Homeಮುಖಪುಟಸ್ಪರ್ಧೆ ನಡೆಯುತ್ತಿರುವುದು ಸಮಾನತೆಯ ಹಾಲಿ ಸಂವಿಧಾನ V/S ಅಸಮಾನತೆಯ ಮಾಜಿ ಮನುಧರ್ಮಶಾಸ್ತ್ರಗಳ ನಡುವೆ - ದೇವನೂರು

ಸ್ಪರ್ಧೆ ನಡೆಯುತ್ತಿರುವುದು ಸಮಾನತೆಯ ಹಾಲಿ ಸಂವಿಧಾನ V/S ಅಸಮಾನತೆಯ ಮಾಜಿ ಮನುಧರ್ಮಶಾಸ್ತ್ರಗಳ ನಡುವೆ – ದೇವನೂರು

- Advertisement -
- Advertisement -

ಸ್ಪರ್ಧೆ ನಡೆಯುತ್ತಿರುವುದು ಸಮಾನತೆಯ ಹಾಲಿ ಸಂವಿಧಾನ V/S ಅಸಮಾನತೆಯ ಮಾಜಿ ಮನುಧರ್ಮಶಾಸ್ತ್ರ ಸಂವಿಧಾನಗಳ ನಡುವೆ. ಹಾಗಾಗಿ ಸಂವಿಧಾನ ವಿರೋಧಿ ಬಿಜೆಪಿ ಸೋಲಿಸಿ, ನಾವು ಉಳಿಯಬೇಕಾಗಿದೆ ಎಂದು ಹಿರಿಯ ಸಾಹಿತಿ ದೇವನೂರ ಮಹಾದೇವ ಕರೆ ನೀಡಿದರು.

ಭಾನುವಾರ ತಲಕಾಡಿನಲ್ಲಿ ಚುನಾವಣಾ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ನಾನು, ಸಾಮಾನ್ಯವಾಗಿ ಯಾವ ಪಕ್ಷದ ಚುನಾವಣಾ ಪ್ರಣಾಳಿಕೆಗಳನ್ನು ಓದುವುದಿಲ್ಲ. ನಾನು ನುಡಿ ನೋಡಲ್ಲ, ಬದಲಿಗೆ- ಆ ಪಕ್ಷದ ನಡೆಯ ಚರಿತ್ರೆಯನ್ನು ನೋಡಿ ಅರ್ಥ ಮಾಡಿಕೊಳ್ಳಲು ಪ್ರಯತ್ನಿಸುತ್ತೇನೆ. ಆದರೆ ಈ ಸಲ 2023ರ ವಿಧಾನಸಭೆಯ ಚುನಾವಣೆ ಸಂದರ್ಭಲ್ಲಿ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಓದಬೇಕಾಗಿ ಬಂತು. ಈ ದೇಶದ ಪ್ರಧಾನಮಂತ್ರಿಯವರು, ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯ ಕಾಲಂ ಒಂದನ್ನು ಉಲ್ಲೇಖಿಸಿ ಅದರ ವಿರುದ್ಧವಾಗಿ ಅನೇಕ ಕಡೆ ಉಗ್ರ ಭಾಷಣ ಮಾಡಿದರು. ನಾನು ಕುತೂಹಲಕ್ಕೆ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಅಂತಹದು ಏನಿರಬಹುದು ಎಂದು ಗಮನವಿಟ್ಟು ಓದಿದೆ. “ಧರ್ಮ ಮತ್ತು ಜಾತಿಯ ಹೆಸರಿನಲ್ಲಿ ದ್ವೇಷವನ್ನು ಬಿತ್ತಿ ವಿಭಜನೆಗೆ ಕಾರಣವಾಗುವ, ವ್ಯಕ್ತಿಗಳು ಮತ್ತು ಸಂಘಟನೆಗಳ ವಿರುದ್ಧ ಕಠಿಣ ಮತ್ತು ನಿರ್ಣಾಯಕ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲು ಕಾಂಗ್ರೆಸ್ ಪಕ್ಷ ಬದ್ಧವಾಗಿದೆ. ಸಂವಿಧಾನವೇ ಪವಿತ್ರ ಎಂದು ನಂಬಿರುವ ನಾವು, ಯಾವುದೇ ವ್ಯಕ್ತಿಗಳಾಗಲಿ ಭಜರಂಗ ದಳ ಮತ್ತು ಪಿಎಫ್‌ಐಗಳು ಸೇರಿದಂತೆ ಬಹುಸಂಖ್ಯಾತ ಅಥವಾ ಅಲ್ಪಸಂಖ್ಯಾತ ಇತರರಾಗಲಿ ಸಂವಿಧಾನದ ವಿಧಿಗಳನ್ನು ಉಲ್ಲಂಘಿಸುವುದನ್ನು ಸಹಿಸುವುದಿಲ್ಲ. ಆದ ಕಾರಣ ಇಂತಹ ವ್ಯಕ್ತಿಗಳು ಮತ್ತು ಸಂಘಟನೆಗಳ ನಿಷೇಧವೂ ಸೇರಿದಂತೆ ಬಲವಾದ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಬರೆಯಲಾಗಿದೆ” ಎಂದರು.

