Homeಮುಖಪುಟಚಿಲ್ಲರೆ ವ್ಯಾಪಾರದಲ್ಲಿ ಬಂಡವಾಳಿಗರ ಏಕಸ್ವಾಮ್ಯ: ಗ್ರಾಹಕರಿಗೆ ಬೆಲೆಏರಿಕೆಯ ಬಿಸಿ

ಚಿಲ್ಲರೆ ವ್ಯಾಪಾರದಲ್ಲಿ ಬಂಡವಾಳಿಗರ ಏಕಸ್ವಾಮ್ಯ: ಗ್ರಾಹಕರಿಗೆ ಬೆಲೆಏರಿಕೆಯ ಬಿಸಿ

ಇಡೀ ವಿಶಾಲ ಕರ್ನಾಟಕದ ಜನತೆ ನಿತ್ಯ ತೊಗರಿಬೇಳೆ ಉಪಯೋಗಿಸುತ್ತಿದ್ದರೂ ರೈತರಿಗೆ ಮಾತ್ರ ಅದು ಲಾಭ ತರುವ ಬೆಳೆಯಾಗಿಲ್ಲ. ಅಲ್ಲದೆ ವರ್ಷದಿಂದ ವರ್ಷಕ್ಕೆ ತೊಗರಿ ಬೇಸಾಯ ಮಾಡುವವರ ಸಂಖ್ಯೆ ಕ್ಷೀಣಿಸುತ್ತಿದೆ.

- Advertisement -
- Advertisement -

ಇಷ್ಟರಲ್ಲಿಯೇ ಮೆಟ್ರೋ ಕ್ಯಾಶ್ ಅಂಡ್ ಕ್ಯಾರಿ ಕಾರ್ಪೊರೇಟ್ ಚಿಲ್ಲರೆ ವ್ಯಾಪಾರಿ ಸಂಸ್ಥೆ ತುಮಕೂರಿನಲ್ಲಿ ತನ್ನ 28ನೇ ಮಳಿಗೆಯನ್ನು ತೆರೆಯಲಿದೆ. ಇದು ಭಾರತದಲ್ಲಿ ಆಳಕ್ಕೆ ಇಳಿಯುತ್ತಿರುವ ಜಾಗತೀಕರಣ. ಬೆಳೆಯುತ್ತಿದೆ ಎಂದು ಹೇಳಲಾಗುತ್ತಿರುವ ಭಾರತದ ಆರ್ಥಿಕತೆಯ ಪ್ರತಿಫಲನ. (ಭಾರತವನ್ನು ಒತ್ತಾಯ ಪೂರ್ವಕವಾಗಿ ಆರ್ಥಿಕತೆಯಾಗಿ ಪರಿವರ್ತಿಸಲಾಗುತ್ತಿದ್ದು, ಕುಸಿದಿದೆ ಎಂದು ಹೇಳಲಾಗುತ್ತಿರುವ ಇದು ತಾತ್ಕಾಲಿಕವಾದುದ್ದು. ಮುಂಬರುವ ದಿನಗಳಲ್ಲಿ ನಮ್ಮ ದೇಶವು ಕಾರ್ಪೋರೇಟ್ ಗಳಿಗೆ ಸುಸ್ಥಿರವಾದ ಮಾರುಕಟ್ಟೆಯಾಗಿ ಮಾರ್ಪಾಡಾಗಲಿದೆ)

