Homeಮುಖಪುಟದೇಶ ಇನ್ನೂ ಕೊರೊನಾ ವಿರುದ್ದ ಹೋರಾಡುತ್ತಿದೆ; ಪ್ರತಿಯೊಬ್ಬರೂ ಲಸಿಕೆ ಪಡೆಯಿರಿ: ರಾಷ್ಟ್ರಪತಿ ಕೋವಿಂದ್‌

ದೇಶ ಇನ್ನೂ ಕೊರೊನಾ ವಿರುದ್ದ ಹೋರಾಡುತ್ತಿದೆ; ಪ್ರತಿಯೊಬ್ಬರೂ ಲಸಿಕೆ ಪಡೆಯಿರಿ: ರಾಷ್ಟ್ರಪತಿ ಕೋವಿಂದ್‌

ಸಾಂಕ್ರಾಮಿಕದ ಎರಡನೇ ಅಲೆಯ ಸಮಯದಲ್ಲಿ ಆದ ಜೀವಹಾನಿ ನನಗೆ ನೋವು ತಂದಿದೆ ಎಂದು ಸ್ವಾತಂತ್ರ್ಯ ದಿನಾಚರಣೆಯ ಮುನ್ನಾದಿನ ರಾಷ್ಟ್ರವನ್ನುದ್ದೇಶಿಸಿ ಅವರು ಹೇಳಿದರು

- Advertisement -
- Advertisement -

ಭಾರತದ 75 ನೇ ಸ್ವಾತಂತ್ರ್ಯ ದಿನಾಚರಣೆಯ ಮುನ್ನಾದಿನವಾದ ಶನಿವಾರದಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ರಾಷ್ಟ್ರವನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ, ದೇಶವು ಇನ್ನೂ ಕೊರೊನಾ ವಿರುದ್ದ ಹೋರಾಡುತ್ತಿದ್ದು, ಪ್ರತಿಯೊಬ್ಬರೂ ಲಸಿಕೆ ಹಾಕಿಸಿಕೊಳ್ಳುವಂತೆ ಕರೆ ನೀಡಿದರು.

ಸಾಂಕ್ರಾಮಿಕದ ಎರಡನೇ ಅಲೆಯ ಸಮಯದಲ್ಲಿ ಆದ ಜೀವಹಾನಿಯ ಬಗ್ಗೆ ದುಃಖ ವ್ಯಕ್ತಪಡಿಸಿದ ರಾಷ್ಟ್ರಪತಿ, ಇದು ತನಗೆ ನೋವು ತಂದಿದೆ ಎಂದು ಹೇಳಿದ್ದು, ಆರೋಗ್ಯ ಕಾರ್ಯಕರ್ತರು ಮತ್ತು ಸರ್ಕಾರದ ಅವಿರತ ಪ್ರಯತ್ನದಿಂದಾಗಿ ಕಳೆದುಕೊಂಡದ್ದಕ್ಕಿಂತ ಹೆಚ್ಚಿನ ಜೀವಗಳನ್ನು ಉಳಿಸಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಮುಸ್ಲಿಂ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ, ಆರೋಪಿಗಳಿಗೆ 24 ಗಂಟೆಯೊಳಗೆ ಜಾಮೀನು!

“75 ವರ್ಷಗಳ ಹಿಂದೆ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಾಗ, ಅನೇಕರು ಭಾರತದಲ್ಲಿ ಪ್ರಜಾಪ್ರಭುತ್ವ ಉಳಿಯುವುದಿಲ್ಲ ಎಂದು ಭಾವಿಸಿದ್ದರು. ಆದರೆ ಭಾರತವು ಅನಾದಿಕಾಲದಿಂದಲೂ ಪ್ರಜಾಪ್ರಭುತ್ವದ ಪೋಷಣೆಯ ನೆಲೆಯಾಗಿದೆ ಮತ್ತು ಅದು ಹಾಗೆಯೇ ಮುಂದುವರಿದಿದೆ ಎಂದು ಅವರಿಗೆ ತಿಳಿದಿರಲಿಲ್ಲ” ಎಂದು ರಾಷ್ಟ್ರಪತಿ ಹೇಳಿದರು.

ಈ ವರ್ಷದ ಸ್ವಾತಂತ್ರ್ಯ ದಿನಾಚರಣೆಯು ಮಹತ್ವದ್ದಾಗಿದ್ದು, ಭಾರತವು ತನ್ನ 75 ನೇ ಸ್ವಾತಂತ್ರ್ಯದ ಸಂಭ್ರಮಾಚರಣೆಯನ್ನು ಆರಂಭಿಸುತ್ತಿದೆ.