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯನ್ನು ಕಣ್ಣಲ್ಲಿ ಕಣ್ಣಿಟ್ಟು ಓದಿದ್ದೇನೆ. ನನಗೆ ಪ್ರಮುಖವಾಗಿ ಕಂಡಿದ್ದು ಇಷ್ಟು: 1) ಸಮಾಜದ ವಿಭಜನೆಗೆ ಅಂದರೆ ಒಡಕಿಗೆ ಕಾರಣರಾದವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಲು ಕಾಂಗ್ರೆಸ್ ಪಕ್ಷ ಬದ್ಧ (2) ಕಾಂಗ್ರೆಸ್‌ಗೆ ಸಂವಿಧಾನ ಪವಿತ್ರ (3) ಸಂವಿಧಾನದ ವಿಧಿಗಳನ್ನು ಉಲ್ಲಂಘಿಸಬಾರದು (4) ಇದನ್ನು ಉಲ್ಲಂಘಿಸುವವರು ಯಾರೇ ಆಗಲಿ ಭಜರಂಗದಳ, ಪಿಎಫ್‌ಐ ಇತ್ಯಾದಿಗಳ ಮೇಲೆ ಕಾಂಗ್ರೆಸ್ ಪಕ್ಷ ಬಲವಾದ ಕಾನೂನು ಕ್ರಮ ತೆಗೆದುಕೊಳ್ಳುತ್ತದೆ. ಇದು ಆ ಪ್ರಣಾಳಿಕೆಯ ಸಾರಾಂಶ. ಅಂದರೆ ಯಾರು ಕಾನೂನನ್ನು ಕೈಗೆತ್ತಿಕೊಳ್ಳುತ್ತಾರೊ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವ ಆಶಯ ಇಲ್ಲಿದೆ. ರಾಜ್ಯದ law and order ಕಾಪಾಡುವುದು ತನ್ನ ಧರ್ಮ ಎಂದು ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಹೇಳುತ್ತಿದೆ.
ನನಗೆ ಅನಿಸುವಂತೆ, ಯಾವುದೇ ಒಂದು ಸರ್ಕಾರಕ್ಕೆ ತನ್ನ ರಾಜ್ಯದ, ದೇಶದ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು ಎಂದರೆ ಅದು ಆ ಸರ್ಕಾರದ ಕನಿಷ್ಠ ಅರ್ಹತೆ. ಈ ಕನಿಷ್ಠ ಅರ್ಹತೆ ಇಲ್ಲದಿರುವುದರಿಂದಾಗಿ ಇದುವರೆಗೂ ರಾಜ್ಯವನ್ನು ಆಳ್ವಿಕೆ ನಡೆಸುತ್ತಿದ್ದ ಬಿಜೆಪಿ ಸರ್ಕಾರದ ಜಮಾನದಲ್ಲಿ ಒಂದೆರಡಲ್ಲ-ನೂರಾರು ಸಲ, ಕೆಲವು ಗುಂಪುಗಳು ದಾಂಧಲೆ ಎಬ್ಬಿಸಿ ಗಲಭೆ ಆಯ್ತು. ವ್ಯಾಪಾರ ನಿಷೇಧ, ಹಿಜಾಬ್, ಹಲಾಲ್, ಗೋವು ಸಾಗಾಣಿಕೆ ಇತ್ಯಾದಿ, ಇತ್ಯಾದಿ ಸರಮಾಲೆಯಲ್ಲಿ ಕೊಲೆ ಸುಲಿಗೆ ಹೊಡೆ ಬಡಿ ಎಲ್ಲಾ ನಡೆಯಿತು. ಸರ್ಕಾರ ಎನ್ನುವುದು ಇದೆಯೋ ಇಲ್ಲವೋ ಎಂದು ಅನುಮಾನ ಬರುವ ಪರಿಸ್ಥಿತಿ ಉಂಟಾಯ್ತು. ಇದೇ ಪರಿಸ್ಥಿತಿ ಮತ್ತೆ ಬರಬೇಕೆ? ಎಂದು ದೇವನೂರು ಪ್ರಶ್ನಿಸಿದರು.

