Homeಮುಖಪುಟಸ್ಪರ್ಧೆ ನಡೆಯುತ್ತಿರುವುದು ಸಮಾನತೆಯ ಹಾಲಿ ಸಂವಿಧಾನ V/S ಅಸಮಾನತೆಯ ಮಾಜಿ ಮನುಧರ್ಮಶಾಸ್ತ್ರಗಳ ನಡುವೆ - ದೇವನೂರು

ಸ್ಪರ್ಧೆ ನಡೆಯುತ್ತಿರುವುದು ಸಮಾನತೆಯ ಹಾಲಿ ಸಂವಿಧಾನ V/S ಅಸಮಾನತೆಯ ಮಾಜಿ ಮನುಧರ್ಮಶಾಸ್ತ್ರಗಳ ನಡುವೆ – ದೇವನೂರು

- Advertisement -
- Advertisement -

ಸ್ಪರ್ಧೆ ನಡೆಯುತ್ತಿರುವುದು ಸಮಾನತೆಯ ಹಾಲಿ ಸಂವಿಧಾನ V/S ಅಸಮಾನತೆಯ ಮಾಜಿ ಮನುಧರ್ಮಶಾಸ್ತ್ರ ಸಂವಿಧಾನಗಳ ನಡುವೆ. ಹಾಗಾಗಿ ಸಂವಿಧಾನ ವಿರೋಧಿ ಬಿಜೆಪಿ ಸೋಲಿಸಿ, ನಾವು ಉಳಿಯಬೇಕಾಗಿದೆ ಎಂದು ಹಿರಿಯ ಸಾಹಿತಿ ದೇವನೂರ ಮಹಾದೇವ ಕರೆ ನೀಡಿದರು.

ಭಾನುವಾರ ತಲಕಾಡಿನಲ್ಲಿ ಚುನಾವಣಾ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ನಾನು, ಸಾಮಾನ್ಯವಾಗಿ ಯಾವ ಪಕ್ಷದ ಚುನಾವಣಾ ಪ್ರಣಾಳಿಕೆಗಳನ್ನು ಓದುವುದಿಲ್ಲ. ನಾನು ನುಡಿ ನೋಡಲ್ಲ, ಬದಲಿಗೆ- ಆ ಪಕ್ಷದ ನಡೆಯ ಚರಿತ್ರೆಯನ್ನು ನೋಡಿ ಅರ್ಥ ಮಾಡಿಕೊಳ್ಳಲು ಪ್ರಯತ್ನಿಸುತ್ತೇನೆ. ಆದರೆ ಈ ಸಲ 2023ರ ವಿಧಾನಸಭೆಯ ಚುನಾವಣೆ ಸಂದರ್ಭಲ್ಲಿ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಓದಬೇಕಾಗಿ ಬಂತು. ಈ ದೇಶದ ಪ್ರಧಾನಮಂತ್ರಿಯವರು, ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯ ಕಾಲಂ ಒಂದನ್ನು ಉಲ್ಲೇಖಿಸಿ ಅದರ ವಿರುದ್ಧವಾಗಿ ಅನೇಕ ಕಡೆ ಉಗ್ರ ಭಾಷಣ ಮಾಡಿದರು. ನಾನು ಕುತೂಹಲಕ್ಕೆ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಅಂತಹದು ಏನಿರಬಹುದು ಎಂದು ಗಮನವಿಟ್ಟು ಓದಿದೆ. “ಧರ್ಮ ಮತ್ತು ಜಾತಿಯ ಹೆಸರಿನಲ್ಲಿ ದ್ವೇಷವನ್ನು ಬಿತ್ತಿ ವಿಭಜನೆಗೆ ಕಾರಣವಾಗುವ, ವ್ಯಕ್ತಿಗಳು ಮತ್ತು ಸಂಘಟನೆಗಳ ವಿರುದ್ಧ ಕಠಿಣ ಮತ್ತು ನಿರ್ಣಾಯಕ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲು ಕಾಂಗ್ರೆಸ್ ಪಕ್ಷ ಬದ್ಧವಾಗಿದೆ. ಸಂವಿಧಾನವೇ ಪವಿತ್ರ ಎಂದು ನಂಬಿರುವ ನಾವು, ಯಾವುದೇ ವ್ಯಕ್ತಿಗಳಾಗಲಿ ಭಜರಂಗ ದಳ ಮತ್ತು ಪಿಎಫ್‌ಐಗಳು ಸೇರಿದಂತೆ ಬಹುಸಂಖ್ಯಾತ ಅಥವಾ ಅಲ್ಪಸಂಖ್ಯಾತ ಇತರರಾಗಲಿ ಸಂವಿಧಾನದ ವಿಧಿಗಳನ್ನು ಉಲ್ಲಂಘಿಸುವುದನ್ನು ಸಹಿಸುವುದಿಲ್ಲ. ಆದ ಕಾರಣ ಇಂತಹ ವ್ಯಕ್ತಿಗಳು ಮತ್ತು ಸಂಘಟನೆಗಳ ನಿಷೇಧವೂ ಸೇರಿದಂತೆ ಬಲವಾದ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಬರೆಯಲಾಗಿದೆ” ಎಂದರು.

