Homeಮುಖಪುಟಸ್ಪರ್ಧೆ ನಡೆಯುತ್ತಿರುವುದು ಸಮಾನತೆಯ ಹಾಲಿ ಸಂವಿಧಾನ V/S ಅಸಮಾನತೆಯ ಮಾಜಿ ಮನುಧರ್ಮಶಾಸ್ತ್ರಗಳ ನಡುವೆ - ದೇವನೂರು

ಸ್ಪರ್ಧೆ ನಡೆಯುತ್ತಿರುವುದು ಸಮಾನತೆಯ ಹಾಲಿ ಸಂವಿಧಾನ V/S ಅಸಮಾನತೆಯ ಮಾಜಿ ಮನುಧರ್ಮಶಾಸ್ತ್ರಗಳ ನಡುವೆ – ದೇವನೂರು

- Advertisement -
- Advertisement -

ಸ್ಪರ್ಧೆ ನಡೆಯುತ್ತಿರುವುದು ಸಮಾನತೆಯ ಹಾಲಿ ಸಂವಿಧಾನ V/S ಅಸಮಾನತೆಯ ಮಾಜಿ ಮನುಧರ್ಮಶಾಸ್ತ್ರ ಸಂವಿಧಾನಗಳ ನಡುವೆ. ಹಾಗಾಗಿ ಸಂವಿಧಾನ ವಿರೋಧಿ ಬಿಜೆಪಿ ಸೋಲಿಸಿ, ನಾವು ಉಳಿಯಬೇಕಾಗಿದೆ ಎಂದು ಹಿರಿಯ ಸಾಹಿತಿ ದೇವನೂರ ಮಹಾದೇವ ಕರೆ ನೀಡಿದರು.

ಭಾನುವಾರ ತಲಕಾಡಿನಲ್ಲಿ ಚುನಾವಣಾ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ನಾನು, ಸಾಮಾನ್ಯವಾಗಿ ಯಾವ ಪಕ್ಷದ ಚುನಾವಣಾ ಪ್ರಣಾಳಿಕೆಗಳನ್ನು ಓದುವುದಿಲ್ಲ. ನಾನು ನುಡಿ ನೋಡಲ್ಲ, ಬದಲಿಗೆ- ಆ ಪಕ್ಷದ ನಡೆಯ ಚರಿತ್ರೆಯನ್ನು ನೋಡಿ ಅರ್ಥ ಮಾಡಿಕೊಳ್ಳಲು ಪ್ರಯತ್ನಿಸುತ್ತೇನೆ. ಆದರೆ ಈ ಸಲ 2023ರ ವಿಧಾನಸಭೆಯ ಚುನಾವಣೆ ಸಂದರ್ಭಲ್ಲಿ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಓದಬೇಕಾಗಿ ಬಂತು. ಈ ದೇಶದ ಪ್ರಧಾನಮಂತ್ರಿಯವರು, ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯ ಕಾಲಂ ಒಂದನ್ನು ಉಲ್ಲೇಖಿಸಿ ಅದರ ವಿರುದ್ಧವಾಗಿ ಅನೇಕ ಕಡೆ ಉಗ್ರ ಭಾಷಣ ಮಾಡಿದರು. ನಾನು ಕುತೂಹಲಕ್ಕೆ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಅಂತಹದು ಏನಿರಬಹುದು ಎಂದು ಗಮನವಿಟ್ಟು ಓದಿದೆ. “ಧರ್ಮ ಮತ್ತು ಜಾತಿಯ ಹೆಸರಿನಲ್ಲಿ ದ್ವೇಷವನ್ನು ಬಿತ್ತಿ ವಿಭಜನೆಗೆ ಕಾರಣವಾಗುವ, ವ್ಯಕ್ತಿಗಳು ಮತ್ತು ಸಂಘಟನೆಗಳ ವಿರುದ್ಧ ಕಠಿಣ ಮತ್ತು ನಿರ್ಣಾಯಕ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲು ಕಾಂಗ್ರೆಸ್ ಪಕ್ಷ ಬದ್ಧವಾಗಿದೆ. ಸಂವಿಧಾನವೇ ಪವಿತ್ರ ಎಂದು ನಂಬಿರುವ ನಾವು, ಯಾವುದೇ ವ್ಯಕ್ತಿಗಳಾಗಲಿ ಭಜರಂಗ ದಳ ಮತ್ತು ಪಿಎಫ್‌ಐಗಳು ಸೇರಿದಂತೆ ಬಹುಸಂಖ್ಯಾತ ಅಥವಾ ಅಲ್ಪಸಂಖ್ಯಾತ ಇತರರಾಗಲಿ ಸಂವಿಧಾನದ ವಿಧಿಗಳನ್ನು ಉಲ್ಲಂಘಿಸುವುದನ್ನು ಸಹಿಸುವುದಿಲ್ಲ. ಆದ ಕಾರಣ ಇಂತಹ ವ್ಯಕ್ತಿಗಳು ಮತ್ತು ಸಂಘಟನೆಗಳ ನಿಷೇಧವೂ ಸೇರಿದಂತೆ ಬಲವಾದ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಬರೆಯಲಾಗಿದೆ” ಎಂದರು.