ಹೀಗಿದ್ದೂ ನಮ್ಮ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕಾನೂನನ್ನು ತನ್ನ ಕೈಗೆತ್ತಿಕೊಳ್ಳುವ ಭಜರಂಗದಳದ ನಿಷೇಧ ಪ್ರಸ್ತಾಪವನ್ನು ವಿರೋಧಿಸುತ್ತಾರೆ. ಆಕ್ರೋಶಭರಿತರಾಗುತ್ತಾರೆ. ಬ್ಯಾಲೆಟ್ ಬಾಕ್ಸ್‌ನಲ್ಲಿ ಬಟನ್ ಒತ್ತುವಾಗ ‘ಜೈ ಭಜರಂಗ ಬಲಿ’ ಎಂದು ಮತ ನೀಡಿ ಎಂದು ಮತದಾರರಿಗೆ ಬಹಿರಂಗ ಕರೆಯನ್ನೂ ಕೊಡುತ್ತಾರೆ. ಆದರೆ ಹನುಮಂತ, ಹನುಮಾನ್ ಪರಮಭಕ್ತಿಯ ಸಂಕೇತವಾಗಿ ನಮ್ಮ ಜನಸಮುದಾಯದ ಸುಪ್ತಪ್ರಜ್ಞೆಯಲ್ಲಿ ವಾಸ ಮಾಡುತ್ತಿದ್ದಾನೆ. ಇಂತಹ ಪರಮಭಕ್ತಿಯ ಹನುಮಾನ್ ಯಾವ ಕಾರಣಕ್ಕೂ ‘ಭಕ್ತಿಯೇ ಇಲ್ಲದ ವೇಷಧಾರಿ ಭಕ್ತ’ರ ಗದ್ದಲದ ಮಾತುಗಳನ್ನು ಕೇಳಿಸಿಕೊಳ್ಳಲಾರ. ವಚನ ಪಾಲನೆಯ ಸಂಕೇತವಾದ ರಾಮನ ಭಕ್ತನಾದ ಹನುಮಾನ್ ವಚನಭ್ರಷ್ಠ ಭಕ್ತರನ್ನಂತೂ ಕ್ಷಮಿಸಲಾರ. ಇದೇ ಭಾರತದ ಪರಂಪರೆಯ ಅಂತಃಸಾಕ್ಷಿ ಎಂದು ದೇವನೂರು ತಿಳಿಸಿದರು.

