Homeಮುಖಪುಟಚಿಲ್ಲರೆ ವ್ಯಾಪಾರದಲ್ಲಿ ಬಂಡವಾಳಿಗರ ಏಕಸ್ವಾಮ್ಯ: ಗ್ರಾಹಕರಿಗೆ ಬೆಲೆಏರಿಕೆಯ ಬಿಸಿ

ಚಿಲ್ಲರೆ ವ್ಯಾಪಾರದಲ್ಲಿ ಬಂಡವಾಳಿಗರ ಏಕಸ್ವಾಮ್ಯ: ಗ್ರಾಹಕರಿಗೆ ಬೆಲೆಏರಿಕೆಯ ಬಿಸಿ

ಇಡೀ ವಿಶಾಲ ಕರ್ನಾಟಕದ ಜನತೆ ನಿತ್ಯ ತೊಗರಿಬೇಳೆ ಉಪಯೋಗಿಸುತ್ತಿದ್ದರೂ ರೈತರಿಗೆ ಮಾತ್ರ ಅದು ಲಾಭ ತರುವ ಬೆಳೆಯಾಗಿಲ್ಲ. ಅಲ್ಲದೆ ವರ್ಷದಿಂದ ವರ್ಷಕ್ಕೆ ತೊಗರಿ ಬೇಸಾಯ ಮಾಡುವವರ ಸಂಖ್ಯೆ ಕ್ಷೀಣಿಸುತ್ತಿದೆ.

- Advertisement -
- Advertisement -

ಇಷ್ಟರಲ್ಲಿಯೇ ಮೆಟ್ರೋ ಕ್ಯಾಶ್ ಅಂಡ್ ಕ್ಯಾರಿ ಕಾರ್ಪೊರೇಟ್ ಚಿಲ್ಲರೆ ವ್ಯಾಪಾರಿ ಸಂಸ್ಥೆ ತುಮಕೂರಿನಲ್ಲಿ ತನ್ನ 28ನೇ ಮಳಿಗೆಯನ್ನು ತೆರೆಯಲಿದೆ. ಇದು ಭಾರತದಲ್ಲಿ ಆಳಕ್ಕೆ ಇಳಿಯುತ್ತಿರುವ ಜಾಗತೀಕರಣ. ಬೆಳೆಯುತ್ತಿದೆ ಎಂದು ಹೇಳಲಾಗುತ್ತಿರುವ ಭಾರತದ ಆರ್ಥಿಕತೆಯ ಪ್ರತಿಫಲನ. (ಭಾರತವನ್ನು ಒತ್ತಾಯ ಪೂರ್ವಕವಾಗಿ ಆರ್ಥಿಕತೆಯಾಗಿ ಪರಿವರ್ತಿಸಲಾಗುತ್ತಿದ್ದು, ಕುಸಿದಿದೆ ಎಂದು ಹೇಳಲಾಗುತ್ತಿರುವ ಇದು ತಾತ್ಕಾಲಿಕವಾದುದ್ದು. ಮುಂಬರುವ ದಿನಗಳಲ್ಲಿ ನಮ್ಮ ದೇಶವು ಕಾರ್ಪೋರೇಟ್ ಗಳಿಗೆ ಸುಸ್ಥಿರವಾದ ಮಾರುಕಟ್ಟೆಯಾಗಿ ಮಾರ್ಪಾಡಾಗಲಿದೆ)