ಇದು ಭಾರತದ ಭವಿಷ್ಯದ ಮಟ್ಟಿಗೆ ಬಹು ಗಂಭೀರವಾದ ಹಾಗೂ ಆತಂಕಪಡಬೇಕಾದ ಬೆಳವಣಿಗೆ. ಜನಸಾಮಾನ್ಯರ ನಿತ್ಯ ಬದುಕಿನ ಜೀವನಾವಶ್ಯಕ ಮತ್ತು ಆಹಾರಪದಾರ್ಥಗಳ ಚಿಲ್ಲರೆ ಮಾರಾಟ ಮಾಡುತ್ತಿರುವವರು ಮಾರುಕಟ್ಟೆಯನ್ನು ವಿಸ್ತರಿಸುವ ಮೂಲಕ ಆಹಾರದ ಮೇಲೆ ಏಕಸ್ವಾಮ್ಯ ಸಾಧಿಸುತ್ತಿದ್ದಾರೆ. ಹೀಗೆ ಏಕಸ್ವಾಮ್ಯ ಸಾಧಿಸುತ್ತಾ ಬೆಳೆಯುವ ಈ ಕಾರ್ಪೊರೇಟ್ ಕಂಪನಿಗಳು ಮಾರುಕಟ್ಟೆಯಲ್ಲಿ ತಲ್ಲಣವನ್ನೇ ಉಂಟು ಮಾಡುತ್ತಾರೆ. ಹಣದುಬ್ಬರ ತರುತ್ತಾರೆ. ಆ ಮೂಲಕ ನಮಗೆಲ್ಲ ಬೆಲೆ ಏರಿಕೆಯ ಬಿಸಿಯನ್ನು ತಟ್ಟಿಸುತ್ತಾರೆ. ಇದಕ್ಕೆ ಇಂದಿನ ಸಮಾಜ ಸಾಕ್ಷಿಯಾಗಿದೆ. ಬೆಲೆ ಏರಿಕೆ ಎಂಬುದು ನಿತ್ಯ ನಿರಂತರವಾಗಿ ಕಾಣಬಹುದಾಗಿದೆ.

ಕರೋನಾ ಕಾರಣದಿಂದ ಇಡೀ ಆರ್ಥಿಕತೆಯೇ ಸ್ಥಗಿತಗೊಂಡಿರುವತಹ ಸಮಯದಲ್ಲಿಯು ನಿತ್ಯ ನಿರಂತರವಾಗಿರುವ ಬೆಲೆ ಏರಿಕೆಯು ಇವರು ತರಬಹುದಾದ ಹಣದುಬ್ಬರವನ್ನು ಸಾಕ್ಷೀಕರಿಸುತ್ತದೆ.
ಈ ಕಾರ್ಪೊರೇಟ್ ಚಿಲ್ಲರೆ ಮಾರಾಟ ಕಂಪನಿಗಳು ದೇಸಿಯ ಸ್ಥಳೀಯ ಚಿಲ್ಲರೆ ಮಾರಾಟಗಾರಂತಲ್ಲ. ಸ್ಥಳೀಯ ಮಾರಾಟಗಾರರು ತಮ್ಮತಮ್ಮಲ್ಲೇ ಪೈಪೋಟಿ ನಡೆಸಿಕೊಳ್ಳುತ್ತಾ ವಹಿವಾಟು ನಡೆಸುವವರಾಗಿದ್ದು ಸರ್ಕಾರಿ ಮಟ್ಟದಲ್ಲಿ ಇವರ ಹಸ್ತಕ್ಷೇಪ ಕ್ಷೀಣವಾಗಿರುತ್ತದೆ ಅವರ ಬಹುಪಾಲು ವಹಿವಾಟು ಸ್ಥಳೀಯ ಆರ್ಥಿಕತೆಯ ಉತ್ತೇಜಕವಾಗಿರುತ್ತದೆ.