ನಮ್ಮ ಪ್ರಧಾನಿಯವರಿಗೆ ಒಂದು ಪ್ರಶ್ನೆ. ಕಾನೂನು ಕೈಗೆತ್ತಿಕೊಳ್ಳುವ ಹಿನ್ನೆಲೆಯ ಭಜರಂಗದಳ ಮತ್ತು ಪಿಎಫ್‌ಐ ಇತ್ಯಾದಿಗಳ ಅವಾಂತರ ನೋಡಿಕೊಂಡು ಸರ್ಕಾರವೊಂದು ಸುಮ್ಮನಿರಬೇಕೆ? ಇದನ್ನು ಹೇಗೆ ಅರ್ಥಮಾಡಿಕೊಳ್ಳುವುದು? ಇಂತಹ ಮತಾಂಧರ ಬಗ್ಗೆ- ಕನ್ನಡ ಮಹೋನ್ನತ ಲೇಖಕ ಪಿ.ಲಂಕೇಶ್ ಅವರು ಒಂದು ಮಾತು ಹೇಳುತ್ತಾರೆ- “ನಗು ಮರೆತ, ಅಳು ಮರೆತ, ದಯೆ ಮರೆತ ಧರ್ಮಾಂಧರು ಯಾವುದೇ ಅಣುಬಾಂಬಿಗಿಂತ ‘ಅಪಾಯದ ಮನುಷ್ಯರು’ ” ಅಂತ. ಲಂಕೇಶರ ಈ ಒಳಗಣ್ಣಿನ ನುಡಿಗಳನ್ನು ನಾವು ಆಲಿಸಬೇಕಾಗಿದೆ ಎಂದರು.

