Homeಅಂತರಾಷ್ಟ್ರೀಯಪ್ರತಿಭಟನೆಯ ಹಕ್ಕಿನ ಬಗ್ಗೆ ‘ಮಿಸ್‌ ಯುನಿವರ್ಸ್’ ವೇದಿಕೆಯಲ್ಲಿ ಮಾತನಾಡಿದ ಭಾರತವನ್ನು ಪ್ರತಿನಿಧಿಸಿದ ಸ್ಪರ್ಧಿ!

ಪ್ರತಿಭಟನೆಯ ಹಕ್ಕಿನ ಬಗ್ಗೆ ‘ಮಿಸ್‌ ಯುನಿವರ್ಸ್’ ವೇದಿಕೆಯಲ್ಲಿ ಮಾತನಾಡಿದ ಭಾರತವನ್ನು ಪ್ರತಿನಿಧಿಸಿದ ಸ್ಪರ್ಧಿ!

- Advertisement -
- Advertisement -

69 ನೇ ‘ಮಿಸ್ ಯೂನಿವರ್ಸ್’ ಸ್ಪರ್ಧೆಯು ಅಮೆರಿಕದ ಫ್ಲೋರಿಡಾದಲ್ಲಿ ಸೋಮವಾರ ನಡೆದಿದ್ದು, ಅಂತಿಮ ಸುತ್ತಿನ ಆಯ್ಕೆಯಲ್ಲಿ 26 ವರ್ಷದ ಮೆಕ್ಸಿಕೊದ ಆಂಡ್ರಿಯಾ ಮೆಜಾ ವಿಶ್ವ ಸುಂದರಿ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. ಬ್ರೆಜಿಲ್‌ನ ಜೂಲಿಯಾ ಗಾಮಾ ಎರಡನೆ ಸ್ಥಾನಕ್ಕೆ ಆಯ್ಕೆಯಾಗಿದ್ದು, ಪೆರುವಿನ ಜಾನಿಕ್ ಮಾಸೆಟಾ ಮೂರನೆ ಸ್ಥಾನಕ್ಕೆ ಹಾಗೂ ಭಾರತವನ್ನು ಪ್ರತಿನಿಧಿಸಿದ್ದ 22 ವರ್ಷದ ಆಡ್ಲೈನ್‌ ಕ್ಯಾಸ್ಟೆಲಿನೊ ನಾಲ್ಕನೆ ಸ್ಥಾನವನ್ನು ಅಲಂಕರಿಸಿದರು.

ಭಾರತವನ್ನು ಪ್ರತಿನಿಧಿಸಿದ್ದ ಆಡ್ಲೈನ್‌ ಕ್ಯಾಸ್ಟೆಲಿನೊ ಅವರಿಗೆ ಅಂತಿಮ ಪ್ರಶ್ನೋತ್ತರ ಸುತ್ತಿನಲ್ಲಿ, “ದೇಶಗಳು ತಮ್ಮ ಆರ್ಥಿಕತೆಯ ಮೇಲೆ ಒತ್ತಡದ ಹೊರತಾಗಿಯೂ ಕೊರೊನಾ ಕಾರಣಕ್ಕಾಗಿ ಲಾಕ್‌ಡೌನ್‌ ಮಾಡಬೇಕೆ ಅಥವಾ ಅವರು ತಮ್ಮ ಗಡಿಗಳನ್ನು ತೆರೆಯಬೇಕೆ” ಎಂದು ಪ್ರಶ್ನಿಸಲಾಯಿತು.

