Homeಕರ್ನಾಟಕಸಂವಿಧಾನದ ಆಶಯ ಸರ್ವರಿಗೂ ದಕ್ಕಿದ್ದು ಅದು ಇನ್ನಷ್ಟು ವಿಸ್ತರಿಸಿಕೊಳ್ಳಬೇಕಿದೆ: ಡಾ. ರಾಜಣ್ಣ ಜಿ

ಸಂವಿಧಾನದ ಆಶಯ ಸರ್ವರಿಗೂ ದಕ್ಕಿದ್ದು ಅದು ಇನ್ನಷ್ಟು ವಿಸ್ತರಿಸಿಕೊಳ್ಳಬೇಕಿದೆ: ಡಾ. ರಾಜಣ್ಣ ಜಿ

- Advertisement -
- Advertisement -

ಸಂವಿಧಾನದ ಆಶಯ ಸರ್ವರಿಗೂ ದಕ್ಕಿದೆ. ಅದು ಇನ್ನಷ್ಟು ವಿಸ್ತರಿಸಿಕೊಳ್ಳಬೇಕಿದೆ ಎಂದು ಸಮಾಜ ಕಾರ್ಯ ವಿಭಾಗದ ಉಪನ್ಯಾಸಕ ಡಾ. ರಾಜಣ್ಣ.ಜಿ ಹೇಳಿದರು.

ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಸ್ನಾತಕೋತ್ತರ ಕೇಂದ್ರ ಮಂಗಸಂದ್ರದಲ್ಲಿ ಸಮಾಜಕಾರ್ಯ ವಿಭಾಗ ಹಾಗೂ ಸತ್ವ ಸಂಸ್ಥೆ, ಚಿಂತಾಮಣಿ ಮತ್ತು ಹೊಸ ಚಿಗುರು ಸಂಸ್ಥೆ, ಮಾಲೂರು ಸಹಯೋಗದ ಮೇರೆಗೆ  ಶನಿವಾರದಂದು “ಸಂವಿಧಾನ ಸಂಭ್ರಮೋತ್ಸವ – ಸರ್ವರಿಗಾಗಿ ಸಂವಿಧಾನದ ಕುರಿತು ಅರಿವು” ಎಂಬ ಕಾರ್ಯಕ್ರಮದಲ್ಲಿ ಪ್ರಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದ ಕುರಿತು ಬೊಮ್ಮೇಕಲ್ಲು ವೆಂಕಟೇಶ್ ಮಾತನಾಡಿ, ಸಂವಿಧಾನ ಹಾಗೂ ಪ್ರಸ್ತುತತೆಯ ವಿಷಯದ ಕುರಿತು ಸುಧೀರ್ಘವಾಗಿ ವಿಶ್ಲೇಷಿಸಿದರು. ಸಂವಿಧಾನವೆಂಬುದು ಜನಪದವಾಗಬೇಕು, ಜನರು ಸಂವಿಧಾನವನ್ನು ಸಂಭ್ರಮಿಸಬೇಕು ಎಂದು ಹೇಳುವ ಮೂಲಕ ಬುದ್ಧ, ಬಸವಣ್ಣ, ಅಂಬೇಡ್ಕರ್, ಸ್ವಾಮಿ ವಿವೇಕಾನಂದ, ಗಾಂಧಿ, ಕುವೆಂಪು ಒಳಗೊಂಡಂತ ದೇಶದ ಬಹು ಸಂಸ್ಕೃತಿಯನ್ನು ಸಂವಿಧಾನ ಎತ್ತಿ ಹಿಡಿದಿರುವುದು ನಮ್ಮ ಸಂವಿಧಾನದ ವೈಶಿಷ್ಟ್ಯವಾಗಿದೆ. ಈ ಸಂವಿಧಾನವನ್ನು ಉಳಿಸುವ, ಅಳವಡಿಸಿಕೊಳ್ಳುವ ಜವಾಬ್ದಾರಿ ಎಲ್ಲ ಭಾರತೀಯರ ಮೇಲಿದೆ ಎಂಬುದನ್ನು ತಿಳಿಸಿದರು. ಬಹುತೇಕ ಇತಿಹಾಸವನ್ನು ತಿಳಿಸಲಾಗಿದೆ ಹಾಗೂ ನೈಜ ಇತಿಹಾಸವುಳ್ಳ ಪಠ್ಯಗಳು ಮಕ್ಕಳಿಗೆ ತಲುಪಬೇಕಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಸಂವಿಧಾನವೆಂಬುದು ಬರೀ ಒಂದು ವರ್ಗಕ್ಕೆ ಅಥವಾ ಒಂದು ಧರ್ಮಕ್ಕೆ ಸೀಮಿತವಾಗದೆ ಭಾರತದ ಒಟ್ಟು ಜನಸಾಮಾನ್ಯರ ಬದುಕಿನ ಒಳಿತಿಗಾಗಿ ಸಂವಿಧಾನವನ್ನು ರಚಿಸಿದರು ಎಂಬುದನ್ನು ಹೇಳುವ ಮೂಲಕ ಇಲ್ಲಿನ ಜನರು ಎದುರಿಸುತ್ತಿರುವ ಅಸ್ಪೃಷ್ಯತೆ, ಬಡತನ, ಅಸಮಾನತೆ ಅನ್ಯಾಯ ನಿವಾರಿಸಲು ನಮಗೆ ಇರುವ ಅಸ್ತ್ರ ಸಂವಿಧಾನ ಒಂದೇ ಎಂದು ತಮ್ಮ ವಿಚಾರವನ್ನು ಮಂಡಿಸಿದರು.

