Homeಚಳವಳಿವಿವಾದಾತ್ಮಕ ಕೃಷಿ ಕಾಯ್ದೆಗಳು: ರೈತಸಂಘಟನೆಗಳನ್ನು ಮತ್ತೊಮ್ಮೆ ಚರ್ಚೆಗೆ ಆಹ್ವಾನಿಸಿದ ಕೇಂದ್ರ!

ವಿವಾದಾತ್ಮಕ ಕೃಷಿ ಕಾಯ್ದೆಗಳು: ರೈತಸಂಘಟನೆಗಳನ್ನು ಮತ್ತೊಮ್ಮೆ ಚರ್ಚೆಗೆ ಆಹ್ವಾನಿಸಿದ ಕೇಂದ್ರ!

ರೈತರ ಪ್ರತಿಭಟನೆಗೆ ಮಣಿದಂತೆ ಕಂಡುಬಂದಿರುವ ಕೇಂದ್ರ ಸರ್ಕಾರ, 30 ರೈತ ಸಂಘಟನೆಗಳಲ್ಲಿ 29 ಸಂಘಟನೆಗಳ ಮುಖಂಡರಿಗೆ ಪತ್ರ ಬರೆದಿದೆ.

- Advertisement -
- Advertisement -

ಕೃಷಿ ಸಂಬಂಧ ಇತ್ತೀಚೆಗೆ ಅಂಗೀಕರಿಸಿರುವ ವಿವಾದಾತ್ಮಕ ಕೃಷಿ ಕಾನೂನುಗಳ ಕುರಿತು ಚರ್ಚೆಸಲು ರೈತ ಮುಖಂಡರು ಭಾಗವಹಿಸಬೇಕೆಂದು ಕೇಂದ್ರ ಸರ್ಕಾರ ಪಂಜಾಬ್ ಮತ್ತು ಹರಿಯಾಣ ರಾಜ್ಯಗಳ ರೈತ ಸಂಘಟನೆಗಳಿಗೆ ಎರಡನೇ ಬಾರಿಗೆ ಪತ್ರ ಬರೆದು ಆಹ್ವಾನಿಸಿದೆ.

ಅಗತ್ಯ ವಸ್ತುಗಳ ಕಾಯ್ದೆ ತಿದ್ದುಪಡಿ ಸೇರಿದಂತೆ, ಕೃಷಿ ಸಂಬಂಧಿ ಕಾಯ್ದೆಗಳ ತಿದ್ದುಪಡಿಗಳನ್ನು ಕೇಂದ್ರ ಸರ್ಕಾರ ರಾಜ್ಯಸಭೆಯಲ್ಲಿ ಧ್ವನಿ ಮತದ ಮೂಲಕ ಅಂಗೀಕರಿಸಿತ್ತು. ಇದಕ್ಕೆ ಪಂಜಾಬ್ ಮತ್ತು ಹರಿಯಾಣದಲ್ಲಿ ರೈತ ಸಂಘಟನೆಗಳಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು.

ಇದನ್ನೂ ಓದಿ: ರೈತವಿರೋಧಿ ಸುಗ್ರಿವಾಜ್ಞೆಗಳು ಬೇಡ: ಕೇಂದ್ರದ ವಿರುದ್ಧ ತಿರುಗಿಬಿದ್ದ ರೈತರು

ರೈತರ ಪ್ರತಿಭಟನೆಗೆ ಮಣಿದಂತೆ ಕಂಡುಬಂದಿರುವ ಕೇಂದ್ರ ಸರ್ಕಾರ, 30 ರೈತ ಸಂಘಟನೆಗಳಲ್ಲಿ 29 ಸಂಘಟನೆಗಳ ಮುಖಂಡರಿಗೆ ಕೇಂದ್ರ ಸರ್ಕಾರದ ಕೃಷಿ ಸಹಕಾರ ಮತ್ತು ರೈತ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಸಂಜಯ್ ಅಗರ್ ವಾಲ್ ಪತ್ರ ಬರೆದು ಸಭೆಯಲ್ಲಿ ಭಾಗವಹಿಸಿ ಮಾತುಕತೆ ನಡೆಸಬೇಕು ಎಂಬ ಮನವಿಯನ್ನು ಮಾಡಿದ್ದಾರೆ ಎಂದು ದಿ ವೈರ್.ಇನ್ ವರದಿ ಮಾಡಿದೆ.

ಅಕ್ಟೋಬರ್ 14ರಂದು ಬೆಳಗ್ಗೆ 11.30ಕ್ಕೆ ನವದೆಹಲಿಯ ಕೃಷಿ ಸಚಿವಾಲಯದ ಕೊಠಡಿ ಸಂಖ್ಯೆ 142ರಲ್ಲಿ ರೈತ ಮುಖಂಡರ ಸಭೆ ಕರೆಯಲಾಗಿದೆ. ಹಾಗಾಗಿ ದಯವಿಟ್ಟು ಪ್ರತಿಭಟನಾನಿರತ ರೈತ ಮುಖಂಡರು ಸರ್ಕಾರದ ಜೊತೆ ಚರ್ಚಿಸಲು ಆಗಮಿಸಬೇಕು ಎಂದು ಎರಡನೇ ಬಾರಿಗೆ ಕೇಂದ್ರ ಸರ್ಕಾರ ಮನವಿ ಮಾಡಿದೆ.

