Homeಮುಖಪುಟಸ್ಪರ್ಧೆ ನಡೆಯುತ್ತಿರುವುದು ಸಮಾನತೆಯ ಹಾಲಿ ಸಂವಿಧಾನ V/S ಅಸಮಾನತೆಯ ಮಾಜಿ ಮನುಧರ್ಮಶಾಸ್ತ್ರಗಳ ನಡುವೆ - ದೇವನೂರು

ಸ್ಪರ್ಧೆ ನಡೆಯುತ್ತಿರುವುದು ಸಮಾನತೆಯ ಹಾಲಿ ಸಂವಿಧಾನ V/S ಅಸಮಾನತೆಯ ಮಾಜಿ ಮನುಧರ್ಮಶಾಸ್ತ್ರಗಳ ನಡುವೆ – ದೇವನೂರು

- Advertisement -
- Advertisement -

ಸ್ಪರ್ಧೆ ನಡೆಯುತ್ತಿರುವುದು ಸಮಾನತೆಯ ಹಾಲಿ ಸಂವಿಧಾನ V/S ಅಸಮಾನತೆಯ ಮಾಜಿ ಮನುಧರ್ಮಶಾಸ್ತ್ರ ಸಂವಿಧಾನಗಳ ನಡುವೆ. ಹಾಗಾಗಿ ಸಂವಿಧಾನ ವಿರೋಧಿ ಬಿಜೆಪಿ ಸೋಲಿಸಿ, ನಾವು ಉಳಿಯಬೇಕಾಗಿದೆ ಎಂದು ಹಿರಿಯ ಸಾಹಿತಿ ದೇವನೂರ ಮಹಾದೇವ ಕರೆ ನೀಡಿದರು.

ಭಾನುವಾರ ತಲಕಾಡಿನಲ್ಲಿ ಚುನಾವಣಾ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ನಾನು, ಸಾಮಾನ್ಯವಾಗಿ ಯಾವ ಪಕ್ಷದ ಚುನಾವಣಾ ಪ್ರಣಾಳಿಕೆಗಳನ್ನು ಓದುವುದಿಲ್ಲ. ನಾನು ನುಡಿ ನೋಡಲ್ಲ, ಬದಲಿಗೆ- ಆ ಪಕ್ಷದ ನಡೆಯ ಚರಿತ್ರೆಯನ್ನು ನೋಡಿ ಅರ್ಥ ಮಾಡಿಕೊಳ್ಳಲು ಪ್ರಯತ್ನಿಸುತ್ತೇನೆ. ಆದರೆ ಈ ಸಲ 2023ರ ವಿಧಾನಸಭೆಯ ಚುನಾವಣೆ ಸಂದರ್ಭಲ್ಲಿ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಓದಬೇಕಾಗಿ ಬಂತು. ಈ ದೇಶದ ಪ್ರಧಾನಮಂತ್ರಿಯವರು, ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯ ಕಾಲಂ ಒಂದನ್ನು ಉಲ್ಲೇಖಿಸಿ ಅದರ ವಿರುದ್ಧವಾಗಿ ಅನೇಕ ಕಡೆ ಉಗ್ರ ಭಾಷಣ ಮಾಡಿದರು. ನಾನು ಕುತೂಹಲಕ್ಕೆ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಅಂತಹದು ಏನಿರಬಹುದು ಎಂದು ಗಮನವಿಟ್ಟು ಓದಿದೆ. “ಧರ್ಮ ಮತ್ತು ಜಾತಿಯ ಹೆಸರಿನಲ್ಲಿ ದ್ವೇಷವನ್ನು ಬಿತ್ತಿ ವಿಭಜನೆಗೆ ಕಾರಣವಾಗುವ, ವ್ಯಕ್ತಿಗಳು ಮತ್ತು ಸಂಘಟನೆಗಳ ವಿರುದ್ಧ ಕಠಿಣ ಮತ್ತು ನಿರ್ಣಾಯಕ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲು ಕಾಂಗ್ರೆಸ್ ಪಕ್ಷ ಬದ್ಧವಾಗಿದೆ. ಸಂವಿಧಾನವೇ ಪವಿತ್ರ ಎಂದು ನಂಬಿರುವ ನಾವು, ಯಾವುದೇ ವ್ಯಕ್ತಿಗಳಾಗಲಿ ಭಜರಂಗ ದಳ ಮತ್ತು ಪಿಎಫ್‌ಐಗಳು ಸೇರಿದಂತೆ ಬಹುಸಂಖ್ಯಾತ ಅಥವಾ ಅಲ್ಪಸಂಖ್ಯಾತ ಇತರರಾಗಲಿ ಸಂವಿಧಾನದ ವಿಧಿಗಳನ್ನು ಉಲ್ಲಂಘಿಸುವುದನ್ನು ಸಹಿಸುವುದಿಲ್ಲ. ಆದ ಕಾರಣ ಇಂತಹ ವ್ಯಕ್ತಿಗಳು ಮತ್ತು ಸಂಘಟನೆಗಳ ನಿಷೇಧವೂ ಸೇರಿದಂತೆ ಬಲವಾದ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಬರೆಯಲಾಗಿದೆ” ಎಂದರು.