ಇದು ಭಾರತದ ಭವಿಷ್ಯದ ಮಟ್ಟಿಗೆ ಬಹು ಗಂಭೀರವಾದ ಹಾಗೂ ಆತಂಕಪಡಬೇಕಾದ ಬೆಳವಣಿಗೆ. ಜನಸಾಮಾನ್ಯರ ನಿತ್ಯ ಬದುಕಿನ ಜೀವನಾವಶ್ಯಕ ಮತ್ತು ಆಹಾರಪದಾರ್ಥಗಳ ಚಿಲ್ಲರೆ ಮಾರಾಟ ಮಾಡುತ್ತಿರುವವರು ಮಾರುಕಟ್ಟೆಯನ್ನು ವಿಸ್ತರಿಸುವ ಮೂಲಕ ಆಹಾರದ ಮೇಲೆ ಏಕಸ್ವಾಮ್ಯ ಸಾಧಿಸುತ್ತಿದ್ದಾರೆ. ಹೀಗೆ ಏಕಸ್ವಾಮ್ಯ ಸಾಧಿಸುತ್ತಾ ಬೆಳೆಯುವ ಈ ಕಾರ್ಪೊರೇಟ್ ಕಂಪನಿಗಳು ಮಾರುಕಟ್ಟೆಯಲ್ಲಿ ತಲ್ಲಣವನ್ನೇ ಉಂಟು ಮಾಡುತ್ತಾರೆ. ಹಣದುಬ್ಬರ ತರುತ್ತಾರೆ. ಆ ಮೂಲಕ ನಮಗೆಲ್ಲ ಬೆಲೆ ಏರಿಕೆಯ ಬಿಸಿಯನ್ನು ತಟ್ಟಿಸುತ್ತಾರೆ. ಇದಕ್ಕೆ ಇಂದಿನ ಸಮಾಜ ಸಾಕ್ಷಿಯಾಗಿದೆ. ಬೆಲೆ ಏರಿಕೆ ಎಂಬುದು ನಿತ್ಯ ನಿರಂತರವಾಗಿ ಕಾಣಬಹುದಾಗಿದೆ.

ಕರೋನಾ ಕಾರಣದಿಂದ ಇಡೀ ಆರ್ಥಿಕತೆಯೇ ಸ್ಥಗಿತಗೊಂಡಿರುವತಹ ಸಮಯದಲ್ಲಿಯು ನಿತ್ಯ ನಿರಂತರವಾಗಿರುವ ಬೆಲೆ ಏರಿಕೆಯು ಇವರು ತರಬಹುದಾದ ಹಣದುಬ್ಬರವನ್ನು ಸಾಕ್ಷೀಕರಿಸುತ್ತದೆ.
ಈ ಕಾರ್ಪೊರೇಟ್ ಚಿಲ್ಲರೆ ಮಾರಾಟ ಕಂಪನಿಗಳು ದೇಸಿಯ ಸ್ಥಳೀಯ ಚಿಲ್ಲರೆ ಮಾರಾಟಗಾರಂತಲ್ಲ. ಸ್ಥಳೀಯ ಮಾರಾಟಗಾರರು ತಮ್ಮತಮ್ಮಲ್ಲೇ ಪೈಪೋಟಿ ನಡೆಸಿಕೊಳ್ಳುತ್ತಾ ವಹಿವಾಟು ನಡೆಸುವವರಾಗಿದ್ದು ಸರ್ಕಾರಿ ಮಟ್ಟದಲ್ಲಿ ಇವರ ಹಸ್ತಕ್ಷೇಪ ಕ್ಷೀಣವಾಗಿರುತ್ತದೆ ಅವರ ಬಹುಪಾಲು ವಹಿವಾಟು ಸ್ಥಳೀಯ ಆರ್ಥಿಕತೆಯ ಉತ್ತೇಜಕವಾಗಿರುತ್ತದೆ.