Photo Courtesy: JustDial

ಆದರೆ ಕಾರ್ಪೊರೇಟ್ ಕಂಪನಿಗಳು ಹಾಗಲ್ಲ. ಸರ್ಕಾರಕ್ಕೆ ಇವರೇ ನಿರ್ದೇಶಕರಾಗಿರುತ್ತಾರೆ, ನೆರಳಾಗಿರುತ್ತಾರೆ. ಇಂತಹ ಹಿನ್ನೆಲೆಯುಳ್ಳ ಲಾಭಕೋರರು ಒಂದೆಡೆ ತಮ್ಮ ಮಾರಾಟ ಮಳಿಗೆಗಳನ್ನು ನಿರಂತರವಾಗಿ ತೆರೆಯತ್ತಿರುತ್ತಾರೆ. ಇದಕ್ಕಾಗಿ ರಾಜಕೀಯ ಲಾಬಿ ನಡೆಸುತ್ತಾರೆ. ತತ್ಪರಿಣಾಮ ಅಧಿಕಾರಿ ವರ್ಗದಿಂದ ಬೀದಿ ವ್ಯಾಪಾರಿಗಳಿಗೆ ಕಿರುಕುಳಗಳು ಹೆಚ್ಚುತ್ತವೆ. ಪ್ರಜಾಪ್ರಭುತ್ವ ಸೋಗಿನಲ್ಲಿರುವ ಸರ್ಕಾರಗಳಿಂದ ಉಸಿರುಕಟ್ಟಿಸುವ ಕಾನೂನು, ನೀತಿ ನಿಯಮಾವಳಿಗಳು ಜಾರಿಯಾಗುತ್ತದೆ. ಸಂಚಾರ ದಟ್ಟನೆಯ ನೆಪವೊಡ್ಡಿ ನಗರಪ್ರದೇಶದಿಂದ ಎಪಿಎಂಸಿ, ಆರ್‌ಎಂಸಿ ಯಾರ್ಡ್‌ಗಳನ್ನು ನಗರಗಳಿಂದ ಹೊರಕ್ಕೆ ಎತ್ತಂಗಡಿ ಮಾಡಲಾಗುತ್ತದೆ

ಇದೇ ರೀತಿಯಲ್ಲಿ ತುಮಕೂರಿನ ಆರ್‌ಎಂಸಿಯನ್ನು ನಗರದಿಂದ ಹೊರವಲಯಕ್ಕೆ ಸ್ಥಳಾಂತರಿಸಿದರೆ, ಬೆಂಗಳೂರಿನ ಯಶವಂತಪುರದ ಆರ್‌ಎಂಸಿ ಯಾರ್ಡನ್ನು ನಗರದಿಂದ ಬಹುದೂರಕ್ಕೆ ಯಾವುದೇ ಸವಲತ್ತು ಇರದ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಇದರ ದೆಸೆಯಿಂದಾಗಿ ನಗರ ಪ್ರದೇಶದ ಹೂ ತರಕಾರಿ ಹಣ್ಣು ವ್ಯಾಪಾರಿಗಳ ಸಾಗಾಣಿಕೆ ವೆಚ್ಚ ಹೆಚ್ಚುತ್ತಿದ್ದು, ನಗರ ಪ್ರದೇಶದಲ್ಲಿ ಇಂದು ತರಕಾರಿಗಳ ಬೆಲೆ ಹೆಚ್ಚಾಗುತ್ತಿದೆ. ಇದರ ಪರಿಣಾಮವಾಗಿ ಬೀದಿ ಬದಿ ವ್ಯಾಪಾರಿಗಳೆಡೆಗೆ ನಗರವಾಸಿಗಳು ಬೆನ್ನು ಮಾಡಿ ಮೆಟ್ರೋ ಕ್ಯಾಶ್ ಅಂಡ್ ಕ್ಯಾರಿ, ರಿಲಯನ್ಸ್ ಫ್ರೆಶ್ ನತ್ತ ಮುಖ ಮಾಡುತ್ತಿದ್ದಾರೆ.

