Homeಮುಖಪುಟಚಿಲ್ಲರೆ ವ್ಯಾಪಾರದಲ್ಲಿ ಬಂಡವಾಳಿಗರ ಏಕಸ್ವಾಮ್ಯ: ಗ್ರಾಹಕರಿಗೆ ಬೆಲೆಏರಿಕೆಯ ಬಿಸಿ

ಚಿಲ್ಲರೆ ವ್ಯಾಪಾರದಲ್ಲಿ ಬಂಡವಾಳಿಗರ ಏಕಸ್ವಾಮ್ಯ: ಗ್ರಾಹಕರಿಗೆ ಬೆಲೆಏರಿಕೆಯ ಬಿಸಿ

ಇಡೀ ವಿಶಾಲ ಕರ್ನಾಟಕದ ಜನತೆ ನಿತ್ಯ ತೊಗರಿಬೇಳೆ ಉಪಯೋಗಿಸುತ್ತಿದ್ದರೂ ರೈತರಿಗೆ ಮಾತ್ರ ಅದು ಲಾಭ ತರುವ ಬೆಳೆಯಾಗಿಲ್ಲ. ಅಲ್ಲದೆ ವರ್ಷದಿಂದ ವರ್ಷಕ್ಕೆ ತೊಗರಿ ಬೇಸಾಯ ಮಾಡುವವರ ಸಂಖ್ಯೆ ಕ್ಷೀಣಿಸುತ್ತಿದೆ.

- Advertisement -
- Advertisement -

ಇಷ್ಟರಲ್ಲಿಯೇ ಮೆಟ್ರೋ ಕ್ಯಾಶ್ ಅಂಡ್ ಕ್ಯಾರಿ ಕಾರ್ಪೊರೇಟ್ ಚಿಲ್ಲರೆ ವ್ಯಾಪಾರಿ ಸಂಸ್ಥೆ ತುಮಕೂರಿನಲ್ಲಿ ತನ್ನ 28ನೇ ಮಳಿಗೆಯನ್ನು ತೆರೆಯಲಿದೆ. ಇದು ಭಾರತದಲ್ಲಿ ಆಳಕ್ಕೆ ಇಳಿಯುತ್ತಿರುವ ಜಾಗತೀಕರಣ. ಬೆಳೆಯುತ್ತಿದೆ ಎಂದು ಹೇಳಲಾಗುತ್ತಿರುವ ಭಾರತದ ಆರ್ಥಿಕತೆಯ ಪ್ರತಿಫಲನ. (ಭಾರತವನ್ನು ಒತ್ತಾಯ ಪೂರ್ವಕವಾಗಿ ಆರ್ಥಿಕತೆಯಾಗಿ ಪರಿವರ್ತಿಸಲಾಗುತ್ತಿದ್ದು, ಕುಸಿದಿದೆ ಎಂದು ಹೇಳಲಾಗುತ್ತಿರುವ ಇದು ತಾತ್ಕಾಲಿಕವಾದುದ್ದು. ಮುಂಬರುವ ದಿನಗಳಲ್ಲಿ ನಮ್ಮ ದೇಶವು ಕಾರ್ಪೋರೇಟ್ ಗಳಿಗೆ ಸುಸ್ಥಿರವಾದ ಮಾರುಕಟ್ಟೆಯಾಗಿ ಮಾರ್ಪಾಡಾಗಲಿದೆ)