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯನ್ನು ಕಣ್ಣಲ್ಲಿ ಕಣ್ಣಿಟ್ಟು ಓದಿದ್ದೇನೆ. ನನಗೆ ಪ್ರಮುಖವಾಗಿ ಕಂಡಿದ್ದು ಇಷ್ಟು: 1) ಸಮಾಜದ ವಿಭಜನೆಗೆ ಅಂದರೆ ಒಡಕಿಗೆ ಕಾರಣರಾದವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಲು ಕಾಂಗ್ರೆಸ್ ಪಕ್ಷ ಬದ್ಧ (2) ಕಾಂಗ್ರೆಸ್‌ಗೆ ಸಂವಿಧಾನ ಪವಿತ್ರ (3) ಸಂವಿಧಾನದ ವಿಧಿಗಳನ್ನು ಉಲ್ಲಂಘಿಸಬಾರದು (4) ಇದನ್ನು ಉಲ್ಲಂಘಿಸುವವರು ಯಾರೇ ಆಗಲಿ ಭಜರಂಗದಳ, ಪಿಎಫ್‌ಐ ಇತ್ಯಾದಿಗಳ ಮೇಲೆ ಕಾಂಗ್ರೆಸ್ ಪಕ್ಷ ಬಲವಾದ ಕಾನೂನು ಕ್ರಮ ತೆಗೆದುಕೊಳ್ಳುತ್ತದೆ. ಇದು ಆ ಪ್ರಣಾಳಿಕೆಯ ಸಾರಾಂಶ. ಅಂದರೆ ಯಾರು ಕಾನೂನನ್ನು ಕೈಗೆತ್ತಿಕೊಳ್ಳುತ್ತಾರೊ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವ ಆಶಯ ಇಲ್ಲಿದೆ. ರಾಜ್ಯದ law and order ಕಾಪಾಡುವುದು ತನ್ನ ಧರ್ಮ ಎಂದು ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಹೇಳುತ್ತಿದೆ.
ನನಗೆ ಅನಿಸುವಂತೆ, ಯಾವುದೇ ಒಂದು ಸರ್ಕಾರಕ್ಕೆ ತನ್ನ ರಾಜ್ಯದ, ದೇಶದ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು ಎಂದರೆ ಅದು ಆ ಸರ್ಕಾರದ ಕನಿಷ್ಠ ಅರ್ಹತೆ. ಈ ಕನಿಷ್ಠ ಅರ್ಹತೆ ಇಲ್ಲದಿರುವುದರಿಂದಾಗಿ ಇದುವರೆಗೂ ರಾಜ್ಯವನ್ನು ಆಳ್ವಿಕೆ ನಡೆಸುತ್ತಿದ್ದ ಬಿಜೆಪಿ ಸರ್ಕಾರದ ಜಮಾನದಲ್ಲಿ ಒಂದೆರಡಲ್ಲ-ನೂರಾರು ಸಲ, ಕೆಲವು ಗುಂಪುಗಳು ದಾಂಧಲೆ ಎಬ್ಬಿಸಿ ಗಲಭೆ ಆಯ್ತು. ವ್ಯಾಪಾರ ನಿಷೇಧ, ಹಿಜಾಬ್, ಹಲಾಲ್, ಗೋವು ಸಾಗಾಣಿಕೆ ಇತ್ಯಾದಿ, ಇತ್ಯಾದಿ ಸರಮಾಲೆಯಲ್ಲಿ ಕೊಲೆ ಸುಲಿಗೆ ಹೊಡೆ ಬಡಿ ಎಲ್ಲಾ ನಡೆಯಿತು. ಸರ್ಕಾರ ಎನ್ನುವುದು ಇದೆಯೋ ಇಲ್ಲವೋ ಎಂದು ಅನುಮಾನ ಬರುವ ಪರಿಸ್ಥಿತಿ ಉಂಟಾಯ್ತು. ಇದೇ ಪರಿಸ್ಥಿತಿ ಮತ್ತೆ ಬರಬೇಕೆ? ಎಂದು ದೇವನೂರು ಪ್ರಶ್ನಿಸಿದರು.

