Homeಮುಖಪುಟಸ್ಪರ್ಧೆ ನಡೆಯುತ್ತಿರುವುದು ಸಮಾನತೆಯ ಹಾಲಿ ಸಂವಿಧಾನ V/S ಅಸಮಾನತೆಯ ಮಾಜಿ ಮನುಧರ್ಮಶಾಸ್ತ್ರಗಳ ನಡುವೆ - ದೇವನೂರು

ಸ್ಪರ್ಧೆ ನಡೆಯುತ್ತಿರುವುದು ಸಮಾನತೆಯ ಹಾಲಿ ಸಂವಿಧಾನ V/S ಅಸಮಾನತೆಯ ಮಾಜಿ ಮನುಧರ್ಮಶಾಸ್ತ್ರಗಳ ನಡುವೆ – ದೇವನೂರು

- Advertisement -
- Advertisement -

ಸ್ಪರ್ಧೆ ನಡೆಯುತ್ತಿರುವುದು ಸಮಾನತೆಯ ಹಾಲಿ ಸಂವಿಧಾನ V/S ಅಸಮಾನತೆಯ ಮಾಜಿ ಮನುಧರ್ಮಶಾಸ್ತ್ರ ಸಂವಿಧಾನಗಳ ನಡುವೆ. ಹಾಗಾಗಿ ಸಂವಿಧಾನ ವಿರೋಧಿ ಬಿಜೆಪಿ ಸೋಲಿಸಿ, ನಾವು ಉಳಿಯಬೇಕಾಗಿದೆ ಎಂದು ಹಿರಿಯ ಸಾಹಿತಿ ದೇವನೂರ ಮಹಾದೇವ ಕರೆ ನೀಡಿದರು.

ಭಾನುವಾರ ತಲಕಾಡಿನಲ್ಲಿ ಚುನಾವಣಾ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ನಾನು, ಸಾಮಾನ್ಯವಾಗಿ ಯಾವ ಪಕ್ಷದ ಚುನಾವಣಾ ಪ್ರಣಾಳಿಕೆಗಳನ್ನು ಓದುವುದಿಲ್ಲ. ನಾನು ನುಡಿ ನೋಡಲ್ಲ, ಬದಲಿಗೆ- ಆ ಪಕ್ಷದ ನಡೆಯ ಚರಿತ್ರೆಯನ್ನು ನೋಡಿ ಅರ್ಥ ಮಾಡಿಕೊಳ್ಳಲು ಪ್ರಯತ್ನಿಸುತ್ತೇನೆ. ಆದರೆ ಈ ಸಲ 2023ರ ವಿಧಾನಸಭೆಯ ಚುನಾವಣೆ ಸಂದರ್ಭಲ್ಲಿ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಓದಬೇಕಾಗಿ ಬಂತು. ಈ ದೇಶದ ಪ್ರಧಾನಮಂತ್ರಿಯವರು, ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯ ಕಾಲಂ ಒಂದನ್ನು ಉಲ್ಲೇಖಿಸಿ ಅದರ ವಿರುದ್ಧವಾಗಿ ಅನೇಕ ಕಡೆ ಉಗ್ರ ಭಾಷಣ ಮಾಡಿದರು. ನಾನು ಕುತೂಹಲಕ್ಕೆ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಅಂತಹದು ಏನಿರಬಹುದು ಎಂದು ಗಮನವಿಟ್ಟು ಓದಿದೆ. “ಧರ್ಮ ಮತ್ತು ಜಾತಿಯ ಹೆಸರಿನಲ್ಲಿ ದ್ವೇಷವನ್ನು ಬಿತ್ತಿ ವಿಭಜನೆಗೆ ಕಾರಣವಾಗುವ, ವ್ಯಕ್ತಿಗಳು ಮತ್ತು ಸಂಘಟನೆಗಳ ವಿರುದ್ಧ ಕಠಿಣ ಮತ್ತು ನಿರ್ಣಾಯಕ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲು ಕಾಂಗ್ರೆಸ್ ಪಕ್ಷ ಬದ್ಧವಾಗಿದೆ. ಸಂವಿಧಾನವೇ ಪವಿತ್ರ ಎಂದು ನಂಬಿರುವ ನಾವು, ಯಾವುದೇ ವ್ಯಕ್ತಿಗಳಾಗಲಿ ಭಜರಂಗ ದಳ ಮತ್ತು ಪಿಎಫ್‌ಐಗಳು ಸೇರಿದಂತೆ ಬಹುಸಂಖ್ಯಾತ ಅಥವಾ ಅಲ್ಪಸಂಖ್ಯಾತ ಇತರರಾಗಲಿ ಸಂವಿಧಾನದ ವಿಧಿಗಳನ್ನು ಉಲ್ಲಂಘಿಸುವುದನ್ನು ಸಹಿಸುವುದಿಲ್ಲ. ಆದ ಕಾರಣ ಇಂತಹ ವ್ಯಕ್ತಿಗಳು ಮತ್ತು ಸಂಘಟನೆಗಳ ನಿಷೇಧವೂ ಸೇರಿದಂತೆ ಬಲವಾದ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಬರೆಯಲಾಗಿದೆ” ಎಂದರು.

