Homeಮುಖಪುಟಕೊರೊನಾ ಸಂಕಟ : ಸಿನಿಮಾ ಮಂದಿಯ ಪೀಕಲಾಟ

ಕೊರೊನಾ ಸಂಕಟ : ಸಿನಿಮಾ ಮಂದಿಯ ಪೀಕಲಾಟ

- Advertisement -
- Advertisement -

ಜಗತ್ತನ್ನೇ ನಿಬ್ಬೆರಗುಗೊಳಿಸಿರುವ ಕೊರೊನಾ ವೈರಸ್, ಶೇರು ಮಾರುಕಟ್ಟೆಯ ಗೂಳಿಯನ್ನೇ ಅಲುಗಾಡಿಸಿದೆ. ದಿನ ಕಳೆದಂತೆ ಕೊರೊನಾ ವೈರಸ್ ಮೇಲಿನ ಆತಂಕ ಹೆಚ್ಚಾಗುತ್ತಲೇ ಇದೆ. ಭಾರತದಲ್ಲೂ ಅಘೋಷಿತ ತುರ್ತುಪರಿಸ್ಥಿತಿ ರೀತಿಯ ಸಂದರ್ಭ ನಿರ್ಮಾಣವಾಗಿದೆ. ಮಾಲ್‍ಗಳು, ಥಿಯೇಟರ್‍ಗಳು, ಹೋಟೆಲ್‍ಗಳನ್ನು ಬಂದ್ ಮಾಡಲಾಗಿದ್ದು, ಸಭೆ-ಸಮಾರಂಭಗಳುನ್ನು ರದ್ದುಗೊಳಿಸಲಾಗಿದೆ. ಔದ್ಯೋಗಿಕ ಕ್ಷೇತ್ರವೂ ಕುಸಿದಿದ್ದು, ಕೆಲವೆಡೆ ರಜೆ ಘೋಷಿಸಲಾಗಿದ್ದರೆ, ಕೆಲವೆಡೆ ಹಲವರು ಉದ್ಯೋಗವನ್ನೇ ಕಳೆದುಕೊಂಡಿದ್ದಾರೆ. ದಿನಗೂಲಿ ಕೆಲಸ ಮಾಡುವವರಿಗೆ ತಮ್ಮ ಬದುಕನ್ನೇ ಕಳೆದುಕೊಂಡಂತಹ ಪರಿಸ್ಥಿತಿ ಸೃಷ್ಟಿಯಾಗಿದೆ. ಕೆಲವು ರಾಜ್ಯಗಳ ಸರ್ಕಾರಗಳು ಅಂತಹ ಜನರಿಗೆ ಪಡಿತರ ಆಹಾರ, ಉಚಿತ ಊಟಗಳಂತಹ ಕೆಲವು ತುರ್ತು ಕೆಲಸಗಳನ್ನು ಮಾಡುತ್ತಿವೆ.

ಕೊರೊನಾ ವೈರಸ್ ಪ್ರಭಾವ ಸಿನಿಮಾ ಕ್ಷೇತ್ರವನ್ನೇನೂ ಬಿಟ್ಟಿಲ್ಲ. ಸಿನಿಮಾ ಚಿತ್ರೀಕರಣದ ಮೇಲೆ ನಿರ್ಬಂಧ ಹೇರಲಾಗಿದೆ. ಮಾಲ್/ಥಿಯೇಟರ್‍ಗಳು ಬಂದ್ ಆಗಿರುವುದರಿಂದ ಸಿನಿಮಾ ಪ್ರದರ್ಶನಗಳು ನಿಂತಿವೆ. ಹೊರ ದೇಶಗಳಲ್ಲಿ ಚಿತ್ರೀಕರಣಕ್ಕೆ ಹೋಗಿದ್ದ ಹಲವಾರು ಸ್ಟಾರ್‍ಗಳು ದೇಶಕ್ಕೆ ಹಿಂದಿರುಗಿದ್ದಾರೆ. ಕೆಲವರು ಸ್ವಗೃಹ ಬಂಧನಕ್ಕೆ ಒಳಗಾಗಿದ್ದಾರೆ.ಆದರೆ, ಬಾಲಿವುಡ್‍ನ ಗಾಯಕಿ ಕನಿಕಾ ಕಪೂರ್ ಅವರು ಲಂಡನ್‍ನಿಂದ ಹಿಂದಿರುಗಿದ್ದು, ವಿಮಾನ ನಿಲ್ದಾಣದಲ್ಲಿ ಕೊರೊನಾ ಪರೀಕ್ಷೆಗೂ ಒಳಪಡದೆ ಕೆಲವು ಕಾರ್ಯಕ್ರಮಗಳಲ್ಲಿ ಓಡಾಡಿ ಜನರನ್ನು ಮತ್ತಷ್ಟು ಪೀಕಲಾಟಕ್ಕೆ ಸಿಕ್ಕಿಸಿದ್ದಾರೆ. ಕನಿಕಾ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ್ದರಾಜಸ್ಥಾನದ ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೆಯವರು ಕೊರೊನಾ ಪರೀಕ್ಷೆಗೆ ಒಳಗಾಗಿದ್ದಾರೆ.