ಹೀಗಿದ್ದೂ ನಮ್ಮ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕಾನೂನನ್ನು ತನ್ನ ಕೈಗೆತ್ತಿಕೊಳ್ಳುವ ಭಜರಂಗದಳದ ನಿಷೇಧ ಪ್ರಸ್ತಾಪವನ್ನು ವಿರೋಧಿಸುತ್ತಾರೆ. ಆಕ್ರೋಶಭರಿತರಾಗುತ್ತಾರೆ. ಬ್ಯಾಲೆಟ್ ಬಾಕ್ಸ್‌ನಲ್ಲಿ ಬಟನ್ ಒತ್ತುವಾಗ ‘ಜೈ ಭಜರಂಗ ಬಲಿ’ ಎಂದು ಮತ ನೀಡಿ ಎಂದು ಮತದಾರರಿಗೆ ಬಹಿರಂಗ ಕರೆಯನ್ನೂ ಕೊಡುತ್ತಾರೆ. ಆದರೆ ಹನುಮಂತ, ಹನುಮಾನ್ ಪರಮಭಕ್ತಿಯ ಸಂಕೇತವಾಗಿ ನಮ್ಮ ಜನಸಮುದಾಯದ ಸುಪ್ತಪ್ರಜ್ಞೆಯಲ್ಲಿ ವಾಸ ಮಾಡುತ್ತಿದ್ದಾನೆ. ಇಂತಹ ಪರಮಭಕ್ತಿಯ ಹನುಮಾನ್ ಯಾವ ಕಾರಣಕ್ಕೂ ‘ಭಕ್ತಿಯೇ ಇಲ್ಲದ ವೇಷಧಾರಿ ಭಕ್ತ’ರ ಗದ್ದಲದ ಮಾತುಗಳನ್ನು ಕೇಳಿಸಿಕೊಳ್ಳಲಾರ. ವಚನ ಪಾಲನೆಯ ಸಂಕೇತವಾದ ರಾಮನ ಭಕ್ತನಾದ ಹನುಮಾನ್ ವಚನಭ್ರಷ್ಠ ಭಕ್ತರನ್ನಂತೂ ಕ್ಷಮಿಸಲಾರ. ಇದೇ ಭಾರತದ ಪರಂಪರೆಯ ಅಂತಃಸಾಕ್ಷಿ ಎಂದು ದೇವನೂರು ತಿಳಿಸಿದರು.

