Homeಮುಖಪುಟಸ್ಪರ್ಧೆ ನಡೆಯುತ್ತಿರುವುದು ಸಮಾನತೆಯ ಹಾಲಿ ಸಂವಿಧಾನ V/S ಅಸಮಾನತೆಯ ಮಾಜಿ ಮನುಧರ್ಮಶಾಸ್ತ್ರಗಳ ನಡುವೆ - ದೇವನೂರು

ಸ್ಪರ್ಧೆ ನಡೆಯುತ್ತಿರುವುದು ಸಮಾನತೆಯ ಹಾಲಿ ಸಂವಿಧಾನ V/S ಅಸಮಾನತೆಯ ಮಾಜಿ ಮನುಧರ್ಮಶಾಸ್ತ್ರಗಳ ನಡುವೆ – ದೇವನೂರು

- Advertisement -
- Advertisement -

ಸ್ಪರ್ಧೆ ನಡೆಯುತ್ತಿರುವುದು ಸಮಾನತೆಯ ಹಾಲಿ ಸಂವಿಧಾನ V/S ಅಸಮಾನತೆಯ ಮಾಜಿ ಮನುಧರ್ಮಶಾಸ್ತ್ರ ಸಂವಿಧಾನಗಳ ನಡುವೆ. ಹಾಗಾಗಿ ಸಂವಿಧಾನ ವಿರೋಧಿ ಬಿಜೆಪಿ ಸೋಲಿಸಿ, ನಾವು ಉಳಿಯಬೇಕಾಗಿದೆ ಎಂದು ಹಿರಿಯ ಸಾಹಿತಿ ದೇವನೂರ ಮಹಾದೇವ ಕರೆ ನೀಡಿದರು.

ಭಾನುವಾರ ತಲಕಾಡಿನಲ್ಲಿ ಚುನಾವಣಾ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ನಾನು, ಸಾಮಾನ್ಯವಾಗಿ ಯಾವ ಪಕ್ಷದ ಚುನಾವಣಾ ಪ್ರಣಾಳಿಕೆಗಳನ್ನು ಓದುವುದಿಲ್ಲ. ನಾನು ನುಡಿ ನೋಡಲ್ಲ, ಬದಲಿಗೆ- ಆ ಪಕ್ಷದ ನಡೆಯ ಚರಿತ್ರೆಯನ್ನು ನೋಡಿ ಅರ್ಥ ಮಾಡಿಕೊಳ್ಳಲು ಪ್ರಯತ್ನಿಸುತ್ತೇನೆ. ಆದರೆ ಈ ಸಲ 2023ರ ವಿಧಾನಸಭೆಯ ಚುನಾವಣೆ ಸಂದರ್ಭಲ್ಲಿ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಓದಬೇಕಾಗಿ ಬಂತು. ಈ ದೇಶದ ಪ್ರಧಾನಮಂತ್ರಿಯವರು, ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯ ಕಾಲಂ ಒಂದನ್ನು ಉಲ್ಲೇಖಿಸಿ ಅದರ ವಿರುದ್ಧವಾಗಿ ಅನೇಕ ಕಡೆ ಉಗ್ರ ಭಾಷಣ ಮಾಡಿದರು. ನಾನು ಕುತೂಹಲಕ್ಕೆ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಅಂತಹದು ಏನಿರಬಹುದು ಎಂದು ಗಮನವಿಟ್ಟು ಓದಿದೆ. “ಧರ್ಮ ಮತ್ತು ಜಾತಿಯ ಹೆಸರಿನಲ್ಲಿ ದ್ವೇಷವನ್ನು ಬಿತ್ತಿ ವಿಭಜನೆಗೆ ಕಾರಣವಾಗುವ, ವ್ಯಕ್ತಿಗಳು ಮತ್ತು ಸಂಘಟನೆಗಳ ವಿರುದ್ಧ ಕಠಿಣ ಮತ್ತು ನಿರ್ಣಾಯಕ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲು ಕಾಂಗ್ರೆಸ್ ಪಕ್ಷ ಬದ್ಧವಾಗಿದೆ. ಸಂವಿಧಾನವೇ ಪವಿತ್ರ ಎಂದು ನಂಬಿರುವ ನಾವು, ಯಾವುದೇ ವ್ಯಕ್ತಿಗಳಾಗಲಿ ಭಜರಂಗ ದಳ ಮತ್ತು ಪಿಎಫ್‌ಐಗಳು ಸೇರಿದಂತೆ ಬಹುಸಂಖ್ಯಾತ ಅಥವಾ ಅಲ್ಪಸಂಖ್ಯಾತ ಇತರರಾಗಲಿ ಸಂವಿಧಾನದ ವಿಧಿಗಳನ್ನು ಉಲ್ಲಂಘಿಸುವುದನ್ನು ಸಹಿಸುವುದಿಲ್ಲ. ಆದ ಕಾರಣ ಇಂತಹ ವ್ಯಕ್ತಿಗಳು ಮತ್ತು ಸಂಘಟನೆಗಳ ನಿಷೇಧವೂ ಸೇರಿದಂತೆ ಬಲವಾದ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಬರೆಯಲಾಗಿದೆ” ಎಂದರು.

