Homeಕರ್ನಾಟಕಸಂವಿಧಾನದ ಆಶಯ ಸರ್ವರಿಗೂ ದಕ್ಕಿದ್ದು ಅದು ಇನ್ನಷ್ಟು ವಿಸ್ತರಿಸಿಕೊಳ್ಳಬೇಕಿದೆ: ಡಾ. ರಾಜಣ್ಣ ಜಿ

ಸಂವಿಧಾನದ ಆಶಯ ಸರ್ವರಿಗೂ ದಕ್ಕಿದ್ದು ಅದು ಇನ್ನಷ್ಟು ವಿಸ್ತರಿಸಿಕೊಳ್ಳಬೇಕಿದೆ: ಡಾ. ರಾಜಣ್ಣ ಜಿ

- Advertisement -
- Advertisement -

ಸಂವಿಧಾನದ ಆಶಯ ಸರ್ವರಿಗೂ ದಕ್ಕಿದೆ. ಅದು ಇನ್ನಷ್ಟು ವಿಸ್ತರಿಸಿಕೊಳ್ಳಬೇಕಿದೆ ಎಂದು ಸಮಾಜ ಕಾರ್ಯ ವಿಭಾಗದ ಉಪನ್ಯಾಸಕ ಡಾ. ರಾಜಣ್ಣ.ಜಿ ಹೇಳಿದರು.

ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಸ್ನಾತಕೋತ್ತರ ಕೇಂದ್ರ ಮಂಗಸಂದ್ರದಲ್ಲಿ ಸಮಾಜಕಾರ್ಯ ವಿಭಾಗ ಹಾಗೂ ಸತ್ವ ಸಂಸ್ಥೆ, ಚಿಂತಾಮಣಿ ಮತ್ತು ಹೊಸ ಚಿಗುರು ಸಂಸ್ಥೆ, ಮಾಲೂರು ಸಹಯೋಗದ ಮೇರೆಗೆ  ಶನಿವಾರದಂದು “ಸಂವಿಧಾನ ಸಂಭ್ರಮೋತ್ಸವ – ಸರ್ವರಿಗಾಗಿ ಸಂವಿಧಾನದ ಕುರಿತು ಅರಿವು” ಎಂಬ ಕಾರ್ಯಕ್ರಮದಲ್ಲಿ ಪ್ರಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದ ಕುರಿತು ಬೊಮ್ಮೇಕಲ್ಲು ವೆಂಕಟೇಶ್ ಮಾತನಾಡಿ, ಸಂವಿಧಾನ ಹಾಗೂ ಪ್ರಸ್ತುತತೆಯ ವಿಷಯದ ಕುರಿತು ಸುಧೀರ್ಘವಾಗಿ ವಿಶ್ಲೇಷಿಸಿದರು. ಸಂವಿಧಾನವೆಂಬುದು ಜನಪದವಾಗಬೇಕು, ಜನರು ಸಂವಿಧಾನವನ್ನು ಸಂಭ್ರಮಿಸಬೇಕು ಎಂದು ಹೇಳುವ ಮೂಲಕ ಬುದ್ಧ, ಬಸವಣ್ಣ, ಅಂಬೇಡ್ಕರ್, ಸ್ವಾಮಿ ವಿವೇಕಾನಂದ, ಗಾಂಧಿ, ಕುವೆಂಪು ಒಳಗೊಂಡಂತ ದೇಶದ ಬಹು ಸಂಸ್ಕೃತಿಯನ್ನು ಸಂವಿಧಾನ ಎತ್ತಿ ಹಿಡಿದಿರುವುದು ನಮ್ಮ ಸಂವಿಧಾನದ ವೈಶಿಷ್ಟ್ಯವಾಗಿದೆ. ಈ ಸಂವಿಧಾನವನ್ನು ಉಳಿಸುವ, ಅಳವಡಿಸಿಕೊಳ್ಳುವ ಜವಾಬ್ದಾರಿ ಎಲ್ಲ ಭಾರತೀಯರ ಮೇಲಿದೆ ಎಂಬುದನ್ನು ತಿಳಿಸಿದರು. ಬಹುತೇಕ ಇತಿಹಾಸವನ್ನು ತಿಳಿಸಲಾಗಿದೆ ಹಾಗೂ ನೈಜ ಇತಿಹಾಸವುಳ್ಳ ಪಠ್ಯಗಳು ಮಕ್ಕಳಿಗೆ ತಲುಪಬೇಕಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಸಂವಿಧಾನವೆಂಬುದು ಬರೀ ಒಂದು ವರ್ಗಕ್ಕೆ ಅಥವಾ ಒಂದು ಧರ್ಮಕ್ಕೆ ಸೀಮಿತವಾಗದೆ ಭಾರತದ ಒಟ್ಟು ಜನಸಾಮಾನ್ಯರ ಬದುಕಿನ ಒಳಿತಿಗಾಗಿ ಸಂವಿಧಾನವನ್ನು ರಚಿಸಿದರು ಎಂಬುದನ್ನು ಹೇಳುವ ಮೂಲಕ ಇಲ್ಲಿನ ಜನರು ಎದುರಿಸುತ್ತಿರುವ ಅಸ್ಪೃಷ್ಯತೆ, ಬಡತನ, ಅಸಮಾನತೆ ಅನ್ಯಾಯ ನಿವಾರಿಸಲು ನಮಗೆ ಇರುವ ಅಸ್ತ್ರ ಸಂವಿಧಾನ ಒಂದೇ ಎಂದು ತಮ್ಮ ವಿಚಾರವನ್ನು ಮಂಡಿಸಿದರು.

