Homeಮುಖಪುಟಸಿಬಿಎಸ್‌ಇ ಪಠ್ಯ ಕಡಿತ: ಸರ್ಕಾರದ ನಡೆ ಸಮರ್ಥಿಸಿಕೊಂಡ ಸಚಿವ ರಮೇಶ್ ಪೋಖ್ರಿಯಾಲ್

ಸಿಬಿಎಸ್‌ಇ ಪಠ್ಯ ಕಡಿತ: ಸರ್ಕಾರದ ನಡೆ ಸಮರ್ಥಿಸಿಕೊಂಡ ಸಚಿವ ರಮೇಶ್ ಪೋಖ್ರಿಯಾಲ್

ರಾಜಕೀಯ ವಿಜ್ಞಾನ, ಸಮಾಜ ವಿಜ್ಞಾನ ಮತ್ತು ಸಮಾಜ ಶಾಸ್ತ್ರದ ಹೊರತಾಗಿ ಬೇರೆ ಅಧ್ಯಾಯಗಳು ಮತ್ತು ವಿಷಯಗಳನ್ನು ಕೂಡಾ ಕೈಬಿಡಲಾಗಿದೆ ಎಂದು ಡಾ. ಪೋಖ್ರಿಯಾಲ್ ಹೇಳಿದ್ದಾರೆ.

- Advertisement -
- Advertisement -

2020-21ರ ಶೈಕ್ಷಣಿಕ ವರ್ಷಕ್ಕೆ ಪಠ್ಯಕ್ರಮದಿಂದ ಪೌರತ್ವ, ಒಕ್ಕೂಟ ವ್ಯವಸ್ಥೆ, ರಾಷ್ಟ್ರೀಯತೆ ಮತ್ತು ಜಾತ್ಯತೀತತೆಯ ಅಧ್ಯಾಯಗಳನ್ನು ಕೈಬಿಟ್ಟಿದ್ದ CBSE ನಡೆಯನ್ನು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ದಿ ಸಚಿವ ರಮೇಶ್ ನಿಶಾಂಕ್ ಪೋಖ್ರಿಯಾಲ್ ಸಮರ್ಥಿಸಿಕೊಂಡಿದ್ದಾರೆ.

ಪಠ್ಯ ಕೈಬಿಟ್ಟಿರುವುದಕ್ಕೆ ಕೇಳಿಬಂದಿರುವ ಟೀಕೆಗಳ ಕುರಿತು ಪ್ರತಿಕ್ರಿಯಿಸಿರುವ ಅವರು, ಸಮರ್ಪಕ ಮಾಹಿತಿ ಇಲ್ಲದವರು ಬೇಕಂತಲೇ ಟೀಕಿಸುತ್ತಿದ್ದಾರೆ ಎಂದು ದೂರಿದ್ದಾರೆ.

ಈ ಕುರಿತು ಟ್ವಿಟ್ಟರ್‌ನಲ್ಲಿ ಸರಣಿ ಟ್ವೀಟ್ ಮಾಡಿದ ಡಾ. ಪೋಖ್ರಿಯಲ್ “ಶಾಲೆಗಳಿಗೆ ಎನ್‌ಸಿಇಆರ್‌ಟಿ ಪರ್ಯಾಯ ಅಕಾಡೆಮಿಕ್ ಕ್ಯಾಲೆಂಡರ್ ಅನ್ನು ಅನುಸರಿಸಲು ಸೂಚಿಸಿದೆ. ಉಲ್ಲೇಖಿಸಲಾದ ಎಲ್ಲಾ ವಿಷಯಗಳನ್ನು ಒಂದೇ ಅಕಾಡೆಮಿಕ್ ಕ್ಯಾಲೆಂಡರ್ ಅಡಿಯಲ್ಲಿ ಬೋಧಿಸಲಾಗುವುದು. ಕೋವಿಡ್ ಸಾಂಕ್ರಾಮಿಕ ಪರಿಸ್ಥಿತಿಯ ಕಾರಣದಿಂದ ಮಾತ್ರವೇ ಈಗ ಕೆಲವು ಪಠ್ಯಗಳನ್ನು ಕೈಬಿಡಲಾಗುತ್ತದೆ ಎಂದಿದ್ದಾರೆ.