ಸಿನಿಮಾ ಶೂಟಿಂಗ್ ಇಲ್ಲದೆ ಖಾಲಿ ಕುಳಿತಿರುವ ಕೆಲವು ಸ್ಟಾರ್‍ಗಳು ಕೊರೊನಾ ಸುತ್ತಾ ಆರೆಸ್ಸೆಸ್ ಫೇಕ್ ಫ್ಯಾಕ್ಟರಿಯಿಂದ ಹರಿಬಿಡಲಾಗಿದ್ದ ಸುಳ್ಳು ಮಾಹಿತಿಗಳನ್ನು ವಿಶ್ಲೇಷಣೆಯನ್ನೂ ಮಾಡದೇ ಶೇರ್ ಮಾಡಿದ್ದಾರೆ. ಅವರಲ್ಲಿ ಸ್ಯಾಂಡಲ್‍ವುಡ್‍ನ ಅಭಿನಯ ಚಕ್ರವರ್ತಿ ಎಂದು ಖ್ಯಾತಿ ಪಡೆದಿರುವ ಸುದೀಪ್ ಕೂಡ ಒಬ್ಬರು. ಸುದೀಪ್ ಫೇಕ್‍ನ್ಯೂಸ್ ಶೇರ್ ಮಾಡಿರುವುದನ್ನು ಅಭಿಮಾನಿಗಳೂ ತೀಕ್ಷ್ಣವಾಗಿ ವಿರೋಧಿಸಿದ್ದಾರೆ. ಮತ್ತೆ ಕೆಲವರು ಗಂಟೆ-ಜಾಗಟೆ-ಚಪ್ಪಾಳೆ ಬಾರಿಸಿಕೊಂಡು ಕುಳಿತಿದ್ದಾರೆ. ಚಪ್ಪಾಳೆ ಬಾರಿಸುವುದರಿಂದ ಕೊರೊನಾ ನಾಶವಾಗುವುದಿಲ್ಲ ಹಾಗೂ ವೈದ್ಯರಿಗಾಗಿ ಚಪ್ಪಾಳೆ ಬಾರಿಸುವ ಸಮಯವೂ ಇದಲ್ಲ, ವೈದ್ಯರು ಕಾರ್ಯನಿರ್ವಹಿಸಲು ಬೇಕಿರುವ ಅಗತ್ಯ ಮೆಡಿಕಲ್ ಮೆಟಿರಿಯಲ್‍ಗಳನ್ನು ಒದಗಿಸಬೇಕು. ಇದಕ್ಕಾಗಿ ಸರ್ಕಾರವನ್ನು ಪ್ರಶ್ನೆ ಮಾಡಬೇಕು ಅಥವಾ ತಾವೂ ನೆರವಾಗಬೇಕು ಎಂಬ ಸಾಮಾನ್ಯ ಜ್ಞಾನವೂ ಇವರಿಗಿಲ್ಲದಿರುವುದು ಅಭಿಮಾನಿಗಳ ದೌರ್ಭಾಗ್ಯ.

