Homeಮುಖಪುಟಚಿಲ್ಲರೆ ವ್ಯಾಪಾರದಲ್ಲಿ ಬಂಡವಾಳಿಗರ ಏಕಸ್ವಾಮ್ಯ: ಗ್ರಾಹಕರಿಗೆ ಬೆಲೆಏರಿಕೆಯ ಬಿಸಿ

ಚಿಲ್ಲರೆ ವ್ಯಾಪಾರದಲ್ಲಿ ಬಂಡವಾಳಿಗರ ಏಕಸ್ವಾಮ್ಯ: ಗ್ರಾಹಕರಿಗೆ ಬೆಲೆಏರಿಕೆಯ ಬಿಸಿ

ಇಡೀ ವಿಶಾಲ ಕರ್ನಾಟಕದ ಜನತೆ ನಿತ್ಯ ತೊಗರಿಬೇಳೆ ಉಪಯೋಗಿಸುತ್ತಿದ್ದರೂ ರೈತರಿಗೆ ಮಾತ್ರ ಅದು ಲಾಭ ತರುವ ಬೆಳೆಯಾಗಿಲ್ಲ. ಅಲ್ಲದೆ ವರ್ಷದಿಂದ ವರ್ಷಕ್ಕೆ ತೊಗರಿ ಬೇಸಾಯ ಮಾಡುವವರ ಸಂಖ್ಯೆ ಕ್ಷೀಣಿಸುತ್ತಿದೆ.

- Advertisement -
- Advertisement -

ಇಷ್ಟರಲ್ಲಿಯೇ ಮೆಟ್ರೋ ಕ್ಯಾಶ್ ಅಂಡ್ ಕ್ಯಾರಿ ಕಾರ್ಪೊರೇಟ್ ಚಿಲ್ಲರೆ ವ್ಯಾಪಾರಿ ಸಂಸ್ಥೆ ತುಮಕೂರಿನಲ್ಲಿ ತನ್ನ 28ನೇ ಮಳಿಗೆಯನ್ನು ತೆರೆಯಲಿದೆ. ಇದು ಭಾರತದಲ್ಲಿ ಆಳಕ್ಕೆ ಇಳಿಯುತ್ತಿರುವ ಜಾಗತೀಕರಣ. ಬೆಳೆಯುತ್ತಿದೆ ಎಂದು ಹೇಳಲಾಗುತ್ತಿರುವ ಭಾರತದ ಆರ್ಥಿಕತೆಯ ಪ್ರತಿಫಲನ. (ಭಾರತವನ್ನು ಒತ್ತಾಯ ಪೂರ್ವಕವಾಗಿ ಆರ್ಥಿಕತೆಯಾಗಿ ಪರಿವರ್ತಿಸಲಾಗುತ್ತಿದ್ದು, ಕುಸಿದಿದೆ ಎಂದು ಹೇಳಲಾಗುತ್ತಿರುವ ಇದು ತಾತ್ಕಾಲಿಕವಾದುದ್ದು. ಮುಂಬರುವ ದಿನಗಳಲ್ಲಿ ನಮ್ಮ ದೇಶವು ಕಾರ್ಪೋರೇಟ್ ಗಳಿಗೆ ಸುಸ್ಥಿರವಾದ ಮಾರುಕಟ್ಟೆಯಾಗಿ ಮಾರ್ಪಾಡಾಗಲಿದೆ)