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯನ್ನು ಕಣ್ಣಲ್ಲಿ ಕಣ್ಣಿಟ್ಟು ಓದಿದ್ದೇನೆ. ನನಗೆ ಪ್ರಮುಖವಾಗಿ ಕಂಡಿದ್ದು ಇಷ್ಟು: 1) ಸಮಾಜದ ವಿಭಜನೆಗೆ ಅಂದರೆ ಒಡಕಿಗೆ ಕಾರಣರಾದವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಲು ಕಾಂಗ್ರೆಸ್ ಪಕ್ಷ ಬದ್ಧ (2) ಕಾಂಗ್ರೆಸ್‌ಗೆ ಸಂವಿಧಾನ ಪವಿತ್ರ (3) ಸಂವಿಧಾನದ ವಿಧಿಗಳನ್ನು ಉಲ್ಲಂಘಿಸಬಾರದು (4) ಇದನ್ನು ಉಲ್ಲಂಘಿಸುವವರು ಯಾರೇ ಆಗಲಿ ಭಜರಂಗದಳ, ಪಿಎಫ್‌ಐ ಇತ್ಯಾದಿಗಳ ಮೇಲೆ ಕಾಂಗ್ರೆಸ್ ಪಕ್ಷ ಬಲವಾದ ಕಾನೂನು ಕ್ರಮ ತೆಗೆದುಕೊಳ್ಳುತ್ತದೆ. ಇದು ಆ ಪ್ರಣಾಳಿಕೆಯ ಸಾರಾಂಶ. ಅಂದರೆ ಯಾರು ಕಾನೂನನ್ನು ಕೈಗೆತ್ತಿಕೊಳ್ಳುತ್ತಾರೊ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವ ಆಶಯ ಇಲ್ಲಿದೆ. ರಾಜ್ಯದ law and order ಕಾಪಾಡುವುದು ತನ್ನ ಧರ್ಮ ಎಂದು ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಹೇಳುತ್ತಿದೆ.
ನನಗೆ ಅನಿಸುವಂತೆ, ಯಾವುದೇ ಒಂದು ಸರ್ಕಾರಕ್ಕೆ ತನ್ನ ರಾಜ್ಯದ, ದೇಶದ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು ಎಂದರೆ ಅದು ಆ ಸರ್ಕಾರದ ಕನಿಷ್ಠ ಅರ್ಹತೆ. ಈ ಕನಿಷ್ಠ ಅರ್ಹತೆ ಇಲ್ಲದಿರುವುದರಿಂದಾಗಿ ಇದುವರೆಗೂ ರಾಜ್ಯವನ್ನು ಆಳ್ವಿಕೆ ನಡೆಸುತ್ತಿದ್ದ ಬಿಜೆಪಿ ಸರ್ಕಾರದ ಜಮಾನದಲ್ಲಿ ಒಂದೆರಡಲ್ಲ-ನೂರಾರು ಸಲ, ಕೆಲವು ಗುಂಪುಗಳು ದಾಂಧಲೆ ಎಬ್ಬಿಸಿ ಗಲಭೆ ಆಯ್ತು. ವ್ಯಾಪಾರ ನಿಷೇಧ, ಹಿಜಾಬ್, ಹಲಾಲ್, ಗೋವು ಸಾಗಾಣಿಕೆ ಇತ್ಯಾದಿ, ಇತ್ಯಾದಿ ಸರಮಾಲೆಯಲ್ಲಿ ಕೊಲೆ ಸುಲಿಗೆ ಹೊಡೆ ಬಡಿ ಎಲ್ಲಾ ನಡೆಯಿತು. ಸರ್ಕಾರ ಎನ್ನುವುದು ಇದೆಯೋ ಇಲ್ಲವೋ ಎಂದು ಅನುಮಾನ ಬರುವ ಪರಿಸ್ಥಿತಿ ಉಂಟಾಯ್ತು. ಇದೇ ಪರಿಸ್ಥಿತಿ ಮತ್ತೆ ಬರಬೇಕೆ? ಎಂದು ದೇವನೂರು ಪ್ರಶ್ನಿಸಿದರು.