ನಮ್ಮ ಪ್ರಧಾನಿಯವರಿಗೆ ಒಂದು ಪ್ರಶ್ನೆ. ಕಾನೂನು ಕೈಗೆತ್ತಿಕೊಳ್ಳುವ ಹಿನ್ನೆಲೆಯ ಭಜರಂಗದಳ ಮತ್ತು ಪಿಎಫ್‌ಐ ಇತ್ಯಾದಿಗಳ ಅವಾಂತರ ನೋಡಿಕೊಂಡು ಸರ್ಕಾರವೊಂದು ಸುಮ್ಮನಿರಬೇಕೆ? ಇದನ್ನು ಹೇಗೆ ಅರ್ಥಮಾಡಿಕೊಳ್ಳುವುದು? ಇಂತಹ ಮತಾಂಧರ ಬಗ್ಗೆ- ಕನ್ನಡ ಮಹೋನ್ನತ ಲೇಖಕ ಪಿ.ಲಂಕೇಶ್ ಅವರು ಒಂದು ಮಾತು ಹೇಳುತ್ತಾರೆ- “ನಗು ಮರೆತ, ಅಳು ಮರೆತ, ದಯೆ ಮರೆತ ಧರ್ಮಾಂಧರು ಯಾವುದೇ ಅಣುಬಾಂಬಿಗಿಂತ ‘ಅಪಾಯದ ಮನುಷ್ಯರು’ ” ಅಂತ. ಲಂಕೇಶರ ಈ ಒಳಗಣ್ಣಿನ ನುಡಿಗಳನ್ನು ನಾವು ಆಲಿಸಬೇಕಾಗಿದೆ ಎಂದರು.