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯನ್ನು ಕಣ್ಣಲ್ಲಿ ಕಣ್ಣಿಟ್ಟು ಓದಿದ್ದೇನೆ. ನನಗೆ ಪ್ರಮುಖವಾಗಿ ಕಂಡಿದ್ದು ಇಷ್ಟು: 1) ಸಮಾಜದ ವಿಭಜನೆಗೆ ಅಂದರೆ ಒಡಕಿಗೆ ಕಾರಣರಾದವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಲು ಕಾಂಗ್ರೆಸ್ ಪಕ್ಷ ಬದ್ಧ (2) ಕಾಂಗ್ರೆಸ್‌ಗೆ ಸಂವಿಧಾನ ಪವಿತ್ರ (3) ಸಂವಿಧಾನದ ವಿಧಿಗಳನ್ನು ಉಲ್ಲಂಘಿಸಬಾರದು (4) ಇದನ್ನು ಉಲ್ಲಂಘಿಸುವವರು ಯಾರೇ ಆಗಲಿ ಭಜರಂಗದಳ, ಪಿಎಫ್‌ಐ ಇತ್ಯಾದಿಗಳ ಮೇಲೆ ಕಾಂಗ್ರೆಸ್ ಪಕ್ಷ ಬಲವಾದ ಕಾನೂನು ಕ್ರಮ ತೆಗೆದುಕೊಳ್ಳುತ್ತದೆ. ಇದು ಆ ಪ್ರಣಾಳಿಕೆಯ ಸಾರಾಂಶ. ಅಂದರೆ ಯಾರು ಕಾನೂನನ್ನು ಕೈಗೆತ್ತಿಕೊಳ್ಳುತ್ತಾರೊ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವ ಆಶಯ ಇಲ್ಲಿದೆ. ರಾಜ್ಯದ law and order ಕಾಪಾಡುವುದು ತನ್ನ ಧರ್ಮ ಎಂದು ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಹೇಳುತ್ತಿದೆ.
ನನಗೆ ಅನಿಸುವಂತೆ, ಯಾವುದೇ ಒಂದು ಸರ್ಕಾರಕ್ಕೆ ತನ್ನ ರಾಜ್ಯದ, ದೇಶದ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು ಎಂದರೆ ಅದು ಆ ಸರ್ಕಾರದ ಕನಿಷ್ಠ ಅರ್ಹತೆ. ಈ ಕನಿಷ್ಠ ಅರ್ಹತೆ ಇಲ್ಲದಿರುವುದರಿಂದಾಗಿ ಇದುವರೆಗೂ ರಾಜ್ಯವನ್ನು ಆಳ್ವಿಕೆ ನಡೆಸುತ್ತಿದ್ದ ಬಿಜೆಪಿ ಸರ್ಕಾರದ ಜಮಾನದಲ್ಲಿ ಒಂದೆರಡಲ್ಲ-ನೂರಾರು ಸಲ, ಕೆಲವು ಗುಂಪುಗಳು ದಾಂಧಲೆ ಎಬ್ಬಿಸಿ ಗಲಭೆ ಆಯ್ತು. ವ್ಯಾಪಾರ ನಿಷೇಧ, ಹಿಜಾಬ್, ಹಲಾಲ್, ಗೋವು ಸಾಗಾಣಿಕೆ ಇತ್ಯಾದಿ, ಇತ್ಯಾದಿ ಸರಮಾಲೆಯಲ್ಲಿ ಕೊಲೆ ಸುಲಿಗೆ ಹೊಡೆ ಬಡಿ ಎಲ್ಲಾ ನಡೆಯಿತು. ಸರ್ಕಾರ ಎನ್ನುವುದು ಇದೆಯೋ ಇಲ್ಲವೋ ಎಂದು ಅನುಮಾನ ಬರುವ ಪರಿಸ್ಥಿತಿ ಉಂಟಾಯ್ತು. ಇದೇ ಪರಿಸ್ಥಿತಿ ಮತ್ತೆ ಬರಬೇಕೆ? ಎಂದು ದೇವನೂರು ಪ್ರಶ್ನಿಸಿದರು.