ಹೀಗಿದ್ದೂ ನಮ್ಮ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕಾನೂನನ್ನು ತನ್ನ ಕೈಗೆತ್ತಿಕೊಳ್ಳುವ ಭಜರಂಗದಳದ ನಿಷೇಧ ಪ್ರಸ್ತಾಪವನ್ನು ವಿರೋಧಿಸುತ್ತಾರೆ. ಆಕ್ರೋಶಭರಿತರಾಗುತ್ತಾರೆ. ಬ್ಯಾಲೆಟ್ ಬಾಕ್ಸ್‌ನಲ್ಲಿ ಬಟನ್ ಒತ್ತುವಾಗ ‘ಜೈ ಭಜರಂಗ ಬಲಿ’ ಎಂದು ಮತ ನೀಡಿ ಎಂದು ಮತದಾರರಿಗೆ ಬಹಿರಂಗ ಕರೆಯನ್ನೂ ಕೊಡುತ್ತಾರೆ. ಆದರೆ ಹನುಮಂತ, ಹನುಮಾನ್ ಪರಮಭಕ್ತಿಯ ಸಂಕೇತವಾಗಿ ನಮ್ಮ ಜನಸಮುದಾಯದ ಸುಪ್ತಪ್ರಜ್ಞೆಯಲ್ಲಿ ವಾಸ ಮಾಡುತ್ತಿದ್ದಾನೆ. ಇಂತಹ ಪರಮಭಕ್ತಿಯ ಹನುಮಾನ್ ಯಾವ ಕಾರಣಕ್ಕೂ ‘ಭಕ್ತಿಯೇ ಇಲ್ಲದ ವೇಷಧಾರಿ ಭಕ್ತ’ರ ಗದ್ದಲದ ಮಾತುಗಳನ್ನು ಕೇಳಿಸಿಕೊಳ್ಳಲಾರ. ವಚನ ಪಾಲನೆಯ ಸಂಕೇತವಾದ ರಾಮನ ಭಕ್ತನಾದ ಹನುಮಾನ್ ವಚನಭ್ರಷ್ಠ ಭಕ್ತರನ್ನಂತೂ ಕ್ಷಮಿಸಲಾರ. ಇದೇ ಭಾರತದ ಪರಂಪರೆಯ ಅಂತಃಸಾಕ್ಷಿ ಎಂದು ದೇವನೂರು ತಿಳಿಸಿದರು.

