Homeಕರೋನಾ ತಲ್ಲಣರಾಜ್ಯದಲ್ಲಿ ನಾಲ್ಕು ದಿನಗಳಿಗೆ ಸಾಕಾಗುವಷ್ಟು ಮಾತ್ರ ಕೊರೊನಾ ಲಸಿಕೆ ದಾಸ್ತಾನು!

ರಾಜ್ಯದಲ್ಲಿ ನಾಲ್ಕು ದಿನಗಳಿಗೆ ಸಾಕಾಗುವಷ್ಟು ಮಾತ್ರ ಕೊರೊನಾ ಲಸಿಕೆ ದಾಸ್ತಾನು!

- Advertisement -
- Advertisement -

ರಾಜ್ಯದಲ್ಲಿ ಕೊರೊನಾ ಲಸಿಕೆ ದಾಸ್ತಾನು ಮುಂದಿನ ನಾಲ್ಕು ದಿನಗಳವರೆಗೆ ಸಾಕಾಗುವಷ್ಟು ಮಾತ್ರ ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಉನ್ನತ ಮೂಲಗಳು ತಿಳಿಸಿವೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ (TNIE) ವರದಿ ಮಾಡಿದೆ. ಒಂದೆಡೆ, ತಜ್ಞರು ವ್ಯಾಕ್ಸಿನೇಷನ್ ಪ್ರಕ್ರಿಯೆಯನ್ನು ವೇಗಗೊಳಿಸಿ, ರಾಜ್ಯದಲ್ಲಿ ಸಾಂಗ್ರಮಿಕ ಎರಡನೇ ಅಲೆಯ ಪರಿಣಾಮವನ್ನು ಕಡಿಮೆ ಮಾಡಲು ಸೂಚಿಸುತ್ತಿದ್ದಾರೆ, ಮತ್ತೊಂದೆಡೆ ಲಸಿಕೆ ತಲುಪಲು ಇನ್ನೂ ಎರಡು ವಾರಗಳವರೆಗೆ ಕಾಯುವಂತೆ ಕೇಂದ್ರ ಸರ್ಕಾರ ರಾಜ್ಯವನ್ನು ಕೇಳಿದೆ ಎಂದು ವರದಿಯಾಗಿದೆ.

“ನಮ್ಮ ದಾಸ್ತಾನುಗಳಲ್ಲಿ ಇರುವ ಲಸಿಕೆಗಳು (ಮುಖ್ಯವಾಗಿ ಕೋವಿಶೀಲ್ಡ್) ಮುಂದಿನ ನಾಲ್ಕು ದಿನಗಳವರೆಗೆ ಮಾತ್ರ ಸಾಕಾಗುತ್ತದೆ. ಆದರೆ ಇದು ವ್ಯಾಕ್ಸಿನೇಷನ್‌ ಪ್ರಕ್ರಿಯೆ ಕಾರ್ಯಕ್ರಮಗಳ ಮೇಲೆ ಪರಿಣಾಮ ಬೀರುವುದಿಲ್ಲ. ನಾವು ಹೊಸ ಸ್ಟಾಕ್ ಕೇಳಿದ್ದೇವೆ ಮತ್ತು ಅದು ಶೀಘ್ರದಲ್ಲೇ ಬರಲಿದೆ” ಎಂದು ಆರೋಗ್ಯ ಸಚಿವಾಲಯದ ಅಧಿಕಾರಿಯೊಬ್ಬರ ಹೇಳಿಕೆಯನ್ನು ಉಲ್ಲೇಖಿಸಿ TNIE ವರದಿ ಮಾಡಿದೆ.

ಈ ಬಗ್ಗೆ TNIE ಗೆ ಪ್ರತಿಕ್ರಿಯಿಸಿರುವ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, “ಹೆಚ್ಚಿನ ಲಸಿಕೆಗಳಿಗಾಗಿ ನಾವು ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ನಡೆಸುತ್ತಿದ್ದೇವೆ. ಲಸಿಕೆಗಳು ಶೀಘ್ರದಲ್ಲೇ ಬರಲಿವೆ ಎಂದು ನಾವು ನಿರೀಕ್ಷಿಸುತ್ತಿದ್ದೇವೆ. ಇದಕ್ಕಾಗಿ ಚಿಂತಿಸಬೇಕಾದ ಅಗತ್ಯವಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಜಯ್ ಶಾ ಮಾನಹಾನಿ ಪ್ರಕರಣದಲ್ಲಿ ದಿ ವೈರ್ ಕ್ಷಮೆ ಕೇಳಿತೆ? ಅಸಲಿ ಸಮಾಚಾರ ಇಲ್ಲಿದೆ!

