Homeಚಳವಳಿವಿವಾದಾತ್ಮಕ ಕೃಷಿ ಕಾಯ್ದೆಗಳು: ರೈತಸಂಘಟನೆಗಳನ್ನು ಮತ್ತೊಮ್ಮೆ ಚರ್ಚೆಗೆ ಆಹ್ವಾನಿಸಿದ ಕೇಂದ್ರ!

ವಿವಾದಾತ್ಮಕ ಕೃಷಿ ಕಾಯ್ದೆಗಳು: ರೈತಸಂಘಟನೆಗಳನ್ನು ಮತ್ತೊಮ್ಮೆ ಚರ್ಚೆಗೆ ಆಹ್ವಾನಿಸಿದ ಕೇಂದ್ರ!

ರೈತರ ಪ್ರತಿಭಟನೆಗೆ ಮಣಿದಂತೆ ಕಂಡುಬಂದಿರುವ ಕೇಂದ್ರ ಸರ್ಕಾರ, 30 ರೈತ ಸಂಘಟನೆಗಳಲ್ಲಿ 29 ಸಂಘಟನೆಗಳ ಮುಖಂಡರಿಗೆ ಪತ್ರ ಬರೆದಿದೆ.

- Advertisement -
- Advertisement -

ಕೃಷಿ ಸಂಬಂಧ ಇತ್ತೀಚೆಗೆ ಅಂಗೀಕರಿಸಿರುವ ವಿವಾದಾತ್ಮಕ ಕೃಷಿ ಕಾನೂನುಗಳ ಕುರಿತು ಚರ್ಚೆಸಲು ರೈತ ಮುಖಂಡರು ಭಾಗವಹಿಸಬೇಕೆಂದು ಕೇಂದ್ರ ಸರ್ಕಾರ ಪಂಜಾಬ್ ಮತ್ತು ಹರಿಯಾಣ ರಾಜ್ಯಗಳ ರೈತ ಸಂಘಟನೆಗಳಿಗೆ ಎರಡನೇ ಬಾರಿಗೆ ಪತ್ರ ಬರೆದು ಆಹ್ವಾನಿಸಿದೆ.

ಅಗತ್ಯ ವಸ್ತುಗಳ ಕಾಯ್ದೆ ತಿದ್ದುಪಡಿ ಸೇರಿದಂತೆ, ಕೃಷಿ ಸಂಬಂಧಿ ಕಾಯ್ದೆಗಳ ತಿದ್ದುಪಡಿಗಳನ್ನು ಕೇಂದ್ರ ಸರ್ಕಾರ ರಾಜ್ಯಸಭೆಯಲ್ಲಿ ಧ್ವನಿ ಮತದ ಮೂಲಕ ಅಂಗೀಕರಿಸಿತ್ತು. ಇದಕ್ಕೆ ಪಂಜಾಬ್ ಮತ್ತು ಹರಿಯಾಣದಲ್ಲಿ ರೈತ ಸಂಘಟನೆಗಳಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು.

ಇದನ್ನೂ ಓದಿ: ರೈತವಿರೋಧಿ ಸುಗ್ರಿವಾಜ್ಞೆಗಳು ಬೇಡ: ಕೇಂದ್ರದ ವಿರುದ್ಧ ತಿರುಗಿಬಿದ್ದ ರೈತರು

ರೈತರ ಪ್ರತಿಭಟನೆಗೆ ಮಣಿದಂತೆ ಕಂಡುಬಂದಿರುವ ಕೇಂದ್ರ ಸರ್ಕಾರ, 30 ರೈತ ಸಂಘಟನೆಗಳಲ್ಲಿ 29 ಸಂಘಟನೆಗಳ ಮುಖಂಡರಿಗೆ ಕೇಂದ್ರ ಸರ್ಕಾರದ ಕೃಷಿ ಸಹಕಾರ ಮತ್ತು ರೈತ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಸಂಜಯ್ ಅಗರ್ ವಾಲ್ ಪತ್ರ ಬರೆದು ಸಭೆಯಲ್ಲಿ ಭಾಗವಹಿಸಿ ಮಾತುಕತೆ ನಡೆಸಬೇಕು ಎಂಬ ಮನವಿಯನ್ನು ಮಾಡಿದ್ದಾರೆ ಎಂದು ದಿ ವೈರ್.ಇನ್ ವರದಿ ಮಾಡಿದೆ.

ಅಕ್ಟೋಬರ್ 14ರಂದು ಬೆಳಗ್ಗೆ 11.30ಕ್ಕೆ ನವದೆಹಲಿಯ ಕೃಷಿ ಸಚಿವಾಲಯದ ಕೊಠಡಿ ಸಂಖ್ಯೆ 142ರಲ್ಲಿ ರೈತ ಮುಖಂಡರ ಸಭೆ ಕರೆಯಲಾಗಿದೆ. ಹಾಗಾಗಿ ದಯವಿಟ್ಟು ಪ್ರತಿಭಟನಾನಿರತ ರೈತ ಮುಖಂಡರು ಸರ್ಕಾರದ ಜೊತೆ ಚರ್ಚಿಸಲು ಆಗಮಿಸಬೇಕು ಎಂದು ಎರಡನೇ ಬಾರಿಗೆ ಕೇಂದ್ರ ಸರ್ಕಾರ ಮನವಿ ಮಾಡಿದೆ.