ಇದು ಭಾರತದ ಭವಿಷ್ಯದ ಮಟ್ಟಿಗೆ ಬಹು ಗಂಭೀರವಾದ ಹಾಗೂ ಆತಂಕಪಡಬೇಕಾದ ಬೆಳವಣಿಗೆ. ಜನಸಾಮಾನ್ಯರ ನಿತ್ಯ ಬದುಕಿನ ಜೀವನಾವಶ್ಯಕ ಮತ್ತು ಆಹಾರಪದಾರ್ಥಗಳ ಚಿಲ್ಲರೆ ಮಾರಾಟ ಮಾಡುತ್ತಿರುವವರು ಮಾರುಕಟ್ಟೆಯನ್ನು ವಿಸ್ತರಿಸುವ ಮೂಲಕ ಆಹಾರದ ಮೇಲೆ ಏಕಸ್ವಾಮ್ಯ ಸಾಧಿಸುತ್ತಿದ್ದಾರೆ. ಹೀಗೆ ಏಕಸ್ವಾಮ್ಯ ಸಾಧಿಸುತ್ತಾ ಬೆಳೆಯುವ ಈ ಕಾರ್ಪೊರೇಟ್ ಕಂಪನಿಗಳು ಮಾರುಕಟ್ಟೆಯಲ್ಲಿ ತಲ್ಲಣವನ್ನೇ ಉಂಟು ಮಾಡುತ್ತಾರೆ. ಹಣದುಬ್ಬರ ತರುತ್ತಾರೆ. ಆ ಮೂಲಕ ನಮಗೆಲ್ಲ ಬೆಲೆ ಏರಿಕೆಯ ಬಿಸಿಯನ್ನು ತಟ್ಟಿಸುತ್ತಾರೆ. ಇದಕ್ಕೆ ಇಂದಿನ ಸಮಾಜ ಸಾಕ್ಷಿಯಾಗಿದೆ. ಬೆಲೆ ಏರಿಕೆ ಎಂಬುದು ನಿತ್ಯ ನಿರಂತರವಾಗಿ ಕಾಣಬಹುದಾಗಿದೆ.

ಕರೋನಾ ಕಾರಣದಿಂದ ಇಡೀ ಆರ್ಥಿಕತೆಯೇ ಸ್ಥಗಿತಗೊಂಡಿರುವತಹ ಸಮಯದಲ್ಲಿಯು ನಿತ್ಯ ನಿರಂತರವಾಗಿರುವ ಬೆಲೆ ಏರಿಕೆಯು ಇವರು ತರಬಹುದಾದ ಹಣದುಬ್ಬರವನ್ನು ಸಾಕ್ಷೀಕರಿಸುತ್ತದೆ.
ಈ ಕಾರ್ಪೊರೇಟ್ ಚಿಲ್ಲರೆ ಮಾರಾಟ ಕಂಪನಿಗಳು ದೇಸಿಯ ಸ್ಥಳೀಯ ಚಿಲ್ಲರೆ ಮಾರಾಟಗಾರಂತಲ್ಲ. ಸ್ಥಳೀಯ ಮಾರಾಟಗಾರರು ತಮ್ಮತಮ್ಮಲ್ಲೇ ಪೈಪೋಟಿ ನಡೆಸಿಕೊಳ್ಳುತ್ತಾ ವಹಿವಾಟು ನಡೆಸುವವರಾಗಿದ್ದು ಸರ್ಕಾರಿ ಮಟ್ಟದಲ್ಲಿ ಇವರ ಹಸ್ತಕ್ಷೇಪ ಕ್ಷೀಣವಾಗಿರುತ್ತದೆ ಅವರ ಬಹುಪಾಲು ವಹಿವಾಟು ಸ್ಥಳೀಯ ಆರ್ಥಿಕತೆಯ ಉತ್ತೇಜಕವಾಗಿರುತ್ತದೆ.

