Homeಕರ್ನಾಟಕರೈತರನ್ನು ಗೌರವಿಸದ ದೇಶ ದೇಶವೇ ಅಲ್ಲ: ಮಾಜಿ ಸ್ಪೀಕರ್‌ ರಮೇಶ್ ಕುಮಾರ್‌‌

ರೈತರನ್ನು ಗೌರವಿಸದ ದೇಶ ದೇಶವೇ ಅಲ್ಲ: ಮಾಜಿ ಸ್ಪೀಕರ್‌ ರಮೇಶ್ ಕುಮಾರ್‌‌

ಕೆಂಪುಕೋಟೆ ಬಳಿ ನಡೆದಿರುವ ಅಹಿತಕರ ಘಟನೆಯನ್ನು ಮುಂದಿಟ್ಟು ಕೇಂದ್ರ ಸರ್ಕಾರ ಇಡೀ ರೈತ ಹೋರಾಟವನ್ನು ಇಲ್ಲವಾಗಿಸುವ ಕೆಲಸ ಮಾಡುತ್ತಿದೆ ಎಂದು ಅವರು ಕಿಡಿ ಕಾರಿದ್ದಾರೆ.

- Advertisement -
- Advertisement -

ಜನವರಿ 26 ರಂದು ದೆಹಲಿಯ ಕೆಂಪುಕೋಟೆ ಬಳಿ ನಡೆದಿರುವ ಅಹಿತಕರ ಘಟನೆಯನ್ನು ಮುಂದಿಟ್ಟು ಕೇಂದ್ರ ಸರ್ಕಾರ ಇಡೀ ರೈತ ಹೋರಾಟವನ್ನು ಇಲ್ಲವಾಗಿಸುವ ಕೆಲಸ ಮಾಡುತ್ತಿದೆ ಎಂದು ಕಾಂಗ್ರೆಸ್ ನಾಯಕ​ ರಮೇಶ್​ ಕುಮಾರ್​ ಕೇಂದ್ರ ಸರ್ಕಾರದ ವಿರುದ್ದ ಕಿಡಿ ಕಾರಿದ್ದಾರೆ. “ರೈತರು ಹಾಗೂ ಸೈನಿಕರನ್ನು ಗೌರವಿಸದ ದೇಶ ದೇಶವೇ ಅಲ್ಲ. ಭಾರತದಲ್ಲಿ ಇದೀಗ ಇಂತಹ ಪರಿಸ್ಥಿತಿ ಬಂದೊದಗಿದೆ. ಪೋಲಿ ಪುಂಡರು ಕೆಂಪುಕೋಟೆ ಮೇಲೆ ಏನೋ ಮಾಡಿದರೆ ಮಾಧ್ಯಮಗಳು ಅದನ್ನೆ ತೋರಿಸುತ್ತಿದ್ದಾರೆ” ಎಂದು ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕರಾಳ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೇಶದ ರೈತರು ಕಳೆದ ಎರಡು ತಿಂಗಳಿನಿಂದ ಶಾಂತಿಯುತ ಹೋರಾಟ ನಡೆಸುತ್ತಿದ್ದಾರೆ. ಜನವರಿ 26 ರಂದು ಆಯೋಜಿಸಿದ್ದ ಟ್ರಾಕ್ಟರ್​ ರ್‍ಯಾಯಲಿ ವೇಳೆ ಕೆಂಪುಕೋಟೆಯ ಬಳಿ ಅಹಿತಕರ ಘಟನೆ ನಡೆದಿತ್ತಾದರೂ, ಇದೇ ವೇಳೆ ಲಕ್ಷಾಂತರ ರೈತರು ತಮಗೆ ಪೊಲೀಸರು ಗೊತ್ತುಪಡಿಸಿದ ರಸ್ತೆಯಲ್ಲಿ ಶಾಂತಿಯುತವಾಗಿ ಮೆರವಣಿಗೆ ನಡೆಸಿದ್ದರು. ಆದರೆ, ಕೇಂದ್ರ ಸರ್ಕಾರ ಮತ್ತು ಸರ್ಕಾರದ ಪರವಾಗಿರುವ ಮಾಧ್ಯಮಗಳು ಈ ವಿಚಾರವನ್ನು ಇಟ್ಟುಕೊಂಡು ರೈತ ಹೊರಾಟವನ್ನು ಹಣಿಯಲು ಮುಂದಾಗಿದೆ.

