Homeಕರ್ನಾಟಕಸಂವಿಧಾನ ಒಂದು ಅಸ್ತ್ರ; ಆದರೆ ಸಂಸ್ಥೆಗಳಿಲ್ಲದಿದ್ದರೆ ಅರ್ಥಹೀನ: ರಾಹುಲ್‌‌

ಸಂವಿಧಾನ ಒಂದು ಅಸ್ತ್ರ; ಆದರೆ ಸಂಸ್ಥೆಗಳಿಲ್ಲದಿದ್ದರೆ ಅರ್ಥಹೀನ: ರಾಹುಲ್‌‌

ಮಾಯಾವತಿಯವರ ವಿರುದ್ಧ ವಾಗ್ದಾಳಿ ನಡೆಸಿರುವ ರಾಹುಲ್‌ ಗಾಂಧಿ, “ಮೈತ್ರಿ ಮಾಡಿಕೊಳ್ಳುವಂತೆ ಸಂದೇಶ ಕಳುಹಿಸಿ ಮುಖ್ಯಮಂತ್ರಿಯಾಗುವಂತೆ ಹೇಳಿದ್ದೆವು. ಅವರು ನಮ್ಮೊಂದಿಗೆ ಮಾತನಾಡಲಿಲ್ಲ” ಎಂದಿದ್ದಾರೆ.

- Advertisement -
- Advertisement -

ಅಧಿಕಾರ ಕೇಂದ್ರದಲ್ಲಿ ಹುಟ್ಟಿದ್ದರೂ ಅಧಿಕಾರಕ್ಕಾಗಿ ಯಾವುದೇ ದುರಾಸೆ ಇಲ್ಲ ಎಂದು ಹೇಳಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಸಂವಿಧಾನಿಕ ಸಂಸ್ಥೆಗಳನ್ನು ಆರ್‌ಎಸ್‌ಎಸ್‌ ನಿಯಂತ್ರಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಮಾಜಿ ಐಎಎಸ್ ಅಧಿಕಾರಿ ಕೆ.ರಾಜು ಸಂಪಾದಿಸಿರುವ ಪ್ರಬಂಧಗಳ ಸಂಗ್ರಹವನ್ನು ಜವಾಹರ ಭವನದಲ್ಲಿ ಬಿಡುಗಡೆ ಮಾಡಿ ಅವರು ಮಾತನಾಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಅಧಿಕಾರದ ಹುಡುಕಾಟದಲ್ಲಿ ನಿರಂತರವಾಗಿ ಇರುವ ರಾಜಕಾರಣಿಗಳಿದ್ದಾರೆ. ನಾನು ಅಧಿಕಾರದ ಕೇಂದ್ರದಲ್ಲಿ ಹುಟ್ಟಿದ್ದೇನೆ. ಆದರೆ ಅದರ ಮೇಲೆ ನನಗೆ ಆಸಕ್ತಿಯಿಲ್ಲ. ನಾನು ಜನರನ್ನು ಮತ್ತು ದೇಶವನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸುತ್ತೇನೆ. ಈ ಪ್ರಕ್ರಿಯೆಯಲ್ಲಿ ಅಸ್ಪೃಶ್ಯತೆ ಇನ್ನೂ ಅಸ್ತಿತ್ವದಲ್ಲಿ ಇರುವ ವಿಶ್ವದ ಏಕೈಕ ದೇಶ ಭಾರತ ಎಂದು ನಾನು ತಿಳಿದುಕೊಂಡಿದ್ದೇನೆ” ಎಂದು ವಿಷಾದಿಸಿದ್ದಾರೆ.

ಜನರಿಂದ ಸಿಗುತ್ತಿರುವ ನಿರಂತರ ಪ್ರೀತಿಗೆ ಕೃತಜ್ಞತೆ ಸಲ್ಲಿಸಿದ ರಾಹುಲ್ ಗಾಂಧಿ, “ನನ್ನ ದೇಶವು ನನ್ನನ್ನು ಬೇಷರತ್ತಾಗಿ ಪ್ರೀತಿಸಿದೆ. ಅದಕ್ಕಾಗಿ ನಾನು ಶಾಶ್ವತವಾಗಿ ಋಣಿಯಾಗಿದ್ದೇನೆ” ಎಂದಿದ್ದಾರೆ.