ಸಿನಿಮಾ ಸ್ಟಾರ್‍ಗಳ ಇಂತಹ ಹುಚ್ಚಾಟ-ಪೀಕಲಾಟಗಳ ನಡುವೆ ಸಿನಿಮಾ ನಿರ್ಮಾಪಕರು ಕಂಗಾಲಾಗಿ ಕುಳಿತಿದ್ದಾರೆ. ಅಪಾರ ದುಡ್ಡು ಸುರಿದು ಸಿನಿಮಾ ಮಾಡಿ, ಬಿಡುಗಡೆ ಮಾಡಿದ್ದ ಸಿನಿಮಾಗಳು ಬಿಡುಗಡೆಯಾದ ಎರಡು ಮೂರು ದಿನಕ್ಕೆ ಥಿಯೇಟರ್‍ಗಳ ಮೇಲಿನ ನಿರ್ಬಂಧದಿಂದಾಗಿ ಪ್ರದರ್ಶನವಾಗದೇ ಉಳಿದುಹೋಗಿವೆ. ಕಳೆದ ಎರಡು ವಾರಗಳಲ್ಲಿ ಬಿಡುಗಡೆಗೆ ಸಿದ್ಧವಾಗಿದ್ದ ಸಿನಿಮಾಗಳ ಬಿಡುಗಡೆಯ ದಿನಾಂಕ ಮುಂದೆ ಹೋಗಿವೆ. ಆದರೂ ಒಂದು ವಾರಕ್ಕೆ ಒಂದೇ ಇಂಡಸ್ಟ್ರಿಯ 10 ರಿಂದ 20 ಸಿನಿಮಾಗಳು ಥಿಯೇಟರ್ ಮುಂದೆ ಸಾಲುಗಟ್ಟಿ ನಿಲ್ಲುವ ಇಂದಿನ ವರ್ಷಗಳಲ್ಲಿ ರಿಲೀಸಿಂಗ್ ಡೇಟ್ ಮುಂದೂಡಲಾಗಿರುವ ಸಿನಿಮಾಗಳು ಬಿಡುಗಡೆಯ ನಂತರದ ದಿನಗಳ ಬಗ್ಗೆ ಚಿಂತಾಕ್ರಾಂತರಾಗಿದ್ದಾರೆ.

ಇನ್ನು ಈಗಾಗಲೇ ಬಿಡುಗಡೆಯಾಗಿರುವ ದೊಡ್ಡ ಬಜೆಟ್‍ನ ಸಿನಿಮಾಗಳಾದ ಭಾಗಿ-3, ತಪ್ಪಡ್, ಅಂಗ್ರೈಸ್, ದ್ರೋಣ, ಶಿವಾರ್ಜುನಗಳಂತಹ ಸಿನಿಮಾಗಳು ರಿಲೀಸ್‍ಆದ ಮೂರ್ನಾಲ್ಕು ದಿನಗಳಿಗೆ ಥಿಯೇಟರ್‍ಗಳು ಮುಚ್ಚಿದ್ದರಿಂದ ಭಾರಿ ಹೊಡೆತಕ್ಕೆ ಸಿಕ್ಕಿಕೊಂಡಿವೆ. ಸಿನಿಮಾ ನಿರ್ಮಾಣಕ್ಕೆ ಹಾಕಿದ್ದ ಬಂಡವಾಳವೂ ವಾಪಸ್ ಬರುವಂತೆ ಕಾಣುತ್ತಿಲ್ಲ. ಥಿಯೇಟರ್‍ಗಳ ಮೇಲಿನ ಬಂದ್ ತೆರವುಗೊಳಿಸಿದ ನಂತರವೂ ಹೊಸ ಸಿನಿಮಾಗಳು ಥಿಯೇಟರ್‍ಗಳ ಬಾಗಿಲು ಬಡಿಯುವುದರಿಂದ ಈಗಾಗಲೇ ರಿಲೀಸ್ ಆಗಿರುವ ಸಿನಿಮಾಗಳು ಮತ್ತೆ ಹಿಟ್ ಲಿಸ್ಟ್‍ನಲ್ಲಿ ಓಡುತ್ತವೆ ಎಂಬ ನಿರೀಕ್ಷೆಯನ್ನು ನಿರ್ಮಾಪಕರೂ ಇಟ್ಟುಕೊಂಡಿಲ್ಲ.