ಇದು ಭಾರತದ ಭವಿಷ್ಯದ ಮಟ್ಟಿಗೆ ಬಹು ಗಂಭೀರವಾದ ಹಾಗೂ ಆತಂಕಪಡಬೇಕಾದ ಬೆಳವಣಿಗೆ. ಜನಸಾಮಾನ್ಯರ ನಿತ್ಯ ಬದುಕಿನ ಜೀವನಾವಶ್ಯಕ ಮತ್ತು ಆಹಾರಪದಾರ್ಥಗಳ ಚಿಲ್ಲರೆ ಮಾರಾಟ ಮಾಡುತ್ತಿರುವವರು ಮಾರುಕಟ್ಟೆಯನ್ನು ವಿಸ್ತರಿಸುವ ಮೂಲಕ ಆಹಾರದ ಮೇಲೆ ಏಕಸ್ವಾಮ್ಯ ಸಾಧಿಸುತ್ತಿದ್ದಾರೆ. ಹೀಗೆ ಏಕಸ್ವಾಮ್ಯ ಸಾಧಿಸುತ್ತಾ ಬೆಳೆಯುವ ಈ ಕಾರ್ಪೊರೇಟ್ ಕಂಪನಿಗಳು ಮಾರುಕಟ್ಟೆಯಲ್ಲಿ ತಲ್ಲಣವನ್ನೇ ಉಂಟು ಮಾಡುತ್ತಾರೆ. ಹಣದುಬ್ಬರ ತರುತ್ತಾರೆ. ಆ ಮೂಲಕ ನಮಗೆಲ್ಲ ಬೆಲೆ ಏರಿಕೆಯ ಬಿಸಿಯನ್ನು ತಟ್ಟಿಸುತ್ತಾರೆ. ಇದಕ್ಕೆ ಇಂದಿನ ಸಮಾಜ ಸಾಕ್ಷಿಯಾಗಿದೆ. ಬೆಲೆ ಏರಿಕೆ ಎಂಬುದು ನಿತ್ಯ ನಿರಂತರವಾಗಿ ಕಾಣಬಹುದಾಗಿದೆ.

ಕರೋನಾ ಕಾರಣದಿಂದ ಇಡೀ ಆರ್ಥಿಕತೆಯೇ ಸ್ಥಗಿತಗೊಂಡಿರುವತಹ ಸಮಯದಲ್ಲಿಯು ನಿತ್ಯ ನಿರಂತರವಾಗಿರುವ ಬೆಲೆ ಏರಿಕೆಯು ಇವರು ತರಬಹುದಾದ ಹಣದುಬ್ಬರವನ್ನು ಸಾಕ್ಷೀಕರಿಸುತ್ತದೆ.
ಈ ಕಾರ್ಪೊರೇಟ್ ಚಿಲ್ಲರೆ ಮಾರಾಟ ಕಂಪನಿಗಳು ದೇಸಿಯ ಸ್ಥಳೀಯ ಚಿಲ್ಲರೆ ಮಾರಾಟಗಾರಂತಲ್ಲ. ಸ್ಥಳೀಯ ಮಾರಾಟಗಾರರು ತಮ್ಮತಮ್ಮಲ್ಲೇ ಪೈಪೋಟಿ ನಡೆಸಿಕೊಳ್ಳುತ್ತಾ ವಹಿವಾಟು ನಡೆಸುವವರಾಗಿದ್ದು ಸರ್ಕಾರಿ ಮಟ್ಟದಲ್ಲಿ ಇವರ ಹಸ್ತಕ್ಷೇಪ ಕ್ಷೀಣವಾಗಿರುತ್ತದೆ ಅವರ ಬಹುಪಾಲು ವಹಿವಾಟು ಸ್ಥಳೀಯ ಆರ್ಥಿಕತೆಯ ಉತ್ತೇಜಕವಾಗಿರುತ್ತದೆ.