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯನ್ನು ಕಣ್ಣಲ್ಲಿ ಕಣ್ಣಿಟ್ಟು ಓದಿದ್ದೇನೆ. ನನಗೆ ಪ್ರಮುಖವಾಗಿ ಕಂಡಿದ್ದು ಇಷ್ಟು: 1) ಸಮಾಜದ ವಿಭಜನೆಗೆ ಅಂದರೆ ಒಡಕಿಗೆ ಕಾರಣರಾದವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಲು ಕಾಂಗ್ರೆಸ್ ಪಕ್ಷ ಬದ್ಧ (2) ಕಾಂಗ್ರೆಸ್‌ಗೆ ಸಂವಿಧಾನ ಪವಿತ್ರ (3) ಸಂವಿಧಾನದ ವಿಧಿಗಳನ್ನು ಉಲ್ಲಂಘಿಸಬಾರದು (4) ಇದನ್ನು ಉಲ್ಲಂಘಿಸುವವರು ಯಾರೇ ಆಗಲಿ ಭಜರಂಗದಳ, ಪಿಎಫ್‌ಐ ಇತ್ಯಾದಿಗಳ ಮೇಲೆ ಕಾಂಗ್ರೆಸ್ ಪಕ್ಷ ಬಲವಾದ ಕಾನೂನು ಕ್ರಮ ತೆಗೆದುಕೊಳ್ಳುತ್ತದೆ. ಇದು ಆ ಪ್ರಣಾಳಿಕೆಯ ಸಾರಾಂಶ. ಅಂದರೆ ಯಾರು ಕಾನೂನನ್ನು ಕೈಗೆತ್ತಿಕೊಳ್ಳುತ್ತಾರೊ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವ ಆಶಯ ಇಲ್ಲಿದೆ. ರಾಜ್ಯದ law and order ಕಾಪಾಡುವುದು ತನ್ನ ಧರ್ಮ ಎಂದು ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಹೇಳುತ್ತಿದೆ.
ನನಗೆ ಅನಿಸುವಂತೆ, ಯಾವುದೇ ಒಂದು ಸರ್ಕಾರಕ್ಕೆ ತನ್ನ ರಾಜ್ಯದ, ದೇಶದ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು ಎಂದರೆ ಅದು ಆ ಸರ್ಕಾರದ ಕನಿಷ್ಠ ಅರ್ಹತೆ. ಈ ಕನಿಷ್ಠ ಅರ್ಹತೆ ಇಲ್ಲದಿರುವುದರಿಂದಾಗಿ ಇದುವರೆಗೂ ರಾಜ್ಯವನ್ನು ಆಳ್ವಿಕೆ ನಡೆಸುತ್ತಿದ್ದ ಬಿಜೆಪಿ ಸರ್ಕಾರದ ಜಮಾನದಲ್ಲಿ ಒಂದೆರಡಲ್ಲ-ನೂರಾರು ಸಲ, ಕೆಲವು ಗುಂಪುಗಳು ದಾಂಧಲೆ ಎಬ್ಬಿಸಿ ಗಲಭೆ ಆಯ್ತು. ವ್ಯಾಪಾರ ನಿಷೇಧ, ಹಿಜಾಬ್, ಹಲಾಲ್, ಗೋವು ಸಾಗಾಣಿಕೆ ಇತ್ಯಾದಿ, ಇತ್ಯಾದಿ ಸರಮಾಲೆಯಲ್ಲಿ ಕೊಲೆ ಸುಲಿಗೆ ಹೊಡೆ ಬಡಿ ಎಲ್ಲಾ ನಡೆಯಿತು. ಸರ್ಕಾರ ಎನ್ನುವುದು ಇದೆಯೋ ಇಲ್ಲವೋ ಎಂದು ಅನುಮಾನ ಬರುವ ಪರಿಸ್ಥಿತಿ ಉಂಟಾಯ್ತು. ಇದೇ ಪರಿಸ್ಥಿತಿ ಮತ್ತೆ ಬರಬೇಕೆ? ಎಂದು ದೇವನೂರು ಪ್ರಶ್ನಿಸಿದರು.

