Homeಅಂತರಾಷ್ಟ್ರೀಯಪ್ರತಿಭಟನೆಯ ಹಕ್ಕಿನ ಬಗ್ಗೆ ‘ಮಿಸ್‌ ಯುನಿವರ್ಸ್’ ವೇದಿಕೆಯಲ್ಲಿ ಮಾತನಾಡಿದ ಭಾರತವನ್ನು ಪ್ರತಿನಿಧಿಸಿದ ಸ್ಪರ್ಧಿ!

ಪ್ರತಿಭಟನೆಯ ಹಕ್ಕಿನ ಬಗ್ಗೆ ‘ಮಿಸ್‌ ಯುನಿವರ್ಸ್’ ವೇದಿಕೆಯಲ್ಲಿ ಮಾತನಾಡಿದ ಭಾರತವನ್ನು ಪ್ರತಿನಿಧಿಸಿದ ಸ್ಪರ್ಧಿ!

- Advertisement -
- Advertisement -

69 ನೇ ‘ಮಿಸ್ ಯೂನಿವರ್ಸ್’ ಸ್ಪರ್ಧೆಯು ಅಮೆರಿಕದ ಫ್ಲೋರಿಡಾದಲ್ಲಿ ಸೋಮವಾರ ನಡೆದಿದ್ದು, ಅಂತಿಮ ಸುತ್ತಿನ ಆಯ್ಕೆಯಲ್ಲಿ 26 ವರ್ಷದ ಮೆಕ್ಸಿಕೊದ ಆಂಡ್ರಿಯಾ ಮೆಜಾ ವಿಶ್ವ ಸುಂದರಿ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. ಬ್ರೆಜಿಲ್‌ನ ಜೂಲಿಯಾ ಗಾಮಾ ಎರಡನೆ ಸ್ಥಾನಕ್ಕೆ ಆಯ್ಕೆಯಾಗಿದ್ದು, ಪೆರುವಿನ ಜಾನಿಕ್ ಮಾಸೆಟಾ ಮೂರನೆ ಸ್ಥಾನಕ್ಕೆ ಹಾಗೂ ಭಾರತವನ್ನು ಪ್ರತಿನಿಧಿಸಿದ್ದ 22 ವರ್ಷದ ಆಡ್ಲೈನ್‌ ಕ್ಯಾಸ್ಟೆಲಿನೊ ನಾಲ್ಕನೆ ಸ್ಥಾನವನ್ನು ಅಲಂಕರಿಸಿದರು.

ಭಾರತವನ್ನು ಪ್ರತಿನಿಧಿಸಿದ್ದ ಆಡ್ಲೈನ್‌ ಕ್ಯಾಸ್ಟೆಲಿನೊ ಅವರಿಗೆ ಅಂತಿಮ ಪ್ರಶ್ನೋತ್ತರ ಸುತ್ತಿನಲ್ಲಿ, “ದೇಶಗಳು ತಮ್ಮ ಆರ್ಥಿಕತೆಯ ಮೇಲೆ ಒತ್ತಡದ ಹೊರತಾಗಿಯೂ ಕೊರೊನಾ ಕಾರಣಕ್ಕಾಗಿ ಲಾಕ್‌ಡೌನ್‌ ಮಾಡಬೇಕೆ ಅಥವಾ ಅವರು ತಮ್ಮ ಗಡಿಗಳನ್ನು ತೆರೆಯಬೇಕೆ” ಎಂದು ಪ್ರಶ್ನಿಸಲಾಯಿತು.