ಇದನ್ನೂ ಓದಿ: ಮಂಡ್ಯ: ರೈತ ಮಸೂದೆಗಳನ್ನು ವಿರೋಧಿಸಿ ರಾಜ್ಯ ಮಟ್ಟದ ಬೃಹತ್ ಸಮಾವೇಶ

ಆದರೆ ಈ ಸಭೆಯಲ್ಲಿ ಭಾಗವಹಿಸಬೇಕೇ ಅಥವಾ ಬೇಡವೇ ಎಂಬ ಬಗ್ಗೆ ಪ್ರತಿಭಟನಾನಿರತ ರೈತ ಸಂಘಟನೆಗಳು ಇದುವರೆಗೆ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ರೈತ ನಾಯಕ ಜಗಮೋಹನ್ ಸಿಂಗ್ ಹೇಳಿದ್ದಾರೆ.

ಅಕ್ಟೋಬರ್ 14ರಂದು ನವದೆಹಲಿಯಲ್ಲಿ ನಡೆಯಲಿರುವ ಸಭೆಯಲ್ಲಿ ರೈತ ಮುಖಂಡರು ಭಾಗವಹಿಸುವ ಅಥವಾ ಭಾಗವಹಿಸದೇ ಇರುವ ಬಗ್ಗೆ ಅಕ್ಟೋಬರ್ 13ರಂದು ನಿರ್ಧಾರ ಕೈಗೊಳ್ಳಲಾಗುವುದು ಎಂದು ಪ್ರತಿಭಟನಾನಿರತರು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ:  ಕೃಷಿ ಮಸೂದೆ ವಿರೋಧಿಸುವ ರೈತರನ್ನು ಭಯೋತ್ಪಾದಕರು ಎಂದ ನಟಿ ಕಂಗನಾ!

ಮೊದಲು ಕೃಷಿ ಇಲಾಖೆ ಅಧಿಕಾರಿಗಳು ರೈತ ನಾಯಕರಿಗೆ ಪತ್ರ ಬರೆದಿದ್ದರು. ಅಧಿಕಾರಿಗಳ ಜೊತೆ ಮಾತುಕತೆ ನಡೆಸುವುದಿಲ್ಲ ಎಂದು ರೈತ ನಾಯಕರು ಈ ಆಹ್ವಾನವನ್ನು ತಿರಸ್ಕರಿಸಿದ್ದರು. ಕೃಷಿ ಸಚಿವರು ಮತ್ತು ಪ್ರಧಾನಿಯಿಂದ ಸೂಕ್ತ ಆಹ್ವಾನ ಬಂದರೆ ಮಾತ್ರ ಮಾತುಕತೆಗೆ ಸಿದ್ದ ಎಂದು ರೈತ ನಾಯಕರು ಹೇಳಿದ್ದರು. ಇದೀಗ ಕೃಷಿ ಸಚಿವಾಲಯದಿಂದ ಎರಡನೇ ಪತ್ರ ಬಂದಿದೆ. ಈ ಪತ್ರಕ್ಕೆ ರೈತ ನಾಯಕರು ಸ್ಪಂದಿಸುವರೇ ಎಂಬುದನ್ನು ನೋಡಬೇಕಾಗಿದೆ.

ಇದನ್ನೂ ಓದಿ: ರೈತವಿರೋಧಿ ಕಾಯ್ದೆಗಳನ್ನು ಹಿಂಪಡೆಯದಿದ್ದರೆ, ಯಡಿಯೂರಪ್ಪನವರ ಕುರ್ಚಿ ಉಳಿಯುವುದಿಲ್ಲ: ಬಡಗಲಪುರ ನಾಗೇಂದ್ರ

ಈ ನಡುವೆ ಪಂಜಾಬ್ ಸರ್ಕಾರ ಪ್ರತಿಭಟನಾನಿರತ ರೈತರನ್ನು ರೈಲ್ ರೋಕೋ ಪ್ರತಿಭಟನೆಯನ್ನು ಕೈಬಿಡುವಂತೆ ಮನವಿ ಮಾಡಿದೆ. ರೈತರ ಪ್ರತಿಭಟನೆಯಿಂದ ಕಲ್ಲಿದ್ದಲು ಸಾಗಾಣೆಗೆ ಅಡ್ಡಿಯಾಗಿದ್ದು, ಥರ್ಮಲ್ ವಿದ್ಯುತ್ ಉತ್ಪಾದನೆಯ ಮೇಲೆ ಪರಿಣಾಮ ಬೀರಲಿದೆ ಎಂದು ಪಂಜಾಬ್ ಸರ್ಕಾರ ತಿಳಿಸಿದೆ.

ಸೆಪ್ಟೆಂಬರ್ ಮಧ್ಯಭಾಗದಿಂದಲೂ ಪಂಜಾಬ್ ಮತ್ತು ಹರಿಯಾಣದಲ್ಲಿ ರೈತ ಸಂಘಟನೆಗಳು ತೀವ್ರ ಸ್ವರೂಪದ ಪ್ರತಿಭಟನೆಯನ್ನು ನಡೆಸುತ್ತಿವೆ. ದೇಶಾದ್ಯಂತ ಕೇಂದ್ರ ಸರ್ಕಾರ ಅಂಗೀಕರಿಸಿರುವ ಕೃಷಿ ಸಂಬಂಧಿ ಕಾಯ್ದೆಗಳಿಗೆ ತೀವ್ರ ವಿರೋಧ ವ್ಯಕ್ತವಾಗಿದ್ದು, ರೈತ ಸಂಘಟನೆಗಳಿಂದ ಇನ್ನೂ ಪ್ರತಿಭಟನೆ ವ್ಯಕ್ತವಾಗುತ್ತಲೇ ಇದೆ.


ಇದನ್ನೂ ಓದಿ: ಮಸೂದೆ ವಿರೋಧಿಗಳು ರೈತರನ್ನು ತಪ್ಪು ದಾರಿಗೆ ಎಳೆಯುತ್ತಿದ್ದಾರೆ: ಪ್ರಧಾನಿ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...