Homeಮುಖಪುಟಸಂವಿಧಾನ, ಸುಪ್ರೀಂ ಕೋರ್ಟ್ ಮೇಲೆ ನಂಬಿಕೆ ಇಲ್ಲ: ಮತ್ತೆ ನಾಲಿಗೆ ಹರಿಬಿಟ್ಟ ಯತಿ ನರಸಿಂಗಾನಂದ

ಸಂವಿಧಾನ, ಸುಪ್ರೀಂ ಕೋರ್ಟ್ ಮೇಲೆ ನಂಬಿಕೆ ಇಲ್ಲ: ಮತ್ತೆ ನಾಲಿಗೆ ಹರಿಬಿಟ್ಟ ಯತಿ ನರಸಿಂಗಾನಂದ

- Advertisement -
- Advertisement -

ಹೊಸದಿಲ್ಲಿ: ಸಂವಿಧಾನ ಮತ್ತು ಸುಪ್ರೀಂ ಕೋರ್ಟ್‌ ವಿರುದ್ಧ ಹೇಳಿಕೆ ನೀಡಿರುವ ಹಿಂದುತ್ವವಾದಿ ನಾಯಕ ಯತಿ ನರಸಿಂಗಾನಂದ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಆರಂಭಿಸಲು ಕೋರಿ ಕಾರ್ಯಕರ್ತರೊಬ್ಬರು ಭಾರತದ ಅಟಾರ್ನಿ ಜನರಲ್‌ಗೆ ಪತ್ರ ಬರೆದಿದ್ದಾರೆ.

ನರಸಿಂಹಾನಂದ ಇತ್ತೀಚೆಗೆ ಹರಿದ್ವಾರ ‘ಧರ್ಮ ಸಂಸದ್’ನಲ್ಲಿ ಮುಸ್ಲಿಂ ನರಮೇಧಕ್ಕೆ ಕರೆಗಳನ್ನು ನೀಡಿ ಸುದ್ದಿಯಲ್ಲಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಜಿತೇಂದ್ರ ನಾರಾಯಣ್ ತ್ಯಾಗಿಯನ್ನು ಬಂಧಿಸಿದಾಗ ನರಸಿಂಗಾನಂದ, “ನೀವೆಲ್ಲರೂ ಸಾಯುತ್ತೀರಿ” ಎಂದು ಪೊಲೀಸರಿಗೆ ಬೆದರಿಸಿದ್ದರು.

ಅಟಾರ್ನಿ ಜನರಲ್‌ಗೆ ಬರೆದಿರುವ ಪತ್ರದಲ್ಲಿ ಸಾಮಾಜಿಕ ಕಾರ್ಯಕರ್ತರಾದ ಶಚಿ ನೆಲ್ಲಿ ಅವರು ನರಸಿಂಗಾನಂದ ನೀಡಿರುವ ‘ಅವಹೇಳನಕಾರಿ’ ಹೇಳಿಕೆಗಳನ್ನು ಪ್ರಸ್ತಾಪಿಸಿದ್ದಾರೆ. ವಿಶಾಲ್ ಸಿಂಗ್‌ಗೆ ನೀಡಿದ ಸಂದರ್ಶನದಲ್ಲಿ ನರಸಿಂಹಾನಂದರು ಸಂವಿಧಾನ ವಿರೋಧಿಯಾಗಿ ಮಾತನಾಡಿದ್ದಾರೆ.

ದ್ವೇಷ ಭಾಷಣ ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡುತ್ತಾ ನರಸಿಂಗಾನಂದ, “ನಮಗೆ ಭಾರತದ ಸುಪ್ರೀಂ ಕೋರ್ಟ್ ಮತ್ತು ಸಂವಿಧಾನದ ಮೇಲೆ ನಂಬಿಕೆ ಇಲ್ಲ. ಈ ದೇಶದ 100 ಕೋಟಿ ಹಿಂದೂಗಳನ್ನು ಸಂವಿಧಾನ ಕೊಲ್ಲುತ್ತಿದೆ. ಈ ಸಂವಿಧಾನವನ್ನು ನಂಬಿದವರನ್ನು ಕೊಲ್ಲಲಾಗುತ್ತದೆ. ಈ ವ್ಯವಸ್ಥೆಯನ್ನು ನಂಬುವವರು, ಈ ರಾಜಕಾರಣಿಗಳು, ಸುಪ್ರೀಂ ಕೋರ್ಟ್ ಮತ್ತು ಸೈನ್ಯದಲ್ಲಿರುವವರು ಎಲ್ಲರೂ ನಾಯಿಯಂತೆ ಸಾಯುತ್ತಾರೆ” ಎನ್ನುವುದನ್ನು ಕಾಣಬಹುದು.

ಸಂದರ್ಶನದ ಕ್ಲಿಪ್ ಅನ್ನು ಪತ್ರಕರ್ತ ಮೊಹಮ್ಮದ್ ಜುಬೈರ್ ಅವರು “#ArrestYatiNarasinghanand ಹ್ಯಾಷ್‌ಟ್ಯಾಗ್‌ನಲ್ಲಿ ಟ್ವೀಟ್ ಮಾಡಿದ್ದಾರೆ. “ನಮಗೆ ಸುಪ್ರೀಂ ಕೋರ್ಟ್ ಮತ್ತು ಸಂವಿಧಾನದ ಮೇಲೆ ನಂಬಿಕೆ ಇಲ್ಲ. ಈ ಸಂವಿಧಾನವು 100 ಕೋಟಿ ಹಿಂದೂಗಳ ಹತ್ಯೆಗೆ ಸಂಬಂಧಿಸಿದ ಪುಸ್ತಕವಾಗಿದೆ. ಇದನ್ನು ನಂಬುವವರನ್ನು ಕೊಲ್ಲಲಾಗುತ್ತದೆ. ಈ ವ್ಯವಸ್ಥೆಯನ್ನು ನಂಬುವವರು, ಪೊಲೀಸರು, ರಾಜಕಾರಣಿಗಳು ಮತ್ತು ಸೈನ್ಯವನ್ನು ನಂಬುವವರು ನಾಯಿಯಂತೆ ಸಾಯುತ್ತಾರೆ” ಎಂದು ನರಸಿಂಗಾನಂದ ಹೇಳಿರುವುದನ್ನು ಜುಬೈರ್‌ ತಿಳಿಸಿದ್ದಾರೆ.

“ಸಂಸ್ಥೆಯ ಗಾಂಭೀರ್ಯವನ್ನು ಮತ್ತು ಭಾರತದ ಸರ್ವೋಚ್ಚ ನ್ಯಾಯಾಲಯದಲ್ಲಿ ನಿರತವಾಗಿರುವ ಅಧಿಕಾರವನ್ನು ದುರ್ಬಲಗೊಳಿಸಲು ಪ್ರಯತ್ನಿಸಲಾಗುತ್ತಿದೆ” ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.


ಇದನ್ನೂ ಓದಿರಿ: ದ್ವೇಷ ಭಾಷಣ ಕೇಸ್: ’ನೀವೆಲ್ಲರೂ ಸಾಯುತ್ತೀರಿ’ ಎಂದು ಪೊಲೀಸರಿಗೆ ಯತಿ ನರಸಿಂಗಾನಂದ ಬೆದರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....