Homeಕರ್ನಾಟಕಸಂವಿಧಾನ ಒಂದು ಅಸ್ತ್ರ; ಆದರೆ ಸಂಸ್ಥೆಗಳಿಲ್ಲದಿದ್ದರೆ ಅರ್ಥಹೀನ: ರಾಹುಲ್‌‌

ಸಂವಿಧಾನ ಒಂದು ಅಸ್ತ್ರ; ಆದರೆ ಸಂಸ್ಥೆಗಳಿಲ್ಲದಿದ್ದರೆ ಅರ್ಥಹೀನ: ರಾಹುಲ್‌‌

ಮಾಯಾವತಿಯವರ ವಿರುದ್ಧ ವಾಗ್ದಾಳಿ ನಡೆಸಿರುವ ರಾಹುಲ್‌ ಗಾಂಧಿ, “ಮೈತ್ರಿ ಮಾಡಿಕೊಳ್ಳುವಂತೆ ಸಂದೇಶ ಕಳುಹಿಸಿ ಮುಖ್ಯಮಂತ್ರಿಯಾಗುವಂತೆ ಹೇಳಿದ್ದೆವು. ಅವರು ನಮ್ಮೊಂದಿಗೆ ಮಾತನಾಡಲಿಲ್ಲ” ಎಂದಿದ್ದಾರೆ.

- Advertisement -
- Advertisement -

ಅಧಿಕಾರ ಕೇಂದ್ರದಲ್ಲಿ ಹುಟ್ಟಿದ್ದರೂ ಅಧಿಕಾರಕ್ಕಾಗಿ ಯಾವುದೇ ದುರಾಸೆ ಇಲ್ಲ ಎಂದು ಹೇಳಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಸಂವಿಧಾನಿಕ ಸಂಸ್ಥೆಗಳನ್ನು ಆರ್‌ಎಸ್‌ಎಸ್‌ ನಿಯಂತ್ರಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಮಾಜಿ ಐಎಎಸ್ ಅಧಿಕಾರಿ ಕೆ.ರಾಜು ಸಂಪಾದಿಸಿರುವ ಪ್ರಬಂಧಗಳ ಸಂಗ್ರಹವನ್ನು ಜವಾಹರ ಭವನದಲ್ಲಿ ಬಿಡುಗಡೆ ಮಾಡಿ ಅವರು ಮಾತನಾಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಅಧಿಕಾರದ ಹುಡುಕಾಟದಲ್ಲಿ ನಿರಂತರವಾಗಿ ಇರುವ ರಾಜಕಾರಣಿಗಳಿದ್ದಾರೆ. ನಾನು ಅಧಿಕಾರದ ಕೇಂದ್ರದಲ್ಲಿ ಹುಟ್ಟಿದ್ದೇನೆ. ಆದರೆ ಅದರ ಮೇಲೆ ನನಗೆ ಆಸಕ್ತಿಯಿಲ್ಲ. ನಾನು ಜನರನ್ನು ಮತ್ತು ದೇಶವನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸುತ್ತೇನೆ. ಈ ಪ್ರಕ್ರಿಯೆಯಲ್ಲಿ ಅಸ್ಪೃಶ್ಯತೆ ಇನ್ನೂ ಅಸ್ತಿತ್ವದಲ್ಲಿ ಇರುವ ವಿಶ್ವದ ಏಕೈಕ ದೇಶ ಭಾರತ ಎಂದು ನಾನು ತಿಳಿದುಕೊಂಡಿದ್ದೇನೆ” ಎಂದು ವಿಷಾದಿಸಿದ್ದಾರೆ.

ಜನರಿಂದ ಸಿಗುತ್ತಿರುವ ನಿರಂತರ ಪ್ರೀತಿಗೆ ಕೃತಜ್ಞತೆ ಸಲ್ಲಿಸಿದ ರಾಹುಲ್ ಗಾಂಧಿ, “ನನ್ನ ದೇಶವು ನನ್ನನ್ನು ಬೇಷರತ್ತಾಗಿ ಪ್ರೀತಿಸಿದೆ. ಅದಕ್ಕಾಗಿ ನಾನು ಶಾಶ್ವತವಾಗಿ ಋಣಿಯಾಗಿದ್ದೇನೆ” ಎಂದಿದ್ದಾರೆ.