ಹೀಗಿದ್ದೂ ನಮ್ಮ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕಾನೂನನ್ನು ತನ್ನ ಕೈಗೆತ್ತಿಕೊಳ್ಳುವ ಭಜರಂಗದಳದ ನಿಷೇಧ ಪ್ರಸ್ತಾಪವನ್ನು ವಿರೋಧಿಸುತ್ತಾರೆ. ಆಕ್ರೋಶಭರಿತರಾಗುತ್ತಾರೆ. ಬ್ಯಾಲೆಟ್ ಬಾಕ್ಸ್‌ನಲ್ಲಿ ಬಟನ್ ಒತ್ತುವಾಗ ‘ಜೈ ಭಜರಂಗ ಬಲಿ’ ಎಂದು ಮತ ನೀಡಿ ಎಂದು ಮತದಾರರಿಗೆ ಬಹಿರಂಗ ಕರೆಯನ್ನೂ ಕೊಡುತ್ತಾರೆ. ಆದರೆ ಹನುಮಂತ, ಹನುಮಾನ್ ಪರಮಭಕ್ತಿಯ ಸಂಕೇತವಾಗಿ ನಮ್ಮ ಜನಸಮುದಾಯದ ಸುಪ್ತಪ್ರಜ್ಞೆಯಲ್ಲಿ ವಾಸ ಮಾಡುತ್ತಿದ್ದಾನೆ. ಇಂತಹ ಪರಮಭಕ್ತಿಯ ಹನುಮಾನ್ ಯಾವ ಕಾರಣಕ್ಕೂ ‘ಭಕ್ತಿಯೇ ಇಲ್ಲದ ವೇಷಧಾರಿ ಭಕ್ತ’ರ ಗದ್ದಲದ ಮಾತುಗಳನ್ನು ಕೇಳಿಸಿಕೊಳ್ಳಲಾರ. ವಚನ ಪಾಲನೆಯ ಸಂಕೇತವಾದ ರಾಮನ ಭಕ್ತನಾದ ಹನುಮಾನ್ ವಚನಭ್ರಷ್ಠ ಭಕ್ತರನ್ನಂತೂ ಕ್ಷಮಿಸಲಾರ. ಇದೇ ಭಾರತದ ಪರಂಪರೆಯ ಅಂತಃಸಾಕ್ಷಿ ಎಂದು ದೇವನೂರು ತಿಳಿಸಿದರು.