Photo Courtesy: JustDial

ಆದರೆ ಕಾರ್ಪೊರೇಟ್ ಕಂಪನಿಗಳು ಹಾಗಲ್ಲ. ಸರ್ಕಾರಕ್ಕೆ ಇವರೇ ನಿರ್ದೇಶಕರಾಗಿರುತ್ತಾರೆ, ನೆರಳಾಗಿರುತ್ತಾರೆ. ಇಂತಹ ಹಿನ್ನೆಲೆಯುಳ್ಳ ಲಾಭಕೋರರು ಒಂದೆಡೆ ತಮ್ಮ ಮಾರಾಟ ಮಳಿಗೆಗಳನ್ನು ನಿರಂತರವಾಗಿ ತೆರೆಯತ್ತಿರುತ್ತಾರೆ. ಇದಕ್ಕಾಗಿ ರಾಜಕೀಯ ಲಾಬಿ ನಡೆಸುತ್ತಾರೆ. ತತ್ಪರಿಣಾಮ ಅಧಿಕಾರಿ ವರ್ಗದಿಂದ ಬೀದಿ ವ್ಯಾಪಾರಿಗಳಿಗೆ ಕಿರುಕುಳಗಳು ಹೆಚ್ಚುತ್ತವೆ. ಪ್ರಜಾಪ್ರಭುತ್ವ ಸೋಗಿನಲ್ಲಿರುವ ಸರ್ಕಾರಗಳಿಂದ ಉಸಿರುಕಟ್ಟಿಸುವ ಕಾನೂನು, ನೀತಿ ನಿಯಮಾವಳಿಗಳು ಜಾರಿಯಾಗುತ್ತದೆ. ಸಂಚಾರ ದಟ್ಟನೆಯ ನೆಪವೊಡ್ಡಿ ನಗರಪ್ರದೇಶದಿಂದ ಎಪಿಎಂಸಿ, ಆರ್‌ಎಂಸಿ ಯಾರ್ಡ್‌ಗಳನ್ನು ನಗರಗಳಿಂದ ಹೊರಕ್ಕೆ ಎತ್ತಂಗಡಿ ಮಾಡಲಾಗುತ್ತದೆ

ಇದೇ ರೀತಿಯಲ್ಲಿ ತುಮಕೂರಿನ ಆರ್‌ಎಂಸಿಯನ್ನು ನಗರದಿಂದ ಹೊರವಲಯಕ್ಕೆ ಸ್ಥಳಾಂತರಿಸಿದರೆ, ಬೆಂಗಳೂರಿನ ಯಶವಂತಪುರದ ಆರ್‌ಎಂಸಿ ಯಾರ್ಡನ್ನು ನಗರದಿಂದ ಬಹುದೂರಕ್ಕೆ ಯಾವುದೇ ಸವಲತ್ತು ಇರದ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಇದರ ದೆಸೆಯಿಂದಾಗಿ ನಗರ ಪ್ರದೇಶದ ಹೂ ತರಕಾರಿ ಹಣ್ಣು ವ್ಯಾಪಾರಿಗಳ ಸಾಗಾಣಿಕೆ ವೆಚ್ಚ ಹೆಚ್ಚುತ್ತಿದ್ದು, ನಗರ ಪ್ರದೇಶದಲ್ಲಿ ಇಂದು ತರಕಾರಿಗಳ ಬೆಲೆ ಹೆಚ್ಚಾಗುತ್ತಿದೆ. ಇದರ ಪರಿಣಾಮವಾಗಿ ಬೀದಿ ಬದಿ ವ್ಯಾಪಾರಿಗಳೆಡೆಗೆ ನಗರವಾಸಿಗಳು ಬೆನ್ನು ಮಾಡಿ ಮೆಟ್ರೋ ಕ್ಯಾಶ್ ಅಂಡ್ ಕ್ಯಾರಿ, ರಿಲಯನ್ಸ್ ಫ್ರೆಶ್ ನತ್ತ ಮುಖ ಮಾಡುತ್ತಿದ್ದಾರೆ.

