Homeಮುಖಪುಟಸ್ಪರ್ಧೆ ನಡೆಯುತ್ತಿರುವುದು ಸಮಾನತೆಯ ಹಾಲಿ ಸಂವಿಧಾನ V/S ಅಸಮಾನತೆಯ ಮಾಜಿ ಮನುಧರ್ಮಶಾಸ್ತ್ರಗಳ ನಡುವೆ - ದೇವನೂರು

ಸ್ಪರ್ಧೆ ನಡೆಯುತ್ತಿರುವುದು ಸಮಾನತೆಯ ಹಾಲಿ ಸಂವಿಧಾನ V/S ಅಸಮಾನತೆಯ ಮಾಜಿ ಮನುಧರ್ಮಶಾಸ್ತ್ರಗಳ ನಡುವೆ – ದೇವನೂರು

- Advertisement -
- Advertisement -

ಸ್ಪರ್ಧೆ ನಡೆಯುತ್ತಿರುವುದು ಸಮಾನತೆಯ ಹಾಲಿ ಸಂವಿಧಾನ V/S ಅಸಮಾನತೆಯ ಮಾಜಿ ಮನುಧರ್ಮಶಾಸ್ತ್ರ ಸಂವಿಧಾನಗಳ ನಡುವೆ. ಹಾಗಾಗಿ ಸಂವಿಧಾನ ವಿರೋಧಿ ಬಿಜೆಪಿ ಸೋಲಿಸಿ, ನಾವು ಉಳಿಯಬೇಕಾಗಿದೆ ಎಂದು ಹಿರಿಯ ಸಾಹಿತಿ ದೇವನೂರ ಮಹಾದೇವ ಕರೆ ನೀಡಿದರು.

ಭಾನುವಾರ ತಲಕಾಡಿನಲ್ಲಿ ಚುನಾವಣಾ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ನಾನು, ಸಾಮಾನ್ಯವಾಗಿ ಯಾವ ಪಕ್ಷದ ಚುನಾವಣಾ ಪ್ರಣಾಳಿಕೆಗಳನ್ನು ಓದುವುದಿಲ್ಲ. ನಾನು ನುಡಿ ನೋಡಲ್ಲ, ಬದಲಿಗೆ- ಆ ಪಕ್ಷದ ನಡೆಯ ಚರಿತ್ರೆಯನ್ನು ನೋಡಿ ಅರ್ಥ ಮಾಡಿಕೊಳ್ಳಲು ಪ್ರಯತ್ನಿಸುತ್ತೇನೆ. ಆದರೆ ಈ ಸಲ 2023ರ ವಿಧಾನಸಭೆಯ ಚುನಾವಣೆ ಸಂದರ್ಭಲ್ಲಿ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಓದಬೇಕಾಗಿ ಬಂತು. ಈ ದೇಶದ ಪ್ರಧಾನಮಂತ್ರಿಯವರು, ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯ ಕಾಲಂ ಒಂದನ್ನು ಉಲ್ಲೇಖಿಸಿ ಅದರ ವಿರುದ್ಧವಾಗಿ ಅನೇಕ ಕಡೆ ಉಗ್ರ ಭಾಷಣ ಮಾಡಿದರು. ನಾನು ಕುತೂಹಲಕ್ಕೆ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಅಂತಹದು ಏನಿರಬಹುದು ಎಂದು ಗಮನವಿಟ್ಟು ಓದಿದೆ. “ಧರ್ಮ ಮತ್ತು ಜಾತಿಯ ಹೆಸರಿನಲ್ಲಿ ದ್ವೇಷವನ್ನು ಬಿತ್ತಿ ವಿಭಜನೆಗೆ ಕಾರಣವಾಗುವ, ವ್ಯಕ್ತಿಗಳು ಮತ್ತು ಸಂಘಟನೆಗಳ ವಿರುದ್ಧ ಕಠಿಣ ಮತ್ತು ನಿರ್ಣಾಯಕ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲು ಕಾಂಗ್ರೆಸ್ ಪಕ್ಷ ಬದ್ಧವಾಗಿದೆ. ಸಂವಿಧಾನವೇ ಪವಿತ್ರ ಎಂದು ನಂಬಿರುವ ನಾವು, ಯಾವುದೇ ವ್ಯಕ್ತಿಗಳಾಗಲಿ ಭಜರಂಗ ದಳ ಮತ್ತು ಪಿಎಫ್‌ಐಗಳು ಸೇರಿದಂತೆ ಬಹುಸಂಖ್ಯಾತ ಅಥವಾ ಅಲ್ಪಸಂಖ್ಯಾತ ಇತರರಾಗಲಿ ಸಂವಿಧಾನದ ವಿಧಿಗಳನ್ನು ಉಲ್ಲಂಘಿಸುವುದನ್ನು ಸಹಿಸುವುದಿಲ್ಲ. ಆದ ಕಾರಣ ಇಂತಹ ವ್ಯಕ್ತಿಗಳು ಮತ್ತು ಸಂಘಟನೆಗಳ ನಿಷೇಧವೂ ಸೇರಿದಂತೆ ಬಲವಾದ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಬರೆಯಲಾಗಿದೆ” ಎಂದರು.