Photo Courtesy: JustDial

ಆದರೆ ಕಾರ್ಪೊರೇಟ್ ಕಂಪನಿಗಳು ಹಾಗಲ್ಲ. ಸರ್ಕಾರಕ್ಕೆ ಇವರೇ ನಿರ್ದೇಶಕರಾಗಿರುತ್ತಾರೆ, ನೆರಳಾಗಿರುತ್ತಾರೆ. ಇಂತಹ ಹಿನ್ನೆಲೆಯುಳ್ಳ ಲಾಭಕೋರರು ಒಂದೆಡೆ ತಮ್ಮ ಮಾರಾಟ ಮಳಿಗೆಗಳನ್ನು ನಿರಂತರವಾಗಿ ತೆರೆಯತ್ತಿರುತ್ತಾರೆ. ಇದಕ್ಕಾಗಿ ರಾಜಕೀಯ ಲಾಬಿ ನಡೆಸುತ್ತಾರೆ. ತತ್ಪರಿಣಾಮ ಅಧಿಕಾರಿ ವರ್ಗದಿಂದ ಬೀದಿ ವ್ಯಾಪಾರಿಗಳಿಗೆ ಕಿರುಕುಳಗಳು ಹೆಚ್ಚುತ್ತವೆ. ಪ್ರಜಾಪ್ರಭುತ್ವ ಸೋಗಿನಲ್ಲಿರುವ ಸರ್ಕಾರಗಳಿಂದ ಉಸಿರುಕಟ್ಟಿಸುವ ಕಾನೂನು, ನೀತಿ ನಿಯಮಾವಳಿಗಳು ಜಾರಿಯಾಗುತ್ತದೆ. ಸಂಚಾರ ದಟ್ಟನೆಯ ನೆಪವೊಡ್ಡಿ ನಗರಪ್ರದೇಶದಿಂದ ಎಪಿಎಂಸಿ, ಆರ್‌ಎಂಸಿ ಯಾರ್ಡ್‌ಗಳನ್ನು ನಗರಗಳಿಂದ ಹೊರಕ್ಕೆ ಎತ್ತಂಗಡಿ ಮಾಡಲಾಗುತ್ತದೆ

ಇದೇ ರೀತಿಯಲ್ಲಿ ತುಮಕೂರಿನ ಆರ್‌ಎಂಸಿಯನ್ನು ನಗರದಿಂದ ಹೊರವಲಯಕ್ಕೆ ಸ್ಥಳಾಂತರಿಸಿದರೆ, ಬೆಂಗಳೂರಿನ ಯಶವಂತಪುರದ ಆರ್‌ಎಂಸಿ ಯಾರ್ಡನ್ನು ನಗರದಿಂದ ಬಹುದೂರಕ್ಕೆ ಯಾವುದೇ ಸವಲತ್ತು ಇರದ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಇದರ ದೆಸೆಯಿಂದಾಗಿ ನಗರ ಪ್ರದೇಶದ ಹೂ ತರಕಾರಿ ಹಣ್ಣು ವ್ಯಾಪಾರಿಗಳ ಸಾಗಾಣಿಕೆ ವೆಚ್ಚ ಹೆಚ್ಚುತ್ತಿದ್ದು, ನಗರ ಪ್ರದೇಶದಲ್ಲಿ ಇಂದು ತರಕಾರಿಗಳ ಬೆಲೆ ಹೆಚ್ಚಾಗುತ್ತಿದೆ. ಇದರ ಪರಿಣಾಮವಾಗಿ ಬೀದಿ ಬದಿ ವ್ಯಾಪಾರಿಗಳೆಡೆಗೆ ನಗರವಾಸಿಗಳು ಬೆನ್ನು ಮಾಡಿ ಮೆಟ್ರೋ ಕ್ಯಾಶ್ ಅಂಡ್ ಕ್ಯಾರಿ, ರಿಲಯನ್ಸ್ ಫ್ರೆಶ್ ನತ್ತ ಮುಖ ಮಾಡುತ್ತಿದ್ದಾರೆ.

