Homeಮುಖಪುಟಸಿಬಿಎಸ್‌ಇ ಪಠ್ಯ ಕಡಿತ: ಸರ್ಕಾರದ ನಡೆ ಸಮರ್ಥಿಸಿಕೊಂಡ ಸಚಿವ ರಮೇಶ್ ಪೋಖ್ರಿಯಾಲ್

ಸಿಬಿಎಸ್‌ಇ ಪಠ್ಯ ಕಡಿತ: ಸರ್ಕಾರದ ನಡೆ ಸಮರ್ಥಿಸಿಕೊಂಡ ಸಚಿವ ರಮೇಶ್ ಪೋಖ್ರಿಯಾಲ್

ರಾಜಕೀಯ ವಿಜ್ಞಾನ, ಸಮಾಜ ವಿಜ್ಞಾನ ಮತ್ತು ಸಮಾಜ ಶಾಸ್ತ್ರದ ಹೊರತಾಗಿ ಬೇರೆ ಅಧ್ಯಾಯಗಳು ಮತ್ತು ವಿಷಯಗಳನ್ನು ಕೂಡಾ ಕೈಬಿಡಲಾಗಿದೆ ಎಂದು ಡಾ. ಪೋಖ್ರಿಯಾಲ್ ಹೇಳಿದ್ದಾರೆ.

- Advertisement -
- Advertisement -

2020-21ರ ಶೈಕ್ಷಣಿಕ ವರ್ಷಕ್ಕೆ ಪಠ್ಯಕ್ರಮದಿಂದ ಪೌರತ್ವ, ಒಕ್ಕೂಟ ವ್ಯವಸ್ಥೆ, ರಾಷ್ಟ್ರೀಯತೆ ಮತ್ತು ಜಾತ್ಯತೀತತೆಯ ಅಧ್ಯಾಯಗಳನ್ನು ಕೈಬಿಟ್ಟಿದ್ದ CBSE ನಡೆಯನ್ನು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ದಿ ಸಚಿವ ರಮೇಶ್ ನಿಶಾಂಕ್ ಪೋಖ್ರಿಯಾಲ್ ಸಮರ್ಥಿಸಿಕೊಂಡಿದ್ದಾರೆ.

ಪಠ್ಯ ಕೈಬಿಟ್ಟಿರುವುದಕ್ಕೆ ಕೇಳಿಬಂದಿರುವ ಟೀಕೆಗಳ ಕುರಿತು ಪ್ರತಿಕ್ರಿಯಿಸಿರುವ ಅವರು, ಸಮರ್ಪಕ ಮಾಹಿತಿ ಇಲ್ಲದವರು ಬೇಕಂತಲೇ ಟೀಕಿಸುತ್ತಿದ್ದಾರೆ ಎಂದು ದೂರಿದ್ದಾರೆ.

ಈ ಕುರಿತು ಟ್ವಿಟ್ಟರ್‌ನಲ್ಲಿ ಸರಣಿ ಟ್ವೀಟ್ ಮಾಡಿದ ಡಾ. ಪೋಖ್ರಿಯಲ್ “ಶಾಲೆಗಳಿಗೆ ಎನ್‌ಸಿಇಆರ್‌ಟಿ ಪರ್ಯಾಯ ಅಕಾಡೆಮಿಕ್ ಕ್ಯಾಲೆಂಡರ್ ಅನ್ನು ಅನುಸರಿಸಲು ಸೂಚಿಸಿದೆ. ಉಲ್ಲೇಖಿಸಲಾದ ಎಲ್ಲಾ ವಿಷಯಗಳನ್ನು ಒಂದೇ ಅಕಾಡೆಮಿಕ್ ಕ್ಯಾಲೆಂಡರ್ ಅಡಿಯಲ್ಲಿ ಬೋಧಿಸಲಾಗುವುದು. ಕೋವಿಡ್ ಸಾಂಕ್ರಾಮಿಕ ಪರಿಸ್ಥಿತಿಯ ಕಾರಣದಿಂದ ಮಾತ್ರವೇ ಈಗ ಕೆಲವು ಪಠ್ಯಗಳನ್ನು ಕೈಬಿಡಲಾಗುತ್ತದೆ ಎಂದಿದ್ದಾರೆ.