ನಮ್ಮ ಪ್ರಧಾನಿಯವರಿಗೆ ಒಂದು ಪ್ರಶ್ನೆ. ಕಾನೂನು ಕೈಗೆತ್ತಿಕೊಳ್ಳುವ ಹಿನ್ನೆಲೆಯ ಭಜರಂಗದಳ ಮತ್ತು ಪಿಎಫ್‌ಐ ಇತ್ಯಾದಿಗಳ ಅವಾಂತರ ನೋಡಿಕೊಂಡು ಸರ್ಕಾರವೊಂದು ಸುಮ್ಮನಿರಬೇಕೆ? ಇದನ್ನು ಹೇಗೆ ಅರ್ಥಮಾಡಿಕೊಳ್ಳುವುದು? ಇಂತಹ ಮತಾಂಧರ ಬಗ್ಗೆ- ಕನ್ನಡ ಮಹೋನ್ನತ ಲೇಖಕ ಪಿ.ಲಂಕೇಶ್ ಅವರು ಒಂದು ಮಾತು ಹೇಳುತ್ತಾರೆ- “ನಗು ಮರೆತ, ಅಳು ಮರೆತ, ದಯೆ ಮರೆತ ಧರ್ಮಾಂಧರು ಯಾವುದೇ ಅಣುಬಾಂಬಿಗಿಂತ ‘ಅಪಾಯದ ಮನುಷ್ಯರು’ ” ಅಂತ. ಲಂಕೇಶರ ಈ ಒಳಗಣ್ಣಿನ ನುಡಿಗಳನ್ನು ನಾವು ಆಲಿಸಬೇಕಾಗಿದೆ ಎಂದರು.