ಇಂತಹ ಸರ್ವ ರೀತಿಯ ಮಸಲತ್ತನೊಂದಿಗೆ ಮಾರುಕಟ್ಟೆ ವಿಸ್ತರಿಸುತ್ತಿರುವ ಈ ಕಂಪನಿಗಳು ಮುಂಬರುವ ದಿನಗಳಲ್ಲಿ ನಾವು ಉಣ್ಣುವ ಪ್ರತೀ ಅಗುಳು ಅನ್ನದ ಮೇಲೆಯೂ ಏಕಸ್ವಾಮ್ಯ ಸಾಧಿಸಲಿದ್ದಾರೆ. ನಮ್ಮ ರೈತರೇ ಬೆಳೆ ಬೆಳೆದರೂ ಮಾರುಕಟ್ಟೆಯ ಮೇಲೆ ಕಾರ್ಪೋರೇಟ್ ಗಳು ಸಾಧಿಸುತ್ತಿರುರುವುದರಿಂದ ಆ ಬೆಳೆಗಳ ಒಡೆಯರು ಕಾರ್ಪೋರೇಟ್ ಗಳೇ ಆಗುತ್ತಾರೆ. ಒಮ್ಮೆ ಇವರು ಏಕಸ್ವಾಮ್ಯ ಸಾಧಿಸಿದರೆಂದರೆ ಮುಗಿಯಿತು. ತಮ್ಮ ಅನುಕೂಲಕ್ಕೆ ತಕ್ಕಂತೆ ಅವುಗಳ ಬೆಲೆಯಲ್ಲಿ ಏರಿಳಿತ ಉಂಟುಮಾಡುತ್ತಾರೆ. ಇಡೀ ವಿಶ್ವಾದ್ಯಂತ ತಮ್ಮ ಜಾಲ ಹೊಂದಿರುವ ಇವರು ಯಾವ ದೇಶದಲ್ಲಿ ಯಾವ ವಸ್ತು ಯಾವ ಬೆಲೆಗೆ ದೊರೆಯುತ್ತದೆ ಎಂಬುದರ ಸ್ಪಷ್ಟ ಪರಿಜ್ಞಾನ ಹೊಂದಿದ್ದಾರೆ ಮತ್ತು ಅವುಗಳನ್ನು ಅಲ್ಲಿಂದ ಇಲ್ಲಿಗೆ ತಂದು ಮಾರಾಟ ಮಾಡುವುದರ ಮೂಲಕ ಸ್ಥಳೀಯವಾಗಿ ಅದರ ಸುತ್ತ ತಲೆ ತಲಾಂತರದಿಂದ ಎಣೆದುಕೊಂಡಿರಬಹುದಾದ ಆರ್ಥಿಕ ಸಂರಚನೆಯನ್ನು ತುಂಡರಿಸುತ್ತಾರೆ.

ಯಶವಂತಪುರ ಎಪಿಎಂಸಿ: Photo Courtesy: Bangalorean.com

ಮಾರುಕಟ್ಟೆಯ ಮೇಲೆ ಇವರ ಏಕಸ್ವಾಮ್ಯ ವಿಸ್ತರಿಸಿದಂತೆಲ್ಲ ಭಾರತೀಯ ಕೃಷಿ ಉತ್ಪನ್ನ ವರ್ಷದಿಂದ ವರ್ಷಕ್ಕೆ ಕುಗ್ಗುತ್ತಲೇ ಸಾಗಿದೆ. 2000ನೇ ಇಸವಿಯಲ್ಲಿ ಶೇ. 85 ರಷ್ಟಿದ್ದ ಭಾರತದ ಕೃಷಿ ಉತ್ಪನ್ನ ಈಗ ಶೇ. 53ಕ್ಕೆ ಇಳಿಕೆ ಕಂಡಿದೆ. ಸದ್ಯ ಪ್ರತಿ ವರ್ಷ ಶೇ. 2.8 ಜನ ಕೃಷಿಯಿಂದ ವಿಮುಖರಾಗುತ್ತಿದ್ದಾರೆ. ಭಾರತದ ಬೆಳೆಯುತ್ತಿರುವ ಆರ್ಥಿಕತೆಯ ಅಂತರಾಳವಿದು. ಕಾರ್ಪೋರೇಟ್ ಗಳ ಮಾರುಕಟ್ಟೆಯ ಮೇಲಿನ ಏಕಸ್ವಾಮ್ಯ ಇದೇ ರೀತಿ ಮುಂದುವರೆದರೆ ಮುಂಬರುವ ದಿನಗಳಲ್ಲಿ ಈ ಪರಿಮಾಣ ಇನ್ನೂ ಹೆಚ್ಚಾಗಲಿದೆ. ಇದರ ಒಂದು ಉದಾಹರಣೆಯಾಗಿ ತೊಗರಿಬೇಳೆಯ ವಿಚಾರವನ್ನೇ ತೆಗೆದುಕೊಳ್ಳಬಹುದು. ಇಡೀ ವಿಶಾಲ ಕರ್ನಾಟಕದ ಜನತೆ ನಿತ್ಯ ತೊಗರಿಬೇಳೆ ಉಪಯೋಗಿಸುತ್ತಿದ್ದರೂ ರೈತರಿಗೆ ಮಾತ್ರ ಅದು ಲಾಭ ತರುವ ಬೆಳೆಯಾಗಿಲ್ಲ. ಅಲ್ಲದೆ ವರ್ಷದಿಂದ ವರ್ಷಕ್ಕೆ ತೊಗರಿ ಬೇಸಾಯ ಮಾಡುವವರ ಸಂಖ್ಯೆ ಕ್ಷೀಣಿಸುತ್ತಿದೆ. ಇದಕ್ಕೆ ಕಾರಣವಾಗಿರುವುದು ಯಾವುದೋ ದೂರದ ಕಡಿಮೆ ಬೆಲೆಗೆ ಸಿಗಬಹುದಾದ ದೇಶದಿಂದ ತೊಗರಿಬೇಳೆಯನ್ನು ಇಲ್ಲಿಗೆ ತಂದು ಸದ್ದಿಲ್ಲದೆ ಮಾರುವುದರ ಮೂಲಕ ನಮ್ಮದೇ ಮಾರುಕಟ್ಟೆ ನಮಗೆ ಇಲ್ಲದಂತೆ ಮಾಡುತ್ತಿರುವುದು.

