Homeಕರ್ನಾಟಕಸಂವಿಧಾನದ ಆಶಯ ಸರ್ವರಿಗೂ ದಕ್ಕಿದ್ದು ಅದು ಇನ್ನಷ್ಟು ವಿಸ್ತರಿಸಿಕೊಳ್ಳಬೇಕಿದೆ: ಡಾ. ರಾಜಣ್ಣ ಜಿ

ಸಂವಿಧಾನದ ಆಶಯ ಸರ್ವರಿಗೂ ದಕ್ಕಿದ್ದು ಅದು ಇನ್ನಷ್ಟು ವಿಸ್ತರಿಸಿಕೊಳ್ಳಬೇಕಿದೆ: ಡಾ. ರಾಜಣ್ಣ ಜಿ

- Advertisement -
- Advertisement -

ಸಂವಿಧಾನದ ಆಶಯ ಸರ್ವರಿಗೂ ದಕ್ಕಿದೆ. ಅದು ಇನ್ನಷ್ಟು ವಿಸ್ತರಿಸಿಕೊಳ್ಳಬೇಕಿದೆ ಎಂದು ಸಮಾಜ ಕಾರ್ಯ ವಿಭಾಗದ ಉಪನ್ಯಾಸಕ ಡಾ. ರಾಜಣ್ಣ.ಜಿ ಹೇಳಿದರು.

ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಸ್ನಾತಕೋತ್ತರ ಕೇಂದ್ರ ಮಂಗಸಂದ್ರದಲ್ಲಿ ಸಮಾಜಕಾರ್ಯ ವಿಭಾಗ ಹಾಗೂ ಸತ್ವ ಸಂಸ್ಥೆ, ಚಿಂತಾಮಣಿ ಮತ್ತು ಹೊಸ ಚಿಗುರು ಸಂಸ್ಥೆ, ಮಾಲೂರು ಸಹಯೋಗದ ಮೇರೆಗೆ  ಶನಿವಾರದಂದು “ಸಂವಿಧಾನ ಸಂಭ್ರಮೋತ್ಸವ – ಸರ್ವರಿಗಾಗಿ ಸಂವಿಧಾನದ ಕುರಿತು ಅರಿವು” ಎಂಬ ಕಾರ್ಯಕ್ರಮದಲ್ಲಿ ಪ್ರಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದ ಕುರಿತು ಬೊಮ್ಮೇಕಲ್ಲು ವೆಂಕಟೇಶ್ ಮಾತನಾಡಿ, ಸಂವಿಧಾನ ಹಾಗೂ ಪ್ರಸ್ತುತತೆಯ ವಿಷಯದ ಕುರಿತು ಸುಧೀರ್ಘವಾಗಿ ವಿಶ್ಲೇಷಿಸಿದರು. ಸಂವಿಧಾನವೆಂಬುದು ಜನಪದವಾಗಬೇಕು, ಜನರು ಸಂವಿಧಾನವನ್ನು ಸಂಭ್ರಮಿಸಬೇಕು ಎಂದು ಹೇಳುವ ಮೂಲಕ ಬುದ್ಧ, ಬಸವಣ್ಣ, ಅಂಬೇಡ್ಕರ್, ಸ್ವಾಮಿ ವಿವೇಕಾನಂದ, ಗಾಂಧಿ, ಕುವೆಂಪು ಒಳಗೊಂಡಂತ ದೇಶದ ಬಹು ಸಂಸ್ಕೃತಿಯನ್ನು ಸಂವಿಧಾನ ಎತ್ತಿ ಹಿಡಿದಿರುವುದು ನಮ್ಮ ಸಂವಿಧಾನದ ವೈಶಿಷ್ಟ್ಯವಾಗಿದೆ. ಈ ಸಂವಿಧಾನವನ್ನು ಉಳಿಸುವ, ಅಳವಡಿಸಿಕೊಳ್ಳುವ ಜವಾಬ್ದಾರಿ ಎಲ್ಲ ಭಾರತೀಯರ ಮೇಲಿದೆ ಎಂಬುದನ್ನು ತಿಳಿಸಿದರು. ಬಹುತೇಕ ಇತಿಹಾಸವನ್ನು ತಿಳಿಸಲಾಗಿದೆ ಹಾಗೂ ನೈಜ ಇತಿಹಾಸವುಳ್ಳ ಪಠ್ಯಗಳು ಮಕ್ಕಳಿಗೆ ತಲುಪಬೇಕಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಸಂವಿಧಾನವೆಂಬುದು ಬರೀ ಒಂದು ವರ್ಗಕ್ಕೆ ಅಥವಾ ಒಂದು ಧರ್ಮಕ್ಕೆ ಸೀಮಿತವಾಗದೆ ಭಾರತದ ಒಟ್ಟು ಜನಸಾಮಾನ್ಯರ ಬದುಕಿನ ಒಳಿತಿಗಾಗಿ ಸಂವಿಧಾನವನ್ನು ರಚಿಸಿದರು ಎಂಬುದನ್ನು ಹೇಳುವ ಮೂಲಕ ಇಲ್ಲಿನ ಜನರು ಎದುರಿಸುತ್ತಿರುವ ಅಸ್ಪೃಷ್ಯತೆ, ಬಡತನ, ಅಸಮಾನತೆ ಅನ್ಯಾಯ ನಿವಾರಿಸಲು ನಮಗೆ ಇರುವ ಅಸ್ತ್ರ ಸಂವಿಧಾನ ಒಂದೇ ಎಂದು ತಮ್ಮ ವಿಚಾರವನ್ನು ಮಂಡಿಸಿದರು.