ಇಂತಹ ಸರ್ವ ರೀತಿಯ ಮಸಲತ್ತನೊಂದಿಗೆ ಮಾರುಕಟ್ಟೆ ವಿಸ್ತರಿಸುತ್ತಿರುವ ಈ ಕಂಪನಿಗಳು ಮುಂಬರುವ ದಿನಗಳಲ್ಲಿ ನಾವು ಉಣ್ಣುವ ಪ್ರತೀ ಅಗುಳು ಅನ್ನದ ಮೇಲೆಯೂ ಏಕಸ್ವಾಮ್ಯ ಸಾಧಿಸಲಿದ್ದಾರೆ. ನಮ್ಮ ರೈತರೇ ಬೆಳೆ ಬೆಳೆದರೂ ಮಾರುಕಟ್ಟೆಯ ಮೇಲೆ ಕಾರ್ಪೋರೇಟ್ ಗಳು ಸಾಧಿಸುತ್ತಿರುರುವುದರಿಂದ ಆ ಬೆಳೆಗಳ ಒಡೆಯರು ಕಾರ್ಪೋರೇಟ್ ಗಳೇ ಆಗುತ್ತಾರೆ. ಒಮ್ಮೆ ಇವರು ಏಕಸ್ವಾಮ್ಯ ಸಾಧಿಸಿದರೆಂದರೆ ಮುಗಿಯಿತು. ತಮ್ಮ ಅನುಕೂಲಕ್ಕೆ ತಕ್ಕಂತೆ ಅವುಗಳ ಬೆಲೆಯಲ್ಲಿ ಏರಿಳಿತ ಉಂಟುಮಾಡುತ್ತಾರೆ. ಇಡೀ ವಿಶ್ವಾದ್ಯಂತ ತಮ್ಮ ಜಾಲ ಹೊಂದಿರುವ ಇವರು ಯಾವ ದೇಶದಲ್ಲಿ ಯಾವ ವಸ್ತು ಯಾವ ಬೆಲೆಗೆ ದೊರೆಯುತ್ತದೆ ಎಂಬುದರ ಸ್ಪಷ್ಟ ಪರಿಜ್ಞಾನ ಹೊಂದಿದ್ದಾರೆ ಮತ್ತು ಅವುಗಳನ್ನು ಅಲ್ಲಿಂದ ಇಲ್ಲಿಗೆ ತಂದು ಮಾರಾಟ ಮಾಡುವುದರ ಮೂಲಕ ಸ್ಥಳೀಯವಾಗಿ ಅದರ ಸುತ್ತ ತಲೆ ತಲಾಂತರದಿಂದ ಎಣೆದುಕೊಂಡಿರಬಹುದಾದ ಆರ್ಥಿಕ ಸಂರಚನೆಯನ್ನು ತುಂಡರಿಸುತ್ತಾರೆ.

ಯಶವಂತಪುರ ಎಪಿಎಂಸಿ: Photo Courtesy: Bangalorean.com

ಮಾರುಕಟ್ಟೆಯ ಮೇಲೆ ಇವರ ಏಕಸ್ವಾಮ್ಯ ವಿಸ್ತರಿಸಿದಂತೆಲ್ಲ ಭಾರತೀಯ ಕೃಷಿ ಉತ್ಪನ್ನ ವರ್ಷದಿಂದ ವರ್ಷಕ್ಕೆ ಕುಗ್ಗುತ್ತಲೇ ಸಾಗಿದೆ. 2000ನೇ ಇಸವಿಯಲ್ಲಿ ಶೇ. 85 ರಷ್ಟಿದ್ದ ಭಾರತದ ಕೃಷಿ ಉತ್ಪನ್ನ ಈಗ ಶೇ. 53ಕ್ಕೆ ಇಳಿಕೆ ಕಂಡಿದೆ. ಸದ್ಯ ಪ್ರತಿ ವರ್ಷ ಶೇ. 2.8 ಜನ ಕೃಷಿಯಿಂದ ವಿಮುಖರಾಗುತ್ತಿದ್ದಾರೆ. ಭಾರತದ ಬೆಳೆಯುತ್ತಿರುವ ಆರ್ಥಿಕತೆಯ ಅಂತರಾಳವಿದು. ಕಾರ್ಪೋರೇಟ್ ಗಳ ಮಾರುಕಟ್ಟೆಯ ಮೇಲಿನ ಏಕಸ್ವಾಮ್ಯ ಇದೇ ರೀತಿ ಮುಂದುವರೆದರೆ ಮುಂಬರುವ ದಿನಗಳಲ್ಲಿ ಈ ಪರಿಮಾಣ ಇನ್ನೂ ಹೆಚ್ಚಾಗಲಿದೆ. ಇದರ ಒಂದು ಉದಾಹರಣೆಯಾಗಿ ತೊಗರಿಬೇಳೆಯ ವಿಚಾರವನ್ನೇ ತೆಗೆದುಕೊಳ್ಳಬಹುದು. ಇಡೀ ವಿಶಾಲ ಕರ್ನಾಟಕದ ಜನತೆ ನಿತ್ಯ ತೊಗರಿಬೇಳೆ ಉಪಯೋಗಿಸುತ್ತಿದ್ದರೂ ರೈತರಿಗೆ ಮಾತ್ರ ಅದು ಲಾಭ ತರುವ ಬೆಳೆಯಾಗಿಲ್ಲ. ಅಲ್ಲದೆ ವರ್ಷದಿಂದ ವರ್ಷಕ್ಕೆ ತೊಗರಿ ಬೇಸಾಯ ಮಾಡುವವರ ಸಂಖ್ಯೆ ಕ್ಷೀಣಿಸುತ್ತಿದೆ. ಇದಕ್ಕೆ ಕಾರಣವಾಗಿರುವುದು ಯಾವುದೋ ದೂರದ ಕಡಿಮೆ ಬೆಲೆಗೆ ಸಿಗಬಹುದಾದ ದೇಶದಿಂದ ತೊಗರಿಬೇಳೆಯನ್ನು ಇಲ್ಲಿಗೆ ತಂದು ಸದ್ದಿಲ್ಲದೆ ಮಾರುವುದರ ಮೂಲಕ ನಮ್ಮದೇ ಮಾರುಕಟ್ಟೆ ನಮಗೆ ಇಲ್ಲದಂತೆ ಮಾಡುತ್ತಿರುವುದು.