ಇತ್ತೀಚೆಗೆ ನಾನು ನಂಜನಗೂಡಿನ ಹತ್ತಿರದ ತಗಡೂರಿಗೆ ಒಂದು ಸಭೆಗೆ ಹೋಗಿದ್ದೆ. ಅಲ್ಲಿ ಸುಮಾರು 200ಕ್ಕೂ ಹೆಚ್ಚು ಜನರು ಸೇರಿದ್ದರು. ಅಲ್ಲಿ ಶಾಲಾಮಕ್ಕಳು, ತರುಣರು, ಮಹಿಳೆಯರು, ಸಂಘಟನೆಗಳ ನಾಯಕರು, ಆ ಊರಿನ ಯಜಮಾನರು ಎಲ್ಲರೂ ಸೇರಿದ್ದರು. ನಾನು ಸುಮಾರು ಅರ್ಧ ಗಂಟೆಗಳ ಕಾಲ ಮಾತಾಡಿದೆ. ಮಾತಾಡಿದೆ ಅನ್ನುವುದಕ್ಕಿಂತ ನಾನು ಬರೆದುಕೊಂಡಿದ್ದನ್ನು ಓದಿದೆ ಅನ್ನಬಹುದು. ನಾನೇ ಚಕಿತನಾಗುವಂತೆ ಎಲ್ಲರೂ ಆಲಿಸಿದರು. ಸಭೆ ಮುಗಿದ ಮೇಲೆ ನಾಕಾರು ಹುಡುಗರು –“ನಮಗೆ ಅರ್ಥವಾಯ್ತು. ನಾವು ಬಿಜೆಪಿಗೆ ಮತ ನೀಡುವುದಿಲ್ಲ” ಅಂದರು. ಆಮೇಲೆ ಹತ್ತಾರು ಜನ ತರುಣರು ರಾತ್ರಿ 12.30ರವರೆಗೆ ಅಂದು ನಾನು ಹೇಳಿದ್ದ ಮುಖ್ಯ ಮಾತೊಂದನ್ನು ಚರ್ಚಿಸುತ್ತಿದ್ದರು ಎಂದು ತಿಳಿದು ಬಂತು. ತಗಡೂರು ಸಭೆಯಲ್ಲಿ ಹೇಳಿದ್ದ ಮಾತುಗಳ ಸಾರಾಂಶ ಏನೆಂದರೆ- “ಈ 2023ರ ವಿಧಾಸಭಾ ಚುನಾವಣೆ ಮತ್ತು ಮುಂಬರುವ 2024ರ ಲೋಕಸಭಾ ಚುನಾವಣೆ ನಿರ್ಣಾಯಕ. ಇಂದಿನ ರಾಜಕಾರಣದ ಒಳಹೊಕ್ಕು ನೋಡಿದರೆ, ಇಂದಿನ ಚುನಾವಣೆ ವ್ಯಕ್ತಿ ವ್ಯಕ್ತಿಗಳ ನಡುವೆ ಅಲ್ಲ. ಪಕ್ಷ ಪಕ್ಷಗಳ ನಡುವೆಯೂ ಅಲ್ಲ. ಇಂದಿನ ಸ್ಪರ್ಧೆ ನಡೆಯುತ್ತಿರುವುದು ಸಮಾನತೆಯ ಹಾಲಿ ಸಂವಿಧಾನ V/S ಅಸಮಾನತೆಯ ಮಾಜಿ ಮನುಧರ್ಮಶಾಸ್ತ್ರ ಸಂವಿಧಾನಗಳ ನಡುವೆ. ಮನುಧರ್ಮ ಶಾಸ್ತ್ರದ ಭಕ್ತರಾದ ಸಂಘಪರಿವಾರ ಬಿಜೆಪಿ ಪಕ್ಷವು ಅಧಿಕಾರಕ್ಕೆ ಬಂದರೆ, ಆ ಮನುಧರ್ಮ ಶಾಸ್ತ್ರದಂತೆ ಒಕ್ಕಲಿಗರು, ಲಿಂಗಾಯಿತರು, ತಳಸಮುದಾಯದವರು ಮತ್ತೆ ಸೇವಕರಾಗಬೇಕಾಗುತ್ತದೆ. ಆಗ ದಲಿತರು, ಅಲೆಮಾರಿ, ಆದಿವಾಸಿಗಳು ಊರಾಚೆ ತಳ್ಳಲ್ಪಡುತ್ತಾರೆ, ನೆನಪಿಡಿ” –ಎಂದು ಹೇಳಿದ್ದೆ. ಈಗ ಬಿಜೆಪಿ ಸರ್ಕಾರಗಳು ತರುತ್ತಿರುವ ಕಾಯ್ದೆಗಳನ್ನು ಮೂಸಿ ನೋಡಿದರೂ, ಅಲ್ಲಿ ಮನುಧರ್ಮ ಶಾಸ್ತ್ರದ ವಾಸನೆ ಇರುವುದನ್ನು ಗುರುತಿಸಬಹುದು. ಹೀಗಿರುವಾಗ, ಸ್ನೇಹಿತರೇ ಸಂಘಪರಿವಾರ ಬಿಜೆಪಿಯನ್ನು ಸೋಲಿಸಲೇಬೇಕು. ಅಂಬೇಡ್ಕರ್ ನೇತೃತ್ವದಲ್ಲಿ ರಚಿಸಿದ ಭಾರತದ ಸಂವಿಧಾನವನ್ನು ಪವಿತ್ರ ಎಂದು ಭಾವಿಸಿರುವ ಕಾಂಗ್ರೆಸ್‌ಗೆ, ಇಂದಿನ ಪರಿಸ್ಥಿತಿಯಲ್ಲಿ ಎಷ್ಟೇ ಭಿನ್ನಾಭಿಪ್ರಾಯ ಇದ್ದರೂ ಬೆಂಬಲ ನೀಡಬೇಕಾಗಿದೆ. ಸಂವಿಧಾನ ವಿರೋಧಿ ಬಿಜೆಪಿಯನ್ನು ಸೋಲಿಸಿ ನಾವು ಉಳಿಯಬೇಕಾಗಿದೆ ಎಂದರು.