ಇದನ್ನೂ ಓದಿ: ಮಂಡ್ಯ: ರೈತ ಮಸೂದೆಗಳನ್ನು ವಿರೋಧಿಸಿ ರಾಜ್ಯ ಮಟ್ಟದ ಬೃಹತ್ ಸಮಾವೇಶ

ಆದರೆ ಈ ಸಭೆಯಲ್ಲಿ ಭಾಗವಹಿಸಬೇಕೇ ಅಥವಾ ಬೇಡವೇ ಎಂಬ ಬಗ್ಗೆ ಪ್ರತಿಭಟನಾನಿರತ ರೈತ ಸಂಘಟನೆಗಳು ಇದುವರೆಗೆ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ರೈತ ನಾಯಕ ಜಗಮೋಹನ್ ಸಿಂಗ್ ಹೇಳಿದ್ದಾರೆ.

ಅಕ್ಟೋಬರ್ 14ರಂದು ನವದೆಹಲಿಯಲ್ಲಿ ನಡೆಯಲಿರುವ ಸಭೆಯಲ್ಲಿ ರೈತ ಮುಖಂಡರು ಭಾಗವಹಿಸುವ ಅಥವಾ ಭಾಗವಹಿಸದೇ ಇರುವ ಬಗ್ಗೆ ಅಕ್ಟೋಬರ್ 13ರಂದು ನಿರ್ಧಾರ ಕೈಗೊಳ್ಳಲಾಗುವುದು ಎಂದು ಪ್ರತಿಭಟನಾನಿರತರು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ:  ಕೃಷಿ ಮಸೂದೆ ವಿರೋಧಿಸುವ ರೈತರನ್ನು ಭಯೋತ್ಪಾದಕರು ಎಂದ ನಟಿ ಕಂಗನಾ!

ಮೊದಲು ಕೃಷಿ ಇಲಾಖೆ ಅಧಿಕಾರಿಗಳು ರೈತ ನಾಯಕರಿಗೆ ಪತ್ರ ಬರೆದಿದ್ದರು. ಅಧಿಕಾರಿಗಳ ಜೊತೆ ಮಾತುಕತೆ ನಡೆಸುವುದಿಲ್ಲ ಎಂದು ರೈತ ನಾಯಕರು ಈ ಆಹ್ವಾನವನ್ನು ತಿರಸ್ಕರಿಸಿದ್ದರು. ಕೃಷಿ ಸಚಿವರು ಮತ್ತು ಪ್ರಧಾನಿಯಿಂದ ಸೂಕ್ತ ಆಹ್ವಾನ ಬಂದರೆ ಮಾತ್ರ ಮಾತುಕತೆಗೆ ಸಿದ್ದ ಎಂದು ರೈತ ನಾಯಕರು ಹೇಳಿದ್ದರು. ಇದೀಗ ಕೃಷಿ ಸಚಿವಾಲಯದಿಂದ ಎರಡನೇ ಪತ್ರ ಬಂದಿದೆ. ಈ ಪತ್ರಕ್ಕೆ ರೈತ ನಾಯಕರು ಸ್ಪಂದಿಸುವರೇ ಎಂಬುದನ್ನು ನೋಡಬೇಕಾಗಿದೆ.

ಇದನ್ನೂ ಓದಿ: ರೈತವಿರೋಧಿ ಕಾಯ್ದೆಗಳನ್ನು ಹಿಂಪಡೆಯದಿದ್ದರೆ, ಯಡಿಯೂರಪ್ಪನವರ ಕುರ್ಚಿ ಉಳಿಯುವುದಿಲ್ಲ: ಬಡಗಲಪುರ ನಾಗೇಂದ್ರ

ಈ ನಡುವೆ ಪಂಜಾಬ್ ಸರ್ಕಾರ ಪ್ರತಿಭಟನಾನಿರತ ರೈತರನ್ನು ರೈಲ್ ರೋಕೋ ಪ್ರತಿಭಟನೆಯನ್ನು ಕೈಬಿಡುವಂತೆ ಮನವಿ ಮಾಡಿದೆ. ರೈತರ ಪ್ರತಿಭಟನೆಯಿಂದ ಕಲ್ಲಿದ್ದಲು ಸಾಗಾಣೆಗೆ ಅಡ್ಡಿಯಾಗಿದ್ದು, ಥರ್ಮಲ್ ವಿದ್ಯುತ್ ಉತ್ಪಾದನೆಯ ಮೇಲೆ ಪರಿಣಾಮ ಬೀರಲಿದೆ ಎಂದು ಪಂಜಾಬ್ ಸರ್ಕಾರ ತಿಳಿಸಿದೆ.

ಸೆಪ್ಟೆಂಬರ್ ಮಧ್ಯಭಾಗದಿಂದಲೂ ಪಂಜಾಬ್ ಮತ್ತು ಹರಿಯಾಣದಲ್ಲಿ ರೈತ ಸಂಘಟನೆಗಳು ತೀವ್ರ ಸ್ವರೂಪದ ಪ್ರತಿಭಟನೆಯನ್ನು ನಡೆಸುತ್ತಿವೆ. ದೇಶಾದ್ಯಂತ ಕೇಂದ್ರ ಸರ್ಕಾರ ಅಂಗೀಕರಿಸಿರುವ ಕೃಷಿ ಸಂಬಂಧಿ ಕಾಯ್ದೆಗಳಿಗೆ ತೀವ್ರ ವಿರೋಧ ವ್ಯಕ್ತವಾಗಿದ್ದು, ರೈತ ಸಂಘಟನೆಗಳಿಂದ ಇನ್ನೂ ಪ್ರತಿಭಟನೆ ವ್ಯಕ್ತವಾಗುತ್ತಲೇ ಇದೆ.


ಇದನ್ನೂ ಓದಿ: ಮಸೂದೆ ವಿರೋಧಿಗಳು ರೈತರನ್ನು ತಪ್ಪು ದಾರಿಗೆ ಎಳೆಯುತ್ತಿದ್ದಾರೆ: ಪ್ರಧಾನಿ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...