Homeಕರೋನಾ ತಲ್ಲಣರಾಜ್ಯದಲ್ಲಿ ನಾಲ್ಕು ದಿನಗಳಿಗೆ ಸಾಕಾಗುವಷ್ಟು ಮಾತ್ರ ಕೊರೊನಾ ಲಸಿಕೆ ದಾಸ್ತಾನು!

ರಾಜ್ಯದಲ್ಲಿ ನಾಲ್ಕು ದಿನಗಳಿಗೆ ಸಾಕಾಗುವಷ್ಟು ಮಾತ್ರ ಕೊರೊನಾ ಲಸಿಕೆ ದಾಸ್ತಾನು!

- Advertisement -
- Advertisement -

ರಾಜ್ಯದಲ್ಲಿ ಕೊರೊನಾ ಲಸಿಕೆ ದಾಸ್ತಾನು ಮುಂದಿನ ನಾಲ್ಕು ದಿನಗಳವರೆಗೆ ಸಾಕಾಗುವಷ್ಟು ಮಾತ್ರ ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಉನ್ನತ ಮೂಲಗಳು ತಿಳಿಸಿವೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ (TNIE) ವರದಿ ಮಾಡಿದೆ. ಒಂದೆಡೆ, ತಜ್ಞರು ವ್ಯಾಕ್ಸಿನೇಷನ್ ಪ್ರಕ್ರಿಯೆಯನ್ನು ವೇಗಗೊಳಿಸಿ, ರಾಜ್ಯದಲ್ಲಿ ಸಾಂಗ್ರಮಿಕ ಎರಡನೇ ಅಲೆಯ ಪರಿಣಾಮವನ್ನು ಕಡಿಮೆ ಮಾಡಲು ಸೂಚಿಸುತ್ತಿದ್ದಾರೆ, ಮತ್ತೊಂದೆಡೆ ಲಸಿಕೆ ತಲುಪಲು ಇನ್ನೂ ಎರಡು ವಾರಗಳವರೆಗೆ ಕಾಯುವಂತೆ ಕೇಂದ್ರ ಸರ್ಕಾರ ರಾಜ್ಯವನ್ನು ಕೇಳಿದೆ ಎಂದು ವರದಿಯಾಗಿದೆ.

“ನಮ್ಮ ದಾಸ್ತಾನುಗಳಲ್ಲಿ ಇರುವ ಲಸಿಕೆಗಳು (ಮುಖ್ಯವಾಗಿ ಕೋವಿಶೀಲ್ಡ್) ಮುಂದಿನ ನಾಲ್ಕು ದಿನಗಳವರೆಗೆ ಮಾತ್ರ ಸಾಕಾಗುತ್ತದೆ. ಆದರೆ ಇದು ವ್ಯಾಕ್ಸಿನೇಷನ್‌ ಪ್ರಕ್ರಿಯೆ ಕಾರ್ಯಕ್ರಮಗಳ ಮೇಲೆ ಪರಿಣಾಮ ಬೀರುವುದಿಲ್ಲ. ನಾವು ಹೊಸ ಸ್ಟಾಕ್ ಕೇಳಿದ್ದೇವೆ ಮತ್ತು ಅದು ಶೀಘ್ರದಲ್ಲೇ ಬರಲಿದೆ” ಎಂದು ಆರೋಗ್ಯ ಸಚಿವಾಲಯದ ಅಧಿಕಾರಿಯೊಬ್ಬರ ಹೇಳಿಕೆಯನ್ನು ಉಲ್ಲೇಖಿಸಿ TNIE ವರದಿ ಮಾಡಿದೆ.

ಈ ಬಗ್ಗೆ TNIE ಗೆ ಪ್ರತಿಕ್ರಿಯಿಸಿರುವ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, “ಹೆಚ್ಚಿನ ಲಸಿಕೆಗಳಿಗಾಗಿ ನಾವು ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ನಡೆಸುತ್ತಿದ್ದೇವೆ. ಲಸಿಕೆಗಳು ಶೀಘ್ರದಲ್ಲೇ ಬರಲಿವೆ ಎಂದು ನಾವು ನಿರೀಕ್ಷಿಸುತ್ತಿದ್ದೇವೆ. ಇದಕ್ಕಾಗಿ ಚಿಂತಿಸಬೇಕಾದ ಅಗತ್ಯವಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಜಯ್ ಶಾ ಮಾನಹಾನಿ ಪ್ರಕರಣದಲ್ಲಿ ದಿ ವೈರ್ ಕ್ಷಮೆ ಕೇಳಿತೆ? ಅಸಲಿ ಸಮಾಚಾರ ಇಲ್ಲಿದೆ!

