Homeಮುಖಪುಟದೇಶ ಇನ್ನೂ ಕೊರೊನಾ ವಿರುದ್ದ ಹೋರಾಡುತ್ತಿದೆ; ಪ್ರತಿಯೊಬ್ಬರೂ ಲಸಿಕೆ ಪಡೆಯಿರಿ: ರಾಷ್ಟ್ರಪತಿ ಕೋವಿಂದ್‌

ದೇಶ ಇನ್ನೂ ಕೊರೊನಾ ವಿರುದ್ದ ಹೋರಾಡುತ್ತಿದೆ; ಪ್ರತಿಯೊಬ್ಬರೂ ಲಸಿಕೆ ಪಡೆಯಿರಿ: ರಾಷ್ಟ್ರಪತಿ ಕೋವಿಂದ್‌

ಸಾಂಕ್ರಾಮಿಕದ ಎರಡನೇ ಅಲೆಯ ಸಮಯದಲ್ಲಿ ಆದ ಜೀವಹಾನಿ ನನಗೆ ನೋವು ತಂದಿದೆ ಎಂದು ಸ್ವಾತಂತ್ರ್ಯ ದಿನಾಚರಣೆಯ ಮುನ್ನಾದಿನ ರಾಷ್ಟ್ರವನ್ನುದ್ದೇಶಿಸಿ ಅವರು ಹೇಳಿದರು

- Advertisement -
- Advertisement -

ಭಾರತದ 75 ನೇ ಸ್ವಾತಂತ್ರ್ಯ ದಿನಾಚರಣೆಯ ಮುನ್ನಾದಿನವಾದ ಶನಿವಾರದಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ರಾಷ್ಟ್ರವನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ, ದೇಶವು ಇನ್ನೂ ಕೊರೊನಾ ವಿರುದ್ದ ಹೋರಾಡುತ್ತಿದ್ದು, ಪ್ರತಿಯೊಬ್ಬರೂ ಲಸಿಕೆ ಹಾಕಿಸಿಕೊಳ್ಳುವಂತೆ ಕರೆ ನೀಡಿದರು.

ಸಾಂಕ್ರಾಮಿಕದ ಎರಡನೇ ಅಲೆಯ ಸಮಯದಲ್ಲಿ ಆದ ಜೀವಹಾನಿಯ ಬಗ್ಗೆ ದುಃಖ ವ್ಯಕ್ತಪಡಿಸಿದ ರಾಷ್ಟ್ರಪತಿ, ಇದು ತನಗೆ ನೋವು ತಂದಿದೆ ಎಂದು ಹೇಳಿದ್ದು, ಆರೋಗ್ಯ ಕಾರ್ಯಕರ್ತರು ಮತ್ತು ಸರ್ಕಾರದ ಅವಿರತ ಪ್ರಯತ್ನದಿಂದಾಗಿ ಕಳೆದುಕೊಂಡದ್ದಕ್ಕಿಂತ ಹೆಚ್ಚಿನ ಜೀವಗಳನ್ನು ಉಳಿಸಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಮುಸ್ಲಿಂ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ, ಆರೋಪಿಗಳಿಗೆ 24 ಗಂಟೆಯೊಳಗೆ ಜಾಮೀನು!

“75 ವರ್ಷಗಳ ಹಿಂದೆ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಾಗ, ಅನೇಕರು ಭಾರತದಲ್ಲಿ ಪ್ರಜಾಪ್ರಭುತ್ವ ಉಳಿಯುವುದಿಲ್ಲ ಎಂದು ಭಾವಿಸಿದ್ದರು. ಆದರೆ ಭಾರತವು ಅನಾದಿಕಾಲದಿಂದಲೂ ಪ್ರಜಾಪ್ರಭುತ್ವದ ಪೋಷಣೆಯ ನೆಲೆಯಾಗಿದೆ ಮತ್ತು ಅದು ಹಾಗೆಯೇ ಮುಂದುವರಿದಿದೆ ಎಂದು ಅವರಿಗೆ ತಿಳಿದಿರಲಿಲ್ಲ” ಎಂದು ರಾಷ್ಟ್ರಪತಿ ಹೇಳಿದರು.

ಈ ವರ್ಷದ ಸ್ವಾತಂತ್ರ್ಯ ದಿನಾಚರಣೆಯು ಮಹತ್ವದ್ದಾಗಿದ್ದು, ಭಾರತವು ತನ್ನ 75 ನೇ ಸ್ವಾತಂತ್ರ್ಯದ ಸಂಭ್ರಮಾಚರಣೆಯನ್ನು ಆರಂಭಿಸುತ್ತಿದೆ.