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯನ್ನು ಕಣ್ಣಲ್ಲಿ ಕಣ್ಣಿಟ್ಟು ಓದಿದ್ದೇನೆ. ನನಗೆ ಪ್ರಮುಖವಾಗಿ ಕಂಡಿದ್ದು ಇಷ್ಟು: 1) ಸಮಾಜದ ವಿಭಜನೆಗೆ ಅಂದರೆ ಒಡಕಿಗೆ ಕಾರಣರಾದವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಲು ಕಾಂಗ್ರೆಸ್ ಪಕ್ಷ ಬದ್ಧ (2) ಕಾಂಗ್ರೆಸ್‌ಗೆ ಸಂವಿಧಾನ ಪವಿತ್ರ (3) ಸಂವಿಧಾನದ ವಿಧಿಗಳನ್ನು ಉಲ್ಲಂಘಿಸಬಾರದು (4) ಇದನ್ನು ಉಲ್ಲಂಘಿಸುವವರು ಯಾರೇ ಆಗಲಿ ಭಜರಂಗದಳ, ಪಿಎಫ್‌ಐ ಇತ್ಯಾದಿಗಳ ಮೇಲೆ ಕಾಂಗ್ರೆಸ್ ಪಕ್ಷ ಬಲವಾದ ಕಾನೂನು ಕ್ರಮ ತೆಗೆದುಕೊಳ್ಳುತ್ತದೆ. ಇದು ಆ ಪ್ರಣಾಳಿಕೆಯ ಸಾರಾಂಶ. ಅಂದರೆ ಯಾರು ಕಾನೂನನ್ನು ಕೈಗೆತ್ತಿಕೊಳ್ಳುತ್ತಾರೊ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವ ಆಶಯ ಇಲ್ಲಿದೆ. ರಾಜ್ಯದ law and order ಕಾಪಾಡುವುದು ತನ್ನ ಧರ್ಮ ಎಂದು ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಹೇಳುತ್ತಿದೆ.
ನನಗೆ ಅನಿಸುವಂತೆ, ಯಾವುದೇ ಒಂದು ಸರ್ಕಾರಕ್ಕೆ ತನ್ನ ರಾಜ್ಯದ, ದೇಶದ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು ಎಂದರೆ ಅದು ಆ ಸರ್ಕಾರದ ಕನಿಷ್ಠ ಅರ್ಹತೆ. ಈ ಕನಿಷ್ಠ ಅರ್ಹತೆ ಇಲ್ಲದಿರುವುದರಿಂದಾಗಿ ಇದುವರೆಗೂ ರಾಜ್ಯವನ್ನು ಆಳ್ವಿಕೆ ನಡೆಸುತ್ತಿದ್ದ ಬಿಜೆಪಿ ಸರ್ಕಾರದ ಜಮಾನದಲ್ಲಿ ಒಂದೆರಡಲ್ಲ-ನೂರಾರು ಸಲ, ಕೆಲವು ಗುಂಪುಗಳು ದಾಂಧಲೆ ಎಬ್ಬಿಸಿ ಗಲಭೆ ಆಯ್ತು. ವ್ಯಾಪಾರ ನಿಷೇಧ, ಹಿಜಾಬ್, ಹಲಾಲ್, ಗೋವು ಸಾಗಾಣಿಕೆ ಇತ್ಯಾದಿ, ಇತ್ಯಾದಿ ಸರಮಾಲೆಯಲ್ಲಿ ಕೊಲೆ ಸುಲಿಗೆ ಹೊಡೆ ಬಡಿ ಎಲ್ಲಾ ನಡೆಯಿತು. ಸರ್ಕಾರ ಎನ್ನುವುದು ಇದೆಯೋ ಇಲ್ಲವೋ ಎಂದು ಅನುಮಾನ ಬರುವ ಪರಿಸ್ಥಿತಿ ಉಂಟಾಯ್ತು. ಇದೇ ಪರಿಸ್ಥಿತಿ ಮತ್ತೆ ಬರಬೇಕೆ? ಎಂದು ದೇವನೂರು ಪ್ರಶ್ನಿಸಿದರು.