ಜನರು ಒಂದು ನಿರ್ದಿಷ್ಟ ಜಾತಿ ಅಥವಾ ಧರ್ಮಕ್ಕೆ ಸೇರಿದವರಾಗಿರುವುದರಿಂದ ಮಾತ್ರ ಗುರಿಯಾಗುತ್ತಿರುವ ಬಗ್ಗೆ ಮಾತನಾಡಿದ ಅವರು, “ಬೇರೆ ಜಾತಿ ಅಥವಾ ಧರ್ಮಕ್ಕೆ ಸೇರಿದವರು ಎಂಬ ಕಾರಣಕ್ಕಾಗಿ ಮುಗ್ಧ ಜನರ ಮೇಲೆ ಹಲ್ಲೆ ಮಾಡಿದ ಸಂದರ್ಭಗಳನ್ನು ನಾನು ನೋಡಿದ್ದೇನೆ. ದೇಶದಲ್ಲಿ ದಲಿತರಿಗೆ ಈ ಅನ್ಯಾಯವಾಗುತ್ತಿದೆ” ಎಂದಿದ್ದಾರೆ.

ಸಂವಿಧಾನವು ಒಂದು ಅಸ್ತ್ರವಾಗಿದೆ. ಆದರೆ ಸಂಸ್ಥೆಗಳಿಲ್ಲದೆ ಅದು ಅರ್ಥಹೀನವಾಗಿದೆ ಎಂದಿರುವ ರಾಹುಲ್‌ ಗಾಂಧಿ, “ಸಂಸ್ಥೆಗಳನ್ನು ಆರ್‌ಎಸ್‌ಎಸ್ ವಶಪಡಿಸಿಕೊಂಡಿದೆ” ಎಂದು ದೂರಿದ್ದಾರೆ.

ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಮುಖ್ಯಸ್ಥೆ ಮಾಯಾವತಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಉತ್ತರ ಪ್ರದೇಶ ಚುನಾವಣೆಯಲ್ಲಿ ಒಟ್ಟಾಗಿ ಸ್ಪರ್ಧಿಸುವ ಕಾಂಗ್ರೆಸ್ ಪ್ರಸ್ತಾಪಕ್ಕೆ ಅವರು ಪ್ರತಿಕ್ರಿಯಿಸಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಅಂಬೇಡ್ಕರ್ ಮತ್ತು ಮಹಾತ್ಮ ಗಾಂಧಿಯವರು ತೋರಿಸಿದ ಹಾದಿಯಲ್ಲಿ ದಲಿತರು ತಮ್ಮ ಹಕ್ಕುಗಳಿಗಾಗಿ ಹೋರಾಡಬೇಕು ಎಂದು ಎಚ್ಚರಿಸಿರುವ ಅವರು, “ಸಂವಿಧಾನವು ಭಾರತದ ಅಸ್ತ್ರವಾಗಿದೆ. ಆದರೆ ಸಂಸ್ಥೆಗಳಿಲ್ಲದಿದ್ದರೆ ಸಂವಿಧಾನಕ್ಕೆ ಅರ್ಥವಿಲ್ಲ. ನಾವು ಸಂವಿಧಾನವನ್ನು ರಕ್ಷಿಸುವ ಬಗ್ಗೆ ಮಾತನಾಡುತ್ತೇವೆ. ಆದರೆ ಸಂವಿಧಾನವನ್ನು ಸಂಸ್ಥೆಗಳ ಜೊತೆಯಲ್ಲಿ ಹೇಗೆ ಜಾರಿಗೆ ತರಲಾಗುತ್ತದೆ? ಎಲ್ಲಾ ಸಂಸ್ಥೆಗಳು ಆರ್‌ಎಸ್‌ಎಸ್ ಕೈಯಲ್ಲಿವೆ” ಎಂದಿದ್ದಾರೆ.

“ಇದು ಹೊಸ ದಾಳಿಯಲ್ಲ, ಮಹಾತ್ಮ ಗಾಂಧಿಯವರನ್ನು ಹತ್ಯೆ ಮಾಡಿದ ದಿನದಿಂದಲೂ ಪ್ರಾರಂಭವಾಯಿತು” ಎಂದು ತಿಳಿಸಿದ್ದಾರೆ.

“ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರು ಜನರಿಗೆ ಅಸ್ತ್ರವನ್ನು ನೀಡಿದರು. ಆದರೆ ಇಂದು ಆ ಅಸ್ತ್ರಕ್ಕೆ ಅರ್ಥವಿಲ್ಲ. ಏಕೆಂದರೆ ಮಾಧ್ಯಮಗಳನ್ನು ನಿಯಂತ್ರಿಸಲಾಗುತ್ತಿದೆ. ರಾಜಕೀಯ ನಾಯಕರನ್ನು ನಿಯಂತ್ರಿಸಲು ಸ್ಪೈವೇರ್ (ಪೆಗಾಸಸ್) ಬಳಸಲಾಗುತ್ತಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ರಾಹುಲ್ ಗಾಂಧಿ ಅವರು ಯಾವುದೇ ಹಣವನ್ನು ತೆಗೆದುಕೊಂಡಿದ್ದರೆ ಸರ್ಕಾರದ ವಿರುದ್ಧ ಮಾತನಾಡಲು ಸಾಧ್ಯವಾಗುತ್ತಿರಲಿಲ್ಲ. ಸಿಬಿಐ ಮತ್ತು ಇಡಿ ರಾಜಕೀಯ ವ್ಯವಸ್ಥೆಯನ್ನು ನಿಯಂತ್ರಿಸುತ್ತವೆ ಎಂದು ಹೇಳಿದ್ದಾರೆ.

ಮಾಯಾವತಿಯವರ ವಿರುದ್ಧ ವಾಗ್ದಾಳಿ ನಡೆಸಿದ ಅವರು, “ಮೈತ್ರಿ ಮಾಡಿಕೊಳ್ಳುವಂತೆ ಸಂದೇಶ ಕಳುಹಿಸಿ ಮುಖ್ಯಮಂತ್ರಿಯಾಗುವಂತೆ ಹೇಳಿದ್ದೆವು, ಅವರು ನಮ್ಮೊಂದಿಗೆ ಮಾತನಾಡಲಿಲ್ಲ” ಎಂದು ತಿಳಿಸಿದ್ದಾರೆ.

ಉತ್ತರ ಪ್ರದೇಶದ ದಲಿತ ಧ್ವನಿಯನ್ನು ಉಚ್ಚರಿಸಿದ್ದಕ್ಕಾಗಿ ಕಾನ್ಶಿರಾಮ್ ಅವರ ಬಗ್ಗೆ ನನಗೆ ಗೌರವವಿದೆ ಎಂದು ಹೇಳಿದ ರಾಹುಲ್ ಗಾಂಧಿ, “ಇದರಿಂದಾಗಿ ಕಾಂಗ್ರೆಸ್ ನಷ್ಟವನ್ನು ಅನುಭವಿಸಿತು. ಮಾಯಾವತಿ ಅವರು ಆಡಳಿತಾರೂಢ ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸ್ಪಷ್ಟ ಮಾರ್ಗವನ್ನು ತೋರಿದರು. ಅದಕ್ಕೆ ಕಾರಣ- ಸಿಬಿಐ, ಇಡಿ ಮತ್ತು ಪೆಗಾಸಸ್” ಎಂದು ದೂರಿದ್ದಾರೆ.

ಕೆ.ರಾಜು ಅವರು ತಮ್ಮ ಹೊಸ ಪುಸ್ತಕ “ದ ದಲಿತ್ ಟ್ರುತ್: ದಿ ಬ್ಯಾಟಲ್ ಫಾರ್ ರಿಯಲೈಸಿಂಗ್ ಅಂಬೇಡ್ಕರ್’ಸ್ ವಿಷನ್”ನಲ್ಲಿ ದಲಿತರ ಧ್ವನಿಯನ್ನು ಚಿತ್ರಿಸಲು ಪ್ರಯತ್ನಿಸಿದ್ದಾರೆ. ಇದು ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾದ ‘ರೀಥಿಂಕಿಂಗ್ ಇಂಡಿಯಾ’ ಸರಣಿಯ ಎಂಟನೇ ಸಂಪುಟವಾಗಿದೆ.


ಇದನ್ನೂ ಓದಿರಿ: ವಿಮಾನಗಳಲ್ಲಿ ಮಾಂಸಾಹಾರ ನಿಷೇಧಿಸುವಂತೆ ಒಕ್ಕೂಟ ಸರ್ಕಾರಕ್ಕೆ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...