ನಮ್ಮ ಪ್ರಧಾನಿಯವರಿಗೆ ಒಂದು ಪ್ರಶ್ನೆ. ಕಾನೂನು ಕೈಗೆತ್ತಿಕೊಳ್ಳುವ ಹಿನ್ನೆಲೆಯ ಭಜರಂಗದಳ ಮತ್ತು ಪಿಎಫ್‌ಐ ಇತ್ಯಾದಿಗಳ ಅವಾಂತರ ನೋಡಿಕೊಂಡು ಸರ್ಕಾರವೊಂದು ಸುಮ್ಮನಿರಬೇಕೆ? ಇದನ್ನು ಹೇಗೆ ಅರ್ಥಮಾಡಿಕೊಳ್ಳುವುದು? ಇಂತಹ ಮತಾಂಧರ ಬಗ್ಗೆ- ಕನ್ನಡ ಮಹೋನ್ನತ ಲೇಖಕ ಪಿ.ಲಂಕೇಶ್ ಅವರು ಒಂದು ಮಾತು ಹೇಳುತ್ತಾರೆ- “ನಗು ಮರೆತ, ಅಳು ಮರೆತ, ದಯೆ ಮರೆತ ಧರ್ಮಾಂಧರು ಯಾವುದೇ ಅಣುಬಾಂಬಿಗಿಂತ ‘ಅಪಾಯದ ಮನುಷ್ಯರು’ ” ಅಂತ. ಲಂಕೇಶರ ಈ ಒಳಗಣ್ಣಿನ ನುಡಿಗಳನ್ನು ನಾವು ಆಲಿಸಬೇಕಾಗಿದೆ ಎಂದರು.