ಜೊತೆಗೆ ಬೇರು ಬೆವರು ಕಲಾ ಬಳಗದ ವತಿಯಿಂದ ಸೋರಪಲ್ಲಿ ಚಂದ್ರಶೇಖರ್ ರವರು ತಮ್ಮ ತಂಡದ ನವೀನ್, ಚಲಪತಿ ಹಾಗೂ ಪ್ರದೀಪ್ ರವರ ಜೊತೆಗೂಡಿ “ಭಾರತ ಕಥಾ” ಎಂಬ ವಿಷಯದ ಕುರಿತು ಹಾಡು ಮತ್ತು ಕಥೆಯ ಮೂಲಕ ಸಂವಿಧಾನವನ್ನು, ಭಾರತದ ಮೂಲ ಇತಿಹಾಸವನ್ನು ಒಳಗೊಂಡಂತೆ ಭಾರತದ ಸಂವಿಧಾನದ ರಚನೆಯ ಕುರಿತು ಕಥೆಯ ಶೈಲಿಯಲ್ಲಿ ವಿದ್ಯಾರ್ಥಿಗಳಿಗೆ ಮನಮುಟ್ಟುವಂತೆ ಪ್ರಸ್ತುತಪಡಿಸಿದರು.

ಭಾರತವೆಂದರೆ ಕೇವಲ ಕಲ್ಲಲ್ಲ, ಮಣ್ಣಲ್ಲ, ಬೆಟ್ಟ-ಗುಡ್ಡ ಮಾತ್ರವಲ್ಲ ಭಾರತವೆಂದರೆ ಇಲ್ಲಿ ವಾಸಿಸುತ್ತಿರುವ ಜನರು ಎಂಬ ತೆಲುಗಿನ ಒಬ್ಬ ಮಹಾಕವಿ ಹೇಳಿರುವ ಮಾತನ್ನು ಒಳಗೊಂಡಂತೆ ವಿವಿಧತೆಯಲ್ಲಿ ಏಕತೆಯನ್ನು ಎತ್ತಿ ಹಿಡಿಯುವ ದೇಶದಲ್ಲಿ ವೈವಿಧ್ಯತೆಯನ್ನು ಸವಿಯುವ ಜೊತೆಗೆ ನಾವೆಲ್ಲರೂ ಸಾಮರಸ್ಯ, ಸಹಬಾಳ್ವೆಯಿಂದ ಬದುಕಬೇಕಿದೆ ಇತರರನ್ನು ಬದುಕಲು ಬಿಡಬೇಕಿದೆ ಎಂಬುದನ್ನು ಭಾರತ ಕಥಾ ಸ್ಪಷ್ಟಪಡಿಸಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಬೆಂ. ಉ. ವಿ. ವಿ ಸ್ನಾತಕೋತರ ಕೇಂದ್ರದ ನಿರ್ದೇಶಕರು ಆದಂತಹ ಪ್ರೊ. ಕುಮುದ ಡಿ ರವರು ಕಾರ್ಯಕ್ರಮದ ಪ್ರಾರಂಭದಿಂದ ಕೊನೆಯ ತನಕ ಉಪಸ್ಥಿತಿಯಲ್ಲಿದ್ದು, ಕಾರ್ಯಕ್ರಮದ ಎಲ್ಲಾ ಚಟುವಟಿಕೆಗಳನ್ನು ಅವಲೋಕಿಸಿ “ಭಾರತ ಕಥಾ” ಪ್ರಸ್ತುತ ದಿನಮಾನದ ಕುರಿತು ಇಂದಿನ ವಿದ್ಯಾರ್ಥಿಗಳಿಗೆ ಮಹತ್ತರ ಸಂದೇಶವನ್ನು ನೀಡಿದೆ ಎಂದು ವ್ಯಕ್ತಪಡಿಸಿದರು ಹಾಗೂ ಕಾರ್ಯಕ್ರಮವನ್ನು ಆಯೋಜಿಸಿದ ಸಮಾಜಕಾರ್ಯ ವಿಭಾಗದ ಪ್ರಶಿಕ್ಷಣಾರ್ಥಿಗಳಾದ ಸಂಕೇತ್ ರಾವ್ ಸಿ.