ತ್ರವಾಗಿದೆ. ಆದರೆ ಸಂಸ್ಥೆಗಳಿಲ್ಲದೆ ಅದು ಅರ್ಥಹೀನವಾಗಿದೆ ಎಂದಿರುವ ರಾಹುಲ್‌ ಗಾಂಧಿ, “ಸಂಸ್ಥೆಗಳನ್ನು ಆರ್‌ಎಸ್‌ಎಸ್ ವಶಪಡಿಸಿಕೊಂಡಿದೆ” ಎಂದು ದೂರಿದ್ದಾರೆ.

ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಮುಖ್ಯಸ್ಥೆ ಮಾಯಾವತಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಉತ್ತರ ಪ್ರದೇಶ ಚುನಾವಣೆಯಲ್ಲಿ ಒಟ್ಟಾಗಿ ಸ್ಪರ್ಧಿಸುವ ಕಾಂಗ್ರೆಸ್ ಪ್ರಸ್ತಾಪಕ್ಕೆ ಅವರು ಪ್ರತಿಕ್ರಿಯಿಸಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಅಂಬೇಡ್ಕರ್ ಮತ್ತು ಮಹಾತ್ಮ ಗಾಂಧಿಯವರು ತೋರಿಸಿದ ಹಾದಿಯಲ್ಲಿ ದಲಿತರು ತಮ್ಮ ಹಕ್ಕುಗಳಿಗಾಗಿ ಹೋರಾಡಬೇಕು ಎಂದು ಎಚ್ಚರಿಸಿರುವ ಅವರು, “ಸಂವಿಧಾನವು ಭಾರತದ ಅಸ್ತ್ರವಾಗಿದೆ. ಆದರೆ ಸಂಸ್ಥೆಗಳಿಲ್ಲದಿದ್ದರೆ ಸಂವಿಧಾನಕ್ಕೆ ಅರ್ಥವಿಲ್ಲ. ನಾವು ಸಂವಿಧಾನವನ್ನು ರಕ್ಷಿಸುವ ಬಗ್ಗೆ ಮಾತನಾಡುತ್ತೇವೆ. ಆದರೆ ಸಂವಿಧಾನವನ್ನು ಸಂಸ್ಥೆಗಳ ಜೊತೆಯಲ್ಲಿ ಹೇಗೆ ಜಾರಿಗೆ ತರಲಾಗುತ್ತದೆ? ಎಲ್ಲಾ ಸಂಸ್ಥೆಗಳು ಆರ್‌ಎಸ್‌ಎಸ್ ಕೈಯಲ್ಲಿವೆ” ಎಂದಿದ್ದಾರೆ.

“ಇದು ಹೊಸ ದಾಳಿಯಲ್ಲ, ಮಹಾತ್ಮ ಗಾಂಧಿಯವರನ್ನು ಹತ್ಯೆ ಮಾಡಿದ ದಿನದಿಂದಲೂ ಪ್ರಾರಂಭವಾಯಿತು” ಎಂದು ತಿಳಿಸಿದ್ದಾರೆ.

“ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರು ಜನರಿಗೆ ಅಸ್ತ್ರವನ್ನು ನೀಡಿದರು. ಆದರೆ ಇಂದು ಆ ಅಸ್ತ್ರಕ್ಕೆ ಅರ್ಥವಿಲ್ಲ. ಏಕೆಂದರೆ ಮಾಧ್ಯಮಗಳನ್ನು ನಿಯಂತ್ರಿಸಲಾಗುತ್ತಿದೆ. ರಾಜಕೀಯ ನಾಯಕರನ್ನು ನಿಯಂತ್ರಿಸಲು ಸ್ಪೈವೇರ್ (ಪೆಗಾಸಸ್) ಬಳಸಲಾಗುತ್ತಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ರಾಹುಲ್ ಗಾಂಧಿ ಅವರು ಯಾವುದೇ ಹಣವನ್ನು ತೆಗೆದುಕೊಂಡಿದ್ದರೆ ಸರ್ಕಾರದ ವಿರುದ್ಧ ಮಾತನಾಡಲು ಸಾಧ್ಯವಾಗುತ್ತಿರಲಿಲ್ಲ. ಸಿಬಿಐ ಮತ್ತು ಇಡಿ ರಾಜಕೀಯ ವ್ಯವಸ್ಥೆಯನ್ನು ನಿಯಂತ್ರಿಸುತ್ತವೆ ಎಂದು ಹೇಳಿದ್ದಾರೆ.

ಮಾಯಾವತಿಯವರ ವಿರುದ್ಧ ವಾಗ್ದಾಳಿ ನಡೆಸಿದ ಅವರು, “ಮೈತ್ರಿ ಮಾಡಿಕೊಳ್ಳುವಂತೆ ಸಂದೇಶ ಕಳುಹಿಸಿ ಮುಖ್ಯಮಂತ್ರಿಯಾಗುವಂತೆ ಹೇಳಿದ್ದೆವು, ಅವರು ನಮ್ಮೊಂದಿಗೆ ಮಾತನಾಡಲಿಲ್ಲ” ಎಂದು ತಿಳಿಸಿದ್ದಾರೆ.

ಉತ್ತರ ಪ್ರದೇಶದ ದಲಿತ ಧ್ವನಿಯನ್ನು ಉಚ್ಚರಿಸಿದ್ದಕ್ಕಾಗಿ ಕಾನ್ಶಿರಾಮ್ ಅವರ ಬಗ್ಗೆ ನನಗೆ ಗೌರವವಿದೆ ಎಂದು ಹೇಳಿದ ರಾಹುಲ್ ಗಾಂಧಿ, “ಇದರಿಂದಾಗಿ ಕಾಂಗ್ರೆಸ್ ನಷ್ಟವನ್ನು ಅನುಭವಿಸಿತು. ಮಾಯಾವತಿ ಅವರು ಆಡಳಿತಾರೂಢ ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸ್ಪಷ್ಟ ಮಾರ್ಗವನ್ನು ತೋರಿದರು. ಅದಕ್ಕೆ ಕಾರಣ- ಸಿಬಿಐ, ಇಡಿ ಮತ್ತು ಪೆಗಾಸಸ್” ಎಂದು ದೂರಿದ್ದಾರೆ.

ಕೆ.ರಾಜು ಅವರು ತಮ್ಮ ಹೊಸ ಪುಸ್ತಕ “ದ ದಲಿತ್ ಟ್ರುತ್: ದಿ ಬ್ಯಾಟಲ್ ಫಾರ್ ರಿಯಲೈಸಿಂಗ್ ಅಂಬೇಡ್ಕರ್’ಸ್ ವಿಷನ್”ನಲ್ಲಿ ದಲಿತರ ಧ್ವನಿಯನ್ನು ಚಿತ್ರಿಸಲು ಪ್ರಯತ್ನಿಸಿದ್ದಾರೆ. ಇದು ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾದ ‘ರೀಥಿಂಕಿಂಗ್ ಇಂಡಿಯಾ’ ಸರಣಿಯ ಎಂಟನೇ ಸಂಪುಟವಾಗಿದೆ.


ಇದನ್ನೂ ಓದಿರಿ: ವಿಮಾನಗಳಲ್ಲಿ ಮಾಂಸಾಹಾರ ನಿಷೇಧಿಸುವಂತೆ ಒಕ್ಕೂಟ ಸರ್ಕಾರಕ್ಕೆ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...