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯನ್ನು ಕಣ್ಣಲ್ಲಿ ಕಣ್ಣಿಟ್ಟು ಓದಿದ್ದೇನೆ. ನನಗೆ ಪ್ರಮುಖವಾಗಿ ಕಂಡಿದ್ದು ಇಷ್ಟು: 1) ಸಮಾಜದ ವಿಭಜನೆಗೆ ಅಂದರೆ ಒಡಕಿಗೆ ಕಾರಣರಾದವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಲು ಕಾಂಗ್ರೆಸ್ ಪಕ್ಷ ಬದ್ಧ (2) ಕಾಂಗ್ರೆಸ್‌ಗೆ ಸಂವಿಧಾನ ಪವಿತ್ರ (3) ಸಂವಿಧಾನದ ವಿಧಿಗಳನ್ನು ಉಲ್ಲಂಘಿಸಬಾರದು (4) ಇದನ್ನು ಉಲ್ಲಂಘಿಸುವವರು ಯಾರೇ ಆಗಲಿ ಭಜರಂಗದಳ, ಪಿಎಫ್‌ಐ ಇತ್ಯಾದಿಗಳ ಮೇಲೆ ಕಾಂಗ್ರೆಸ್ ಪಕ್ಷ ಬಲವಾದ ಕಾನೂನು ಕ್ರಮ ತೆಗೆದುಕೊಳ್ಳುತ್ತದೆ. ಇದು ಆ ಪ್ರಣಾಳಿಕೆಯ ಸಾರಾಂಶ. ಅಂದರೆ ಯಾರು ಕಾನೂನನ್ನು ಕೈಗೆತ್ತಿಕೊಳ್ಳುತ್ತಾರೊ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವ ಆಶಯ ಇಲ್ಲಿದೆ. ರಾಜ್ಯದ law and order ಕಾಪಾಡುವುದು ತನ್ನ ಧರ್ಮ ಎಂದು ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಹೇಳುತ್ತಿದೆ.
ನನಗೆ ಅನಿಸುವಂತೆ, ಯಾವುದೇ ಒಂದು ಸರ್ಕಾರಕ್ಕೆ ತನ್ನ ರಾಜ್ಯದ, ದೇಶದ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು ಎಂದರೆ ಅದು ಆ ಸರ್ಕಾರದ ಕನಿಷ್ಠ ಅರ್ಹತೆ. ಈ ಕನಿಷ್ಠ ಅರ್ಹತೆ ಇಲ್ಲದಿರುವುದರಿಂದಾಗಿ ಇದುವರೆಗೂ ರಾಜ್ಯವನ್ನು ಆಳ್ವಿಕೆ ನಡೆಸುತ್ತಿದ್ದ ಬಿಜೆಪಿ ಸರ್ಕಾರದ ಜಮಾನದಲ್ಲಿ ಒಂದೆರಡಲ್ಲ-ನೂರಾರು ಸಲ, ಕೆಲವು ಗುಂಪುಗಳು ದಾಂಧಲೆ ಎಬ್ಬಿಸಿ ಗಲಭೆ ಆಯ್ತು. ವ್ಯಾಪಾರ ನಿಷೇಧ, ಹಿಜಾಬ್, ಹಲಾಲ್, ಗೋವು ಸಾಗಾಣಿಕೆ ಇತ್ಯಾದಿ, ಇತ್ಯಾದಿ ಸರಮಾಲೆಯಲ್ಲಿ ಕೊಲೆ ಸುಲಿಗೆ ಹೊಡೆ ಬಡಿ ಎಲ್ಲಾ ನಡೆಯಿತು. ಸರ್ಕಾರ ಎನ್ನುವುದು ಇದೆಯೋ ಇಲ್ಲವೋ ಎಂದು ಅನುಮಾನ ಬರುವ ಪರಿಸ್ಥಿತಿ ಉಂಟಾಯ್ತು. ಇದೇ ಪರಿಸ್ಥಿತಿ ಮತ್ತೆ ಬರಬೇಕೆ? ಎಂದು ದೇವನೂರು ಪ್ರಶ್ನಿಸಿದರು.