ಕಳೆದ 15 ದಿನಗಳಿಂದ ಚಿತ್ರೋದ್ಯಮ ಕಂಪ್ಲೀಟ್ ಲಾಕ್‍ಡೌನ್ ಆಗಿದೆ. ಸಿನಿಮಾಕ್ಷೇತ್ರದ ವಹಿವಾಟು ಸ್ತಬ್ಧಗೊಂಡಿದೆ. ಅಲ್ಲದೆ, ಕಿರುತೆರೆಯ ಸೀರಿಯಲ್‍ಗಳ ಕಥೆಗಳು ವ್ಯಥೆಗಳಾಗಿವೆ. ಎಪಿಸೋಡ್‍ಗಳಿಗೆ ಬೇಕಿರುವಷ್ಟು ಚಿತ್ರೀಕರಣವನ್ನು ಕೆಲವು ಸೀರಿಯಲ್‍ಗಳ ನಿರ್ಮಾಪಕ-ನಿರ್ದೇಶಕರು ಸಿದ್ಧತೆ ಮಾಡಿಕೊಳ್ಳದ ಕಾರಣದಿಂದಾಗಿ ಕಣ್-ಕಣ್ ಬಿಡುತ್ತಿದ್ದಾರೆ. ಕೆಲವು ಸೀರಿಯಲ್ ಎಪಿಸೋಡ್‍ಗಳಲ್ಲಿ ಧಾರಾವಾಹಿಗಿಂತ ಹೆಚ್ಚು ಸಮಯ ಜಾಹೀರಾತುಗಳೇ ರಾರಾಜಿಸುತ್ತಿವೆ. ಜಾಹಿರಾತುಗಳನ್ನು ತುಂಬಿಸಿ ಸೀರಿಯಲ್‍ಗಳನ್ನು ಒಂದಷ್ಟು ದಿನಗಳ ಮಟ್ಟಿಗೆ ಎಳೆಯಲು ಶುರುಮಾಡಿಕೊಂಡಿದ್ದಾರೆ.

ಇದೆಲ್ಲದರ ಮಧ್ಯೆ, ರಿಯಾಲಿಟಿ ಶೋಗಳು ನಮಗೂ-ಕೊರೊನಾಗೂ ಸಂಬಂಧವೇ ಇಲ್ಲ. ಅದರಿಂದ ನಮಗಾವ ಸಮಸ್ಯೆಯೂ ಇಲ್ಲವೆಂಬಂತೆ ತಮ್ಮ ಶೋ, ಶೂಟಿಂಗ್‍ಗಳನ್ನು ಆರಾಮಾಗಿ ಮಾಡಿಕೊಂಡು ಹೋಗುತ್ತಿವೆ.

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಾರ್ಚ್ 22ರಂದು ದೇಶದಾದ್ಯಂತ ಜನತಾಕಫ್ರ್ಯೂಗೆ ಕರೆ ನೀಡಿದ್ದರು. ಸಾಧಕರಿಗೆ ಚಪ್ಪಾಳೆ ಹೊಡೆಯಲು ಕರೆ ನೀಡಿದ್ದರು. ಈ ಕಫ್ರ್ಯೂವನ್ನು ಯಶಸ್ವಿ ಮಾಡುವ ಉದ್ದೇಶದಿಂದ ಮೋದಿ ಭಕ್ತರು ಹಲವಾರು ಸುಳ್ಳು-ಪೊಳ್ಳು ಮಾಹಿತಿಗಳನ್ನು ನೀಡಿ ಜನರನ್ನು ದಾರಿ ತಪ್ಪಿಸುತ್ತಿದ್ದರು.

ಅದರಲ್ಲಿ ಒಂದು ಹುಡುಗಿ ನೀವು ದೇವಸ್ಥಾನದಲ್ಲಿ ಗಂಟೆ ಬಾರಿಸುವುದು ಏಕೆಂದು ತಿಳಿದಿದ್ದೀರಿ? ಇದರಿಂದ ಬಿಡುಗಡೆಯಾಗುವ ಶಕ್ತಿಯು ಸುತ್ತಲಿನ ಬ್ಯಾಕ್ಟೀರಿಯಾ ಮತ್ತು ವೈರಸ್‍ಗಳನ್ನು ಕೊಲ್ಲುತ್ತದೆ. ಅದೇರೀತಿ 132 ಕೋಟಿ ಜನರು ಏಕಕಾಲಕ್ಕೆ ಚಪ್ಪಾಳೆ ತಟ್ಟುವುದರಿಂದ ದೊಡ್ಡ ಮಟ್ಟದ ಎನರ್ಜಿ ಸೃಷ್ಟಿಯಾಗಿ ಕೊರೊನಾ ಮಾತ್ರವಲ್ಲ ಸುತ್ತಲಿನ ಎಲ್ಲಾ ಬ್ಯಾಕ್ಟೀರಿಯಾಗಳು ಸಾಯುತ್ತವೆ. ಮೋದಿಯ ವೈಜ್ಞಾನಿಕತೆಗೆ ಸೆಲ್ಯೂಟ್ ಎಂದು ವಿಡಿಯೋ ಮಾಡಿ ಹರಿಬಿಟ್ಟಿದ್ದಳು.