Photo Courtesy: JustDial

ಆದರೆ ಕಾರ್ಪೊರೇಟ್ ಕಂಪನಿಗಳು ಹಾಗಲ್ಲ. ಸರ್ಕಾರಕ್ಕೆ ಇವರೇ ನಿರ್ದೇಶಕರಾಗಿರುತ್ತಾರೆ, ನೆರಳಾಗಿರುತ್ತಾರೆ. ಇಂತಹ ಹಿನ್ನೆಲೆಯುಳ್ಳ ಲಾಭಕೋರರು ಒಂದೆಡೆ ತಮ್ಮ ಮಾರಾಟ ಮಳಿಗೆಗಳನ್ನು ನಿರಂತರವಾಗಿ ತೆರೆಯತ್ತಿರುತ್ತಾರೆ. ಇದಕ್ಕಾಗಿ ರಾಜಕೀಯ ಲಾಬಿ ನಡೆಸುತ್ತಾರೆ. ತತ್ಪರಿಣಾಮ ಅಧಿಕಾರಿ ವರ್ಗದಿಂದ ಬೀದಿ ವ್ಯಾಪಾರಿಗಳಿಗೆ ಕಿರುಕುಳಗಳು ಹೆಚ್ಚುತ್ತವೆ. ಪ್ರಜಾಪ್ರಭುತ್ವ ಸೋಗಿನಲ್ಲಿರುವ ಸರ್ಕಾರಗಳಿಂದ ಉಸಿರುಕಟ್ಟಿಸುವ ಕಾನೂನು, ನೀತಿ ನಿಯಮಾವಳಿಗಳು ಜಾರಿಯಾಗುತ್ತದೆ. ಸಂಚಾರ ದಟ್ಟನೆಯ ನೆಪವೊಡ್ಡಿ ನಗರಪ್ರದೇಶದಿಂದ ಎಪಿಎಂಸಿ, ಆರ್‌ಎಂಸಿ ಯಾರ್ಡ್‌ಗಳನ್ನು ನಗರಗಳಿಂದ ಹೊರಕ್ಕೆ ಎತ್ತಂಗಡಿ ಮಾಡಲಾಗುತ್ತದೆ

ಇದೇ ರೀತಿಯಲ್ಲಿ ತುಮಕೂರಿನ ಆರ್‌ಎಂಸಿಯನ್ನು ನಗರದಿಂದ ಹೊರವಲಯಕ್ಕೆ ಸ್ಥಳಾಂತರಿಸಿದರೆ, ಬೆಂಗಳೂರಿನ ಯಶವಂತಪುರದ ಆರ್‌ಎಂಸಿ ಯಾರ್ಡನ್ನು ನಗರದಿಂದ ಬಹುದೂರಕ್ಕೆ ಯಾವುದೇ ಸವಲತ್ತು ಇರದ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಇದರ ದೆಸೆಯಿಂದಾಗಿ ನಗರ ಪ್ರದೇಶದ ಹೂ ತರಕಾರಿ ಹಣ್ಣು ವ್ಯಾಪಾರಿಗಳ ಸಾಗಾಣಿಕೆ ವೆಚ್ಚ ಹೆಚ್ಚುತ್ತಿದ್ದು, ನಗರ ಪ್ರದೇಶದಲ್ಲಿ ಇಂದು ತರಕಾರಿಗಳ ಬೆಲೆ ಹೆಚ್ಚಾಗುತ್ತಿದೆ. ಇದರ ಪರಿಣಾಮವಾಗಿ ಬೀದಿ ಬದಿ ವ್ಯಾಪಾರಿಗಳೆಡೆಗೆ ನಗರವಾಸಿಗಳು ಬೆನ್ನು ಮಾಡಿ ಮೆಟ್ರೋ ಕ್ಯಾಶ್ ಅಂಡ್ ಕ್ಯಾರಿ, ರಿಲಯನ್ಸ್ ಫ್ರೆಶ್ ನತ್ತ ಮುಖ ಮಾಡುತ್ತಿದ್ದಾರೆ.