ಇತ್ತೀಚೆಗೆ ನಾನು ನಂಜನಗೂಡಿನ ಹತ್ತಿರದ ತಗಡೂರಿಗೆ ಒಂದು ಸಭೆಗೆ ಹೋಗಿದ್ದೆ. ಅಲ್ಲಿ ಸುಮಾರು 200ಕ್ಕೂ ಹೆಚ್ಚು ಜನರು ಸೇರಿದ್ದರು. ಅಲ್ಲಿ ಶಾಲಾಮಕ್ಕಳು, ತರುಣರು, ಮಹಿಳೆಯರು, ಸಂಘಟನೆಗಳ ನಾಯಕರು, ಆ ಊರಿನ ಯಜಮಾನರು ಎಲ್ಲರೂ ಸೇರಿದ್ದರು. ನಾನು ಸುಮಾರು ಅರ್ಧ ಗಂಟೆಗಳ ಕಾಲ ಮಾತಾಡಿದೆ. ಮಾತಾಡಿದೆ ಅನ್ನುವುದಕ್ಕಿಂತ ನಾನು ಬರೆದುಕೊಂಡಿದ್ದನ್ನು ಓದಿದೆ ಅನ್ನಬಹುದು. ನಾನೇ ಚಕಿತನಾಗುವಂತೆ ಎಲ್ಲರೂ ಆಲಿಸಿದರು. ಸಭೆ ಮುಗಿದ ಮೇಲೆ ನಾಕಾರು ಹುಡುಗರು –“ನಮಗೆ ಅರ್ಥವಾಯ್ತು. ನಾವು ಬಿಜೆಪಿಗೆ ಮತ ನೀಡುವುದಿಲ್ಲ” ಅಂದರು. ಆಮೇಲೆ ಹತ್ತಾರು ಜನ ತರುಣರು ರಾತ್ರಿ 12.30ರವರೆಗೆ ಅಂದು ನಾನು ಹೇಳಿದ್ದ ಮುಖ್ಯ ಮಾತೊಂದನ್ನು ಚರ್ಚಿಸುತ್ತಿದ್ದರು ಎಂದು ತಿಳಿದು ಬಂತು. ತಗಡೂರು ಸಭೆಯಲ್ಲಿ ಹೇಳಿದ್ದ ಮಾತುಗಳ ಸಾರಾಂಶ ಏನೆಂದರೆ- “ಈ 2023ರ ವಿಧಾಸಭಾ ಚುನಾವಣೆ ಮತ್ತು ಮುಂಬರುವ 2024ರ ಲೋಕಸಭಾ ಚುನಾವಣೆ ನಿರ್ಣಾಯಕ. ಇಂದಿನ ರಾಜಕಾರಣದ ಒಳಹೊಕ್ಕು ನೋಡಿದರೆ, ಇಂದಿನ ಚುನಾವಣೆ ವ್ಯಕ್ತಿ ವ್ಯಕ್ತಿಗಳ ನಡುವೆ ಅಲ್ಲ. ಪಕ್ಷ ಪಕ್ಷಗಳ ನಡುವೆಯೂ ಅಲ್ಲ. ಇಂದಿನ ಸ್ಪರ್ಧೆ ನಡೆಯುತ್ತಿರುವುದು ಸಮಾನತೆಯ ಹಾಲಿ ಸಂವಿಧಾನ V/S ಅಸಮಾನತೆಯ ಮಾಜಿ ಮನುಧರ್ಮಶಾಸ್ತ್ರ ಸಂವಿಧಾನಗಳ ನಡುವೆ. ಮನುಧರ್ಮ ಶಾಸ್ತ್ರದ ಭಕ್ತರಾದ ಸಂಘಪರಿವಾರ ಬಿಜೆಪಿ ಪಕ್ಷವು ಅಧಿಕಾರಕ್ಕೆ ಬಂದರೆ, ಆ ಮನುಧರ್ಮ ಶಾಸ್ತ್ರದಂತೆ ಒಕ್ಕಲಿಗರು, ಲಿಂಗಾಯಿತರು, ತಳಸಮುದಾಯದವರು ಮತ್ತೆ ಸೇವಕರಾಗಬೇಕಾಗುತ್ತದೆ. ಆಗ ದಲಿತರು, ಅಲೆಮಾರಿ, ಆದಿವಾಸಿಗಳು ಊರಾಚೆ ತಳ್ಳಲ್ಪಡುತ್ತಾರೆ, ನೆನಪಿಡಿ” –ಎಂದು ಹೇಳಿದ್ದೆ. ಈಗ ಬಿಜೆಪಿ ಸರ್ಕಾರಗಳು ತರುತ್ತಿರುವ ಕಾಯ್ದೆಗಳನ್ನು ಮೂಸಿ ನೋಡಿದರೂ, ಅಲ್ಲಿ ಮನುಧರ್ಮ ಶಾಸ್ತ್ರದ ವಾಸನೆ ಇರುವುದನ್ನು ಗುರುತಿಸಬಹುದು. ಹೀಗಿರುವಾಗ, ಸ್ನೇಹಿತರೇ ಸಂಘಪರಿವಾರ ಬಿಜೆಪಿಯನ್ನು ಸೋಲಿಸಲೇಬೇಕು. ಅಂಬೇಡ್ಕರ್ ನೇತೃತ್ವದಲ್ಲಿ ರಚಿಸಿದ ಭಾರತದ ಸಂವಿಧಾನವನ್ನು ಪವಿತ್ರ ಎಂದು ಭಾವಿಸಿರುವ ಕಾಂಗ್ರೆಸ್‌ಗೆ, ಇಂದಿನ ಪರಿಸ್ಥಿತಿಯಲ್ಲಿ ಎಷ್ಟೇ ಭಿನ್ನಾಭಿಪ್ರಾಯ ಇದ್ದರೂ ಬೆಂಬಲ ನೀಡಬೇಕಾಗಿದೆ. ಸಂವಿಧಾನ ವಿರೋಧಿ ಬಿಜೆಪಿಯನ್ನು ಸೋಲಿಸಿ ನಾವು ಉಳಿಯಬೇಕಾಗಿದೆ ಎಂದರು.

ಇದನ್ನೂ ಓದಿ: ‘ಬಿಜೆಪಿಗೆ ಮತ ಹಾಕದಿದ್ದರೆ ಕೇಂದ್ರದ ಯೋಜನೆಗಳು ಬಂದ್’; ನಡ್ಡಾ ಬೆದರಿಕೆಗೆ ಜನಾಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....