ಜೊತೆಗೆ ಬೇರು ಬೆವರು ಕಲಾ ಬಳಗದ ವತಿಯಿಂದ ಸೋರಪಲ್ಲಿ ಚಂದ್ರಶೇಖರ್ ರವರು ತಮ್ಮ ತಂಡದ ನವೀನ್, ಚಲಪತಿ ಹಾಗೂ ಪ್ರದೀಪ್ ರವರ ಜೊತೆಗೂಡಿ “ಭಾರತ ಕಥಾ” ಎಂಬ ವಿಷಯದ ಕುರಿತು ಹಾಡು ಮತ್ತು ಕಥೆಯ ಮೂಲಕ ಸಂವಿಧಾನವನ್ನು, ಭಾರತದ ಮೂಲ ಇತಿಹಾಸವನ್ನು ಒಳಗೊಂಡಂತೆ ಭಾರತದ ಸಂವಿಧಾನದ ರಚನೆಯ ಕುರಿತು ಕಥೆಯ ಶೈಲಿಯಲ್ಲಿ ವಿದ್ಯಾರ್ಥಿಗಳಿಗೆ ಮನಮುಟ್ಟುವಂತೆ ಪ್ರಸ್ತುತಪಡಿಸಿದರು.

ಭಾರತವೆಂದರೆ ಕೇವಲ ಕಲ್ಲಲ್ಲ, ಮಣ್ಣಲ್ಲ, ಬೆಟ್ಟ-ಗುಡ್ಡ ಮಾತ್ರವಲ್ಲ ಭಾರತವೆಂದರೆ ಇಲ್ಲಿ ವಾಸಿಸುತ್ತಿರುವ ಜನರು ಎಂಬ ತೆಲುಗಿನ ಒಬ್ಬ ಮಹಾಕವಿ ಹೇಳಿರುವ ಮಾತನ್ನು ಒಳಗೊಂಡಂತೆ ವಿವಿಧತೆಯಲ್ಲಿ ಏಕತೆಯನ್ನು ಎತ್ತಿ ಹಿಡಿಯುವ ದೇಶದಲ್ಲಿ ವೈವಿಧ್ಯತೆಯನ್ನು ಸವಿಯುವ ಜೊತೆಗೆ ನಾವೆಲ್ಲರೂ ಸಾಮರಸ್ಯ, ಸಹಬಾಳ್ವೆಯಿಂದ ಬದುಕಬೇಕಿದೆ ಇತರರನ್ನು ಬದುಕಲು ಬಿಡಬೇಕಿದೆ ಎಂಬುದನ್ನು ಭಾರತ ಕಥಾ ಸ್ಪಷ್ಟಪಡಿಸಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಬೆಂ. ಉ. ವಿ. ವಿ ಸ್ನಾತಕೋತರ ಕೇಂದ್ರದ ನಿರ್ದೇಶಕರು ಆದಂತಹ ಪ್ರೊ. ಕುಮುದ ಡಿ ರವರು ಕಾರ್ಯಕ್ರಮದ ಪ್ರಾರಂಭದಿಂದ ಕೊನೆಯ ತನಕ ಉಪಸ್ಥಿತಿಯಲ್ಲಿದ್ದು, ಕಾರ್ಯಕ್ರಮದ ಎಲ್ಲಾ ಚಟುವಟಿಕೆಗಳನ್ನು ಅವಲೋಕಿಸಿ “ಭಾರತ ಕಥಾ” ಪ್ರಸ್ತುತ ದಿನಮಾನದ ಕುರಿತು ಇಂದಿನ ವಿದ್ಯಾರ್ಥಿಗಳಿಗೆ ಮಹತ್ತರ ಸಂದೇಶವನ್ನು ನೀಡಿದೆ ಎಂದು ವ್ಯಕ್ತಪಡಿಸಿದರು ಹಾಗೂ ಕಾರ್ಯಕ್ರಮವನ್ನು ಆಯೋಜಿಸಿದ ಸಮಾಜಕಾರ್ಯ ವಿಭಾಗದ ಪ್ರಶಿಕ್ಷಣಾರ್ಥಿಗಳಾದ ಸಂಕೇತ್ ರಾವ್ ಸಿ.