ಇಂತಹ ಸರ್ವ ರೀತಿಯ ಮಸಲತ್ತನೊಂದಿಗೆ ಮಾರುಕಟ್ಟೆ ವಿಸ್ತರಿಸುತ್ತಿರುವ ಈ ಕಂಪನಿಗಳು ಮುಂಬರುವ ದಿನಗಳಲ್ಲಿ ನಾವು ಉಣ್ಣುವ ಪ್ರತೀ ಅಗುಳು ಅನ್ನದ ಮೇಲೆಯೂ ಏಕಸ್ವಾಮ್ಯ ಸಾಧಿಸಲಿದ್ದಾರೆ. ನಮ್ಮ ರೈತರೇ ಬೆಳೆ ಬೆಳೆದರೂ ಮಾರುಕಟ್ಟೆಯ ಮೇಲೆ ಕಾರ್ಪೋರೇಟ್ ಗಳು ಸಾಧಿಸುತ್ತಿರುರುವುದರಿಂದ ಆ ಬೆಳೆಗಳ ಒಡೆಯರು ಕಾರ್ಪೋರೇಟ್ ಗಳೇ ಆಗುತ್ತಾರೆ. ಒಮ್ಮೆ ಇವರು ಏಕಸ್ವಾಮ್ಯ ಸಾಧಿಸಿದರೆಂದರೆ ಮುಗಿಯಿತು. ತಮ್ಮ ಅನುಕೂಲಕ್ಕೆ ತಕ್ಕಂತೆ ಅವುಗಳ ಬೆಲೆಯಲ್ಲಿ ಏರಿಳಿತ ಉಂಟುಮಾಡುತ್ತಾರೆ. ಇಡೀ ವಿಶ್ವಾದ್ಯಂತ ತಮ್ಮ ಜಾಲ ಹೊಂದಿರುವ ಇವರು ಯಾವ ದೇಶದಲ್ಲಿ ಯಾವ ವಸ್ತು ಯಾವ ಬೆಲೆಗೆ ದೊರೆಯುತ್ತದೆ ಎಂಬುದರ ಸ್ಪಷ್ಟ ಪರಿಜ್ಞಾನ ಹೊಂದಿದ್ದಾರೆ ಮತ್ತು ಅವುಗಳನ್ನು ಅಲ್ಲಿಂದ ಇಲ್ಲಿಗೆ ತಂದು ಮಾರಾಟ ಮಾಡುವುದರ ಮೂಲಕ ಸ್ಥಳೀಯವಾಗಿ ಅದರ ಸುತ್ತ ತಲೆ ತಲಾಂತರದಿಂದ ಎಣೆದುಕೊಂಡಿರಬಹುದಾದ ಆರ್ಥಿಕ ಸಂರಚನೆಯನ್ನು ತುಂಡರಿಸುತ್ತಾರೆ.

ಯಶವಂತಪುರ ಎಪಿಎಂಸಿ: Photo Courtesy: Bangalorean.com

ಮಾರುಕಟ್ಟೆಯ ಮೇಲೆ ಇವರ ಏಕಸ್ವಾಮ್ಯ ವಿಸ್ತರಿಸಿದಂತೆಲ್ಲ ಭಾರತೀಯ ಕೃಷಿ ಉತ್ಪನ್ನ ವರ್ಷದಿಂದ ವರ್ಷಕ್ಕೆ ಕುಗ್ಗುತ್ತಲೇ ಸಾಗಿದೆ. 2000ನೇ ಇಸವಿಯಲ್ಲಿ ಶೇ. 85 ರಷ್ಟಿದ್ದ ಭಾರತದ ಕೃಷಿ ಉತ್ಪನ್ನ ಈಗ ಶೇ. 53ಕ್ಕೆ ಇಳಿಕೆ ಕಂಡಿದೆ. ಸದ್ಯ ಪ್ರತಿ ವರ್ಷ ಶೇ. 2.8 ಜನ ಕೃಷಿಯಿಂದ ವಿಮುಖರಾಗುತ್ತಿದ್ದಾರೆ. ಭಾರತದ ಬೆಳೆಯುತ್ತಿರುವ ಆರ್ಥಿಕತೆಯ ಅಂತರಾಳವಿದು. ಕಾರ್ಪೋರೇಟ್ ಗಳ ಮಾರುಕಟ್ಟೆಯ ಮೇಲಿನ ಏಕಸ್ವಾಮ್ಯ ಇದೇ ರೀತಿ ಮುಂದುವರೆದರೆ ಮುಂಬರುವ ದಿನಗಳಲ್ಲಿ ಈ ಪರಿಮಾಣ ಇನ್ನೂ ಹೆಚ್ಚಾಗಲಿದೆ. ಇದರ ಒಂದು ಉದಾಹರಣೆಯಾಗಿ ತೊಗರಿಬೇಳೆಯ ವಿಚಾರವನ್ನೇ ತೆಗೆದುಕೊಳ್ಳಬಹುದು. ಇಡೀ ವಿಶಾಲ ಕರ್ನಾಟಕದ ಜನತೆ ನಿತ್ಯ ತೊಗರಿಬೇಳೆ ಉಪಯೋಗಿಸುತ್ತಿದ್ದರೂ ರೈತರಿಗೆ ಮಾತ್ರ ಅದು ಲಾಭ ತರುವ ಬೆಳೆಯಾಗಿಲ್ಲ. ಅಲ್ಲದೆ ವರ್ಷದಿಂದ ವರ್ಷಕ್ಕೆ ತೊಗರಿ ಬೇಸಾಯ ಮಾಡುವವರ ಸಂಖ್ಯೆ ಕ್ಷೀಣಿಸುತ್ತಿದೆ. ಇದಕ್ಕೆ ಕಾರಣವಾಗಿರುವುದು ಯಾವುದೋ ದೂರದ ಕಡಿಮೆ ಬೆಲೆಗೆ ಸಿಗಬಹುದಾದ ದೇಶದಿಂದ ತೊಗರಿಬೇಳೆಯನ್ನು ಇಲ್ಲಿಗೆ ತಂದು ಸದ್ದಿಲ್ಲದೆ ಮಾರುವುದರ ಮೂಲಕ ನಮ್ಮದೇ ಮಾರುಕಟ್ಟೆ ನಮಗೆ ಇಲ್ಲದಂತೆ ಮಾಡುತ್ತಿರುವುದು.