ಇತ್ತೀಚೆಗೆ ನಾನು ನಂಜನಗೂಡಿನ ಹತ್ತಿರದ ತಗಡೂರಿಗೆ ಒಂದು ಸಭೆಗೆ ಹೋಗಿದ್ದೆ. ಅಲ್ಲಿ ಸುಮಾರು 200ಕ್ಕೂ ಹೆಚ್ಚು ಜನರು ಸೇರಿದ್ದರು. ಅಲ್ಲಿ ಶಾಲಾಮಕ್ಕಳು, ತರುಣರು, ಮಹಿಳೆಯರು, ಸಂಘಟನೆಗಳ ನಾಯಕರು, ಆ ಊರಿನ ಯಜಮಾನರು ಎಲ್ಲರೂ ಸೇರಿದ್ದರು. ನಾನು ಸುಮಾರು ಅರ್ಧ ಗಂಟೆಗಳ ಕಾಲ ಮಾತಾಡಿದೆ. ಮಾತಾಡಿದೆ ಅನ್ನುವುದಕ್ಕಿಂತ ನಾನು ಬರೆದುಕೊಂಡಿದ್ದನ್ನು ಓದಿದೆ ಅನ್ನಬಹುದು. ನಾನೇ ಚಕಿತನಾಗುವಂತೆ ಎಲ್ಲರೂ ಆಲಿಸಿದರು. ಸಭೆ ಮುಗಿದ ಮೇಲೆ ನಾಕಾರು ಹುಡುಗರು –“ನಮಗೆ ಅರ್ಥವಾಯ್ತು. ನಾವು ಬಿಜೆಪಿಗೆ ಮತ ನೀಡುವುದಿಲ್ಲ” ಅಂದರು. ಆಮೇಲೆ ಹತ್ತಾರು ಜನ ತರುಣರು ರಾತ್ರಿ 12.30ರವರೆಗೆ ಅಂದು ನಾನು ಹೇಳಿದ್ದ ಮುಖ್ಯ ಮಾತೊಂದನ್ನು ಚರ್ಚಿಸುತ್ತಿದ್ದರು ಎಂದು ತಿಳಿದು ಬಂತು. ತಗಡೂರು ಸಭೆಯಲ್ಲಿ ಹೇಳಿದ್ದ ಮಾತುಗಳ ಸಾರಾಂಶ ಏನೆಂದರೆ- “ಈ 2023ರ ವಿಧಾಸಭಾ ಚುನಾವಣೆ ಮತ್ತು ಮುಂಬರುವ 2024ರ ಲೋಕಸಭಾ ಚುನಾವಣೆ ನಿರ್ಣಾಯಕ. ಇಂದಿನ ರಾಜಕಾರಣದ ಒಳಹೊಕ್ಕು ನೋಡಿದರೆ, ಇಂದಿನ ಚುನಾವಣೆ ವ್ಯಕ್ತಿ ವ್ಯಕ್ತಿಗಳ ನಡುವೆ ಅಲ್ಲ. ಪಕ್ಷ ಪಕ್ಷಗಳ ನಡುವೆಯೂ ಅಲ್ಲ. ಇಂದಿನ ಸ್ಪರ್ಧೆ ನಡೆಯುತ್ತಿರುವುದು ಸಮಾನತೆಯ ಹಾಲಿ ಸಂವಿಧಾನ V/S ಅಸಮಾನತೆಯ ಮಾಜಿ ಮನುಧರ್ಮಶಾಸ್ತ್ರ ಸಂವಿಧಾನಗಳ ನಡುವೆ. ಮನುಧರ್ಮ ಶಾಸ್ತ್ರದ ಭಕ್ತರಾದ ಸಂಘಪರಿವಾರ ಬಿಜೆಪಿ ಪಕ್ಷವು ಅಧಿಕಾರಕ್ಕೆ ಬಂದರೆ, ಆ ಮನುಧರ್ಮ ಶಾಸ್ತ್ರದಂತೆ ಒಕ್ಕಲಿಗರು, ಲಿಂಗಾಯಿತರು, ತಳಸಮುದಾಯದವರು ಮತ್ತೆ ಸೇವಕರಾಗಬೇಕಾಗುತ್ತದೆ. ಆಗ ದಲಿತರು, ಅಲೆಮಾರಿ, ಆದಿವಾಸಿಗಳು ಊರಾಚೆ ತಳ್ಳಲ್ಪಡುತ್ತಾರೆ, ನೆನಪಿಡಿ” –ಎಂದು ಹೇಳಿದ್ದೆ. ಈಗ ಬಿಜೆಪಿ ಸರ್ಕಾರಗಳು ತರುತ್ತಿರುವ ಕಾಯ್ದೆಗಳನ್ನು ಮೂಸಿ ನೋಡಿದರೂ, ಅಲ್ಲಿ ಮನುಧರ್ಮ ಶಾಸ್ತ್ರದ ವಾಸನೆ ಇರುವುದನ್ನು ಗುರುತಿಸಬಹುದು. ಹೀಗಿರುವಾಗ, ಸ್ನೇಹಿತರೇ ಸಂಘಪರಿವಾರ ಬಿಜೆಪಿಯನ್ನು ಸೋಲಿಸಲೇಬೇಕು. ಅಂಬೇಡ್ಕರ್ ನೇತೃತ್ವದಲ್ಲಿ ರಚಿಸಿದ ಭಾರತದ ಸಂವಿಧಾನವನ್ನು ಪವಿತ್ರ ಎಂದು ಭಾವಿಸಿರುವ ಕಾಂಗ್ರೆಸ್‌ಗೆ, ಇಂದಿನ ಪರಿಸ್ಥಿತಿಯಲ್ಲಿ ಎಷ್ಟೇ ಭಿನ್ನಾಭಿಪ್ರಾಯ ಇದ್ದರೂ ಬೆಂಬಲ ನೀಡಬೇಕಾಗಿದೆ. ಸಂವಿಧಾನ ವಿರೋಧಿ ಬಿಜೆಪಿಯನ್ನು ಸೋಲಿಸಿ ನಾವು ಉಳಿಯಬೇಕಾಗಿದೆ ಎಂದರು.

ಇದನ್ನೂ ಓದಿ: ‘ಬಿಜೆಪಿಗೆ ಮತ ಹಾಕದಿದ್ದರೆ ಕೇಂದ್ರದ ಯೋಜನೆಗಳು ಬಂದ್’; ನಡ್ಡಾ ಬೆದರಿಕೆಗೆ ಜನಾಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...