ಹೀಗಿದ್ದೂ ನಮ್ಮ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕಾನೂನನ್ನು ತನ್ನ ಕೈಗೆತ್ತಿಕೊಳ್ಳುವ ಭಜರಂಗದಳದ ನಿಷೇಧ ಪ್ರಸ್ತಾಪವನ್ನು ವಿರೋಧಿಸುತ್ತಾರೆ. ಆಕ್ರೋಶಭರಿತರಾಗುತ್ತಾರೆ. ಬ್ಯಾಲೆಟ್ ಬಾಕ್ಸ್‌ನಲ್ಲಿ ಬಟನ್ ಒತ್ತುವಾಗ ‘ಜೈ ಭಜರಂಗ ಬಲಿ’ ಎಂದು ಮತ ನೀಡಿ ಎಂದು ಮತದಾರರಿಗೆ ಬಹಿರಂಗ ಕರೆಯನ್ನೂ ಕೊಡುತ್ತಾರೆ. ಆದರೆ ಹನುಮಂತ, ಹನುಮಾನ್ ಪರಮಭಕ್ತಿಯ ಸಂಕೇತವಾಗಿ ನಮ್ಮ ಜನಸಮುದಾಯದ ಸುಪ್ತಪ್ರಜ್ಞೆಯಲ್ಲಿ ವಾಸ ಮಾಡುತ್ತಿದ್ದಾನೆ. ಇಂತಹ ಪರಮಭಕ್ತಿಯ ಹನುಮಾನ್ ಯಾವ ಕಾರಣಕ್ಕೂ ‘ಭಕ್ತಿಯೇ ಇಲ್ಲದ ವೇಷಧಾರಿ ಭಕ್ತ’ರ ಗದ್ದಲದ ಮಾತುಗಳನ್ನು ಕೇಳಿಸಿಕೊಳ್ಳಲಾರ. ವಚನ ಪಾಲನೆಯ ಸಂಕೇತವಾದ ರಾಮನ ಭಕ್ತನಾದ ಹನುಮಾನ್ ವಚನಭ್ರಷ್ಠ ಭಕ್ತರನ್ನಂತೂ ಕ್ಷಮಿಸಲಾರ. ಇದೇ ಭಾರತದ ಪರಂಪರೆಯ ಅಂತಃಸಾಕ್ಷಿ ಎಂದು ದೇವನೂರು ತಿಳಿಸಿದರು.