ರಾಜ್ಯದಲ್ಲಿ ಇಲ್ಲಿಯವರೆಗೆ 60 ವರ್ಷಕ್ಕಿಂತ ಮೇಲ್ಪಟ್ಟ 11,73,848 ಜನರಿಗೆ ಮತ್ತು 45 ವರ್ಷಕ್ಕಿಂತ ಮೇಲ್ಪಟ್ಟ 3,09,660 ಜನರಿಗೆ ಲಸಿಕೆಯ ಮೊದಲ ಡೋಸ್‌ಗಳನ್ನು ನೀಡಲಾಗಿದೆ. ಅನೇಕರು ಈಗ ತಮ್ಮ ಎರಡನೇ ಡೋಸ್‌ಗಾಗಿ ಕಾಯುತ್ತಿದ್ದಾರೆ, ಇದನ್ನು ಏಪ್ರಿಲ್ 1 ರಿಂದ ನೀಡಲಾಗುವುದು ಎನ್ನಲಾಗಿದೆ.

ಕೋವಿಶೀಲ್ಡ್‌‌ನ ಎರಡನೆ ಡೋಸ್‌ ಆರರಿಂದ ಎಂಟು ವಾರಗಳ ನಂತರ ತೆಗೆದುಕೊಂಡರೆ ಅದರ ಪರಿಣಾಮ ಹೆಚ್ಚಾಗಿರುತ್ತದೆ ಎಂದು ವೈಜ್ಞಾನಿಕ ಆಧಾರದಲ್ಲಿ ಕೇಂದ್ರ ಸರ್ಕಾರವು ಹೇಳಿರುವುದರಿಂದ, ಅದೃಷ್ಟವಶಾತ್ ಎರಡನೇ ಡೋಸ್‌ಗಾಗಿ ಕಾಯುತ್ತಿರುವವರಿಗೆ, ಲಸಿಕೆಯ ದಾಸ್ತಾನುಗಳ ಕೊರತೆಯು ಕಾಡುವುದಿಲ್ಲ.

ಆದ್ದರಿಂದ ಈ ಲಸಿಕೆಗಳು ಜನರು ತಮ್ಮ ಎರಡನೇ ಡೋಸ್‌ ತೆಗೆದುಕೊಳ್ಳುವ ಸಮಯಕ್ಕೆ ರಾಜ್ಯವನ್ನು ತಲುಪಬಹುದು ಎಂದು ವೈದ್ಯರು ಭಾವಿಸಿದ್ದಾರೆ. “ಆದರೂ, ಯಾವುದೇ ರೀತಿಯ ಕೊರತೆ ಇದ್ದರೆ ಅದನ್ನು ಬೇಗನೆ ಸರಿಪಡಿಸಬೇಕಾಗಿದ್ದು, ಯಾಕೆಂದರೆ ಲಸಿಕೆಯ ಕೊರತೆಯು ವ್ಯಾಕ್ಸಿನೇಷನ್ ಪ್ರಕ್ರಿಯೆಯನ್ನು ನಿಧಾನಗೊಳಿಸುತ್ತದೆ. ಅಲ್ಲದೆ ಎರಡನೇ ಅಲೆ ಪ್ರಾರಂಭವಾಗಿ ರಾಜ್ಯದಲ್ಲಿ ಪ್ರಕರಣಗಳು ಹೆಚ್ಚುತ್ತಿರುವ ಸಮಯದಲ್ಲಿ ಹೀಗಾಗುವುದು ಒಳ್ಳೆಯದಲ್ಲ” ಎಂದು ಸರ್ಕಾರಿ ಆಸ್ಪತ್ರೆಯ ಹಿರಿಯ ವೈದ್ಯರೊಬ್ಬರು ಹೇಳಿದ್ದಾರೆ.


ಇದನ್ನೂ ಓದಿ: ಮೋದಿ ಸರ್ಕಾರದ ಬಳಿ ಅಭಿವೃದ್ದಿಯ ಅಜೆಂಡಾವಿಲ್ಲ, ಕೋಮುವಾದ ಅಜೆಂಡಾ ಮಾತ್ರವಿದೆ: ಯುದುವೀರ್ ಸಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...