ಕೃಷಿ ಪ್ರಧಾನವಾದ ಭಾರತದಲ್ಲಿನ ಎಲ್ಲ ರಾಷ್ಟ್ರೀಯತೆಗಳ, ಸಂಸ್ಕೃತಿಗಳ ಬೆನ್ನೆಲುಬು ಇಲ್ಲಿಯ ರೈತರು, ಇಲ್ಲಿಯ ಆರ್ಥಿಕತೆಯನ್ನವಲಂಬಿಸಿರುವ ಕುಶಲಕರ್ಮಿಗಳು ಸಣ್ಣ ಮತ್ತು ಬೀದಿ ವ್ಯಾಪಾರಿಗಳು. ಕಾರ್ಪೊರೇಟ್ ಗಳು ಹೊಂದುವ ಏಕಸ್ವಾಮ್ಯದಿಂದಾಗಿ ಇವರು ನೆಲೆ ಕಳೆದುಕೊಳ್ಳುವುದರೊಂದಿಗೆ ಎಲ್ಲಾ ಸ್ಥಳೀಯ, ಪುರಾತನ, ಸುಸ್ಥಿರ ಆರ್ಥಿಕತೆ ಸರ್ವನಾಶವಾಬಿಡುತ್ತದೆ. ಜೊತೆಗೆ ಭಾಷೆ, ರಾಷ್ಟ್ರೀಯತೆ ಸಂಸ್ಕೃತಿಯ ಅವಸಾನಕ್ಕೂ ಮುನ್ನುಡಿ ಬರೆಯುತ್ತದೆ.