ಜೊತೆಗೆ ಬೇರು ಬೆವರು ಕಲಾ ಬಳಗದ ವತಿಯಿಂದ ಸೋರಪಲ್ಲಿ ಚಂದ್ರಶೇಖರ್ ರವರು ತಮ್ಮ ತಂಡದ ನವೀನ್, ಚಲಪತಿ ಹಾಗೂ ಪ್ರದೀಪ್ ರವರ ಜೊತೆಗೂಡಿ “ಭಾರತ ಕಥಾ” ಎಂಬ ವಿಷಯದ ಕುರಿತು ಹಾಡು ಮತ್ತು ಕಥೆಯ ಮೂಲಕ ಸಂವಿಧಾನವನ್ನು, ಭಾರತದ ಮೂಲ ಇತಿಹಾಸವನ್ನು ಒಳಗೊಂಡಂತೆ ಭಾರತದ ಸಂವಿಧಾನದ ರಚನೆಯ ಕುರಿತು ಕಥೆಯ ಶೈಲಿಯಲ್ಲಿ ವಿದ್ಯಾರ್ಥಿಗಳಿಗೆ ಮನಮುಟ್ಟುವಂತೆ ಪ್ರಸ್ತುತಪಡಿಸಿದರು.

ಭಾರತವೆಂದರೆ ಕೇವಲ ಕಲ್ಲಲ್ಲ, ಮಣ್ಣಲ್ಲ, ಬೆಟ್ಟ-ಗುಡ್ಡ ಮಾತ್ರವಲ್ಲ ಭಾರತವೆಂದರೆ ಇಲ್ಲಿ ವಾಸಿಸುತ್ತಿರುವ ಜನರು ಎಂಬ ತೆಲುಗಿನ ಒಬ್ಬ ಮಹಾಕವಿ ಹೇಳಿರುವ ಮಾತನ್ನು ಒಳಗೊಂಡಂತೆ ವಿವಿಧತೆಯಲ್ಲಿ ಏಕತೆಯನ್ನು ಎತ್ತಿ ಹಿಡಿಯುವ ದೇಶದಲ್ಲಿ ವೈವಿಧ್ಯತೆಯನ್ನು ಸವಿಯುವ ಜೊತೆಗೆ ನಾವೆಲ್ಲರೂ ಸಾಮರಸ್ಯ, ಸಹಬಾಳ್ವೆಯಿಂದ ಬದುಕಬೇಕಿದೆ ಇತರರನ್ನು ಬದುಕಲು ಬಿಡಬೇಕಿದೆ ಎಂಬುದನ್ನು ಭಾರತ ಕಥಾ ಸ್ಪಷ್ಟಪಡಿಸಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಬೆಂ. ಉ. ವಿ. ವಿ ಸ್ನಾತಕೋತರ ಕೇಂದ್ರದ ನಿರ್ದೇಶಕರು ಆದಂತಹ ಪ್ರೊ. ಕುಮುದ ಡಿ ರವರು ಕಾರ್ಯಕ್ರಮದ ಪ್ರಾರಂಭದಿಂದ ಕೊನೆಯ ತನಕ ಉಪಸ್ಥಿತಿಯಲ್ಲಿದ್ದು, ಕಾರ್ಯಕ್ರಮದ ಎಲ್ಲಾ ಚಟುವಟಿಕೆಗಳನ್ನು ಅವಲೋಕಿಸಿ “ಭಾರತ ಕಥಾ” ಪ್ರಸ್ತುತ ದಿನಮಾನದ ಕುರಿತು ಇಂದಿನ ವಿದ್ಯಾರ್ಥಿಗಳಿಗೆ ಮಹತ್ತರ ಸಂದೇಶವನ್ನು ನೀಡಿದೆ ಎಂದು ವ್ಯಕ್ತಪಡಿಸಿದರು ಹಾಗೂ ಕಾರ್ಯಕ್ರಮವನ್ನು ಆಯೋಜಿಸಿದ ಸಮಾಜಕಾರ್ಯ ವಿಭಾಗದ ಪ್ರಶಿಕ್ಷಣಾರ್ಥಿಗಳಾದ ಸಂಕೇತ್ ರಾವ್ ಸಿ.