ಹೀಗಿದ್ದೂ ನಮ್ಮ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕಾನೂನನ್ನು ತನ್ನ ಕೈಗೆತ್ತಿಕೊಳ್ಳುವ ಭಜರಂಗದಳದ ನಿಷೇಧ ಪ್ರಸ್ತಾಪವನ್ನು ವಿರೋಧಿಸುತ್ತಾರೆ. ಆಕ್ರೋಶಭರಿತರಾಗುತ್ತಾರೆ. ಬ್ಯಾಲೆಟ್ ಬಾಕ್ಸ್‌ನಲ್ಲಿ ಬಟನ್ ಒತ್ತುವಾಗ ‘ಜೈ ಭಜರಂಗ ಬಲಿ’ ಎಂದು ಮತ ನೀಡಿ ಎಂದು ಮತದಾರರಿಗೆ ಬಹಿರಂಗ ಕರೆಯನ್ನೂ ಕೊಡುತ್ತಾರೆ. ಆದರೆ ಹನುಮಂತ, ಹನುಮಾನ್ ಪರಮಭಕ್ತಿಯ ಸಂಕೇತವಾಗಿ ನಮ್ಮ ಜನಸಮುದಾಯದ ಸುಪ್ತಪ್ರಜ್ಞೆಯಲ್ಲಿ ವಾಸ ಮಾಡುತ್ತಿದ್ದಾನೆ. ಇಂತಹ ಪರಮಭಕ್ತಿಯ ಹನುಮಾನ್ ಯಾವ ಕಾರಣಕ್ಕೂ ‘ಭಕ್ತಿಯೇ ಇಲ್ಲದ ವೇಷಧಾರಿ ಭಕ್ತ’ರ ಗದ್ದಲದ ಮಾತುಗಳನ್ನು ಕೇಳಿಸಿಕೊಳ್ಳಲಾರ. ವಚನ ಪಾಲನೆಯ ಸಂಕೇತವಾದ ರಾಮನ ಭಕ್ತನಾದ ಹನುಮಾನ್ ವಚನಭ್ರಷ್ಠ ಭಕ್ತರನ್ನಂತೂ ಕ್ಷಮಿಸಲಾರ. ಇದೇ ಭಾರತದ ಪರಂಪರೆಯ ಅಂತಃಸಾಕ್ಷಿ ಎಂದು ದೇವನೂರು ತಿಳಿಸಿದರು.