ಹೀಗಿದ್ದೂ ನಮ್ಮ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕಾನೂನನ್ನು ತನ್ನ ಕೈಗೆತ್ತಿಕೊಳ್ಳುವ ಭಜರಂಗದಳದ ನಿಷೇಧ ಪ್ರಸ್ತಾಪವನ್ನು ವಿರೋಧಿಸುತ್ತಾರೆ. ಆಕ್ರೋಶಭರಿತರಾಗುತ್ತಾರೆ. ಬ್ಯಾಲೆಟ್ ಬಾಕ್ಸ್‌ನಲ್ಲಿ ಬಟನ್ ಒತ್ತುವಾಗ ‘ಜೈ ಭಜರಂಗ ಬಲಿ’ ಎಂದು ಮತ ನೀಡಿ ಎಂದು ಮತದಾರರಿಗೆ ಬಹಿರಂಗ ಕರೆಯನ್ನೂ ಕೊಡುತ್ತಾರೆ. ಆದರೆ ಹನುಮಂತ, ಹನುಮಾನ್ ಪರಮಭಕ್ತಿಯ ಸಂಕೇತವಾಗಿ ನಮ್ಮ ಜನಸಮುದಾಯದ ಸುಪ್ತಪ್ರಜ್ಞೆಯಲ್ಲಿ ವಾಸ ಮಾಡುತ್ತಿದ್ದಾನೆ. ಇಂತಹ ಪರಮಭಕ್ತಿಯ ಹನುಮಾನ್ ಯಾವ ಕಾರಣಕ್ಕೂ ‘ಭಕ್ತಿಯೇ ಇಲ್ಲದ ವೇಷಧಾರಿ ಭಕ್ತ’ರ ಗದ್ದಲದ ಮಾತುಗಳನ್ನು ಕೇಳಿಸಿಕೊಳ್ಳಲಾರ. ವಚನ ಪಾಲನೆಯ ಸಂಕೇತವಾದ ರಾಮನ ಭಕ್ತನಾದ ಹನುಮಾನ್ ವಚನಭ್ರಷ್ಠ ಭಕ್ತರನ್ನಂತೂ ಕ್ಷಮಿಸಲಾರ. ಇದೇ ಭಾರತದ ಪರಂಪರೆಯ ಅಂತಃಸಾಕ್ಷಿ ಎಂದು ದೇವನೂರು ತಿಳಿಸಿದರು.