ಕೃಷಿ ಪ್ರಧಾನವಾದ ಭಾರತದಲ್ಲಿನ ಎಲ್ಲ ರಾಷ್ಟ್ರೀಯತೆಗಳ, ಸಂಸ್ಕೃತಿಗಳ ಬೆನ್ನೆಲುಬು ಇಲ್ಲಿಯ ರೈತರು, ಇಲ್ಲಿಯ ಆರ್ಥಿಕತೆಯನ್ನವಲಂಬಿಸಿರುವ ಕುಶಲಕರ್ಮಿಗಳು ಸಣ್ಣ ಮತ್ತು ಬೀದಿ ವ್ಯಾಪಾರಿಗಳು. ಕಾರ್ಪೊರೇಟ್ ಗಳು ಹೊಂದುವ ಏಕಸ್ವಾಮ್ಯದಿಂದಾಗಿ ಇವರು ನೆಲೆ ಕಳೆದುಕೊಳ್ಳುವುದರೊಂದಿಗೆ ಎಲ್ಲಾ ಸ್ಥಳೀಯ, ಪುರಾತನ, ಸುಸ್ಥಿರ ಆರ್ಥಿಕತೆ ಸರ್ವನಾಶವಾಬಿಡುತ್ತದೆ. ಜೊತೆಗೆ ಭಾಷೆ, ರಾಷ್ಟ್ರೀಯತೆ ಸಂಸ್ಕೃತಿಯ ಅವಸಾನಕ್ಕೂ ಮುನ್ನುಡಿ ಬರೆಯುತ್ತದೆ.