ಜನರು ಒಂದು ನಿರ್ದಿಷ್ಟ ಜಾತಿ ಅಥವಾ ಧರ್ಮಕ್ಕೆ ಸೇರಿದವರಾಗಿರುವುದರಿಂದ ಮಾತ್ರ ಗುರಿಯಾಗುತ್ತಿರುವ ಬಗ್ಗೆ ಮಾತನಾಡಿದ ಅವರು, “ಬೇರೆ ಜಾತಿ ಅಥವಾ ಧರ್ಮಕ್ಕೆ ಸೇರಿದವರು ಎಂಬ ಕಾರಣಕ್ಕಾಗಿ ಮುಗ್ಧ ಜನರ ಮೇಲೆ ಹಲ್ಲೆ ಮಾಡಿದ ಸಂದರ್ಭಗಳನ್ನು ನಾನು ನೋಡಿದ್ದೇನೆ. ದೇಶದಲ್ಲಿ ದಲಿತರಿಗೆ ಈ ಅನ್ಯಾಯವಾಗುತ್ತಿದೆ” ಎಂದಿದ್ದಾರೆ.

ಸಂವಿಧಾನವು ಒಂದು ಅಸ್ತ್ರವಾಗಿದೆ. ಆದರೆ ಸಂಸ್ಥೆಗಳಿಲ್ಲದೆ ಅದು ಅರ್ಥಹೀನವಾಗಿದೆ ಎಂದಿರುವ ರಾಹುಲ್‌ ಗಾಂಧಿ, “ಸಂಸ್ಥೆಗಳನ್ನು ಆರ್‌ಎಸ್‌ಎಸ್ ವಶಪಡಿಸಿಕೊಂಡಿದೆ” ಎಂದು ದೂರಿದ್ದಾರೆ.

ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಮುಖ್ಯಸ್ಥೆ ಮಾಯಾವತಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಉತ್ತರ ಪ್ರದೇಶ ಚುನಾವಣೆಯಲ್ಲಿ ಒಟ್ಟಾಗಿ ಸ್ಪರ್ಧಿಸುವ ಕಾಂಗ್ರೆಸ್ ಪ್ರಸ್ತಾಪಕ್ಕೆ ಅವರು ಪ್ರತಿಕ್ರಿಯಿಸಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಅಂಬೇಡ್ಕರ್ ಮತ್ತು ಮಹಾತ್ಮ ಗಾಂಧಿಯವರು ತೋರಿಸಿದ ಹಾದಿಯಲ್ಲಿ ದಲಿತರು ತಮ್ಮ ಹಕ್ಕುಗಳಿಗಾಗಿ ಹೋರಾಡಬೇಕು ಎಂದು ಎಚ್ಚರಿಸಿರುವ ಅವರು, “ಸಂವಿಧಾನವು ಭಾರತದ ಅಸ್ತ್ರವಾಗಿದೆ. ಆದರೆ ಸಂಸ್ಥೆಗಳಿಲ್ಲದಿದ್ದರೆ ಸಂವಿಧಾನಕ್ಕೆ ಅರ್ಥವಿಲ್ಲ. ನಾವು ಸಂವಿಧಾನವನ್ನು ರಕ್ಷಿಸುವ ಬಗ್ಗೆ ಮಾತನಾಡುತ್ತೇವೆ. ಆದರೆ ಸಂವಿಧಾನವನ್ನು ಸಂಸ್ಥೆಗಳ ಜೊತೆಯಲ್ಲಿ ಹೇಗೆ ಜಾರಿಗೆ ತರಲಾಗುತ್ತದೆ? ಎಲ್ಲಾ ಸಂಸ್ಥೆಗಳು ಆರ್‌ಎಸ್‌ಎಸ್ ಕೈಯಲ್ಲಿವೆ” ಎಂದಿದ್ದಾರೆ.

“ಇದು ಹೊಸ ದಾಳಿಯಲ್ಲ, ಮಹಾತ್ಮ ಗಾಂಧಿಯವರನ್ನು ಹತ್ಯೆ ಮಾಡಿದ ದಿನದಿಂದಲೂ ಪ್ರಾರಂಭವಾಯಿತು” ಎಂದು ತಿಳಿಸಿದ್ದಾರೆ.

“ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರು ಜನರಿಗೆ ಅಸ್ತ್ರವನ್ನು ನೀಡಿದರು. ಆದರೆ ಇಂದು ಆ ಅಸ್ತ್ರಕ್ಕೆ ಅರ್ಥವಿಲ್ಲ. ಏಕೆಂದರೆ ಮಾಧ್ಯಮಗಳನ್ನು ನಿಯಂತ್ರಿಸಲಾಗುತ್ತಿದೆ. ರಾಜಕೀಯ ನಾಯಕರನ್ನು ನಿಯಂತ್ರಿಸಲು ಸ್ಪೈವೇರ್ (ಪೆಗಾಸಸ್) ಬಳಸಲಾಗುತ್ತಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ರಾಹುಲ್ ಗಾಂಧಿ ಅವರು ಯಾವುದೇ ಹಣವನ್ನು ತೆಗೆದುಕೊಂಡಿದ್ದರೆ ಸರ್ಕಾರದ ವಿರುದ್ಧ ಮಾತನಾಡಲು ಸಾಧ್ಯವಾಗುತ್ತಿರಲಿಲ್ಲ. ಸಿಬಿಐ ಮತ್ತು ಇಡಿ ರಾಜಕೀಯ ವ್ಯವಸ್ಥೆಯನ್ನು ನಿಯಂತ್ರಿಸುತ್ತವೆ ಎಂದು ಹೇಳಿದ್ದಾರೆ.

ಮಾಯಾವತಿಯವರ ವಿರುದ್ಧ ವಾಗ್ದಾಳಿ ನಡೆಸಿದ ಅವರು, “ಮೈತ್ರಿ ಮಾಡಿಕೊಳ್ಳುವಂತೆ ಸಂದೇಶ ಕಳುಹಿಸಿ ಮುಖ್ಯಮಂತ್ರಿಯಾಗುವಂತೆ ಹೇಳಿದ್ದೆವು, ಅವರು ನಮ್ಮೊಂದಿಗೆ ಮಾತನಾಡಲಿಲ್ಲ” ಎಂದು ತಿಳಿಸಿದ್ದಾರೆ.

ಉತ್ತರ ಪ್ರದೇಶದ ದಲಿತ ಧ್ವನಿಯನ್ನು ಉಚ್ಚರಿಸಿದ್ದಕ್ಕಾಗಿ ಕಾನ್ಶಿರಾಮ್ ಅವರ ಬಗ್ಗೆ ನನಗೆ ಗೌರವವಿದೆ ಎಂದು ಹೇಳಿದ ರಾಹುಲ್ ಗಾಂಧಿ, “ಇದರಿಂದಾಗಿ ಕಾಂಗ್ರೆಸ್ ನಷ್ಟವನ್ನು ಅನುಭವಿಸಿತು. ಮಾಯಾವತಿ ಅವರು ಆಡಳಿತಾರೂಢ ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸ್ಪಷ್ಟ ಮಾರ್ಗವನ್ನು ತೋರಿದರು. ಅದಕ್ಕೆ ಕಾರಣ- ಸಿಬಿಐ, ಇಡಿ ಮತ್ತು ಪೆಗಾಸಸ್” ಎಂದು ದೂರಿದ್ದಾರೆ.

ಕೆ.ರಾಜು ಅವರು ತಮ್ಮ ಹೊಸ ಪುಸ್ತಕ “ದ ದಲಿತ್ ಟ್ರುತ್: ದಿ ಬ್ಯಾಟಲ್ ಫಾರ್ ರಿಯಲೈಸಿಂಗ್ ಅಂಬೇಡ್ಕರ್’ಸ್ ವಿಷನ್”ನಲ್ಲಿ ದಲಿತರ ಧ್ವನಿಯನ್ನು ಚಿತ್ರಿಸಲು ಪ್ರಯತ್ನಿಸಿದ್ದಾರೆ. ಇದು ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾದ ‘ರೀಥಿಂಕಿಂಗ್ ಇಂಡಿಯಾ’ ಸರಣಿಯ ಎಂಟನೇ ಸಂಪುಟವಾಗಿದೆ.


ಇದನ್ನೂ ಓದಿರಿ: ವಿಮಾನಗಳಲ್ಲಿ ಮಾಂಸಾಹಾರ ನಿಷೇಧಿಸುವಂತೆ ಒಕ್ಕೂಟ ಸರ್ಕಾರಕ್ಕೆ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...