ನಮ್ಮ ಪ್ರಧಾನಿಯವರಿಗೆ ಒಂದು ಪ್ರಶ್ನೆ. ಕಾನೂನು ಕೈಗೆತ್ತಿಕೊಳ್ಳುವ ಹಿನ್ನೆಲೆಯ ಭಜರಂಗದಳ ಮತ್ತು ಪಿಎಫ್‌ಐ ಇತ್ಯಾದಿಗಳ ಅವಾಂತರ ನೋಡಿಕೊಂಡು ಸರ್ಕಾರವೊಂದು ಸುಮ್ಮನಿರಬೇಕೆ? ಇದನ್ನು ಹೇಗೆ ಅರ್ಥಮಾಡಿಕೊಳ್ಳುವುದು? ಇಂತಹ ಮತಾಂಧರ ಬಗ್ಗೆ- ಕನ್ನಡ ಮಹೋನ್ನತ ಲೇಖಕ ಪಿ.ಲಂಕೇಶ್ ಅವರು ಒಂದು ಮಾತು ಹೇಳುತ್ತಾರೆ- “ನಗು ಮರೆತ, ಅಳು ಮರೆತ, ದಯೆ ಮರೆತ ಧರ್ಮಾಂಧರು ಯಾವುದೇ ಅಣುಬಾಂಬಿಗಿಂತ ‘ಅಪಾಯದ ಮನುಷ್ಯರು’ ” ಅಂತ. ಲಂಕೇಶರ ಈ ಒಳಗಣ್ಣಿನ ನುಡಿಗಳನ್ನು ನಾವು ಆಲಿಸಬೇಕಾಗಿದೆ ಎಂದರು.