ಇಂತಹ ಸರ್ವ ರೀತಿಯ ಮಸಲತ್ತನೊಂದಿಗೆ ಮಾರುಕಟ್ಟೆ ವಿಸ್ತರಿಸುತ್ತಿರುವ ಈ ಕಂಪನಿಗಳು ಮುಂಬರುವ ದಿನಗಳಲ್ಲಿ ನಾವು ಉಣ್ಣುವ ಪ್ರತೀ ಅಗುಳು ಅನ್ನದ ಮೇಲೆಯೂ ಏಕಸ್ವಾಮ್ಯ ಸಾಧಿಸಲಿದ್ದಾರೆ. ನಮ್ಮ ರೈತರೇ ಬೆಳೆ ಬೆಳೆದರೂ ಮಾರುಕಟ್ಟೆಯ ಮೇಲೆ ಕಾರ್ಪೋರೇಟ್ ಗಳು ಸಾಧಿಸುತ್ತಿರುರುವುದರಿಂದ ಆ ಬೆಳೆಗಳ ಒಡೆಯರು ಕಾರ್ಪೋರೇಟ್ ಗಳೇ ಆಗುತ್ತಾರೆ. ಒಮ್ಮೆ ಇವರು ಏಕಸ್ವಾಮ್ಯ ಸಾಧಿಸಿದರೆಂದರೆ ಮುಗಿಯಿತು. ತಮ್ಮ ಅನುಕೂಲಕ್ಕೆ ತಕ್ಕಂತೆ ಅವುಗಳ ಬೆಲೆಯಲ್ಲಿ ಏರಿಳಿತ ಉಂಟುಮಾಡುತ್ತಾರೆ. ಇಡೀ ವಿಶ್ವಾದ್ಯಂತ ತಮ್ಮ ಜಾಲ ಹೊಂದಿರುವ ಇವರು ಯಾವ ದೇಶದಲ್ಲಿ ಯಾವ ವಸ್ತು ಯಾವ ಬೆಲೆಗೆ ದೊರೆಯುತ್ತದೆ ಎಂಬುದರ ಸ್ಪಷ್ಟ ಪರಿಜ್ಞಾನ ಹೊಂದಿದ್ದಾರೆ ಮತ್ತು ಅವುಗಳನ್ನು ಅಲ್ಲಿಂದ ಇಲ್ಲಿಗೆ ತಂದು ಮಾರಾಟ ಮಾಡುವುದರ ಮೂಲಕ ಸ್ಥಳೀಯವಾಗಿ ಅದರ ಸುತ್ತ ತಲೆ ತಲಾಂತರದಿಂದ ಎಣೆದುಕೊಂಡಿರಬಹುದಾದ ಆರ್ಥಿಕ ಸಂರಚನೆಯನ್ನು ತುಂಡರಿಸುತ್ತಾರೆ.

ಯಶವಂತಪುರ ಎಪಿಎಂಸಿ: Photo Courtesy: Bangalorean.com

ಮಾರುಕಟ್ಟೆಯ ಮೇಲೆ ಇವರ ಏಕಸ್ವಾಮ್ಯ ವಿಸ್ತರಿಸಿದಂತೆಲ್ಲ ಭಾರತೀಯ ಕೃಷಿ ಉತ್ಪನ್ನ ವರ್ಷದಿಂದ ವರ್ಷಕ್ಕೆ ಕುಗ್ಗುತ್ತಲೇ ಸಾಗಿದೆ. 2000ನೇ ಇಸವಿಯಲ್ಲಿ ಶೇ. 85 ರಷ್ಟಿದ್ದ ಭಾರತದ ಕೃಷಿ ಉತ್ಪನ್ನ ಈಗ ಶೇ. 53ಕ್ಕೆ ಇಳಿಕೆ ಕಂಡಿದೆ. ಸದ್ಯ ಪ್ರತಿ ವರ್ಷ ಶೇ. 2.8 ಜನ ಕೃಷಿಯಿಂದ ವಿಮುಖರಾಗುತ್ತಿದ್ದಾರೆ. ಭಾರತದ ಬೆಳೆಯುತ್ತಿರುವ ಆರ್ಥಿಕತೆಯ ಅಂತರಾಳವಿದು. ಕಾರ್ಪೋರೇಟ್ ಗಳ ಮಾರುಕಟ್ಟೆಯ ಮೇಲಿನ ಏಕಸ್ವಾಮ್ಯ ಇದೇ ರೀತಿ ಮುಂದುವರೆದರೆ ಮುಂಬರುವ ದಿನಗಳಲ್ಲಿ ಈ ಪರಿಮಾಣ ಇನ್ನೂ ಹೆಚ್ಚಾಗಲಿದೆ. ಇದರ ಒಂದು ಉದಾಹರಣೆಯಾಗಿ ತೊಗರಿಬೇಳೆಯ ವಿಚಾರವನ್ನೇ ತೆಗೆದುಕೊಳ್ಳಬಹುದು. ಇಡೀ ವಿಶಾಲ ಕರ್ನಾಟಕದ ಜನತೆ ನಿತ್ಯ ತೊಗರಿಬೇಳೆ ಉಪಯೋಗಿಸುತ್ತಿದ್ದರೂ ರೈತರಿಗೆ ಮಾತ್ರ ಅದು ಲಾಭ ತರುವ ಬೆಳೆಯಾಗಿಲ್ಲ. ಅಲ್ಲದೆ ವರ್ಷದಿಂದ ವರ್ಷಕ್ಕೆ ತೊಗರಿ ಬೇಸಾಯ ಮಾಡುವವರ ಸಂಖ್ಯೆ ಕ್ಷೀಣಿಸುತ್ತಿದೆ. ಇದಕ್ಕೆ ಕಾರಣವಾಗಿರುವುದು ಯಾವುದೋ ದೂರದ ಕಡಿಮೆ ಬೆಲೆಗೆ ಸಿಗಬಹುದಾದ ದೇಶದಿಂದ ತೊಗರಿಬೇಳೆಯನ್ನು ಇಲ್ಲಿಗೆ ತಂದು ಸದ್ದಿಲ್ಲದೆ ಮಾರುವುದರ ಮೂಲಕ ನಮ್ಮದೇ ಮಾರುಕಟ್ಟೆ ನಮಗೆ ಇಲ್ಲದಂತೆ ಮಾಡುತ್ತಿರುವುದು.