ಇದನ್ನೂ ಓದಿ: ಅಂಬೇಡ್ಕರ್: ಮಾನವ ಹಕ್ಕುಗಳು ಮತ್ತು ಸಾಮಾಜಿಕ ನ್ಯಾಯದ ಹೋರಾಟಗಾರ

ಇದಕ್ಕೆ ಉತ್ತರಿಸಿದ ಆಡ್ಲೈನ್ ​​ಕ್ಯಾಸ್ಟೆಲಿನೊ, “ಗುಡ್ ಈವ್ನಿಂಗ್ ಯುನಿವರ್ಸ್. ನಾನು ಭಾರತದವಳಾಗಿದ್ದು ಭಾರತವು ಇದೀಗ ಅನುಭವಿಸುತ್ತಿರುವುದಕ್ಕೆ ಸಾಕ್ಷಿಯಾಗಿದ್ದೇನೆ. ಪ್ರೀತಿಪಾತ್ರರ ಆರೋಗ್ಯಕ್ಕಿಂತ ಏನೂ ಮುಖ್ಯವಲ್ಲ ಎಂದು ಅರಿತುಕೊಂಡಿದ್ದೇನೆ. ಆರ್ಥಿಕತೆ ಮತ್ತು ಆರೋಗ್ಯದ ನಡುವಿನ ಸಮತೋಲನವನ್ನು ಕಾಪಾಡಬೇಕು. ಸರ್ಕಾರವು ಜನರೊಂದಿಗೆ ನಿಂತು ಕೈಜೋಡಿಸಿ ಕೆಲಸ ಮಾಡಿದಾಗ ಮಾತ್ರ ಇದನ್ನು ಮಾಡಬಹುದು” ಎಂದು ಹೇಳಿದ್ದಾರೆ.

ಇದರ ನಂತರ ನಡೆದ ‘ಅಂತಿಮ ಹೇಳಿಕೆ’ (ಫೈನಲ್ ಸ್ಟೇಟ್‌ಮೆಂಟ್) ನಲ್ಲಿ ಆಡ್ಲೈನ್‌ ಕ್ಯಾಸ್ಟೆಲಿನೊ ಅವರಿಗೆ, ‘ಅಭಿವ್ಯಕ್ತಿ ಸ್ವಾತಂತ್ಯ್ರ ಮತ್ತು ಪ್ರತಿಭಟಿಸುವ ಹಕ್ಕು’ ಇದರ ಬಗ್ಗೆ ಮಾತನಾಡುವಂತೆ ಕೇಳಲಾಯಿತು.

ಈ ಬಗ್ಗೆ ಮಾತನಾಡಿದ ಅವರು, “ಇತ್ತೀಚಿನ ದಿನಗಳಲ್ಲಿ ನಾವು ಅನೇಕ ಪ್ರತಿಭಟನೆಗಳನ್ನು ನೋಡಿದ್ದೇವೆ. ವಿಶೇಷವಾಗಿ ಮಹಿಳೆಯರು ವರ್ಷದುದ್ದಕ್ಕೂ ಸಮಾನ ಹಕ್ಕುಗಳೊಂದಿಗೆ ನಡೆಸಿದ ಪ್ರತಿಭಟನೆಗಳನ್ನು ನಾನು ಗಮನಸೆಳೆಯಲು ಬಯಸುತ್ತೇನೆ. ಇಂದಿನವರೆಗೂ ಪ್ರತಿಭಟನೆಯಲ್ಲಿ ನಮಗೆ ಮಹಿಳೆಯರ ಕೊರತೆಯಿದೆ. ಅಸಮಾನತೆಯ ವಿರುದ್ದ ಧ್ವನಿ ಎತ್ತಲು ನಮಗೆ ಪ್ರತಿಭಟನೆ ಸಹಾಯ ಮಾಡುತ್ತದೆ. ಇದು ಪ್ರಜಾಪ್ರಭುತ್ವದಲ್ಲಿ ಅಲ್ಪಸಂಖ್ಯಾತರು ತಮ್ಮ ಧ್ವನಿಯನ್ನು ಎತ್ತಲು ಸಹಾಯ ಮಾಡುತ್ತದೆ. ಆದ್ದರಿಂದ ಪ್ರತಿಭಟನೆ ಬಹಳ ಮುಖ್ಯ…” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬೇರೆ ಯಾವುದೇ ಪಕ್ಷ ಅಧಿಕಾರದಲ್ಲಿ ಇದ್ದಿದ್ದರೆ ಪರಿಸ್ಥಿತಿ ನಿರ್ವಹಣೆ ಕಷ್ಟವಾಗುತ್ತಿತ್ತು- ನಳೀನ್ ಕುಮಾರ್‌ ಕಟೀಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...