ಎಲ್ಲಾ ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವ ಸಲ್ಲಿಸಿ, ಮಹಾತ್ಮ ಗಾಂಧಿಯವರ ಕೊಡುಗೆಯನ್ನು ಸ್ಮರಿಸುತ್ತಾ ಮಾತನಾಡಿದ ರಾಷ್ಟ್ರಪತಿ, “ತಪ್ಪು ದಿಕ್ಕಿನಲ್ಲಿ ದೈತ್ಯ ದಾಪುಗಾಲು ಹಾಕುವ ಬದಲು ಸಣ್ಣ ಹೆಜ್ಜೆಗಳನ್ನಿಟ್ಟು ಸರಿಯಾದ ದಿಕ್ಕಿನಲ್ಲಿ ಸಾಗುವುದು ಉತ್ತಮ ಎಂದು ಗಾಂಧಿ ನಮಗೆ ಕಲಿಸಿದ್ದಾರೆ” ಎಂದು ಹೇಳಿದರು.

ಇದನ್ನೂ ಓದಿ: ಕಾಳಿ ನದಿ ಮೇಲೆ ಸಚಿವ ನಿರಾಣಿ ಸಹೋದರರ ಕಣ್ಣು!

ಒಲಿಂಪಿಕ್ಸ್‌ನಲ್ಲಿ ಭಾರತದ ಅಭೂತಪೂರ್ವ ಸಾಧನೆಯನ್ನು ಸಂಭ್ರಮಿಸಿದ ರಾಷ್ಟ್ರಪತಿ, “ನಮ್ಮ ಕ್ರೀಡಾಪಟುಗಳು ತಮ್ಮ ಅದ್ಭುತ ಪ್ರದರ್ಶನ ನೀಡಿದ್ದಾರೆ. ನಮ್ಮ ಹೆಣ್ಣು ಮಕ್ಕಳು ಅನೇಕ ಪ್ರತಿಕೂಲ ಪರಿಸ್ಥಿತಿಗಳ ವಿರುದ್ಧ ಹೋರಾಡುವ ಮೂಲಕ ವಿಶ್ವದರ್ಜೆಯ ಸಾಧನೆಯನ್ನು ಸಾಧಿಸಿದ್ದಾರೆ. ಎಲ್ಲಾ ಹೆತ್ತವರನ್ನು ತಮ್ಮ ಹೆಣ್ಣುಮಕ್ಕಳನ್ನು ಈ ರೀತಿ ಬೆಳೆಸಬೇಕು” ಎಂದು ದೇಶಕ್ಕೆ ಒತ್ತಾಯಿಸಿದರು.

“ಸಾಂಕ್ರಾಮಿಕದ ತೀವ್ರತೆಯು ಕಡಿಮೆಯಾಗಿದೆ. ಆದರೆ ನಾವು ಸಾಂಕ್ರಾಮಿಕದ ವಿನಾಶಕಾರಿ ಪರಿಣಾಮಗಳಿಂದ ಇನ್ನೂ ಹೊರಬಂದಿಲ್ಲ … ಸಾಂಕ್ರಾಮಿಕ ರೋಗದ ಎರಡನೇ ಅಲೆಯ ಸಮಯದಲ್ಲಿ ಅನೇಕ ಜನರು ತಮ್ಮ ಜೀವಗಳನ್ನು ಕಳೆದುಕೊಂಡಿದ್ದಕ್ಕೆ ನನಗೆ ತುಂಬಾ ದುಃಖವಾಗಿದೆ, ಆದರೆ ನಾವು ಹೆಚ್ಚಿನ ಜೀವಗಳನ್ನು ಉಳಿಸಲು ಸಾಧ್ಯವಾಯಿತು..ಎಂದು ಒಪ್ಪಿಕೊಂಡ ರಾಷ್ಟ್ರಪತಿ, ಇದು ಆರೋಗ್ಯ ಸಿಬ್ಬಂದಿ, ಲಸಿಕೆ ವಿಜ್ಞಾನಿಗಳ ಕೊಡುಗೆ ಎಂದು ಹೇಳಿದರು.

ಇದನ್ನೂ ಓದಿ: ಭಾನುವಾರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿರುವ ಆನಂದ್‌ ಸಿಂಗ್‌?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...