Homeಕರ್ನಾಟಕರೈತರನ್ನು ಗೌರವಿಸದ ದೇಶ ದೇಶವೇ ಅಲ್ಲ: ಮಾಜಿ ಸ್ಪೀಕರ್‌ ರಮೇಶ್ ಕುಮಾರ್‌‌

ರೈತರನ್ನು ಗೌರವಿಸದ ದೇಶ ದೇಶವೇ ಅಲ್ಲ: ಮಾಜಿ ಸ್ಪೀಕರ್‌ ರಮೇಶ್ ಕುಮಾರ್‌‌

ಕೆಂಪುಕೋಟೆ ಬಳಿ ನಡೆದಿರುವ ಅಹಿತಕರ ಘಟನೆಯನ್ನು ಮುಂದಿಟ್ಟು ಕೇಂದ್ರ ಸರ್ಕಾರ ಇಡೀ ರೈತ ಹೋರಾಟವನ್ನು ಇಲ್ಲವಾಗಿಸುವ ಕೆಲಸ ಮಾಡುತ್ತಿದೆ ಎಂದು ಅವರು ಕಿಡಿ ಕಾರಿದ್ದಾರೆ.

- Advertisement -
- Advertisement -

ಜನವರಿ 26 ರಂದು ದೆಹಲಿಯ ಕೆಂಪುಕೋಟೆ ಬಳಿ ನಡೆದಿರುವ ಅಹಿತಕರ ಘಟನೆಯನ್ನು ಮುಂದಿಟ್ಟು ಕೇಂದ್ರ ಸರ್ಕಾರ ಇಡೀ ರೈತ ಹೋರಾಟವನ್ನು ಇಲ್ಲವಾಗಿಸುವ ಕೆಲಸ ಮಾಡುತ್ತಿದೆ ಎಂದು ಕಾಂಗ್ರೆಸ್ ನಾಯಕ​ ರಮೇಶ್​ ಕುಮಾರ್​ ಕೇಂದ್ರ ಸರ್ಕಾರದ ವಿರುದ್ದ ಕಿಡಿ ಕಾರಿದ್ದಾರೆ. “ರೈತರು ಹಾಗೂ ಸೈನಿಕರನ್ನು ಗೌರವಿಸದ ದೇಶ ದೇಶವೇ ಅಲ್ಲ. ಭಾರತದಲ್ಲಿ ಇದೀಗ ಇಂತಹ ಪರಿಸ್ಥಿತಿ ಬಂದೊದಗಿದೆ. ಪೋಲಿ ಪುಂಡರು ಕೆಂಪುಕೋಟೆ ಮೇಲೆ ಏನೋ ಮಾಡಿದರೆ ಮಾಧ್ಯಮಗಳು ಅದನ್ನೆ ತೋರಿಸುತ್ತಿದ್ದಾರೆ” ಎಂದು ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕರಾಳ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೇಶದ ರೈತರು ಕಳೆದ ಎರಡು ತಿಂಗಳಿನಿಂದ ಶಾಂತಿಯುತ ಹೋರಾಟ ನಡೆಸುತ್ತಿದ್ದಾರೆ. ಜನವರಿ 26 ರಂದು ಆಯೋಜಿಸಿದ್ದ ಟ್ರಾಕ್ಟರ್​ ರ್‍ಯಾಯಲಿ ವೇಳೆ ಕೆಂಪುಕೋಟೆಯ ಬಳಿ ಅಹಿತಕರ ಘಟನೆ ನಡೆದಿತ್ತಾದರೂ, ಇದೇ ವೇಳೆ ಲಕ್ಷಾಂತರ ರೈತರು ತಮಗೆ ಪೊಲೀಸರು ಗೊತ್ತುಪಡಿಸಿದ ರಸ್ತೆಯಲ್ಲಿ ಶಾಂತಿಯುತವಾಗಿ ಮೆರವಣಿಗೆ ನಡೆಸಿದ್ದರು. ಆದರೆ, ಕೇಂದ್ರ ಸರ್ಕಾರ ಮತ್ತು ಸರ್ಕಾರದ ಪರವಾಗಿರುವ ಮಾಧ್ಯಮಗಳು ಈ ವಿಚಾರವನ್ನು ಇಟ್ಟುಕೊಂಡು ರೈತ ಹೊರಾಟವನ್ನು ಹಣಿಯಲು ಮುಂದಾಗಿದೆ.