ಕೃಷಿ ಪ್ರಧಾನವಾದ ಭಾರತದಲ್ಲಿನ ಎಲ್ಲ ರಾಷ್ಟ್ರೀಯತೆಗಳ, ಸಂಸ್ಕೃತಿಗಳ ಬೆನ್ನೆಲುಬು ಇಲ್ಲಿಯ ರೈತರು, ಇಲ್ಲಿಯ ಆರ್ಥಿಕತೆಯನ್ನವಲಂಬಿಸಿರುವ ಕುಶಲಕರ್ಮಿಗಳು ಸಣ್ಣ ಮತ್ತು ಬೀದಿ ವ್ಯಾಪಾರಿಗಳು. ಕಾರ್ಪೊರೇಟ್ ಗಳು ಹೊಂದುವ ಏಕಸ್ವಾಮ್ಯದಿಂದಾಗಿ ಇವರು ನೆಲೆ ಕಳೆದುಕೊಳ್ಳುವುದರೊಂದಿಗೆ ಎಲ್ಲಾ ಸ್ಥಳೀಯ, ಪುರಾತನ, ಸುಸ್ಥಿರ ಆರ್ಥಿಕತೆ ಸರ್ವನಾಶವಾಬಿಡುತ್ತದೆ. ಜೊತೆಗೆ ಭಾಷೆ, ರಾಷ್ಟ್ರೀಯತೆ ಸಂಸ್ಕೃತಿಯ ಅವಸಾನಕ್ಕೂ ಮುನ್ನುಡಿ ಬರೆಯುತ್ತದೆ.