ರಾಷ್ಟ್ರೀಯತೆ, ಸ್ಥಳೀಯ ಸರ್ಕಾರ, ಫೆಡರಲಿಸಂ ಮುಂತಾದ 3-4 ವಿಷಯಗಳನ್ನು ಕೈಬಿಡಲಾಗಿದೆ ಎಂದು ತಪ್ಪಾಗಿ ಗ್ರಹಿಸುವುದು ಮತ್ತು ಸುಳ್ಳು ನಿರೂಪಣೆ ಹರಡಲಾಗುತ್ತಿದೆ. ಆಳವಾಗಿ ಪರಿಶೀಲನೆ ನಡೆಸಿದರೆ ಎಲ್ಲಾ ವಿಷಯಗಳಲ್ಲಿಯೂ ಪಠ್ಯ ಕೈಬಿಟ್ಟಿರುವುದು ಕಾಣುತ್ತದೆ ಎಂದು ಅವರು ಹೇಳಿದ್ದಾರೆ.

ರಾಜಕೀಯ ವಿಜ್ಞಾನ, ಸಮಾಜ ವಿಜ್ಞಾನ ಮತ್ತು ಸಮಾಜ ಶಾಸ್ತ್ರದ ಹೊರತಾಗಿ ಬೇರೆ ಅಧ್ಯಾಯಗಳು ಮತ್ತು ವಿಷಯಗಳನ್ನು ಕೂಡಾ ಕೈಬಿಡಲಾಗಿದೆ ಎಂದು ಡಾ. ಪೋಖ್ರಿಯಾಲ್ ಹೇಳಿದ್ದಾರೆ.

“ಅರ್ಥಶಾಸ್ತ್ರದಲ್ಲಿ ಪ್ರಸರಣದ ಕ್ರಮಗಳು, ಪಾವತಿಗಳ ಸಮತೋಲನ, ಭೌತಶಾಸ್ತ್ರದಲ್ಲಿ ಹೀಟ್ ಎಂಜಿನ್ ಮತ್ತು ರೆಫ್ರಿಜರೇಟರ್, ಶಾಖ ವರ್ಗಾವಣೆ, ಸಂವಹನ ಮತ್ತು ವಿಕಿರಣ ಇತರ ವಿಷಯಗಳನ್ನು ಕೂಡಾ ಪಠ್ಯದಿಂದ ಹೊರಗಿಡಲಾಗಿದೆ” ಎಂದು ಅವರು ಸ್ಪಷ್ಟೀಕರಣ ನೀಡಿದ್ದಾರೆ.

“ಇದು ನನ್ನ ವಿನಮ್ರ ವಿನಂತಿಯಾಗಿದೆ; ಮಕ್ಕಳ ಶಿಕ್ಷಣವು ನಮ್ಮ ಪವಿತ್ರ ಕರ್ತವ್ಯವಾಗಿದ್ದು, ರಾಜಕೀಯವನ್ನು ಶಿಕ್ಷಣದಿಂದ ಹೊರಗಿಟ್ಟು ನಮ್ಮ ಮಕ್ಕಳನ್ನು ಹೆಚ್ಚು ವಿದ್ಯಾವಂತರನ್ನಾಗಿ ಮಾಡೋಣ” ಎಂದು ಅವರು ಹೇಳಿದ್ದಾರೆ.


ಓದಿ: ಪಠ್ಯದಿಂದ ಪೌರತ್ವ, ಒಕ್ಕೂಟ ವ್ಯವಸ್ಥೆ, ರಾಷ್ಟ್ರೀಯತೆ, ಜಾತ್ಯತೀತತೆಯ ಅಧ್ಯಾಯಗಳನ್ನು ಕೈಬಿಟ್ಟ CBSE


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...