ಇದನ್ನೂ ಓದಿ: ‘ಬಿಜೆಪಿಗೆ ಮತ ಹಾಕದಿದ್ದರೆ ಕೇಂದ್ರದ ಯೋಜನೆಗಳು ಬಂದ್’; ನಡ್ಡಾ ಬೆದರಿಕೆಗೆ ಜನಾಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಛತ್ತೀಸ್‌ಗಢ| ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿ ಗುಂಪಿನಿಂದ ಹಲ್ಲೆ; ‘ಜೈ ಶ್ರೀ ರಾಮ್’ ಕೂಗುವಂತೆ ಒತ್ತಾಯ

ಛತ್ತೀಸ್‌ಗಢದ ಜಂಜ್‌ಗೀರ್-ಚಂಪಾ ಜಿಲ್ಲೆಯಲ್ಲಿ ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿಗಳ ಗುಂಪೊಂದು ಹಲ್ಲೆ ನಡೆಸಿ, ಜೈಶ್ರೀರಾಮ್ ಎಂದು ಘೋಷಣೆಗಳನ್ನು ಕೂಗುವಂತೆ ಒತ್ತಾಯಿಸಿದೆ ಎಂಬ ಆರೋಪ ಕೇಳಿಬಂದಿದೆ. ಇಂದು (ಮಾ.18) ನಡೆದಿದೆ ಎನ್ನಲಾದ ಈ ಘಟನೆಯ...

ಯುಪಿಎಸ್‌ಸಿ 440 ನೇ ರ‍್ಯಾಂಕ್ ಎಂದು ಸುಳ್ಳು ಹೇಳಿ ಸಂಭ್ರಮಾಚರಣೆ ಮಾಡಿದ್ದ ಬಿಹಾರದ ಯುವಕನ ಬಂಧನ

ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನಾಗರಿಕ ಸೇವಾ ಪರೀಕ್ಷೆ (ಸಿಎಸ್‌ಇ) 2025 ರಲ್ಲಿ ಅಖಿಲ ಭಾರತ ರ‍್ಯಾಂಕ್ (ಎಐಆರ್) 440 ಗಳಿಸಿದ್ದೇನೆ ಎಂದು ಸುಳ್ಳು ಹೇಳಿಕೊಂಡ ಕೆಲವು ದಿನಗಳ ನಂತರ, ಬಿಹಾರದ ಶೇಖ್‌ಪುರ...

‘ಜೈ ಬಾಂಗ್ಲಾ’ ಘೋಷಣೆ ಕೂಗಿದ ಆರೋಪ: ಮಹಿಳೆಗೆ ಜಾಮೀನು ನೀಡಿದ ಹೈಕೋರ್ಟ್

ಬೆಂಗಳೂರಿನ ಹೆಬ್ಬಗೂಡಿಯಲ್ಲಿ ಅಕ್ರಮ ಎನ್ನಲಾದ ಶೆಡ್‌ಗಳ ತೆರವು ಕಾರ್ಯಾಚರಣೆ ವೇಳೆ 'ಜೈ ಬಾಂಗ್ಲಾ' ಘೋಷಣೆ ಕೂಗಿದ ಆರೋಪದ ಮೇಲೆ ಬಂಧಿತರಾದ ಪಶ್ಚಿಮ ಬಂಗಾಳದ ಮಹಿಳೆಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ ಎಸ್.ರಾಚಯ್ಯ...

ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಡಿಜೆ, ಐಟಂ ಹಾಡು ನಿಷೇಧಿಸಲು ಕರ್ನಾಟಕ ಯೋಜನೆ; ವಿಧಾನಸಭೆಯಲ್ಲಿ ಸಂತೋಷ್ ಲಾಡ್ ಪ್ರಸ್ತಾಪ

ಬೆಂಗಳೂರು: ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಧಾರ್ಮಿಕ ಮೆರವಣಿಗೆಗಳಲ್ಲಿ ಅಬ್ಬರದ ಸಂಗೀತ ಮತ್ತು "ಐಟಂ ಹಾಡುಗಳನ್ನು" ನುಡಿಸುವ ಡಿಸ್ಕ್ ಜಾಕಿಗಳನ್ನು (ಡಿಜೆ) ನಿಷೇಧಿಸುವ ಪರವಾಗಿ ಕರ್ನಾಟಕ ಸರ್ಕಾರವಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ...