ನಮ್ಮ ಪ್ರಧಾನಿಯವರಿಗೆ ಒಂದು ಪ್ರಶ್ನೆ. ಕಾನೂನು ಕೈಗೆತ್ತಿಕೊಳ್ಳುವ ಹಿನ್ನೆಲೆಯ ಭಜರಂಗದಳ ಮತ್ತು ಪಿಎಫ್‌ಐ ಇತ್ಯಾದಿಗಳ ಅವಾಂತರ ನೋಡಿಕೊಂಡು ಸರ್ಕಾರವೊಂದು ಸುಮ್ಮನಿರಬೇಕೆ? ಇದನ್ನು ಹೇಗೆ ಅರ್ಥಮಾಡಿಕೊಳ್ಳುವುದು? ಇಂತಹ ಮತಾಂಧರ ಬಗ್ಗೆ- ಕನ್ನಡ ಮಹೋನ್ನತ ಲೇಖಕ ಪಿ.ಲಂಕೇಶ್ ಅವರು ಒಂದು ಮಾತು ಹೇಳುತ್ತಾರೆ- “ನಗು ಮರೆತ, ಅಳು ಮರೆತ, ದಯೆ ಮರೆತ ಧರ್ಮಾಂಧರು ಯಾವುದೇ ಅಣುಬಾಂಬಿಗಿಂತ ‘ಅಪಾಯದ ಮನುಷ್ಯರು’ ” ಅಂತ. ಲಂಕೇಶರ ಈ ಒಳಗಣ್ಣಿನ ನುಡಿಗಳನ್ನು ನಾವು ಆಲಿಸಬೇಕಾಗಿದೆ ಎಂದರು.