ಇದನ್ನೂ ಓದಿ: ಗಾಜಿಪುರ್‌ ಗಡಿಯಲ್ಲಿ ನೀರು, ವಿದ್ಯುತ್ ಕಡಿತ ಮಾಡಿದ ಯುಪಿ ಸರ್ಕಾರ: ನೀರಿನ ವ್ಯವಸ್ಥೆ ಮಾಡಿದ ದೆಹಲಿ ಸರ್ಕಾರ

ಘಟನೆಯ ಕುರಿತು ಕೋಲಾರದಲ್ಲಿ ಪ್ರತಿಕ್ರಿಯೆ ನೀಡಿದ ರಮೇಶ್ ಕುಮಾರ್​, “​ದೆಹಲಿ ಹೊರ ವಲಯದಲ್ಲಿ ಕಳೆದ ಎರಡು ತಿಂಗಳಿನಿಂದ ನಡೆಯುತ್ತಿರುವ ರೈತರ ಹೋರಾಟದಲ್ಲಿ ಲಕ್ಷಗಟ್ಟಲೆ ಜನರು ಟ್ರಾಕ್ಟರ್‌ನಲ್ಲಿ ಬಂದು ಹೋರಾಟದ ಭಾಗವಾಗಿದ್ದಾರೆ. ಅಷ್ಟೊಂದು ಸಂಖ್ಯೆಯ ಜನ ರೈತ ಹೋರಾಟದ ಕಣಕ್ಕೆ ಧುಮುಕಿದ್ದಾರೆ ಎಂದರೆ ಅವರ ಆಕ್ರೋಶ ಎಷ್ಟಿರಬಹುದು? ಈ ವೇಳೆ ಕೆಲ ಪೋಲಿ ಪುಂಡರು ಕೆಂಪುಕೋಟೆ ಮೇಲೆ ಏನೋ ಮಾಡಿದ್ರೆ ಮಾಧ್ಯಮಗಳು ಅದನ್ನೇ ತೋರಿಸುತ್ತಿವೆ. ಈ ಮೂಲಕ ರೈತರ ಹೋರಾಟವನ್ನು ಮರೆಮಾಚುವ ಕೆಲಸ ನಡೆಯುತ್ತಿದೆ. ರೈತ, ಸೈನಿಕನಿಗೆ ಗೌರವ ಇಲ್ಲದಿರುವ ದೇಶ, ಅದು ದೇಶವೇ ಅಲ್ಲ” ಎಂದು ಅವರು ಅಸಮಧಾನ ವ್ಯಕ್ತಪಡಿಸಿದ್ದಾರೆ.

“ನಮ್ಮ ರೈತರು ನಮಗಾಗಿ ಅಲ್ಲಿ ಹೋರಾಟ ಮಾಡುತ್ತಿದ್ದಾರೆ. ನಾವು ಇಲ್ಲಿ ಸುಮ್ಮನಿದ್ದೀವಿ. ನಮಗೆ ಲಜ್ಜೆ-ಪಜ್ಜೆ ಏನಿಲ್ಲ. ಆದರೆ, ರೈತರ ಹೋರಾಟದ ಫಲ ಎಲ್ಲರಿಗೂ ಸಿಗುತ್ತದೆ. ನಾಳೆಯೊಳಗೆ ದೆಹಲಿಯ ಗಾಜೀಪುರ ಗಡಿಯಲ್ಲಿ 10 ಲಕ್ಷ ರೈತರು ಜಮಾಯಿಸಲಿದ್ದಾರೆ. ನಾವೇನು ಪುಗಸಟ್ಟೆ ಬೆಳೆಯುತ್ತೀವಾ, ಬೆಲೆ ನಿಗದಿ ಬೇರೆಯವರು ಮಾಡಿದರೆ ಹೇಗೆ. ಹೇಳುವವರು ಗಂಜಲ, ಸಗಣಿ ಎತ್ತುತ್ತಾರ? ನಮ್ಮ ಹೆಣ್ಣು ಮಕ್ಕಳು ಎಲ್ಲಾ ಕೆಲಸ ಮಾಡುತ್ತಾರೆ. ಸ್ವಲ್ಪ ಬೆವರು ಬಂದರೂ ಪೌಡರ್ ಹಾಕ್ಕೋಳ್ಳುವವರು ಇದ್ದಾರೆ. ಅಂತದ್ದರಲ್ಲಿ ರೈತರು ತಮ್ಮ ಹಕ್ಕನ್ನು ಕೇಳೋದು ತಪ್ಪಾ?” ಎಂದು ರಮೇಶ್​ ಕುಮಾರ್​ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಟಿಕಾಯತ್ ಮನವಿಗೆ ಭಾರೀ ಸ್ಪಂದನೆ: ಗಾಜಿಪುರ್ ಗಡಿಯತ್ತ ಹೊರಟ 10 ಸಾವಿರಕ್ಕೂ ಹೆಚ್ಚು ರೈತರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...