ಇಂಥ ಕಂಪನಿಗಳಲ್ಲಿ ಪಡೆಯುವ ಒಂದೊಂದು ಗ್ರಾಹಕತ್ವ ನಮ್ಮ ರಾಷ್ಟ್ರೀಯತೆ ಭಾಷೆ-ಸಂಸ್ಕೃತಿಯ ಶವಪೆಟ್ಟಿಗೆಗೆ ಹೊಡೆಯುವ ಮೊಳೆ ಆಗಿರುತ್ತದೆ. ಜಾಗತೀಕರಣದ ಈ ಸಂದರ್ಭದಲ್ಲಿ ಬೆಳೆಯುತ್ತಿರುವ ಆರ್ಥಿಕತೆಯನ್ನು ಸರಿಯಾಗಿ ಸಮಾಜ ಅರ್ಥಮಾಡಿಕೊಳ್ಳದಿದ್ದರೆ ಅದು ತನ್ನ ಅವನತಿಯನ್ನು ತಾನೇ ಮಾಡಿಕೊಳ್ಳುತ್ತದೆ. ಪ್ರಸ್ತುತ ಕಾಲಘಟ್ಟದಲ್ಲಿ ಎಲ್ಲಕ್ಕಿಂತ ಆಳವಾಗಿ ಆರ್ಥಿಕತೆಯನ್ನು ಸರಿಯಾಗಿ ಅರ್ಥ ಮಾಡಿಕೊಳ್ಳಬೇಕಿರುವುದು ಸಮಾಜದ ಆದ್ಯ ಕರ್ತವ್ಯವಾಗಿದೆ. ಆರ್ಥಿಕತೆಯನ್ನು ಸರಿಯಾಗಿ ಅರ್ಥಮಾಡಿಕೊಳ್ಳದೆ ಭಾಷೆ-ಸಂಸ್ಕೃತಿ ರಾಷ್ಟ್ರೀಯತೆಗಳನ್ನು ಕಾಪಾಡಿಕೊಳ್ಳುತ್ತೇವೆ ಎಂದು ನಡೆಯುವ ಯಾವುದೇ ಹೋರಾಟಗಳು, ಚಳುವಳಿಗಳು, ಆಂದೋಲನಗಳು ಗುರಿ ತಲುಪುವಲ್ಲಿ ವಿಫಲಗೊಳ್ಳುತ್ತವೆ. ನಮ್ಮ ಸಂಸ್ಕೃತಿ, ನಮ್ಮ ಅಸ್ಮಿತೆ ನಮ್ಮ ರಾಷ್ಟ್ರೀಯತೆ ಉಳಿಯಬೇಕು ಎಂದರೆ ಇಂತಹ ಕಾರ್ಪೊರೇಟ್ ಕಂಪನಿಗಳು ನಾಡಿನಿಂದ ಹೊರಹಾಕುವುದರತ್ತ ಗಮನ ಕೇಂದ್ರೀಕರಿಸಬೇಕಿದೆ. ಮುಂಬರುವ ದಿನಗಳಲ್ಲಿ ಈ ಕಂಪನಿ ಇನ್ನಿತರ ನಗರಗಳಲ್ಲಿ ಹೊಸ ಹೊಸ ಮಳಿಗೆಗಳನ್ನು ತೆರೆಯುವ ಯೋಚನೆಯಲ್ಲಿದೆ. ಅರ್ಥಾತ್ ಸ್ಥಳೀಯ ಆರ್ಥಿಕತೆಯ ಭಾಷೆ ಸಂಸ್ಕೃತಿ ಅಸ್ಮಿತೆ ಮೇಲೆ ದಾಳಿ ಇನ್ನಷ್ಟು ಹೆಚ್ಚಲಿದೆ. ಪ್ರಸ್ತುತ ಸಂದರ್ಭದಲ್ಲಿ ಭಾಷೆ-ಸಂಸ್ಕೃತಿ ರಾಷ್ಟ್ರೀಯತೆಗಳ ಅಸ್ಮಿತೆಯ ರಕ್ಷಣೆಗಾಗಿ ತನ್ನದೇ ಆದ ಒಂದು ಕಾರ್ಯಸೂಚಿಯನ್ನು ಹಾಕಿಕೊಳ್ಳಬೇಕಾದ ಅನಿವಾರ್ಯತೆ ಸಮಾಜದ ಮುಂದಿದೆ.

  • ಸೂರಜ್

ಇದನ್ನೂ ಓದಿ: ಮುಖ್ಯಮಂತ್ರಿಯನ್ನು ಕಂಡಕಂಡಲ್ಲಿ ಘೇರಾವ್ ಮಾಡಿ: ರೈತ-ದಲಿತ ಕಾರ್ಮಿಕ ಐಕ್ಯ ಹೋರಾಟ ಸಮಿತಿ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...