ಇತ್ತೀಚೆಗೆ ನಾನು ನಂಜನಗೂಡಿನ ಹತ್ತಿರದ ತಗಡೂರಿಗೆ ಒಂದು ಸಭೆಗೆ ಹೋಗಿದ್ದೆ. ಅಲ್ಲಿ ಸುಮಾರು 200ಕ್ಕೂ ಹೆಚ್ಚು ಜನರು ಸೇರಿದ್ದರು. ಅಲ್ಲಿ ಶಾಲಾಮಕ್ಕಳು, ತರುಣರು, ಮಹಿಳೆಯರು, ಸಂಘಟನೆಗಳ ನಾಯಕರು, ಆ ಊರಿನ ಯಜಮಾನರು ಎಲ್ಲರೂ ಸೇರಿದ್ದರು. ನಾನು ಸುಮಾರು ಅರ್ಧ ಗಂಟೆಗಳ ಕಾಲ ಮಾತಾಡಿದೆ. ಮಾತಾಡಿದೆ ಅನ್ನುವುದಕ್ಕಿಂತ ನಾನು ಬರೆದುಕೊಂಡಿದ್ದನ್ನು ಓದಿದೆ ಅನ್ನಬಹುದು. ನಾನೇ ಚಕಿತನಾಗುವಂತೆ ಎಲ್ಲರೂ ಆಲಿಸಿದರು. ಸಭೆ ಮುಗಿದ ಮೇಲೆ ನಾಕಾರು ಹುಡುಗರು –“ನಮಗೆ ಅರ್ಥವಾಯ್ತು. ನಾವು ಬಿಜೆಪಿಗೆ ಮತ ನೀಡುವುದಿಲ್ಲ” ಅಂದರು. ಆಮೇಲೆ ಹತ್ತಾರು ಜನ ತರುಣರು ರಾತ್ರಿ 12.30ರವರೆಗೆ ಅಂದು ನಾನು ಹೇಳಿದ್ದ ಮುಖ್ಯ ಮಾತೊಂದನ್ನು ಚರ್ಚಿಸುತ್ತಿದ್ದರು ಎಂದು ತಿಳಿದು ಬಂತು. ತಗಡೂರು ಸಭೆಯಲ್ಲಿ ಹೇಳಿದ್ದ ಮಾತುಗಳ ಸಾರಾಂಶ ಏನೆಂದರೆ- “ಈ 2023ರ ವಿಧಾಸಭಾ ಚುನಾವಣೆ ಮತ್ತು ಮುಂಬರುವ 2024ರ ಲೋಕಸಭಾ ಚುನಾವಣೆ ನಿರ್ಣಾಯಕ. ಇಂದಿನ ರಾಜಕಾರಣದ ಒಳಹೊಕ್ಕು ನೋಡಿದರೆ, ಇಂದಿನ ಚುನಾವಣೆ ವ್ಯಕ್ತಿ ವ್ಯಕ್ತಿಗಳ ನಡುವೆ ಅಲ್ಲ. ಪಕ್ಷ ಪಕ್ಷಗಳ ನಡುವೆಯೂ ಅಲ್ಲ. ಇಂದಿನ ಸ್ಪರ್ಧೆ ನಡೆಯುತ್ತಿರುವುದು ಸಮಾನತೆಯ ಹಾಲಿ ಸಂವಿಧಾನ V/S ಅಸಮಾನತೆಯ ಮಾಜಿ ಮನುಧರ್ಮಶಾಸ್ತ್ರ ಸಂವಿಧಾನಗಳ ನಡುವೆ. ಮನುಧರ್ಮ ಶಾಸ್ತ್ರದ ಭಕ್ತರಾದ ಸಂಘಪರಿವಾರ ಬಿಜೆಪಿ ಪಕ್ಷವು ಅಧಿಕಾರಕ್ಕೆ ಬಂದರೆ, ಆ ಮನುಧರ್ಮ ಶಾಸ್ತ್ರದಂತೆ ಒಕ್ಕಲಿಗರು, ಲಿಂಗಾಯಿತರು, ತಳಸಮುದಾಯದವರು ಮತ್ತೆ ಸೇವಕರಾಗಬೇಕಾಗುತ್ತದೆ. ಆಗ ದಲಿತರು, ಅಲೆಮಾರಿ, ಆದಿವಾಸಿಗಳು ಊರಾಚೆ ತಳ್ಳಲ್ಪಡುತ್ತಾರೆ, ನೆನಪಿಡಿ” –ಎಂದು ಹೇಳಿದ್ದೆ. ಈಗ ಬಿಜೆಪಿ ಸರ್ಕಾರಗಳು ತರುತ್ತಿರುವ ಕಾಯ್ದೆಗಳನ್ನು ಮೂಸಿ ನೋಡಿದರೂ, ಅಲ್ಲಿ ಮನುಧರ್ಮ ಶಾಸ್ತ್ರದ ವಾಸನೆ ಇರುವುದನ್ನು ಗುರುತಿಸಬಹುದು. ಹೀಗಿರುವಾಗ, ಸ್ನೇಹಿತರೇ ಸಂಘಪರಿವಾರ ಬಿಜೆಪಿಯನ್ನು ಸೋಲಿಸಲೇಬೇಕು. ಅಂಬೇಡ್ಕರ್ ನೇತೃತ್ವದಲ್ಲಿ ರಚಿಸಿದ ಭಾರತದ ಸಂವಿಧಾನವನ್ನು ಪವಿತ್ರ ಎಂದು ಭಾವಿಸಿರುವ ಕಾಂಗ್ರೆಸ್‌ಗೆ, ಇಂದಿನ ಪರಿಸ್ಥಿತಿಯಲ್ಲಿ ಎಷ್ಟೇ ಭಿನ್ನಾಭಿಪ್ರಾಯ ಇದ್ದರೂ ಬೆಂಬಲ ನೀಡಬೇಕಾಗಿದೆ. ಸಂವಿಧಾನ ವಿರೋಧಿ ಬಿಜೆಪಿಯನ್ನು ಸೋಲಿಸಿ ನಾವು ಉಳಿಯಬೇಕಾಗಿದೆ ಎಂದರು.

ಇದನ್ನೂ ಓದಿ: ‘ಬಿಜೆಪಿಗೆ ಮತ ಹಾಕದಿದ್ದರೆ ಕೇಂದ್ರದ ಯೋಜನೆಗಳು ಬಂದ್’; ನಡ್ಡಾ ಬೆದರಿಕೆಗೆ ಜನಾಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ: ಕಣ್ಣೂರು ದಂತ ಕಾಲೇಜಿನಲ್ಲಿ ದಲಿತ ಬಿಡಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಕ್ರೂರ ಜಾತಿ ನಿಂದನೆ, ಅವಮಾನ ಆರೋಪ

ಕೇರಳದಲ್ಲಿ ನಡೆದ ಜಾತಿ ಆಧಾರಿತ ಕಿರುಕುಳದ ಆಘಾತಕಾರಿ ಪ್ರಕರಣದಲ್ಲಿ, ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.   ಆರ್‌.ಎಲ್ ನಿತಿನ್ ರಾಜ್ ಅವರ ಕುಟುಂಬವು...