ಕೃಷಿ ಪ್ರಧಾನವಾದ ಭಾರತದಲ್ಲಿನ ಎಲ್ಲ ರಾಷ್ಟ್ರೀಯತೆಗಳ, ಸಂಸ್ಕೃತಿಗಳ ಬೆನ್ನೆಲುಬು ಇಲ್ಲಿಯ ರೈತರು, ಇಲ್ಲಿಯ ಆರ್ಥಿಕತೆಯನ್ನವಲಂಬಿಸಿರುವ ಕುಶಲಕರ್ಮಿಗಳು ಸಣ್ಣ ಮತ್ತು ಬೀದಿ ವ್ಯಾಪಾರಿಗಳು. ಕಾರ್ಪೊರೇಟ್ ಗಳು ಹೊಂದುವ ಏಕಸ್ವಾಮ್ಯದಿಂದಾಗಿ ಇವರು ನೆಲೆ ಕಳೆದುಕೊಳ್ಳುವುದರೊಂದಿಗೆ ಎಲ್ಲಾ ಸ್ಥಳೀಯ, ಪುರಾತನ, ಸುಸ್ಥಿರ ಆರ್ಥಿಕತೆ ಸರ್ವನಾಶವಾಬಿಡುತ್ತದೆ. ಜೊತೆಗೆ ಭಾಷೆ, ರಾಷ್ಟ್ರೀಯತೆ ಸಂಸ್ಕೃತಿಯ ಅವಸಾನಕ್ಕೂ ಮುನ್ನುಡಿ ಬರೆಯುತ್ತದೆ.