ನಮ್ಮ ಪ್ರಧಾನಿಯವರಿಗೆ ಒಂದು ಪ್ರಶ್ನೆ. ಕಾನೂನು ಕೈಗೆತ್ತಿಕೊಳ್ಳುವ ಹಿನ್ನೆಲೆಯ ಭಜರಂಗದಳ ಮತ್ತು ಪಿಎಫ್‌ಐ ಇತ್ಯಾದಿಗಳ ಅವಾಂತರ ನೋಡಿಕೊಂಡು ಸರ್ಕಾರವೊಂದು ಸುಮ್ಮನಿರಬೇಕೆ? ಇದನ್ನು ಹೇಗೆ ಅರ್ಥಮಾಡಿಕೊಳ್ಳುವುದು? ಇಂತಹ ಮತಾಂಧರ ಬಗ್ಗೆ- ಕನ್ನಡ ಮಹೋನ್ನತ ಲೇಖಕ ಪಿ.ಲಂಕೇಶ್ ಅವರು ಒಂದು ಮಾತು ಹೇಳುತ್ತಾರೆ- “ನಗು ಮರೆತ, ಅಳು ಮರೆತ, ದಯೆ ಮರೆತ ಧರ್ಮಾಂಧರು ಯಾವುದೇ ಅಣುಬಾಂಬಿಗಿಂತ ‘ಅಪಾಯದ ಮನುಷ್ಯರು’ ” ಅಂತ. ಲಂಕೇಶರ ಈ ಒಳಗಣ್ಣಿನ ನುಡಿಗಳನ್ನು ನಾವು ಆಲಿಸಬೇಕಾಗಿದೆ ಎಂದರು.