ಜಬ್ಬಾರ್​ರನ್ನು ಎಂಎಲ್‌ಸಿ ಮಾಡಿದ್ದು ನಾವು, ಪಕ್ಷದ ಅನ್ನ ತಿಂದ ಮೇಲೆ ಕೆಲಸ ಮಾಡಬೇಕಿತ್ತು : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನರ ಪ್ರತಿಕ್ರಿಯೆ ಚೆನ್ನಾಗಿತ್ತು, ನಾವು ಗೆಲುವು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ. ನಮ್ಮ ಮತದಾರ ಬಂಧುಗಳು ಉತ್ತಮವಾಗಿ ಮತದಾನ ಮಾಡಿದ್ದಾರೆ. ಒಳ್ಳೆಯ ಅಂತರದಲ್ಲಿ ಕಾಂಗ್ರೆಸ್‌ ಪಕ್ಷ ಗೆಲ್ಲುತ್ತೆ,...

ಧಾರವಾಡ: ಯುವ ಕಾಂಗ್ರೆಸ್ ನಾಯಕ ಫೈರೋಜ್ ಖಾನ್ ಪಠಾಣ್ ಹತ್ಯೆ; ಮೂವರು ಆರೋಪಿಗಳ ಬಂಧನ

ಧಾರವಾಡದಲ್ಲಿ ಶುಕ್ರವಾರ ತಡರಾತ್ರಿ ಯುವ ಕಾಂಗ್ರೆಸ್ ನಾಯಕನೊಬ್ಬನನ್ನು ಅವರ ನಿವಾಸದೊಳಗೆ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ನಗರದಾದ್ಯಂತ ಆಘಾತದ ಅಲೆಗಳನ್ನು ಸೃಷ್ಟಿಸಿದೆ. ಮೃತ ವ್ಯಕ್ತಿಯನ್ನು ಫೈರೋಜ್ ಖಾನ್ ಪಠಾಣ್ (34) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ,...

ಮಧ್ಯಪ್ರದೇಶದ ಕಟ್ನಿಯಲ್ಲಿ ಮಹಾರಾಷ್ಟ್ರಕ್ಕೆ ರೈಲಿನಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ 163 ಅಪ್ರಾಪ್ತ ಬಾಲಕರ ರಕ್ಷಣೆ; 8 ಮಂದಿ ಬಂಧನ

ಕಟ್ನಿ: ಬಿಹಾರದಿಂದ ಮಹಾರಾಷ್ಟ್ರಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎನ್ನಲಾದ 163 ಅಪ್ರಾಪ್ತ ಬಾಲಕರನ್ನು ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಎಕ್ಸ್‌ಪ್ರೆಸ್ ರೈಲಿನಿಂದ ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಆರು ರಿಂದ 13 ವರ್ಷದೊಳಗಿನ...

ನಗರಪಾಲಿಕೆ ಚುನಾವಣೆಯಲ್ಲಿ ನಮಗೆ ಅಧಿಕಾರಕ್ಕೆ ಬರಲು ಒಂದು ಅವಕಾಶ ನೀಡಿ: ಬೆಂಗಳೂರಿಗರಿಗೆ ಎಚ್‌.ಡಿ ಕುಮಾರಸ್ವಾಮಿ ಮನವಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಡಿಯಲ್ಲಿರುವ ಐದು ಮಹಾನಗರ ಪಾಲಿಕೆಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವ ಮೂಲಕ ಅಧಿಕಾರಕ್ಕೆ ಬರುವ ಅವಕಾಶ ನೀಡುವಂತೆ ದೇವೇಗೌಡ ನೇತೃತ್ವದ ಜೆಡಿಎಸ್ ಶನಿವಾರ ಬೆಂಗಳೂರಿನ ಜನರನ್ನು...