ಇದನ್ನೂ ಓದಿ: ಗಾಜಿಪುರ್‌ ಗಡಿಯಲ್ಲಿ ನೀರು, ವಿದ್ಯುತ್ ಕಡಿತ ಮಾಡಿದ ಯುಪಿ ಸರ್ಕಾರ: ನೀರಿನ ವ್ಯವಸ್ಥೆ ಮಾಡಿದ ದೆಹಲಿ ಸರ್ಕಾರ

ಘಟನೆಯ ಕುರಿತು ಕೋಲಾರದಲ್ಲಿ ಪ್ರತಿಕ್ರಿಯೆ ನೀಡಿದ ರಮೇಶ್ ಕುಮಾರ್​, “​ದೆಹಲಿ ಹೊರ ವಲಯದಲ್ಲಿ ಕಳೆದ ಎರಡು ತಿಂಗಳಿನಿಂದ ನಡೆಯುತ್ತಿರುವ ರೈತರ ಹೋರಾಟದಲ್ಲಿ ಲಕ್ಷಗಟ್ಟಲೆ ಜನರು ಟ್ರಾಕ್ಟರ್‌ನಲ್ಲಿ ಬಂದು ಹೋರಾಟದ ಭಾಗವಾಗಿದ್ದಾರೆ. ಅಷ್ಟೊಂದು ಸಂಖ್ಯೆಯ ಜನ ರೈತ ಹೋರಾಟದ ಕಣಕ್ಕೆ ಧುಮುಕಿದ್ದಾರೆ ಎಂದರೆ ಅವರ ಆಕ್ರೋಶ ಎಷ್ಟಿರಬಹುದು? ಈ ವೇಳೆ ಕೆಲ ಪೋಲಿ ಪುಂಡರು ಕೆಂಪುಕೋಟೆ ಮೇಲೆ ಏನೋ ಮಾಡಿದ್ರೆ ಮಾಧ್ಯಮಗಳು ಅದನ್ನೇ ತೋರಿಸುತ್ತಿವೆ. ಈ ಮೂಲಕ ರೈತರ ಹೋರಾಟವನ್ನು ಮರೆಮಾಚುವ ಕೆಲಸ ನಡೆಯುತ್ತಿದೆ. ರೈತ, ಸೈನಿಕನಿಗೆ ಗೌರವ ಇಲ್ಲದಿರುವ ದೇಶ, ಅದು ದೇಶವೇ ಅಲ್ಲ” ಎಂದು ಅವರು ಅಸಮಧಾನ ವ್ಯಕ್ತಪಡಿಸಿದ್ದಾರೆ.

“ನಮ್ಮ ರೈತರು ನಮಗಾಗಿ ಅಲ್ಲಿ ಹೋರಾಟ ಮಾಡುತ್ತಿದ್ದಾರೆ. ನಾವು ಇಲ್ಲಿ ಸುಮ್ಮನಿದ್ದೀವಿ. ನಮಗೆ ಲಜ್ಜೆ-ಪಜ್ಜೆ ಏನಿಲ್ಲ. ಆದರೆ, ರೈತರ ಹೋರಾಟದ ಫಲ ಎಲ್ಲರಿಗೂ ಸಿಗುತ್ತದೆ. ನಾಳೆಯೊಳಗೆ ದೆಹಲಿಯ ಗಾಜೀಪುರ ಗಡಿಯಲ್ಲಿ 10 ಲಕ್ಷ ರೈತರು ಜಮಾಯಿಸಲಿದ್ದಾರೆ. ನಾವೇನು ಪುಗಸಟ್ಟೆ ಬೆಳೆಯುತ್ತೀವಾ, ಬೆಲೆ ನಿಗದಿ ಬೇರೆಯವರು ಮಾಡಿದರೆ ಹೇಗೆ. ಹೇಳುವವರು ಗಂಜಲ, ಸಗಣಿ ಎತ್ತುತ್ತಾರ? ನಮ್ಮ ಹೆಣ್ಣು ಮಕ್ಕಳು ಎಲ್ಲಾ ಕೆಲಸ ಮಾಡುತ್ತಾರೆ. ಸ್ವಲ್ಪ ಬೆವರು ಬಂದರೂ ಪೌಡರ್ ಹಾಕ್ಕೋಳ್ಳುವವರು ಇದ್ದಾರೆ. ಅಂತದ್ದರಲ್ಲಿ ರೈತರು ತಮ್ಮ ಹಕ್ಕನ್ನು ಕೇಳೋದು ತಪ್ಪಾ?” ಎಂದು ರಮೇಶ್​ ಕುಮಾರ್​ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಟಿಕಾಯತ್ ಮನವಿಗೆ ಭಾರೀ ಸ್ಪಂದನೆ: ಗಾಜಿಪುರ್ ಗಡಿಯತ್ತ ಹೊರಟ 10 ಸಾವಿರಕ್ಕೂ ಹೆಚ್ಚು ರೈತರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...