ಎನ್, ಐಶ್ವರ್ಯ ವಿ ಹಾಗೂ ಭವಾನಿ ಕೆ. ಎಂ ರವರನ್ನು ಪ್ರಶಂಸಿಸುತ್ತ ಇಂತಹ ಕಾರ್ಯಕ್ರಮಗಳು ಇನ್ನಷ್ಟು ವಿದ್ಯಾರ್ಥಿಗಳಿಗೆ ತಲುಪುವಂತಹ ಕಾರ್ಯವಾಗಬೇಕು ಎಂದು ತಮ್ಮ ಅಧ್ಯಕ್ಷತೆ ನುಡಿಗಳಲ್ಲಿ ತಿಳಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಗಳಾಗಿ ಕವಿಗಳು ಹಾಗೂ ಕನ್ನಡ ಉಪನ್ಯಾಸಕರಾದಂತಹ ಬೊಮ್ಮೇಕಲ್ಲು ವೆಂಕಟೇಶ್ ಹಾಗೂ ಬೇರು ಬೆವರು ಕಲಾ ಬಳಗದ ಸೋರಪಲ್ಲಿ ಚಂದ್ರಶೇಖರ್, ಸಮಾಜಕಾರ್ಯ ವಿಭಾಗದ ಸಂಯೋಜಕರು ಆದ ಡಾ. ಗುಂಡಪ್ಪ ದೇವಿಕೇರಿ, ಕಾರ್ಯಕ್ರಮದ ವಿಶೇಷ ಆಹ್ವಾನಿತರಾಗಿ ಆಗಮಿಸಿದಂತಹ ಸತ್ವ ವ್ಯಸನ ಮತ್ತು ಮಾನಸಿಕ ಅಸ್ವಸ್ಥರ ಪುನರ್ವಸತಿ ಕೇಂದ್ರದ ವ್ಯವಸ್ಥಾಪಕ ಡಾ. ಪಾರ್ವತಿ, ಹಾಗೂ ಹೊಸ ಚಿಗುರು ಸಂಸ್ಥೆಯ ಅಧ್ಯಕ್ಷ ಹರೀಶ್ ಎಸ್ ಎಂ, ಬೆಂ. ಉ. ವಿ. ವಿ ಸ್ನಾತಕೋತರ ಕೇಂದ್ರದ ವಿವಿಧ ವಿಭಾಗದ ಬೋಧಕರು ಮತ್ತು ಬೋಧಕೇತರ ವರ್ಗದವರು ಹಾಗೂ ಹಲವಾರು ವಿಭಾಗದ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಗಾಜಾ: 183 ಪ್ಯಾಲೆಸ್ಟೀನಿಯನ್ನರು, 3 ಇಸ್ರೇಲಿ ಕೈದಿಗಳ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...