ಇಂಥ ಕಂಪನಿಗಳಲ್ಲಿ ಪಡೆಯುವ ಒಂದೊಂದು ಗ್ರಾಹಕತ್ವ ನಮ್ಮ ರಾಷ್ಟ್ರೀಯತೆ ಭಾಷೆ-ಸಂಸ್ಕೃತಿಯ ಶವಪೆಟ್ಟಿಗೆಗೆ ಹೊಡೆಯುವ ಮೊಳೆ ಆಗಿರುತ್ತದೆ. ಜಾಗತೀಕರಣದ ಈ ಸಂದರ್ಭದಲ್ಲಿ ಬೆಳೆಯುತ್ತಿರುವ ಆರ್ಥಿಕತೆಯನ್ನು ಸರಿಯಾಗಿ ಸಮಾಜ ಅರ್ಥಮಾಡಿಕೊಳ್ಳದಿದ್ದರೆ ಅದು ತನ್ನ ಅವನತಿಯನ್ನು ತಾನೇ ಮಾಡಿಕೊಳ್ಳುತ್ತದೆ. ಪ್ರಸ್ತುತ ಕಾಲಘಟ್ಟದಲ್ಲಿ ಎಲ್ಲಕ್ಕಿಂತ ಆಳವಾಗಿ ಆರ್ಥಿಕತೆಯನ್ನು ಸರಿಯಾಗಿ ಅರ್ಥ ಮಾಡಿಕೊಳ್ಳಬೇಕಿರುವುದು ಸಮಾಜದ ಆದ್ಯ ಕರ್ತವ್ಯವಾಗಿದೆ. ಆರ್ಥಿಕತೆಯನ್ನು ಸರಿಯಾಗಿ ಅರ್ಥಮಾಡಿಕೊಳ್ಳದೆ ಭಾಷೆ-ಸಂಸ್ಕೃತಿ ರಾಷ್ಟ್ರೀಯತೆಗಳನ್ನು ಕಾಪಾಡಿಕೊಳ್ಳುತ್ತೇವೆ ಎಂದು ನಡೆಯುವ ಯಾವುದೇ ಹೋರಾಟಗಳು, ಚಳುವಳಿಗಳು, ಆಂದೋಲನಗಳು ಗುರಿ ತಲುಪುವಲ್ಲಿ ವಿಫಲಗೊಳ್ಳುತ್ತವೆ. ನಮ್ಮ ಸಂಸ್ಕೃತಿ, ನಮ್ಮ ಅಸ್ಮಿತೆ ನಮ್ಮ ರಾಷ್ಟ್ರೀಯತೆ ಉಳಿಯಬೇಕು ಎಂದರೆ ಇಂತಹ ಕಾರ್ಪೊರೇಟ್ ಕಂಪನಿಗಳು ನಾಡಿನಿಂದ ಹೊರಹಾಕುವುದರತ್ತ ಗಮನ ಕೇಂದ್ರೀಕರಿಸಬೇಕಿದೆ. ಮುಂಬರುವ ದಿನಗಳಲ್ಲಿ ಈ ಕಂಪನಿ ಇನ್ನಿತರ ನಗರಗಳಲ್ಲಿ ಹೊಸ ಹೊಸ ಮಳಿಗೆಗಳನ್ನು ತೆರೆಯುವ ಯೋಚನೆಯಲ್ಲಿದೆ. ಅರ್ಥಾತ್ ಸ್ಥಳೀಯ ಆರ್ಥಿಕತೆಯ ಭಾಷೆ ಸಂಸ್ಕೃತಿ ಅಸ್ಮಿತೆ ಮೇಲೆ ದಾಳಿ ಇನ್ನಷ್ಟು ಹೆಚ್ಚಲಿದೆ. ಪ್ರಸ್ತುತ ಸಂದರ್ಭದಲ್ಲಿ ಭಾಷೆ-ಸಂಸ್ಕೃತಿ ರಾಷ್ಟ್ರೀಯತೆಗಳ ಅಸ್ಮಿತೆಯ ರಕ್ಷಣೆಗಾಗಿ ತನ್ನದೇ ಆದ ಒಂದು ಕಾರ್ಯಸೂಚಿಯನ್ನು ಹಾಕಿಕೊಳ್ಳಬೇಕಾದ ಅನಿವಾರ್ಯತೆ ಸಮಾಜದ ಮುಂದಿದೆ.

  • ಸೂರಜ್

ಇದನ್ನೂ ಓದಿ: ಮುಖ್ಯಮಂತ್ರಿಯನ್ನು ಕಂಡಕಂಡಲ್ಲಿ ಘೇರಾವ್ ಮಾಡಿ: ರೈತ-ದಲಿತ ಕಾರ್ಮಿಕ ಐಕ್ಯ ಹೋರಾಟ ಸಮಿತಿ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...