ಇಂಥ ಕಂಪನಿಗಳಲ್ಲಿ ಪಡೆಯುವ ಒಂದೊಂದು ಗ್ರಾಹಕತ್ವ ನಮ್ಮ ರಾಷ್ಟ್ರೀಯತೆ ಭಾಷೆ-ಸಂಸ್ಕೃತಿಯ ಶವಪೆಟ್ಟಿಗೆಗೆ ಹೊಡೆಯುವ ಮೊಳೆ ಆಗಿರುತ್ತದೆ. ಜಾಗತೀಕರಣದ ಈ ಸಂದರ್ಭದಲ್ಲಿ ಬೆಳೆಯುತ್ತಿರುವ ಆರ್ಥಿಕತೆಯನ್ನು ಸರಿಯಾಗಿ ಸಮಾಜ ಅರ್ಥಮಾಡಿಕೊಳ್ಳದಿದ್ದರೆ ಅದು ತನ್ನ ಅವನತಿಯನ್ನು ತಾನೇ ಮಾಡಿಕೊಳ್ಳುತ್ತದೆ. ಪ್ರಸ್ತುತ ಕಾಲಘಟ್ಟದಲ್ಲಿ ಎಲ್ಲಕ್ಕಿಂತ ಆಳವಾಗಿ ಆರ್ಥಿಕತೆಯನ್ನು ಸರಿಯಾಗಿ ಅರ್ಥ ಮಾಡಿಕೊಳ್ಳಬೇಕಿರುವುದು ಸಮಾಜದ ಆದ್ಯ ಕರ್ತವ್ಯವಾಗಿದೆ. ಆರ್ಥಿಕತೆಯನ್ನು ಸರಿಯಾಗಿ ಅರ್ಥಮಾಡಿಕೊಳ್ಳದೆ ಭಾಷೆ-ಸಂಸ್ಕೃತಿ ರಾಷ್ಟ್ರೀಯತೆಗಳನ್ನು ಕಾಪಾಡಿಕೊಳ್ಳುತ್ತೇವೆ ಎಂದು ನಡೆಯುವ ಯಾವುದೇ ಹೋರಾಟಗಳು, ಚಳುವಳಿಗಳು, ಆಂದೋಲನಗಳು ಗುರಿ ತಲುಪುವಲ್ಲಿ ವಿಫಲಗೊಳ್ಳುತ್ತವೆ. ನಮ್ಮ ಸಂಸ್ಕೃತಿ, ನಮ್ಮ ಅಸ್ಮಿತೆ ನಮ್ಮ ರಾಷ್ಟ್ರೀಯತೆ ಉಳಿಯಬೇಕು ಎಂದರೆ ಇಂತಹ ಕಾರ್ಪೊರೇಟ್ ಕಂಪನಿಗಳು ನಾಡಿನಿಂದ ಹೊರಹಾಕುವುದರತ್ತ ಗಮನ ಕೇಂದ್ರೀಕರಿಸಬೇಕಿದೆ. ಮುಂಬರುವ ದಿನಗಳಲ್ಲಿ ಈ ಕಂಪನಿ ಇನ್ನಿತರ ನಗರಗಳಲ್ಲಿ ಹೊಸ ಹೊಸ ಮಳಿಗೆಗಳನ್ನು ತೆರೆಯುವ ಯೋಚನೆಯಲ್ಲಿದೆ. ಅರ್ಥಾತ್ ಸ್ಥಳೀಯ ಆರ್ಥಿಕತೆಯ ಭಾಷೆ ಸಂಸ್ಕೃತಿ ಅಸ್ಮಿತೆ ಮೇಲೆ ದಾಳಿ ಇನ್ನಷ್ಟು ಹೆಚ್ಚಲಿದೆ. ಪ್ರಸ್ತುತ ಸಂದರ್ಭದಲ್ಲಿ ಭಾಷೆ-ಸಂಸ್ಕೃತಿ ರಾಷ್ಟ್ರೀಯತೆಗಳ ಅಸ್ಮಿತೆಯ ರಕ್ಷಣೆಗಾಗಿ ತನ್ನದೇ ಆದ ಒಂದು ಕಾರ್ಯಸೂಚಿಯನ್ನು ಹಾಕಿಕೊಳ್ಳಬೇಕಾದ ಅನಿವಾರ್ಯತೆ ಸಮಾಜದ ಮುಂದಿದೆ.

  • ಸೂರಜ್

ಇದನ್ನೂ ಓದಿ: ಮುಖ್ಯಮಂತ್ರಿಯನ್ನು ಕಂಡಕಂಡಲ್ಲಿ ಘೇರಾವ್ ಮಾಡಿ: ರೈತ-ದಲಿತ ಕಾರ್ಮಿಕ ಐಕ್ಯ ಹೋರಾಟ ಸಮಿತಿ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...