ದೆಹಲಿಯ ಪಾಲಂನಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ: ಮೂವರು ಮಕ್ಕಳು ಸೇರಿ ಏಳು ಮಂದಿ ಸಾವು

ರಾಷ್ಟ್ರ ರಾಜಧಾನಿಯ ಪಾಲಂ ಪ್ರದೇಶದ ವಸತಿ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಮೂವರು ಮಕ್ಕಳು ಸೇರಿದಂತೆ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ದೆಹಲಿ ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಮಾಹಿತಿ ತಿಳಿದ ತಕ್ಷಣ...

ವಾರಣಾಸಿ: ಗಂಗಾ ನದಿಯ ದೋಣಿಯಲ್ಲಿ ‘ಇಫ್ತಾರ್’ ಕೂಟ ಆಯೋಜಿಸಿದ್ದಕ್ಕಾಗಿ 14 ಜನರ ಬಂಧನ 

ವಾರಣಾಸಿಯಲ್ಲಿ ಗಂಗಾ ನದಿಯ ಮಧ್ಯದಲ್ಲಿ ದೋಣಿಯಲ್ಲಿ 'ಇಫ್ತಾರ್' (ರಂಜಾನ್ ಸಮಯದಲ್ಲಿ ಸೂರ್ಯಾಸ್ತದ ನಂತರ ತಿನ್ನುವ ಊಟ) ಕೂಟವನ್ನು ಆಯೋಜಿಸಿದ್ದಕ್ಕಾಗಿ ಹದಿನಾಲ್ಕು ಮುಸ್ಲಿಂ ಯುವಕರನ್ನು ಬಂಧಿಸಲಾಗಿದೆ.  ದೈನಂದಿನ ಮುಸ್ಲಿಂ ಜೀವನವನ್ನು ಅಪರಾಧೀಕರಿಸುವ ಮತ್ತೊಂದು ಪ್ರಕರಣ ಇದಾಗಿದ್ದು,...

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ರಾಜೀನಾಮೆ

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ತಮ್ಮ ಸ್ಥಾನಗಳಿಗೆ ಮಂಗಳವಾರ (ಮಾ.17) ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷದ ಹಿರಿಯ ನಾಯಕ ಹಾಗೂ ನೌಗಾಂಗ್ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರದ್ಯುತ್ ಬೋರ್ಡೊಲೊಯ್...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಮೂವರು ಶಾಸಕರನ್ನು ಅಮಾನತುಗೊಳಿಸಿದ ಒಡಿಶಾ ಕಾಂಗ್ರೆಸ್

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಕ್ಕಾಗಿ ಒಡಿಶಾ ಕಾಂಗ್ರೆಸ್ ಮೂವರು ಶಾಸಕರಾದ ಸೋಫಿಯಾ ಫಿರ್ದೌಸ್, ರಮೇಶ್ ಜೆನಾ ಮತ್ತು ದಾಸರಥಿ ಗೊಮಾಂಗೊ ಅವರನ್ನು ಅಮಾನತುಗೊಳಿಸಿದೆ. ಒಡಿಶಾ ವಿಧಾನಸಭೆಯಲ್ಲಿ ಕಾಂಗ್ರೆಸ್ 14 ಶಾಸಕರನ್ನು ಹೊಂದಿದ್ದು, ನಾಲ್ಕನೇ...

ಅಮೆರಿಕ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ದಳದ ನಿರ್ದೇಶಕ ಜೋ ಕೆಂಟ್‌ ರಾಜೀನಾಮೆ

ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ (ಎನ್‌ಸಿಟಿಸಿ) ನಿರ್ದೇಶಕ ಜೋ ಕೆಂಟ್ ಅವರು ಇರಾನ್ ಜೊತೆಗಿನ ಯುದ್ಧಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. "ಇರಾನ್‌ನಿಂದ ಅಮೆರಿಕಕ್ಕೆ ಯಾವುದೇ ತಕ್ಷಣದ ಅಪಾಯವಿರಲಿಲ್ಲ. ಇಸ್ರೇಲ್‌ನ ಒತ್ತಡದಿಂದಾಗಿ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...