ಇತ್ತೀಚೆಗೆ ನಾನು ನಂಜನಗೂಡಿನ ಹತ್ತಿರದ ತಗಡೂರಿಗೆ ಒಂದು ಸಭೆಗೆ ಹೋಗಿದ್ದೆ. ಅಲ್ಲಿ ಸುಮಾರು 200ಕ್ಕೂ ಹೆಚ್ಚು ಜನರು ಸೇರಿದ್ದರು. ಅಲ್ಲಿ ಶಾಲಾಮಕ್ಕಳು, ತರುಣರು, ಮಹಿಳೆಯರು, ಸಂಘಟನೆಗಳ ನಾಯಕರು, ಆ ಊರಿನ ಯಜಮಾನರು ಎಲ್ಲರೂ ಸೇರಿದ್ದರು. ನಾನು ಸುಮಾರು ಅರ್ಧ ಗಂಟೆಗಳ ಕಾಲ ಮಾತಾಡಿದೆ. ಮಾತಾಡಿದೆ ಅನ್ನುವುದಕ್ಕಿಂತ ನಾನು ಬರೆದುಕೊಂಡಿದ್ದನ್ನು ಓದಿದೆ ಅನ್ನಬಹುದು. ನಾನೇ ಚಕಿತನಾಗುವಂತೆ ಎಲ್ಲರೂ ಆಲಿಸಿದರು. ಸಭೆ ಮುಗಿದ ಮೇಲೆ ನಾಕಾರು ಹುಡುಗರು –“ನಮಗೆ ಅರ್ಥವಾಯ್ತು. ನಾವು ಬಿಜೆಪಿಗೆ ಮತ ನೀಡುವುದಿಲ್ಲ” ಅಂದರು. ಆಮೇಲೆ ಹತ್ತಾರು ಜನ ತರುಣರು ರಾತ್ರಿ 12.30ರವರೆಗೆ ಅಂದು ನಾನು ಹೇಳಿದ್ದ ಮುಖ್ಯ ಮಾತೊಂದನ್ನು ಚರ್ಚಿಸುತ್ತಿದ್ದರು ಎಂದು ತಿಳಿದು ಬಂತು. ತಗಡೂರು ಸಭೆಯಲ್ಲಿ ಹೇಳಿದ್ದ ಮಾತುಗಳ ಸಾರಾಂಶ ಏನೆಂದರೆ- “ಈ 2023ರ ವಿಧಾಸಭಾ ಚುನಾವಣೆ ಮತ್ತು ಮುಂಬರುವ 2024ರ ಲೋಕಸಭಾ ಚುನಾವಣೆ ನಿರ್ಣಾಯಕ. ಇಂದಿನ ರಾಜಕಾರಣದ ಒಳಹೊಕ್ಕು ನೋಡಿದರೆ, ಇಂದಿನ ಚುನಾವಣೆ ವ್ಯಕ್ತಿ ವ್ಯಕ್ತಿಗಳ ನಡುವೆ ಅಲ್ಲ. ಪಕ್ಷ ಪಕ್ಷಗಳ ನಡುವೆಯೂ ಅಲ್ಲ. ಇಂದಿನ ಸ್ಪರ್ಧೆ ನಡೆಯುತ್ತಿರುವುದು ಸಮಾನತೆಯ ಹಾಲಿ ಸಂವಿಧಾನ V/S ಅಸಮಾನತೆಯ ಮಾಜಿ ಮನುಧರ್ಮಶಾಸ್ತ್ರ ಸಂವಿಧಾನಗಳ ನಡುವೆ. ಮನುಧರ್ಮ ಶಾಸ್ತ್ರದ ಭಕ್ತರಾದ ಸಂಘಪರಿವಾರ ಬಿಜೆಪಿ ಪಕ್ಷವು ಅಧಿಕಾರಕ್ಕೆ ಬಂದರೆ, ಆ ಮನುಧರ್ಮ ಶಾಸ್ತ್ರದಂತೆ ಒಕ್ಕಲಿಗರು, ಲಿಂಗಾಯಿತರು, ತಳಸಮುದಾಯದವರು ಮತ್ತೆ ಸೇವಕರಾಗಬೇಕಾಗುತ್ತದೆ. ಆಗ ದಲಿತರು, ಅಲೆಮಾರಿ, ಆದಿವಾಸಿಗಳು ಊರಾಚೆ ತಳ್ಳಲ್ಪಡುತ್ತಾರೆ, ನೆನಪಿಡಿ” –ಎಂದು ಹೇಳಿದ್ದೆ. ಈಗ ಬಿಜೆಪಿ ಸರ್ಕಾರಗಳು ತರುತ್ತಿರುವ ಕಾಯ್ದೆಗಳನ್ನು ಮೂಸಿ ನೋಡಿದರೂ, ಅಲ್ಲಿ ಮನುಧರ್ಮ ಶಾಸ್ತ್ರದ ವಾಸನೆ ಇರುವುದನ್ನು ಗುರುತಿಸಬಹುದು. ಹೀಗಿರುವಾಗ, ಸ್ನೇಹಿತರೇ ಸಂಘಪರಿವಾರ ಬಿಜೆಪಿಯನ್ನು ಸೋಲಿಸಲೇಬೇಕು. ಅಂಬೇಡ್ಕರ್ ನೇತೃತ್ವದಲ್ಲಿ ರಚಿಸಿದ ಭಾರತದ ಸಂವಿಧಾನವನ್ನು ಪವಿತ್ರ ಎಂದು ಭಾವಿಸಿರುವ ಕಾಂಗ್ರೆಸ್‌ಗೆ, ಇಂದಿನ ಪರಿಸ್ಥಿತಿಯಲ್ಲಿ ಎಷ್ಟೇ ಭಿನ್ನಾಭಿಪ್ರಾಯ ಇದ್ದರೂ ಬೆಂಬಲ ನೀಡಬೇಕಾಗಿದೆ. ಸಂವಿಧಾನ ವಿರೋಧಿ ಬಿಜೆಪಿಯನ್ನು ಸೋಲಿಸಿ ನಾವು ಉಳಿಯಬೇಕಾಗಿದೆ ಎಂದರು.

ಇದನ್ನೂ ಓದಿ: ‘ಬಿಜೆಪಿಗೆ ಮತ ಹಾಕದಿದ್ದರೆ ಕೇಂದ್ರದ ಯೋಜನೆಗಳು ಬಂದ್’; ನಡ್ಡಾ ಬೆದರಿಕೆಗೆ ಜನಾಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...