ರಾಜ್ಯದಲ್ಲಿ ಇಲ್ಲಿಯವರೆಗೆ 60 ವರ್ಷಕ್ಕಿಂತ ಮೇಲ್ಪಟ್ಟ 11,73,848 ಜನರಿಗೆ ಮತ್ತು 45 ವರ್ಷಕ್ಕಿಂತ ಮೇಲ್ಪಟ್ಟ 3,09,660 ಜನರಿಗೆ ಲಸಿಕೆಯ ಮೊದಲ ಡೋಸ್‌ಗಳನ್ನು ನೀಡಲಾಗಿದೆ. ಅನೇಕರು ಈಗ ತಮ್ಮ ಎರಡನೇ ಡೋಸ್‌ಗಾಗಿ ಕಾಯುತ್ತಿದ್ದಾರೆ, ಇದನ್ನು ಏಪ್ರಿಲ್ 1 ರಿಂದ ನೀಡಲಾಗುವುದು ಎನ್ನಲಾಗಿದೆ.

ಕೋವಿಶೀಲ್ಡ್‌‌ನ ಎರಡನೆ ಡೋಸ್‌ ಆರರಿಂದ ಎಂಟು ವಾರಗಳ ನಂತರ ತೆಗೆದುಕೊಂಡರೆ ಅದರ ಪರಿಣಾಮ ಹೆಚ್ಚಾಗಿರುತ್ತದೆ ಎಂದು ವೈಜ್ಞಾನಿಕ ಆಧಾರದಲ್ಲಿ ಕೇಂದ್ರ ಸರ್ಕಾರವು ಹೇಳಿರುವುದರಿಂದ, ಅದೃಷ್ಟವಶಾತ್ ಎರಡನೇ ಡೋಸ್‌ಗಾಗಿ ಕಾಯುತ್ತಿರುವವರಿಗೆ, ಲಸಿಕೆಯ ದಾಸ್ತಾನುಗಳ ಕೊರತೆಯು ಕಾಡುವುದಿಲ್ಲ.

ಆದ್ದರಿಂದ ಈ ಲಸಿಕೆಗಳು ಜನರು ತಮ್ಮ ಎರಡನೇ ಡೋಸ್‌ ತೆಗೆದುಕೊಳ್ಳುವ ಸಮಯಕ್ಕೆ ರಾಜ್ಯವನ್ನು ತಲುಪಬಹುದು ಎಂದು ವೈದ್ಯರು ಭಾವಿಸಿದ್ದಾರೆ. “ಆದರೂ, ಯಾವುದೇ ರೀತಿಯ ಕೊರತೆ ಇದ್ದರೆ ಅದನ್ನು ಬೇಗನೆ ಸರಿಪಡಿಸಬೇಕಾಗಿದ್ದು, ಯಾಕೆಂದರೆ ಲಸಿಕೆಯ ಕೊರತೆಯು ವ್ಯಾಕ್ಸಿನೇಷನ್ ಪ್ರಕ್ರಿಯೆಯನ್ನು ನಿಧಾನಗೊಳಿಸುತ್ತದೆ. ಅಲ್ಲದೆ ಎರಡನೇ ಅಲೆ ಪ್ರಾರಂಭವಾಗಿ ರಾಜ್ಯದಲ್ಲಿ ಪ್ರಕರಣಗಳು ಹೆಚ್ಚುತ್ತಿರುವ ಸಮಯದಲ್ಲಿ ಹೀಗಾಗುವುದು ಒಳ್ಳೆಯದಲ್ಲ” ಎಂದು ಸರ್ಕಾರಿ ಆಸ್ಪತ್ರೆಯ ಹಿರಿಯ ವೈದ್ಯರೊಬ್ಬರು ಹೇಳಿದ್ದಾರೆ.


ಇದನ್ನೂ ಓದಿ: ಮೋದಿ ಸರ್ಕಾರದ ಬಳಿ ಅಭಿವೃದ್ದಿಯ ಅಜೆಂಡಾವಿಲ್ಲ, ಕೋಮುವಾದ ಅಜೆಂಡಾ ಮಾತ್ರವಿದೆ: ಯುದುವೀರ್ ಸಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...