ಎನ್, ಐಶ್ವರ್ಯ ವಿ ಹಾಗೂ ಭವಾನಿ ಕೆ. ಎಂ ರವರನ್ನು ಪ್ರಶಂಸಿಸುತ್ತ ಇಂತಹ ಕಾರ್ಯಕ್ರಮಗಳು ಇನ್ನಷ್ಟು ವಿದ್ಯಾರ್ಥಿಗಳಿಗೆ ತಲುಪುವಂತಹ ಕಾರ್ಯವಾಗಬೇಕು ಎಂದು ತಮ್ಮ ಅಧ್ಯಕ್ಷತೆ ನುಡಿಗಳಲ್ಲಿ ತಿಳಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಗಳಾಗಿ ಕವಿಗಳು ಹಾಗೂ ಕನ್ನಡ ಉಪನ್ಯಾಸಕರಾದಂತಹ ಬೊಮ್ಮೇಕಲ್ಲು ವೆಂಕಟೇಶ್ ಹಾಗೂ ಬೇರು ಬೆವರು ಕಲಾ ಬಳಗದ ಸೋರಪಲ್ಲಿ ಚಂದ್ರಶೇಖರ್, ಸಮಾಜಕಾರ್ಯ ವಿಭಾಗದ ಸಂಯೋಜಕರು ಆದ ಡಾ. ಗುಂಡಪ್ಪ ದೇವಿಕೇರಿ, ಕಾರ್ಯಕ್ರಮದ ವಿಶೇಷ ಆಹ್ವಾನಿತರಾಗಿ ಆಗಮಿಸಿದಂತಹ ಸತ್ವ ವ್ಯಸನ ಮತ್ತು ಮಾನಸಿಕ ಅಸ್ವಸ್ಥರ ಪುನರ್ವಸತಿ ಕೇಂದ್ರದ ವ್ಯವಸ್ಥಾಪಕ ಡಾ. ಪಾರ್ವತಿ, ಹಾಗೂ ಹೊಸ ಚಿಗುರು ಸಂಸ್ಥೆಯ ಅಧ್ಯಕ್ಷ ಹರೀಶ್ ಎಸ್ ಎಂ, ಬೆಂ. ಉ. ವಿ. ವಿ ಸ್ನಾತಕೋತರ ಕೇಂದ್ರದ ವಿವಿಧ ವಿಭಾಗದ ಬೋಧಕರು ಮತ್ತು ಬೋಧಕೇತರ ವರ್ಗದವರು ಹಾಗೂ ಹಲವಾರು ವಿಭಾಗದ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಗಾಜಾ: 183 ಪ್ಯಾಲೆಸ್ಟೀನಿಯನ್ನರು, 3 ಇಸ್ರೇಲಿ ಕೈದಿಗಳ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....