ರಾಷ್ಟ್ರೀಯತೆ, ಸ್ಥಳೀಯ ಸರ್ಕಾರ, ಫೆಡರಲಿಸಂ ಮುಂತಾದ 3-4 ವಿಷಯಗಳನ್ನು ಕೈಬಿಡಲಾಗಿದೆ ಎಂದು ತಪ್ಪಾಗಿ ಗ್ರಹಿಸುವುದು ಮತ್ತು ಸುಳ್ಳು ನಿರೂಪಣೆ ಹರಡಲಾಗುತ್ತಿದೆ. ಆಳವಾಗಿ ಪರಿಶೀಲನೆ ನಡೆಸಿದರೆ ಎಲ್ಲಾ ವಿಷಯಗಳಲ್ಲಿಯೂ ಪಠ್ಯ ಕೈಬಿಟ್ಟಿರುವುದು ಕಾಣುತ್ತದೆ ಎಂದು ಅವರು ಹೇಳಿದ್ದಾರೆ.

ರಾಜಕೀಯ ವಿಜ್ಞಾನ, ಸಮಾಜ ವಿಜ್ಞಾನ ಮತ್ತು ಸಮಾಜ ಶಾಸ್ತ್ರದ ಹೊರತಾಗಿ ಬೇರೆ ಅಧ್ಯಾಯಗಳು ಮತ್ತು ವಿಷಯಗಳನ್ನು ಕೂಡಾ ಕೈಬಿಡಲಾಗಿದೆ ಎಂದು ಡಾ. ಪೋಖ್ರಿಯಾಲ್ ಹೇಳಿದ್ದಾರೆ.

“ಅರ್ಥಶಾಸ್ತ್ರದಲ್ಲಿ ಪ್ರಸರಣದ ಕ್ರಮಗಳು, ಪಾವತಿಗಳ ಸಮತೋಲನ, ಭೌತಶಾಸ್ತ್ರದಲ್ಲಿ ಹೀಟ್ ಎಂಜಿನ್ ಮತ್ತು ರೆಫ್ರಿಜರೇಟರ್, ಶಾಖ ವರ್ಗಾವಣೆ, ಸಂವಹನ ಮತ್ತು ವಿಕಿರಣ ಇತರ ವಿಷಯಗಳನ್ನು ಕೂಡಾ ಪಠ್ಯದಿಂದ ಹೊರಗಿಡಲಾಗಿದೆ” ಎಂದು ಅವರು ಸ್ಪಷ್ಟೀಕರಣ ನೀಡಿದ್ದಾರೆ.

“ಇದು ನನ್ನ ವಿನಮ್ರ ವಿನಂತಿಯಾಗಿದೆ; ಮಕ್ಕಳ ಶಿಕ್ಷಣವು ನಮ್ಮ ಪವಿತ್ರ ಕರ್ತವ್ಯವಾಗಿದ್ದು, ರಾಜಕೀಯವನ್ನು ಶಿಕ್ಷಣದಿಂದ ಹೊರಗಿಟ್ಟು ನಮ್ಮ ಮಕ್ಕಳನ್ನು ಹೆಚ್ಚು ವಿದ್ಯಾವಂತರನ್ನಾಗಿ ಮಾಡೋಣ” ಎಂದು ಅವರು ಹೇಳಿದ್ದಾರೆ.


ಓದಿ: ಪಠ್ಯದಿಂದ ಪೌರತ್ವ, ಒಕ್ಕೂಟ ವ್ಯವಸ್ಥೆ, ರಾಷ್ಟ್ರೀಯತೆ, ಜಾತ್ಯತೀತತೆಯ ಅಧ್ಯಾಯಗಳನ್ನು ಕೈಬಿಟ್ಟ CBSE


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...