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿ.ಕೆ ಶಿವಕುಮಾರ್; ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಸಮಿತಿ ವಿಸರ್ಜನೆ

ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗಕ್ಕೆ ನೀಡಿದ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಂಗೀಕರಿಸಿದ್ದಾರೆ, ಜೊತೆಗೆ ಅಲ್ಪಸಂಖ್ಯಾತ ಘಟಕ ಸಮಿತಿಯನ್ನೂ ವಿಸರ್ಜಿಸಿದ್ದಾರೆ ಎಂದು ವರದಿಯಾಗಿದೆ. ಕೆಪಿಸಿಸಿ ಅಲ್ಪಸಂಖ್ಯಾತ...

‘ಯುದ್ಧ ಭುಗಿಲೆದ್ದು ಪಾಕಿಸ್ತಾನ ಶಾಂತಿ ಸ್ಥಾಪಿಸಲು ವಿಫಲವಾದರೆ, ಇಸ್ರೇಲ್ ಮೇಲೆ ದಾಳಿ ಮಾಡುವುದು ನಮ್ಮ ಕರ್ತವ್ಯ’: ಟರ್ಕಿ ಅಧ್ಯಕ್ಷ ಎರ್ಡೋಗನ್

ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಇಸ್ರೇಲ್ ವಿರುದ್ಧ ತೀಕ್ಷ್ಣ ಎಚ್ಚರಿಕೆ ನೀಡಿದ್ದು, ನಡೆಯುತ್ತಿರುವ ಸಂಘರ್ಷವನ್ನು ಶಮನಗೊಳಿಸಲು ರಾಜತಾಂತ್ರಿಕ ಪ್ರಯತ್ನಗಳು ವಿಫಲವಾದರೆ ಸಂಭಾವ್ಯ ಕ್ರಮ ಕೈಗೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಕಠಿಣ ಪದಗಳ ಹೇಳಿಕೆಯಲ್ಲಿ,...

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (92) ಅವರು ಭಾನುವಾರ (ಏ.12) ನಿಧನರಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯ ಡಾ. ಪ್ರತೀತ್ ಸಮ್ದಾನಿ...

‘ಸಂವಿಧಾನವನ್ನು ಕೊನೆಗೊಳಿಸುವುದು ಆರ್‌ಎಸ್‌ಎಸ್-ಬಿಜೆಪಿಯ ಮುಖ್ಯ ಉದ್ದೇಶ’: ರಾಹುಲ್ ಗಾಂಧಿ ಆರೋಪ

ನವದೆಹಲಿ: ಆರ್‌ಎಸ್‌ಎಸ್ - ಬಿಜೆಪಿ ವಿರುದ್ಧ ಭಾನುವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭಾರತದಲ್ಲಿ ಎಲ್ಲರನ್ನೂ ಸಮಾನರು ಎಂದು ಪರಿಗಣಿಸಲು ಬಯಸದ ಕಾರಣ ಸಂವಿಧಾನವನ್ನು ಕೊನೆಗೊಳಿಸುವುದು ಅವರ ಮುಖ್ಯ...

ಗಾಝಾಗೆ ಜೀವರಕ್ಷಕ ನೆರವಿಗಾಗಿ ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ನೌಕಾಯಾನ; ನಾಗರಿಕರ ರಕ್ಷಣೆಗೆ ಕರೆ ನೀಡಿದ ಯುನೈಟೆಡ್ ಸ್ಟಾಫ್ ಫಾರ್ ಗಾಝಾ

ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ಭಾನುವಾರ ನೌಕಾಯಾನ ಮಾಡಲು ಸಿದ್ಧವಾಗುತ್ತಿದ್ದಂತೆ, ಗಾಝಾದ ಯುನೈಟೆಡ್ ಸ್ಟಾಫ್ ಅಂತರರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ಕಾರ್ಯಾಚರಣೆಯಲ್ಲಿರುವ ನಾಗರಿಕರ ರಕ್ಷಣೆಗಾಗಿ ಕರೆ ನೀಡಿತು ಮತ್ತು ಗಾಝಾಗೆ ಮಾನವೀಯ ನೆರವು ಪ್ರಯತ್ನಗಳಿಗೆ ಬೆಂಬಲವನ್ನು...