ಇತ್ತೀಚೆಗೆ ನಾನು ನಂಜನಗೂಡಿನ ಹತ್ತಿರದ ತಗಡೂರಿಗೆ ಒಂದು ಸಭೆಗೆ ಹೋಗಿದ್ದೆ. ಅಲ್ಲಿ ಸುಮಾರು 200ಕ್ಕೂ ಹೆಚ್ಚು ಜನರು ಸೇರಿದ್ದರು. ಅಲ್ಲಿ ಶಾಲಾಮಕ್ಕಳು, ತರುಣರು, ಮಹಿಳೆಯರು, ಸಂಘಟನೆಗಳ ನಾಯಕರು, ಆ ಊರಿನ ಯಜಮಾನರು ಎಲ್ಲರೂ ಸೇರಿದ್ದರು. ನಾನು ಸುಮಾರು ಅರ್ಧ ಗಂಟೆಗಳ ಕಾಲ ಮಾತಾಡಿದೆ. ಮಾತಾಡಿದೆ ಅನ್ನುವುದಕ್ಕಿಂತ ನಾನು ಬರೆದುಕೊಂಡಿದ್ದನ್ನು ಓದಿದೆ ಅನ್ನಬಹುದು. ನಾನೇ ಚಕಿತನಾಗುವಂತೆ ಎಲ್ಲರೂ ಆಲಿಸಿದರು. ಸಭೆ ಮುಗಿದ ಮೇಲೆ ನಾಕಾರು ಹುಡುಗರು –“ನಮಗೆ ಅರ್ಥವಾಯ್ತು. ನಾವು ಬಿಜೆಪಿಗೆ ಮತ ನೀಡುವುದಿಲ್ಲ” ಅಂದರು. ಆಮೇಲೆ ಹತ್ತಾರು ಜನ ತರುಣರು ರಾತ್ರಿ 12.30ರವರೆಗೆ ಅಂದು ನಾನು ಹೇಳಿದ್ದ ಮುಖ್ಯ ಮಾತೊಂದನ್ನು ಚರ್ಚಿಸುತ್ತಿದ್ದರು ಎಂದು ತಿಳಿದು ಬಂತು. ತಗಡೂರು ಸಭೆಯಲ್ಲಿ ಹೇಳಿದ್ದ ಮಾತುಗಳ ಸಾರಾಂಶ ಏನೆಂದರೆ- “ಈ 2023ರ ವಿಧಾಸಭಾ ಚುನಾವಣೆ ಮತ್ತು ಮುಂಬರುವ 2024ರ ಲೋಕಸಭಾ ಚುನಾವಣೆ ನಿರ್ಣಾಯಕ. ಇಂದಿನ ರಾಜಕಾರಣದ ಒಳಹೊಕ್ಕು ನೋಡಿದರೆ, ಇಂದಿನ ಚುನಾವಣೆ ವ್ಯಕ್ತಿ ವ್ಯಕ್ತಿಗಳ ನಡುವೆ ಅಲ್ಲ. ಪಕ್ಷ ಪಕ್ಷಗಳ ನಡುವೆಯೂ ಅಲ್ಲ. ಇಂದಿನ ಸ್ಪರ್ಧೆ ನಡೆಯುತ್ತಿರುವುದು ಸಮಾನತೆಯ ಹಾಲಿ ಸಂವಿಧಾನ V/S ಅಸಮಾನತೆಯ ಮಾಜಿ ಮನುಧರ್ಮಶಾಸ್ತ್ರ ಸಂವಿಧಾನಗಳ ನಡುವೆ. ಮನುಧರ್ಮ ಶಾಸ್ತ್ರದ ಭಕ್ತರಾದ ಸಂಘಪರಿವಾರ ಬಿಜೆಪಿ ಪಕ್ಷವು ಅಧಿಕಾರಕ್ಕೆ ಬಂದರೆ, ಆ ಮನುಧರ್ಮ ಶಾಸ್ತ್ರದಂತೆ ಒಕ್ಕಲಿಗರು, ಲಿಂಗಾಯಿತರು, ತಳಸಮುದಾಯದವರು ಮತ್ತೆ ಸೇವಕರಾಗಬೇಕಾಗುತ್ತದೆ. ಆಗ ದಲಿತರು, ಅಲೆಮಾರಿ, ಆದಿವಾಸಿಗಳು ಊರಾಚೆ ತಳ್ಳಲ್ಪಡುತ್ತಾರೆ, ನೆನಪಿಡಿ” –ಎಂದು ಹೇಳಿದ್ದೆ. ಈಗ ಬಿಜೆಪಿ ಸರ್ಕಾರಗಳು ತರುತ್ತಿರುವ ಕಾಯ್ದೆಗಳನ್ನು ಮೂಸಿ ನೋಡಿದರೂ, ಅಲ್ಲಿ ಮನುಧರ್ಮ ಶಾಸ್ತ್ರದ ವಾಸನೆ ಇರುವುದನ್ನು ಗುರುತಿಸಬಹುದು. ಹೀಗಿರುವಾಗ, ಸ್ನೇಹಿತರೇ ಸಂಘಪರಿವಾರ ಬಿಜೆಪಿಯನ್ನು ಸೋಲಿಸಲೇಬೇಕು. ಅಂಬೇಡ್ಕರ್ ನೇತೃತ್ವದಲ್ಲಿ ರಚಿಸಿದ ಭಾರತದ ಸಂವಿಧಾನವನ್ನು ಪವಿತ್ರ ಎಂದು ಭಾವಿಸಿರುವ ಕಾಂಗ್ರೆಸ್‌ಗೆ, ಇಂದಿನ ಪರಿಸ್ಥಿತಿಯಲ್ಲಿ ಎಷ್ಟೇ ಭಿನ್ನಾಭಿಪ್ರಾಯ ಇದ್ದರೂ ಬೆಂಬಲ ನೀಡಬೇಕಾಗಿದೆ. ಸಂವಿಧಾನ ವಿರೋಧಿ ಬಿಜೆಪಿಯನ್ನು ಸೋಲಿಸಿ ನಾವು ಉಳಿಯಬೇಕಾಗಿದೆ ಎಂದರು.

ಇದನ್ನೂ ಓದಿ: ‘ಬಿಜೆಪಿಗೆ ಮತ ಹಾಕದಿದ್ದರೆ ಕೇಂದ್ರದ ಯೋಜನೆಗಳು ಬಂದ್’; ನಡ್ಡಾ ಬೆದರಿಕೆಗೆ ಜನಾಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...