ಇತ್ತೀಚೆಗೆ ನಾನು ನಂಜನಗೂಡಿನ ಹತ್ತಿರದ ತಗಡೂರಿಗೆ ಒಂದು ಸಭೆಗೆ ಹೋಗಿದ್ದೆ. ಅಲ್ಲಿ ಸುಮಾರು 200ಕ್ಕೂ ಹೆಚ್ಚು ಜನರು ಸೇರಿದ್ದರು. ಅಲ್ಲಿ ಶಾಲಾಮಕ್ಕಳು, ತರುಣರು, ಮಹಿಳೆಯರು, ಸಂಘಟನೆಗಳ ನಾಯಕರು, ಆ ಊರಿನ ಯಜಮಾನರು ಎಲ್ಲರೂ ಸೇರಿದ್ದರು. ನಾನು ಸುಮಾರು ಅರ್ಧ ಗಂಟೆಗಳ ಕಾಲ ಮಾತಾಡಿದೆ. ಮಾತಾಡಿದೆ ಅನ್ನುವುದಕ್ಕಿಂತ ನಾನು ಬರೆದುಕೊಂಡಿದ್ದನ್ನು ಓದಿದೆ ಅನ್ನಬಹುದು. ನಾನೇ ಚಕಿತನಾಗುವಂತೆ ಎಲ್ಲರೂ ಆಲಿಸಿದರು. ಸಭೆ ಮುಗಿದ ಮೇಲೆ ನಾಕಾರು ಹುಡುಗರು –“ನಮಗೆ ಅರ್ಥವಾಯ್ತು. ನಾವು ಬಿಜೆಪಿಗೆ ಮತ ನೀಡುವುದಿಲ್ಲ” ಅಂದರು. ಆಮೇಲೆ ಹತ್ತಾರು ಜನ ತರುಣರು ರಾತ್ರಿ 12.30ರವರೆಗೆ ಅಂದು ನಾನು ಹೇಳಿದ್ದ ಮುಖ್ಯ ಮಾತೊಂದನ್ನು ಚರ್ಚಿಸುತ್ತಿದ್ದರು ಎಂದು ತಿಳಿದು ಬಂತು. ತಗಡೂರು ಸಭೆಯಲ್ಲಿ ಹೇಳಿದ್ದ ಮಾತುಗಳ ಸಾರಾಂಶ ಏನೆಂದರೆ- “ಈ 2023ರ ವಿಧಾಸಭಾ ಚುನಾವಣೆ ಮತ್ತು ಮುಂಬರುವ 2024ರ ಲೋಕಸಭಾ ಚುನಾವಣೆ ನಿರ್ಣಾಯಕ. ಇಂದಿನ ರಾಜಕಾರಣದ ಒಳಹೊಕ್ಕು ನೋಡಿದರೆ, ಇಂದಿನ ಚುನಾವಣೆ ವ್ಯಕ್ತಿ ವ್ಯಕ್ತಿಗಳ ನಡುವೆ ಅಲ್ಲ. ಪಕ್ಷ ಪಕ್ಷಗಳ ನಡುವೆಯೂ ಅಲ್ಲ. ಇಂದಿನ ಸ್ಪರ್ಧೆ ನಡೆಯುತ್ತಿರುವುದು ಸಮಾನತೆಯ ಹಾಲಿ ಸಂವಿಧಾನ V/S ಅಸಮಾನತೆಯ ಮಾಜಿ ಮನುಧರ್ಮಶಾಸ್ತ್ರ ಸಂವಿಧಾನಗಳ ನಡುವೆ. ಮನುಧರ್ಮ ಶಾಸ್ತ್ರದ ಭಕ್ತರಾದ ಸಂಘಪರಿವಾರ ಬಿಜೆಪಿ ಪಕ್ಷವು ಅಧಿಕಾರಕ್ಕೆ ಬಂದರೆ, ಆ ಮನುಧರ್ಮ ಶಾಸ್ತ್ರದಂತೆ ಒಕ್ಕಲಿಗರು, ಲಿಂಗಾಯಿತರು, ತಳಸಮುದಾಯದವರು ಮತ್ತೆ ಸೇವಕರಾಗಬೇಕಾಗುತ್ತದೆ. ಆಗ ದಲಿತರು, ಅಲೆಮಾರಿ, ಆದಿವಾಸಿಗಳು ಊರಾಚೆ ತಳ್ಳಲ್ಪಡುತ್ತಾರೆ, ನೆನಪಿಡಿ” –ಎಂದು ಹೇಳಿದ್ದೆ. ಈಗ ಬಿಜೆಪಿ ಸರ್ಕಾರಗಳು ತರುತ್ತಿರುವ ಕಾಯ್ದೆಗಳನ್ನು ಮೂಸಿ ನೋಡಿದರೂ, ಅಲ್ಲಿ ಮನುಧರ್ಮ ಶಾಸ್ತ್ರದ ವಾಸನೆ ಇರುವುದನ್ನು ಗುರುತಿಸಬಹುದು. ಹೀಗಿರುವಾಗ, ಸ್ನೇಹಿತರೇ ಸಂಘಪರಿವಾರ ಬಿಜೆಪಿಯನ್ನು ಸೋಲಿಸಲೇಬೇಕು. ಅಂಬೇಡ್ಕರ್ ನೇತೃತ್ವದಲ್ಲಿ ರಚಿಸಿದ ಭಾರತದ ಸಂವಿಧಾನವನ್ನು ಪವಿತ್ರ ಎಂದು ಭಾವಿಸಿರುವ ಕಾಂಗ್ರೆಸ್‌ಗೆ, ಇಂದಿನ ಪರಿಸ್ಥಿತಿಯಲ್ಲಿ ಎಷ್ಟೇ ಭಿನ್ನಾಭಿಪ್ರಾಯ ಇದ್ದರೂ ಬೆಂಬಲ ನೀಡಬೇಕಾಗಿದೆ. ಸಂವಿಧಾನ ವಿರೋಧಿ ಬಿಜೆಪಿಯನ್ನು ಸೋಲಿಸಿ ನಾವು ಉಳಿಯಬೇಕಾಗಿದೆ ಎಂದರು.

ಇದನ್ನೂ ಓದಿ: ‘ಬಿಜೆಪಿಗೆ ಮತ ಹಾಕದಿದ್ದರೆ ಕೇಂದ್ರದ ಯೋಜನೆಗಳು ಬಂದ್’; ನಡ್ಡಾ ಬೆದರಿಕೆಗೆ ಜನಾಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...