ಎಲ್ಲಾ ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವ ಸಲ್ಲಿಸಿ, ಮಹಾತ್ಮ ಗಾಂಧಿಯವರ ಕೊಡುಗೆಯನ್ನು ಸ್ಮರಿಸುತ್ತಾ ಮಾತನಾಡಿದ ರಾಷ್ಟ್ರಪತಿ, “ತಪ್ಪು ದಿಕ್ಕಿನಲ್ಲಿ ದೈತ್ಯ ದಾಪುಗಾಲು ಹಾಕುವ ಬದಲು ಸಣ್ಣ ಹೆಜ್ಜೆಗಳನ್ನಿಟ್ಟು ಸರಿಯಾದ ದಿಕ್ಕಿನಲ್ಲಿ ಸಾಗುವುದು ಉತ್ತಮ ಎಂದು ಗಾಂಧಿ ನಮಗೆ ಕಲಿಸಿದ್ದಾರೆ” ಎಂದು ಹೇಳಿದರು.

ಇದನ್ನೂ ಓದಿ: ಕಾಳಿ ನದಿ ಮೇಲೆ ಸಚಿವ ನಿರಾಣಿ ಸಹೋದರರ ಕಣ್ಣು!

ಒಲಿಂಪಿಕ್ಸ್‌ನಲ್ಲಿ ಭಾರತದ ಅಭೂತಪೂರ್ವ ಸಾಧನೆಯನ್ನು ಸಂಭ್ರಮಿಸಿದ ರಾಷ್ಟ್ರಪತಿ, “ನಮ್ಮ ಕ್ರೀಡಾಪಟುಗಳು ತಮ್ಮ ಅದ್ಭುತ ಪ್ರದರ್ಶನ ನೀಡಿದ್ದಾರೆ. ನಮ್ಮ ಹೆಣ್ಣು ಮಕ್ಕಳು ಅನೇಕ ಪ್ರತಿಕೂಲ ಪರಿಸ್ಥಿತಿಗಳ ವಿರುದ್ಧ ಹೋರಾಡುವ ಮೂಲಕ ವಿಶ್ವದರ್ಜೆಯ ಸಾಧನೆಯನ್ನು ಸಾಧಿಸಿದ್ದಾರೆ. ಎಲ್ಲಾ ಹೆತ್ತವರನ್ನು ತಮ್ಮ ಹೆಣ್ಣುಮಕ್ಕಳನ್ನು ಈ ರೀತಿ ಬೆಳೆಸಬೇಕು” ಎಂದು ದೇಶಕ್ಕೆ ಒತ್ತಾಯಿಸಿದರು.

“ಸಾಂಕ್ರಾಮಿಕದ ತೀವ್ರತೆಯು ಕಡಿಮೆಯಾಗಿದೆ. ಆದರೆ ನಾವು ಸಾಂಕ್ರಾಮಿಕದ ವಿನಾಶಕಾರಿ ಪರಿಣಾಮಗಳಿಂದ ಇನ್ನೂ ಹೊರಬಂದಿಲ್ಲ … ಸಾಂಕ್ರಾಮಿಕ ರೋಗದ ಎರಡನೇ ಅಲೆಯ ಸಮಯದಲ್ಲಿ ಅನೇಕ ಜನರು ತಮ್ಮ ಜೀವಗಳನ್ನು ಕಳೆದುಕೊಂಡಿದ್ದಕ್ಕೆ ನನಗೆ ತುಂಬಾ ದುಃಖವಾಗಿದೆ, ಆದರೆ ನಾವು ಹೆಚ್ಚಿನ ಜೀವಗಳನ್ನು ಉಳಿಸಲು ಸಾಧ್ಯವಾಯಿತು..ಎಂದು ಒಪ್ಪಿಕೊಂಡ ರಾಷ್ಟ್ರಪತಿ, ಇದು ಆರೋಗ್ಯ ಸಿಬ್ಬಂದಿ, ಲಸಿಕೆ ವಿಜ್ಞಾನಿಗಳ ಕೊಡುಗೆ ಎಂದು ಹೇಳಿದರು.

ಇದನ್ನೂ ಓದಿ: ಭಾನುವಾರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿರುವ ಆನಂದ್‌ ಸಿಂಗ್‌?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...