ಇಂಥ ಕಂಪನಿಗಳಲ್ಲಿ ಪಡೆಯುವ ಒಂದೊಂದು ಗ್ರಾಹಕತ್ವ ನಮ್ಮ ರಾಷ್ಟ್ರೀಯತೆ ಭಾಷೆ-ಸಂಸ್ಕೃತಿಯ ಶವಪೆಟ್ಟಿಗೆಗೆ ಹೊಡೆಯುವ ಮೊಳೆ ಆಗಿರುತ್ತದೆ. ಜಾಗತೀಕರಣದ ಈ ಸಂದರ್ಭದಲ್ಲಿ ಬೆಳೆಯುತ್ತಿರುವ ಆರ್ಥಿಕತೆಯನ್ನು ಸರಿಯಾಗಿ ಸಮಾಜ ಅರ್ಥಮಾಡಿಕೊಳ್ಳದಿದ್ದರೆ ಅದು ತನ್ನ ಅವನತಿಯನ್ನು ತಾನೇ ಮಾಡಿಕೊಳ್ಳುತ್ತದೆ. ಪ್ರಸ್ತುತ ಕಾಲಘಟ್ಟದಲ್ಲಿ ಎಲ್ಲಕ್ಕಿಂತ ಆಳವಾಗಿ ಆರ್ಥಿಕತೆಯನ್ನು ಸರಿಯಾಗಿ ಅರ್ಥ ಮಾಡಿಕೊಳ್ಳಬೇಕಿರುವುದು ಸಮಾಜದ ಆದ್ಯ ಕರ್ತವ್ಯವಾಗಿದೆ. ಆರ್ಥಿಕತೆಯನ್ನು ಸರಿಯಾಗಿ ಅರ್ಥಮಾಡಿಕೊಳ್ಳದೆ ಭಾಷೆ-ಸಂಸ್ಕೃತಿ ರಾಷ್ಟ್ರೀಯತೆಗಳನ್ನು ಕಾಪಾಡಿಕೊಳ್ಳುತ್ತೇವೆ ಎಂದು ನಡೆಯುವ ಯಾವುದೇ ಹೋರಾಟಗಳು, ಚಳುವಳಿಗಳು, ಆಂದೋಲನಗಳು ಗುರಿ ತಲುಪುವಲ್ಲಿ ವಿಫಲಗೊಳ್ಳುತ್ತವೆ. ನಮ್ಮ ಸಂಸ್ಕೃತಿ, ನಮ್ಮ ಅಸ್ಮಿತೆ ನಮ್ಮ ರಾಷ್ಟ್ರೀಯತೆ ಉಳಿಯಬೇಕು ಎಂದರೆ ಇಂತಹ ಕಾರ್ಪೊರೇಟ್ ಕಂಪನಿಗಳು ನಾಡಿನಿಂದ ಹೊರಹಾಕುವುದರತ್ತ ಗಮನ ಕೇಂದ್ರೀಕರಿಸಬೇಕಿದೆ. ಮುಂಬರುವ ದಿನಗಳಲ್ಲಿ ಈ ಕಂಪನಿ ಇನ್ನಿತರ ನಗರಗಳಲ್ಲಿ ಹೊಸ ಹೊಸ ಮಳಿಗೆಗಳನ್ನು ತೆರೆಯುವ ಯೋಚನೆಯಲ್ಲಿದೆ. ಅರ್ಥಾತ್ ಸ್ಥಳೀಯ ಆರ್ಥಿಕತೆಯ ಭಾಷೆ ಸಂಸ್ಕೃತಿ ಅಸ್ಮಿತೆ ಮೇಲೆ ದಾಳಿ ಇನ್ನಷ್ಟು ಹೆಚ್ಚಲಿದೆ. ಪ್ರಸ್ತುತ ಸಂದರ್ಭದಲ್ಲಿ ಭಾಷೆ-ಸಂಸ್ಕೃತಿ ರಾಷ್ಟ್ರೀಯತೆಗಳ ಅಸ್ಮಿತೆಯ ರಕ್ಷಣೆಗಾಗಿ ತನ್ನದೇ ಆದ ಒಂದು ಕಾರ್ಯಸೂಚಿಯನ್ನು ಹಾಕಿಕೊಳ್ಳಬೇಕಾದ ಅನಿವಾರ್ಯತೆ ಸಮಾಜದ ಮುಂದಿದೆ.

  • ಸೂರಜ್

ಇದನ್ನೂ ಓದಿ: ಮುಖ್ಯಮಂತ್ರಿಯನ್ನು ಕಂಡಕಂಡಲ್ಲಿ ಘೇರಾವ್ ಮಾಡಿ: ರೈತ-ದಲಿತ ಕಾರ್ಮಿಕ ಐಕ್ಯ ಹೋರಾಟ ಸಮಿತಿ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...