ಅದನ್ನು ನೋಡಿದ್ದೆ ತಡ ಕನ್ನಡದ ಖ್ಯಾತ ನಟ ಸುದೀಪ್ ಹಿಂದುಮುಂದು ನೋಡದೇ ತನ್ನ ಟ್ವಿಟ್ಟರ್‍ನಲ್ಲಿ ಶೇರ್ ಮಾಡಿಬಿಟ್ಟರು. ನಾವೂ ಮನೆಯಲ್ಲಿಯೇ ಇದ್ದು, ಕೊರೊನಾ ನಾಶಮಾಡೋಣ ಎಂದು ತಲೆಬರಹ ಕೊಟ್ಟಿದ್ದರು. ಇದು ಮೇಲ್ನೋಟಕ್ಕೆ ಸುಳ್ಳು ಸುದ್ದಿ ಎಂದು ಹಲವಾರು ಅಭಿಮಾನಿಗಳಿಗೆ ತಿಳಿದಿದ್ದರಿಂದ ಸರ್ ದಯವಿಟ್ಟು ಡಿಲೀಟ್ ಮಾಡಿ ಎಂದು ಕಮೆಂಟ್ ಹಾಕಿದರು.

ನಟ ಚೇತನ್, ಇದು ಸುಳ್ಳುಸುದ್ದಿ, ಜನರನ್ನು ದಿಕ್ಕು ತಪ್ಪಿಸಲಾಗುತ್ತಿದೆ. ನಾನು ವೈದ್ಯರ ಮಗನಾಗಿದ್ದು, ವೈದ್ಯ ಸಮೂಹದ ಮೇಲೆ ಗೌರವವಿದೆ. ಆದರೆ ಇಂತಹ ಅವೈಜ್ಞಾನಿಕ ಮಾಹಿತಿಯನ್ನು ಹಂಚಿಕೊಳ್ಳುವುದು ಜನರನ್ನು ಮೌಢ್ಯಕ್ಕೆ ತಳ್ಳಿದಂತಾಗುತ್ತದೆ ಎಂದು ರಿಪ್ಲೇ ಮಾಡಿದ್ದರು.

ನಂತರ ಚೇತನ್ ಮೇಲೂ ಕೆಲವು ಸುದೀಪ್ ಅಭಿಮಾನಿಗಳು ಹರಿಹಾಯ್ದು ನಿಂದಿಸಿದ್ದರು.ಇಷ್ಟೆಲ್ಲಾ ಬೆಳವಣಿಗೆಗಳನ್ನು ಕಂಡ ಮತ್ತು ವೈಜ್ಞಾನಿಕ ಅರಿವಿರುವ ಸುದೀಪ್ ಅಭಿಮಾನಿಗಳು ತಮ್ಮ ಸ್ಟಾರ್ ನಟ ಅಂತಹ ವಿಡಿಯೋಗಳನ್ನು ಹಂಚಿಕೊಂಡಿರುವುದು ತಪ್ಪು, ಇದು ನಿಜಕ್ಕೂ ಜನರನ್ನು ಮಿಸ್‍ಗೈಡ್ ಮಾಡುತ್ತದೆ. ಹಲವಾರು ಜನರು ಸಿನಿಮಾಸ್ಟಾರ್‍ಗಳ ಮೇಲೆ ಅಭಿಮಾನ ಇಟ್ಟಿರುತ್ತಾರೆ. ಫಾಲೋ ಮಾಡುತ್ತಿರುತ್ತಾರೆ. ಅಂತಹ ಜನರನ್ನು ದಾರಿ ತಪ್ಪಿಸುವಂತಹ ಪೋಸ್ಟ್ಗಳನ್ನು ಸ್ಟಾರ್‍ಗಳು ಹಾಕುವುದು ತಪ್ಪು ಎಂದು ಸುದೀಪ್‍ರನ್ನು ತರಾಟೆಗೆ ತೆಗೆದುಕೊಂಡು, ಸುದೀಪ್ ಖಾತೆಯಲ್ಲೇ ರಿಪ್ಲೇಟ್ವೀಟ್ ಮಾಡಿದ್ದಾರೆ.ಸದ್ಯಕ್ಕೆ ಸುದೀಪ್ ಅಭಿಮಾನಿಗಳಲ್ಲೇ ಪರ-ವಿರೋಧ ಹಗ್ಗಜಗ್ಗಾಟ ಶುರುವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...