ಇದನ್ನೂ ಓದಿ: ಅಂಬೇಡ್ಕರ್: ಮಾನವ ಹಕ್ಕುಗಳು ಮತ್ತು ಸಾಮಾಜಿಕ ನ್ಯಾಯದ ಹೋರಾಟಗಾರ

ಇದಕ್ಕೆ ಉತ್ತರಿಸಿದ ಆಡ್ಲೈನ್ ​​ಕ್ಯಾಸ್ಟೆಲಿನೊ, “ಗುಡ್ ಈವ್ನಿಂಗ್ ಯುನಿವರ್ಸ್. ನಾನು ಭಾರತದವಳಾಗಿದ್ದು ಭಾರತವು ಇದೀಗ ಅನುಭವಿಸುತ್ತಿರುವುದಕ್ಕೆ ಸಾಕ್ಷಿಯಾಗಿದ್ದೇನೆ. ಪ್ರೀತಿಪಾತ್ರರ ಆರೋಗ್ಯಕ್ಕಿಂತ ಏನೂ ಮುಖ್ಯವಲ್ಲ ಎಂದು ಅರಿತುಕೊಂಡಿದ್ದೇನೆ. ಆರ್ಥಿಕತೆ ಮತ್ತು ಆರೋಗ್ಯದ ನಡುವಿನ ಸಮತೋಲನವನ್ನು ಕಾಪಾಡಬೇಕು. ಸರ್ಕಾರವು ಜನರೊಂದಿಗೆ ನಿಂತು ಕೈಜೋಡಿಸಿ ಕೆಲಸ ಮಾಡಿದಾಗ ಮಾತ್ರ ಇದನ್ನು ಮಾಡಬಹುದು” ಎಂದು ಹೇಳಿದ್ದಾರೆ.

ಇದರ ನಂತರ ನಡೆದ ‘ಅಂತಿಮ ಹೇಳಿಕೆ’ (ಫೈನಲ್ ಸ್ಟೇಟ್‌ಮೆಂಟ್) ನಲ್ಲಿ ಆಡ್ಲೈನ್‌ ಕ್ಯಾಸ್ಟೆಲಿನೊ ಅವರಿಗೆ, ‘ಅಭಿವ್ಯಕ್ತಿ ಸ್ವಾತಂತ್ಯ್ರ ಮತ್ತು ಪ್ರತಿಭಟಿಸುವ ಹಕ್ಕು’ ಇದರ ಬಗ್ಗೆ ಮಾತನಾಡುವಂತೆ ಕೇಳಲಾಯಿತು.

ಈ ಬಗ್ಗೆ ಮಾತನಾಡಿದ ಅವರು, “ಇತ್ತೀಚಿನ ದಿನಗಳಲ್ಲಿ ನಾವು ಅನೇಕ ಪ್ರತಿಭಟನೆಗಳನ್ನು ನೋಡಿದ್ದೇವೆ. ವಿಶೇಷವಾಗಿ ಮಹಿಳೆಯರು ವರ್ಷದುದ್ದಕ್ಕೂ ಸಮಾನ ಹಕ್ಕುಗಳೊಂದಿಗೆ ನಡೆಸಿದ ಪ್ರತಿಭಟನೆಗಳನ್ನು ನಾನು ಗಮನಸೆಳೆಯಲು ಬಯಸುತ್ತೇನೆ. ಇಂದಿನವರೆಗೂ ಪ್ರತಿಭಟನೆಯಲ್ಲಿ ನಮಗೆ ಮಹಿಳೆಯರ ಕೊರತೆಯಿದೆ. ಅಸಮಾನತೆಯ ವಿರುದ್ದ ಧ್ವನಿ ಎತ್ತಲು ನಮಗೆ ಪ್ರತಿಭಟನೆ ಸಹಾಯ ಮಾಡುತ್ತದೆ. ಇದು ಪ್ರಜಾಪ್ರಭುತ್ವದಲ್ಲಿ ಅಲ್ಪಸಂಖ್ಯಾತರು ತಮ್ಮ ಧ್ವನಿಯನ್ನು ಎತ್ತಲು ಸಹಾಯ ಮಾಡುತ್ತದೆ. ಆದ್ದರಿಂದ ಪ್ರತಿಭಟನೆ ಬಹಳ ಮುಖ್ಯ…” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬೇರೆ ಯಾವುದೇ ಪಕ್ಷ ಅಧಿಕಾರದಲ್ಲಿ ಇದ್ದಿದ್ದರೆ ಪರಿಸ್ಥಿತಿ ನಿರ್ವಹಣೆ ಕಷ್ಟವಾಗುತ್ತಿತ್ತು- ನಳೀನ್ ಕುಮಾರ್‌ ಕಟೀಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...