ಎನ್, ಐಶ್ವರ್ಯ ವಿ ಹಾಗೂ ಭವಾನಿ ಕೆ. ಎಂ ರವರನ್ನು ಪ್ರಶಂಸಿಸುತ್ತ ಇಂತಹ ಕಾರ್ಯಕ್ರಮಗಳು ಇನ್ನಷ್ಟು ವಿದ್ಯಾರ್ಥಿಗಳಿಗೆ ತಲುಪುವಂತಹ ಕಾರ್ಯವಾಗಬೇಕು ಎಂದು ತಮ್ಮ ಅಧ್ಯಕ್ಷತೆ ನುಡಿಗಳಲ್ಲಿ ತಿಳಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಗಳಾಗಿ ಕವಿಗಳು ಹಾಗೂ ಕನ್ನಡ ಉಪನ್ಯಾಸಕರಾದಂತಹ ಬೊಮ್ಮೇಕಲ್ಲು ವೆಂಕಟೇಶ್ ಹಾಗೂ ಬೇರು ಬೆವರು ಕಲಾ ಬಳಗದ ಸೋರಪಲ್ಲಿ ಚಂದ್ರಶೇಖರ್, ಸಮಾಜಕಾರ್ಯ ವಿಭಾಗದ ಸಂಯೋಜಕರು ಆದ ಡಾ. ಗುಂಡಪ್ಪ ದೇವಿಕೇರಿ, ಕಾರ್ಯಕ್ರಮದ ವಿಶೇಷ ಆಹ್ವಾನಿತರಾಗಿ ಆಗಮಿಸಿದಂತಹ ಸತ್ವ ವ್ಯಸನ ಮತ್ತು ಮಾನಸಿಕ ಅಸ್ವಸ್ಥರ ಪುನರ್ವಸತಿ ಕೇಂದ್ರದ ವ್ಯವಸ್ಥಾಪಕ ಡಾ. ಪಾರ್ವತಿ, ಹಾಗೂ ಹೊಸ ಚಿಗುರು ಸಂಸ್ಥೆಯ ಅಧ್ಯಕ್ಷ ಹರೀಶ್ ಎಸ್ ಎಂ, ಬೆಂ. ಉ. ವಿ. ವಿ ಸ್ನಾತಕೋತರ ಕೇಂದ್ರದ ವಿವಿಧ ವಿಭಾಗದ ಬೋಧಕರು ಮತ್ತು ಬೋಧಕೇತರ ವರ್ಗದವರು ಹಾಗೂ ಹಲವಾರು ವಿಭಾಗದ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಗಾಜಾ: 183 ಪ್ಯಾಲೆಸ್ಟೀನಿಯನ್ನರು, 3 ಇಸ್ರೇಲಿ ಕೈದಿಗಳ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...